Homeಮುಖಪುಟಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರನ ಪಠ್ಯ ಬೇಡ: ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್...

ಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರನ ಪಠ್ಯ ಬೇಡ: ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿ

ಸ್ವಿಸ್‌ನಲ್ಲಿರುವ ಕಪ್ಪು ಹಣವನ್ನು ಭಾರತದ ಬೊಕ್ಕಸಕ್ಕೆ ತಂದು ಹಾಕಿದರೆ ದೇಶದ ಎಲ್ಲಾ ರಸ್ತೆಗಳಿಗೂ ಟಾರ್ ಹಾಕುವ ಬದಲು ಚಿನ್ನ ಹಾಕಬಹುದು ಎಂದು ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿದ್ದರು.

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದೆ. ಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯ ಪಠ್ಯ ಬೇಡ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

BJP ಹಾಗೂ ಸಂಘಪರಿವಾರದ ಬೌದ್ಧಿಕ ದಿವಾಳಿತನ ಈ ಮಟ್ಟಕ್ಕೆ ಇಳಿಬಾರದಾಗಿತ್ತು. ಸುಳ್ಳಿನ ಕಂತೆಗಳನ್ನ ಪೋಣಿಸುವ ಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರನನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಂಬಲಿಸುವುದು ದುರಂತ ಎಂದಿದ್ದಾರೆ.

ಅಂತಹ ವಾಗ್ಮಿ, ಚಿಂತಕನ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ನಿಮ್ಮದೇ ಪಕ್ಷದ ಮಾಜಿ ಸಿಎಂ ಡಿ.ವಿ ಸದಾನಂದಗೌಡರ ಬಗ್ಗೆ ಮಾರ್ಗದರ್ಶನ ಪಡೆಯುವುದು ಒಳ್ಳೆಯದು ಎಂದು ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ “ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆಯವರ ಹಿಂದೂಪರ ಚಿಂತನೆಗಳನ್ನು ಶಾಲಾ ಪಠ್ಯ ಪುಸ್ತಕಗಳಲ್ಲಿ ಅಳವಡಿಸಿದರೆ” ತಪ್ಪೇನು ಎಂದು ಪ್ರಶ್ನಿಸಿದ್ದರು. ಅಲ್ಲದೆ ಟಿಪ್ಪು ಒಬ್ಬ ನರಭಕ್ಷಕ ಎಂದು ಸಹ ಹೇಳಿಕೆ ನೀಡಿದ್ದರು.

ಅವರ ಹೇಳಿಕೆಗೆ ಬಿ.ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದು, “ಜಗದೀಶ್ ಶೆಟ್ಟರ್‌ ಟಿಪ್ಪುವಿನ ಪೋಷಾಕು ಧರಿಸಿ ಪೋಸು ನೀಡಿದ್ದನ್ನ ಮರೆತಿರಬೇಕು. ಚಿತ್ರಗಳು ಬರೀ ಮಾತಾಡುವುದಿಲ್ಲ ಶೆಟ್ಟರ್ ಅವರೇ, ಸತ್ಯವನ್ನ ಬೆತ್ತಲೆ ಕೂಡ ಮಾಡುತ್ತೆ. ಕೋಮುವಾದದ ಕನ್ನಡಕ ಕಳಚಿಟ್ಟು ಓದುವುದಾದರೇ ತಾವೇ ಸಿಎಂ ಆಗಿದ್ದಾಗ ಪ್ರಕಟಿಸಿರುವ ಪುಸ್ತಕ ಕಳಿಸಿ‌ಕೊಡಬೇಕಾ?” ಎಂದು ಶೆಟ್ಟರ್ ಟಿಪ್ಪುವಿನ ವೇಶ ಧರಿಸಿದ್ದ ಫೋಟೋಗಳನ್ನು ಟ್ವಿಟ್ ಮಾಡಿದ್ದಾರೆ.

ಸ್ವಿಸ್‌ನಲ್ಲಿರುವ ಕಪ್ಪು ಹಣವನ್ನು ಭಾರತದ ಬೊಕ್ಕಸಕ್ಕೆ ತಂದು ಹಾಕಿದರೆ ದೇಶದ ಎಲ್ಲಾ ರಸ್ತೆಗಳಿಗೂ ಟಾರ್ ಹಾಕುವ ಬದಲು ಚಿನ್ನ ಹಾಕಬಹುದು. ಸೌದಿಯ ಪೆಟ್ರೋಲಿಯಂ ಸಚಿವರಿಗೆ ಮೋದಿ ಫೋನ್ ಮಾಡಿ ಪೆಟ್ರೋಲ್ ಬೆಲೆ ಕಡಿಮೆ ಮಾಡಲು ಹೇಳಿದ್ದರು. ಬೆಂಗಳೂರಿನಿಂದ ಮಂಗಳೂರಿಗೆ ಬುಲೆಟ್ ಟ್ರೈನ್ ನಲ್ಲಿ 2 ಗಂಟೆಯಲ್ಲಿ ಹೋಗಬಹುದು. ಮೋದಿ ಇವೆಲ್ಲವನ್ನು ಮಾಡುತ್ತಾರೆ ಎಂದು ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿ ವಿವಾದ ಸೃಷ್ಟಿಸಿದ್ದರು. ಹಾಗಾಗಿ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಹೆಂಗ್ ಪುಂಗ್ಲಿಯೆಂಬ ಅಡ್ಡನಾಮದಿಂದ ಕರೆದು ಟ್ರೋಲ್ ಮಾಡಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಹರಿಪ್ರಸಾದ್ ಅನ್ನೋ ಗುಲಾಮನೇ ಒಬ್ಬಾ ಗೂಂಡಾ ಹಾಗಿರುವಾಗ ಇನ್ನೊಬ್ಬರ ಬಗ್ಗೆ ಮಾತಾಡೋ ಯೋಗ್ಯತೆ ಈ ಗೂಂಡಾ ಗುಲಾಮರಿಗೆ ಇಲ್ಲಾ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...