Homeಕರ್ನಾಟಕದುಡಿಮೆಗೆ ತಕ್ಕ ಪ್ರತಿಫಲ ನೀಡಿ; ಅದುವೇ ನಮ್ಮನ್ನು ಗೌರವಿಸಿದಂತೆ: ಆಶಾ ಕಾರ್ಯಕರ್ತರ ಸಂಘಟನೆ

ದುಡಿಮೆಗೆ ತಕ್ಕ ಪ್ರತಿಫಲ ನೀಡಿ; ಅದುವೇ ನಮ್ಮನ್ನು ಗೌರವಿಸಿದಂತೆ: ಆಶಾ ಕಾರ್ಯಕರ್ತರ ಸಂಘಟನೆ

ನಮ್ಮ ಕೆಸಲಕ್ಕೆ ಪ್ರತಿಫಲವಾಗಿ ನೀಡುವ ‘ಗೌರವಧನ’ದ ಹೆಸರೂ ಕೂಡಾ ಒಂದು ಮೋಸವಾಗಿದ್ದು, ಹೆಸರು ಇಟ್ಟಕೂಡಲೇ ನಮಗೆ ಗೌರವ ಸಿಕ್ಕಿದ ಹಾಗೆ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆ (WHO)ಯು 75 ನೇ ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ ದೇಶದಾದ್ಯಂತ ಇರುವ ಹತ್ತು ಲಕ್ಷ ಆಶಾ ಕಾರ್ಯಕರ್ತರ ಸೇವೆಯನ್ನು ಗುರುತಿಸಿ ‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ ನೀಡಿ ಗೌರವಿಸಿದೆ. ಈ ಬಗ್ಗೆ ಪ್ರಧಾನಿ ಮೋದಿ ಕೂಡಾ ಆಶಾ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆಶಾ ಕಾರ್ಯಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ, ಮಹತ್ವವಾದ ಕೆಲಸವನ್ನು ಚೆನ್ನಾಗಿ ಮಾಡತ್ತಿದ್ದೇವೆ ಮತ್ತು ಎಲ್ಲರೂ ಗುರುತಿಸುವಂತಹದ್ದು ಸಂತೋಷ ಮತ್ತು ಗೌರವದ ಸಂಗತಿ. ಆದರೆ ನಿಜವಾಗಿಯೂ ನಮ್ಮನ್ನು ಅಭಿನಂದಿಸುವುದೇ ಆಗಿದ್ದರೆ ನಮ್ಮ ದುಡಿಮೆಗೆ ತಕ್ಕಂತಹ ಪ್ರತಿಫಲ ನೀಡಬೇಕು. ಅದು ನಮ್ಮನ್ನು ನಿಜವಾಗಿಯೂ ಗೌರವಿಸಿದಂತೆ ಆಗುತ್ತದೆ ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ನಾವು ಯಾವ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಜಗತ್ತೇ ಗುರುತಿಸಿದೆ. ಈ ಗೌರವಕ್ಕೆ ಪಾತ್ರರಾಗಿರುವುದಕ್ಕೆ ಪ್ರಧಾನಿ ಮೋದಿ ಕೂಡಾ ಅಭಿನಂದಿಸಿದ್ದಾರೆ. ಮಹತ್ವವಾದ ಕೆಲಸವನ್ನು ಚೆನ್ನಾಗಿ ಮಾಡತ್ತಿದ್ದೇವೆ ಮತ್ತು ಎಲ್ಲರೂ ಗುರುತಿಸುವಂತಹದ್ದು ಸಂತೋಷ ಮತ್ತು ಗೌರವದ ಸಂಗತಿ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ – ಆಶಾ ಕಾರ್ಯರ್ತರಿಗೆ ವಿಶ್ವಸಂಸ್ಥೆ ಪ್ರಶಸ್ತಿ

“ನಿಜವಾಗಿಯೂ ನಮ್ಮನ್ನು ಅಭಿನಂದಿಸುವುದೇ ಆಗಿದ್ದರೆ ನಮ್ಮ ದುಡಿಮೆಗೆ ತಕ್ಕಂತಹ ಪ್ರತಿಫಲ ನೀಡಬೇಕು. ಅದು ನಮ್ಮನ್ನು ನಿಜವಾಗಿಯೂ ಗೌರವಿಸಿದಂತೆ ಆಗುತ್ತದೆ. ಆದರೆ ನಾವು ದುಡಿದ ಹಣವನ್ನೂ ನೀಡಲು ಕೂಡಾ ಸರ್ಕಾರ ಸತಾಯಿಸುತ್ತದೆ. ಮೊನ್ನೆ ಮೇ 17 ರಂದು ಕೂಡಾ ನಾವು ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡಿದ್ದೇವೆ. ಆ ಹೋರಾಟದಲ್ಲೂ ನಾವು ಹೇಳಿದ್ದು ನಮ್ಮ ದುಡಿಮೆಯ ಪ್ರತಿಫಲ ಕೊಡಿ ಎಂದಷ್ಟೆ. ಗೌರವಧನದ ಹೆಸರಿನಲ್ಲಿ 5 ಸಾವಿರವನ್ನು ನೀಡಲಾಗುತ್ತದೆ. ಅದನ್ನು ಸರಿಯಾದ ಸಮಯದಲ್ಲಿ ನೀಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮಾಡಿದ ಕೆಲಸಗಳಿಗೆ 50 ರಿಂದ 200 ರೂ ವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಈ ಕೆಲಸಗಳನ್ನು ಪೋರ್ಟಲ್ ಅಲ್ಲಿ ದಾಖಲಾಗಬೇಕಾಗುತ್ತದೆ. ಆದರೆ ಅದನ್ನು ದಾಖಲು ಮಾಡಲು ವ್ಯವಸ್ಥೆಯಿಲ್ಲ. ಆ ಹುದ್ದೆಯನ್ನು ಇನ್ನೂ ಖಾಲಿ ಬಿಡಲಾಗಿದೆ. ಅದನ್ನು ದಾಖಲೆ ಮಾಡುವವರೆಗೂ ನಮಗೆ ಪ್ರೋತ್ಸಾಹ ಧನ ಬರುವುದಿಲ್ಲ. ಇದೂ ಕೂಡಾ ಸರ್ಕಾರ ನಮಗೆ ಮಾಡುವ ಮೋಸ ಅಲ್ಲವೆ” ಎಂದು ಬೇಸರ ವ್ಯಕ್ತಪಡಿಸಿದರು.

“ದೇಶದ ಎಲ್ಲರ ಆರೋಗ್ಯವೂ ಚೆನ್ನಾಗಿ ಇರಬೇಕು ಎಂದು ನಾವು ಹಗಲು-ರಾತ್ರಿ ಕೆಲಸ ಮಾಡುತ್ತೇವೆ. ಆದರೆ ನಮ್ಮ ಆರೋಗ್ಯ ಕೆಟ್ಟರೆ ಅದಕ್ಕೆ ಸರ್ಕಾರ ಸಹಾಯ ಮಾಡುವುದಿಲ್ಲ. ಆರೋಗ್ಯ ವಿಚಾರವಾಗಿ ಒಂದು ತಿಂಗಳು ಕೆಲಸ ಮಾಡಿಲ್ಲ ಅಂದರೆ ಒಂದು ರುಪಾಯಿಯೂ ನಮಗೆ ಬರುವುದಿಲ್ಲ. ಅಷ್ಟೊಂದು ನಿಕೃಷ್ಟವಾಗಿ ನಮ್ಮನ್ನು ನಡೆಸಿಕೊಳ್ಳಲಾಗುತ್ತಿದೆ. ಇದೆಲ್ಲಕ್ಕೆ ಸರ್ಕಾರ ಪರಿಹಾರ ನೀಡಿದರೆ ನಿಜವಾಗಿಯೂ ನಮ್ಮನ್ನು ಗೌರವಿಸಿದ ಹಾಗೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೇತನ ಹೆಚ್ಚಳ, ಕೋವಿಡ್‍ ಭತ್ಯೆಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ: ಆಶಾ ಕಾರ್ಯಕರ್ತೆಯರಿಗೊಂದು ದೊಡ್ಡ ಗೆಲುವು

ಸಾಮಾನ್ಯವಾಗಿ ಕಾರ್ಮಿಕರು ದುಡಿಮೆ ತಕ್ಕಂತೆ ಕೂಲಿ, ಸಂಬಳ ಪಡೆಯುತ್ತಾರೆ. ಆದರೆ ನಿಮ್ಮ ದುಡಿಮೆಗೆ ಪ್ರತಿಫಲವಾಗಿ ‘ಗೌರವಧನ’ ಎಂಬ ಹೆಸರಿಟ್ಟು ನಿಮ್ಮ ಶ್ರಮಕ್ಕೆ ಮೋಸ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,“ವಾಸ್ತವದಲ್ಲಿ ನಾವು ಮಾಡುತ್ತಿರುವ ಕೆಸಲಕ್ಕೆ ಪ್ರತಿಫಲವಾಗಿ ನೀಡುವ ‘ಗೌರವಧನ’ದ ಹೆಸರೂ ಕೂಡಾ ಒಂದು ಮೋಸ. ಹೆಸರು ಇಟ್ಟಕೂಡಲೇ ನಮಗೆ ಗೌರವ ಸಿಕ್ಕಿದ ಹಾಗೆ ಆಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...