Homeಅಂತರಾಷ್ಟ್ರೀಯ‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ - ಆಶಾ ಕಾರ್ಯರ್ತರಿಗೆ ವಿಶ್ವಸಂಸ್ಥೆ ಪ್ರಶಸ್ತಿ

‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ – ಆಶಾ ಕಾರ್ಯರ್ತರಿಗೆ ವಿಶ್ವಸಂಸ್ಥೆ ಪ್ರಶಸ್ತಿ

- Advertisement -
- Advertisement -

ದೇಶದ ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಹತ್ತು ಲಕ್ಷ ಆಶಾ ಕಾರ್ಯಕರ್ತರನ್ನು ವಿಶ್ವ ಸಂಸ್ಥೆ ಗೌರವಿಸಿದೆ. ವಿಶ್ವ ಆರೋಗ್ಯ ಸಂಸ್ಥೆ(WHO)ಯ 75 ನೇ ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ ಭಾರತದ ಆಶಾ ಕಾರ್ಯಕರ್ತರು ‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ ಗೆ ಪಾತ್ರರಾಗಿದ್ದಾರೆ.

“ಕೊರೊನಾ ಸಾಂಕ್ರಾಮಿಕ ರೋಗದ ಉದ್ದಕ್ಕೂ ಕಂಡಿರುವಂತೆ ಗ್ರಾಮೀಣ ಭಾಗದ ಬಡತನದಲ್ಲಿ ವಾಸಿಸುವವರು ಕೂಡಾ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಪಡೆಯಬಹುದೆಂದು ಖಚಿತಪಡಿಸಿಕೊಳ್ಳಲು ಸಮುದಾಯವನ್ನು ಆರೋಗ್ಯ ವ್ಯವಸ್ಥೆಯೊಂದಿಗೆ ಸಂಪರ್ಕಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಕ್ಕಾಗಿ ಭಾರತದ ಹತ್ತು ಲಕ್ಷಕ್ಕೂ ಹೆಚ್ಚು ‘ಆಶಾ’ (ಹಿಂದಿಯಲ್ಲಿ ‘ಭರವಸೆ’ ಎಂದರ್ಥ) ಮಹಿಳಾ ಸ್ವಯಂಸೇವಕರನ್ನು ಗೌರವಿಸಲಾಗಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಬಿಡುಗಡೆ ಮಾಡಿರುವ ಹೇಳಿಕೆ ತಿಳಿಸಿದೆ.

ವಿಶ್ವ ಸಂಸ್ಥೆಯು ‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ ಅನ್ನು ಆರು ಮಂದಿಗೆ ನೀಡಿದ್ದು, ಅದರಲ್ಲಿ ದೇಶದ ಆಶಾ ಕಾರ್ಯಕರ್ತರೂ ಒಬ್ಬರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿ, “ಜಗತ್ತು ಅಸಮಾನತೆ, ಸಂಘರ್ಷ, ಆಹಾರ ಅಭದ್ರತೆ, ಹವಾಮಾನ ಬಿಕ್ಕಟ್ಟು ಮತ್ತು ಸಾಂಕ್ರಾಮಿಕ ರೋಗಗಳ ಹಿಂದೆಂದೂ ಕಂಡಿಲ್ಲ ಒಮ್ಮುಖವನ್ನು ಎದುರಿಸುತ್ತಿರುವ ಸಮಯದಲ್ಲಿ, ಅದರಿಂದ ರಕ್ಷಿಸಲು ಅತ್ಯುತ್ತಮ ಕೊಡುಗೆ ನೀಡಿದವರನ್ನು ಈ ಪ್ರಶಸ್ತಿಯು ಗುರುತಿಸುತ್ತದೆ” ಎಂದು ಹೇಳಿದ್ದರೆ.

ಇದನ್ನೂ ಓದಿ: ವೇತನ ಹೆಚ್ಚಳ, ಕೋವಿಡ್‍ ಭತ್ಯೆಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ: ಆಶಾ ಕಾರ್ಯಕರ್ತೆಯರಿಗೊಂದು ದೊಡ್ಡ ಗೆಲುವು

ಆಶಾ ಕಾರ್ಯಕರ್ತರನ್ನು ವಿಶ್ವಸಂಸ್ಥೆಯು ಗೌರವಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, “ಆಶಾ ಕಾರ್ಯಕರ್ತೆಯರ ಇಡೀ ತಂಡಕ್ಕೆ ಡಬ್ಲ್ಯುಎಚ್‌ಒ ಮಹಾನಿರ್ದೇಶಕರ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿಯನ್ನು ನೀಡಿರುವುದು ಸಂತಸ ತಂದಿದೆ. ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಅಭಿನಂದನೆಗಳು. ಆರೋಗ್ಯಕರ ಭಾರತವನ್ನು ಖಚಿತಪಡಿಸಿಕೊಳ್ಳುವಲ್ಲಿ ಅವರು ಮುಂಚೂಣಿಯಲ್ಲಿದ್ದಾರೆ. ಅವರ ಸಮರ್ಪಣೆ ಮತ್ತು ದೃಢತೆ ಮೆಚ್ಚುವಂತದ್ದು” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಆಶಾ ಕಾರ್ಯಕರ್ತ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ, “ನಾವು ಯಾವ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಜಗತ್ತೇ ಗುರುತಿಸಿದೆ. ಈ ಗೌರವಕ್ಕೆ ಪಾತ್ರರಾಗಿರುವುದಕ್ಕೆ ಪ್ರಧಾನಿ ಮೋದಿ ಕೂಡಾ ಅಭಿನಂದಿಸಿದ್ದಾರೆ. ಮಹತ್ವವಾದ ಕೆಲಸವನ್ನು ಚೆನ್ನಾಗಿ ಮಾಡತ್ತಿದ್ದೇವೆ ಮತ್ತು ಎಲ್ಲರೂ ಗುರುತಿಸುವಂತಹದ್ದು ಸಂತೋಷ ಮತ್ತು ಗೌರವದ ಸಂಗತಿ” ಎಂದು ಅವರು ತಿಳಿಸಿದ್ದಾರೆ.

“ನಿಜವಾಗಿಯೂ ನಮ್ಮನ್ನು ಅಭಿನಂದಿಸುವುದೇ ಆಗಿದ್ದರೆ ನಮ್ಮ ದುಡಿಮೆಗೆ ತಕ್ಕಂತಹ ಪ್ರತಿಫಲ ನೀಡಬೇಕು. ಅದು ನಮ್ಮನ್ನು ನಿಜವಾಗಿಯೂ ಗೌರವಿಸಿದಂತೆ ಆಗುತ್ತದೆ. ಆದರೆ ನಾವು ದುಡಿದ ಹಣವನ್ನೂ ನೀಡಲು ಕೂಡಾ ಸರ್ಕಾರ ಸತಾಯಿಸುತ್ತದೆ. ಮೊನ್ನೆ ಮೇ 17 ರಂದು ಕೂಡಾ ನಾವು ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡಿದ್ದೇವೆ. ಆ ಹೋರಾಟದಲ್ಲೂ ನಾವು ಹೇಳಿದ್ದು ನಮ್ಮ ದುಡಿಮೆಯ ಪ್ರತಿಫಲ ಕೊಡಿ ಎಂದಷ್ಟೆ. ಗೌರವಧನದ ಹೆಸರಿನಲ್ಲಿ 5 ಸಾವಿರವನ್ನು ನೀಡಲಾಗುತ್ತದೆ. ಅದನ್ನು ಸರಿಯಾದ ಸಮಯದಲ್ಲಿ ನೀಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜೊತೆ ಚರ್ಚೆ: HD ಕುಮಾರಸ್ವಾಮಿ ಭರವಸೆ

“ಮಾಡಿದ ಕೆಲಸಗಳಿಗೆ 50 ರಿಂದ 200 ರೂ ವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಈ ಕೆಲಸಗಳನ್ನು ಪೋರ್ಟಲ್ ಅಲ್ಲಿ ದಾಖಲಾಗಬೇಕಾಗುತ್ತದೆ. ಆದರೆ ಅದನ್ನು ದಾಖಲು ಮಾಡಲು ವ್ಯವಸ್ಥೆಯಿಲ್ಲ. ಆ ಹುದ್ದೆಯನ್ನು ಇನ್ನೂ ಖಾಲಿ ಬಿಡಲಾಗಿದೆ. ಅದನ್ನು ದಾಖಲೆ ಮಾಡುವವರೆಗೂ ನಮಗೆ ಪ್ರೋತ್ಸಾಹ ಧನ ಬರುವುದಿಲ್ಲ. ಇದೂ ಕೂಡಾ ಸರ್ಕಾರ ನಮಗೆ ಮಾಡುವ ಮೋಸ ಅಲ್ಲವೆ” ಎಂದು ಬೇಸರ ವ್ಯಕ್ತಪಡಿಸಿದರು.

“ದೇಶದ ಎಲ್ಲರ ಆರೋಗ್ಯವೂ ಚೆನ್ನಾಗಿ ಇರಬೇಕು ಎಂದು ನಾವು ಹಗಲು-ರಾತ್ರಿ ಕೆಲಸ ಮಾಡುತ್ತೇವೆ. ಆದರೆ ನಮ್ಮ ಆರೋಗ್ಯ ಕೆಟ್ಟರೆ ಅದಕ್ಕೆ ಸರ್ಕಾರ ಸಹಾಯ ಮಾಡುವುದಿಲ್ಲ. ಆರೋಗ್ಯ ವಿಚಾರವಾಗಿ ಒಂದು ತಿಂಗಳು ಕೆಲಸ ಮಾಡಿಲ್ಲ ಅಂದರೆ ಒಂದು ರುಪಾಯಿಯೂ ನಮಗೆ ಬರುವುದಿಲ್ಲ. ಅಷ್ಟೊಂದು ನಿಕೃಷ್ಟವಾಗಿ ನಮ್ಮನ್ನು ನಡೆಸಿಕೊಳ್ಳಲಾಗುತ್ತಿದೆ. ಇದೆಲ್ಲಕ್ಕೆ ಸರ್ಕಾರ ಪರಿಹಾರ ನೀಡಿದರೆ ನಿಜವಾಗಿಯೂ ನಮ್ಮನ್ನು ಗೌರವಿಸಿದ ಹಾಗೆ” ಎಂದು ಅವರು ಹೇಳಿದ್ದಾರೆ.

ಸಾಮಾನ್ಯವಾಗಿ ಕಾರ್ಮಿಕರು ದುಡಿಮೆ ತಕ್ಕಂತೆ ಕೂಲಿ, ಸಂಬಳ ಪಡೆಯುತ್ತಾರೆ. ಆದರೆ ನಿಮ್ಮ ದುಡಿಮೆಗೆ ಪ್ರತಿಫಲವಾಗಿ ‘ಗೌರವಧನ’ ಎಂಬ ಹೆಸರಿಟ್ಟು ನಿಮ್ಮ ಶ್ರಮಕ್ಕೆ ಮೋಸ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,“ವಾಸ್ತವದಲ್ಲಿ ನಾವು ಮಾಡುತ್ತಿರುವ ಕೆಸಲಕ್ಕೆ ಪ್ರತಿಫಲವಾಗಿ ನೀಡುವ ‘ಗೌರವಧನ’ದ ಹೆಸರೂ ಕೂಡಾ ಒಂದು ಮೋಸ. ಹೆಸರು ಇಟ್ಟಕೂಡಲೇ ನಮಗೆ ಗೌರವ ಸಿಕ್ಕಿದ ಹಾಗೆ ಆಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...