Homeಮುಖಪುಟರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ನಾವು ಚಕ್ರವರ್ತಿ ಸೂಲಿಬೆಲೆಯವರ ಪಾಠವನ್ನು ಸಹ ಸೇರಿಸುತ್ತೇವೆ. ಈ ದೇಶದ ಯಾವುದೇ ದೇಶಪ್ರೇಮಿಯನ್ನು ನಾವು ಮರೆಯುವುದಿಲ್ಲ. ಒಂದು ವಿಚಾರದವರ ಪಠ್ಯಗಳು ಮಾತ್ರ ಇರಬೇಕೆ? ಎಂದಿದ್ದಾರೆ.

- Advertisement -
- Advertisement -

ರೋಹಿತ್ ಚಕ್ರತೀರ್ಥ ಯಾರು? ಅವರ ಅರ್ಹತೆಯೇನು? ಅವರು ಶಿಕ್ಷಣ ತಜ್ಞರಲ್ಲವಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, “ರೋಹಿತ್ ಚಕ್ರತೀರ್ಥ ಐಐಟಿ ಮತ್ತು ಸಿಇಟಿಗೆ ಪ್ರೊಫೆಸರ್ ಆಗಿದ್ದರು” ಎಂದಿದ್ದಾರೆ. ಶಿಕ್ಷಣ ತಜ್ಞ ಎಂಬುದಕ್ಕೆ ಸರ್ಟಿಫಿಕೇಟ್ ಕೊಡುವವರು ಯಾರು? ಎಂದಿದ್ದಾರೆ.

ಬೆಂಗಳೂರಿನಲ್ಲಿ ಪಠ್ಯ ಪರಷ್ಕರಣೆ ಕುರಿತು ಎದ್ದಿರುವ ವಿವಾದಗಳಿಗೆ ಸ್ಪಷ್ಟೀಕರಣ ನೀಡಿದ ಅವರು, “ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯು ಹಲವಾರು ಪಠ್ಯಗಳನ್ನು ಕೈಬಿಟ್ಟಿದೆ. ಆಗ ಏಕೆ ಯಾರು ಪ್ರಶ್ನಿಸಲಿಲ್ಲ? ಮೈಸೂರು ಮಹರಾಜರ ಬಗ್ಗೆ 5 ಪುಟಗಳ ಪಾಠ ಇತ್ತು, ಅದನ್ನು ತೆಗೆದು ಸಾಲುಗಳಿಗೆ ಇಳಿಸಿತ್ತು. ಅದರ ಬದಲು ಟಿಪ್ಪು ಸುಲ್ತಾನ್ ಪಾಠ ಹಾಕಿದ್ದರು. ಟಿಪ್ಪು ಸುಲ್ತಾನ್ ಒಬ್ಬರೆ ಬ್ರೀಟಿಷರ ವಿರುದ್ಧ ಮಾತನಾಡಿದರೆ?” ಎಂದಿದ್ದಾರೆ.

ನಾವು ಪೆರಿಯಾರ್ ಬಗ್ಗೆ ಇದ್ದ ಪಠ್ಯ ತೆಗೆದಿದ್ದೇವೆ. ಈ ದೇಶದಲ್ಲಿ ರಾಮ ಆದರ್ಶವಾಗಬೇಕೊ, ರಾವಣ ಆದರ್ಶವಾಗಬೇಕೊ? ರಾಮನ ಫೋಟೊಗೆ ಚಪ್ಪಲಿಯಲ್ಲಿ ಹೊಡೆದು, ರಾವಣನನ್ನು ಪೂಜಿಸುವವರ ಬಗ್ಗೆ ನಾವು ನಮ್ಮ ಮಕ್ಕಳಿಗೆ ಓದಿಸಬೇಕಾ? ರಾಮ ವೈದಿಕ ಸಂಸ್ಕೃತಿಯನ್ನು ರಾವಣ ದ್ರಾವಿಡ ಸಂಸ್ಕೃತಿಯನ್ನು ಪ್ರತಿನಿಧಿಸುತ್ತಾರೆ ಎಂದು ಬರೆದಿದ್ದಾರೆ. ಇದನ್ನು ನಾವು ಬೋಧಿಸಬೇಕಾ? ಆದರ್ಶ ಪುರುಷ ರಾಮ ಎಂದಿದ್ದು, ರಾಮರಾಜ್ಯ ಬರಬೇಕು ಎಂದಿದ್ದು ನಾವಲ್ಲ ಗಾಂಧೀಜಿ ಹೇಳಿದ್ದರು ಎಂದರು.

ನಮ್ಮ ಈ ಪಠ್ಯಗಳನ್ನು ಬುದ್ದಿಜೀವಿಗಳು ವಿರೋಧಿಸುತ್ತಾರೆ. ಅವರು ರಾವಣ ವಂಶಸ್ಥರಿಗೆ ಸೇರಿರಬೇಕು. ಕುವೆಂಪು ಬಗ್ಗೆ ಪಾಠ ತೆಗೆದಿಲ್ಲ, ಹಿಂದಿನ ಸರ್ಕಾರ ತೆಗೆದಿತ್ತು. ನಾವು ಸೇರಿಸಿದ್ದೇವೆ ಎಂದರು. ಅಲ್ಲದೆ ಸಾಹಿತಿಗಳ ಜಾತಿ ಹುಡಕಬೇಡಿ, ದಯವಿಟ್ಟು ವಿಷಯದ ಕುರಿತು ಮಾತನಾಡಿ ಎಂದು ಹೇಳಿದ್ದಾರೆ.

ದೇಶಕ್ಕೆ ಹೆಡಗೇವಾರ್ ಕೊಡುಗೆಯೇನು? ಮಕ್ಕಳಿಗೆ ಆರ್‌ಎಸ್‌ಎಸ್‌ ಮನಸ್ಥಿತಿ ತುಂಬುವುದೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೆಡಗೇವಾರ್ ವೈದ್ಯರಾದ ನಂತರ ಕ್ರಾಂತಿಕಾರಿಯಾಗಿದ್ದರು. ಅವರು ದೇಶಕ್ಕೆ ವೈದ್ಯನಂತೆ ಕೆಲಸ ಮಾಡಿದರು. ಕೊಲ್ಕತ್ತಾದಲ್ಲಿ ಹೋರಾಟ ಮಾಡಿದ್ದರು. ಕಾಂಗ್ರೆಸ್ ಸಮಿತಿಯಲ್ಲಿದ್ದರು. ಆದರೆ ಯಾವಾಗ ಖಿಲಾಫತ್ ಚಳವಳಿ ಶುರುವಾಯಿತೊ ಆಗ ಹೆಡಗೇವಾರ್ ಹೊರಬಂದರು. ಆಗ ಭಾರತ ಧ್ವಜ ಇಲ್ಲ ಕಾರಣ ಭಗವಾಧ್ವಜವನ್ನು ಬೆಂಬಲಿಸಿದ್ದರು” ಎಂದರು.

ಇದನ್ನೂ ಓದಿ: ಬ್ರಾಹ್ಮಣರ ಪಠ್ಯಗಳನ್ನು ಕನ್ನಡ ಮಕ್ಕಳು ಏಕೆ ಓದಬೇಕು?

ನಾವು ಚಕ್ರವರ್ತಿ ಸೂಲಿಬೆಲೆಯವರ ಪಾಠವನ್ನು ಸಹ ಸೇರಿಸುತ್ತೇವೆ. ಈ ದೇಶದ ಯಾವುದೇ ದೇಶಪ್ರೇಮಿಯನ್ನು ನಾವು ಮರೆಯುವುದಿಲ್ಲ. ಒಂದು ವಿಚಾರದವರ ಪಠ್ಯಗಳು ಮಾತ್ರ ಇರಬೇಕೆ? ನಾವು ಎಲ್ಲಿಯೂ ಮಕ್ಕಳಿಗೆ ಜಾತಿ ಪರಿಚಯ ಮಾಡಿಕೊಡುತ್ತಿಲ್ಲ ಎಂದರು.

ಪ್ರತಿ ದಿನ ಪಿಡಿಎಫ್‌ ಪುಸ್ತಕ ಬದಲಿಸುತ್ತಿದ್ದೇವೆ. ಪಿಡಿಎಫ್‌ ಅನ್ನು ಯಾರು ಬೇಕಾದರೂ ಮಾಡಬಹುದು. ಪ್ರಿಂಟ್ ಆದಮೇಲಷ್ಟೆ ಅದು ಫೈನಲ್ ಆಗಿರುತ್ತದೆ. 78% ಪುಸ್ತಕ ಎಲ್ಲರಿಗೂ ತಲುಪಿದೆ. ಪರಿಷ್ಕರಣೆ ಆಗಿರುವುದನ್ನು ಓದಿ, ತಪ್ಪಿದ್ದರೆ ನಮಗೆ ತಿಳಿಸಿ. ಮುಂದಿ ವರ್ಷದಿಂದ ತಿದ್ದಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಸೂಲಿಬೆಲೆ ಮಾತ್ರವಲ್ಲ, ಕಲ್ಲಡ್ಕ ಭಟ್ಟ, ಹೋರಿ ಸ್ವಾಮಿ, ಮಧುಗಿರಿ ಮೋದಿ, ಸೀಟಿ ರವಿ ಮುಂತಾದವರ ಭಾಷಣಗಳನ್ನೂ ಸೇರಿಸಿ. ಅದು ನಿಮ್ಮ ಯೋಗ್ಯತೆಗೆ ತಕ್ಕಂತಿದೆ. ಆದರೆ ಅದನ್ನು ನಿಮ್ಮ ಮನೆ ಮಕ್ಕಳಿಗೆ ಮಾತ್ರ ಓದಿಸಿ.

  2. ಒಬ್ಬ ಜವಾಬ್ದಾರಿ ಸ್ಥಾನದಲ್ಲಿರುವವರು ಹೊಣೆ ಗರಿಕೆಯಿಂದ ಮಾತನಾಡುವುದು .ಆದರೆ ಇವರ ಮಾತು ಕೇಳಿದರೆ ಟೀಕೆಗಳಿಗೆ ಅವಕಾಶ ಇಲ್ಲ
    ಇದು ಒಂದು ದೊಡ್ಡ ಸಮಸ್ಯೆಯೇ ಸರಿ.

  3. ಸ್ವಾಮೀ.. ತಾವು ಆರ್ ಎಸ್ ಎಸ್ ಭಕ್ತ ಅನ್ನುವುದು ಜಗತ್ತಿಗೆ ಗೊತ್ತಿದೆ… ಹೆಡ್ಗೆವಾರ್ ಅವರನ್ನ ನೀವು ಬೆಂಬಲಿಸದೆ ಇರ್ತೀರಾ… ಬೈಠಕ್ ನಲ್ಲಿ ಯಾವ್ ಯಾವ ತರಹ ಭೋದನೆ ಮಾಡ್ತೀರಾ ಅದನ್ನೂ ಮಕ್ಕಳಿಗೆ ಹೇಳಿಬಿಡಿ… ಶಿವಾಜಿ ಆಟದಲ್ಲಿ ಒಬ್ಬನನ್ನ ಔರಂಗಜೇಬನನ್ನ ಮಾಡಿ. ಎಲ್ಲರೂ ಕೂಡಿ ಹೊಡಿಯೋ ಆಟ ಆಡಿಸಿ… ಥೂ ನಿಮ್ಮ ….. ನೀವೂ ಒಬ್ಬ ಶಿಕ್ಷಣ ಸಚಿವರಾ…

  4. ಎಳೆಯ ವಯಸ್ಸಿನ ಮಕ್ಕಳ ಮೆದುಳನ್ನು ತೊಳೆಯಬೇಡಿ ಸ್ವಾಮಿ, ಪುನಃ ಸಮಾಜವನ್ನು ಇಬ್ಭಾಗ ಮಾಡಬೇಡಿ, ಜನರ ಸಮಸ್ಯೆಯನ್ನು ಬಗೆಹರಿಸಲು ವಿಫಲವಾದ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಟ್ಟುಕೊಳ್ಳಲು ಕೋಮುವಾದಿ ಘರ್ಷಣೆಗೆ ಎಡೆ ಮಾಡಿಕೊಡುವಂತಹ ಹಲವಾರು ಪ್ರಸಂಗ ನಿರ್ವಹಣೆಯಲ್ಲಿ ವಿಫಲ ಆಯಿತು. ಇವರ ಯಜ್ಞ ಯಾಗಾದಿಗಳ ಬಗ್ಗೆ ಕಲಿತು ಮಕ್ಕಳು ಮಾಡುವುದಾದ್ರೂ ಏನು, ಅದರ ಬದಲಿಗೆ ಸಮಾಜಕ್ಕೆ ಒಳಿತಾಗುವ, ಧರ್ಮ ಜಾತಿಗಳನ್ನು ಮೀರಿ ಭಾವೈಕ್ಯತೆ ಬೆಳೆಸುವಂತ ಪಠ್ಯಕ್ರಮ ತರಲಿ,

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...