Homeರಾಷ್ಟ್ರೀಯಭಾರತದ ಅತಿದೊಡ್ಡ ಪತ್ರಕರ್ತರ ಸಂಘ PCI ಚುನಾವಣೆ; ಎಡಪಂಥೀಯ ವಿಚಾರಧಾರೆಯ ಸದಸ್ಯರ ಪಾಲು

ಭಾರತದ ಅತಿದೊಡ್ಡ ಪತ್ರಕರ್ತರ ಸಂಘ PCI ಚುನಾವಣೆ; ಎಡಪಂಥೀಯ ವಿಚಾರಧಾರೆಯ ಸದಸ್ಯರ ಪಾಲು

ಎಲ್ಲಾ ಸಂಸ್ಥೆಗಳು ಕುಸಿದಿಲ್ಲ ಎಂಬುದನ್ನು ಈ ಗೆಲುವು ತೋರಿಸುತ್ತದೆ ಎಂದು ಚುನಾಯಿತ ಅಧ್ಯಕ್ಷರು ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು ನಿರಂತರ ಕುಸಿತದಲ್ಲಿರುವಾಗ ಮತ್ತು ಮೋದಿ ಸರ್ಕಾರವು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಲು ತೀವ್ರ ಟೀಕೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ, ಭಾರತದ ಅತೀದೊಡ್ಡ ಪತ್ರಕರ್ತರ ಸಂಘವಾದ ಪ್ರೆಸ್ ಕ್ಲಬ್ ಆಫ್ ಇಂಡಿಯಾ (PCI) ದ ಸಮಿತಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 21 ಸ್ಥಾನಗಳನ್ನು ಎಡಪಂಥೀಯ ವಿಚಾರಧಾರೆಯ ಸದಸ್ಯರು ಗೆದ್ದಿದ್ದಾರೆ.

ಫಲಿತಾಂಶದ ಪ್ರಕಾರ, ಹಿರಿಯ ಪತ್ರಕರ್ತ ಉಮಾಕಾಂತ್ ಲಖೇರಾ ನೇತೃತ್ವದ ಎಡಪಂಥೀಯ ವಿಚಾರಧಾರೆಯ ಸಮಿತಿಯು ತೀವ್ರ ಹೋರಾಟದ ನಂತರ ಕಾರ್ಯಕಾರಿ ಸಮಿತಿ ಸದಸ್ಯರನ್ನು ಒಳಗೊಂಡಿರುವ ಎಲ್ಲಾ 21 ಸ್ಥಾನಗಳನ್ನು ಗೆದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಿತಿಯಲ್ಲಿ ಉಪಾಧ್ಯಕ್ಷರಾಗಿ ಮನೋರಂಜನ್ ಭಾರ್ತಿ, ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಕುಮಾರ್, ಜಂಟಿ ಕಾರ್ಯದರ್ಶಿಯಾಗಿ ಸ್ವಾತಿ ಮಾಥುರ್ ಮತ್ತು ಖಜಾಂಚಿ ಸ್ಥಾನಕ್ಕೆ ಚಂದರ್ ಶೇಖರ್ ಲೂತ್ರಾ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಅಧ್ಯಕ್ಷರಾಗಿ ಆಯ್ಕೆಯಾದ ಲಖೇರಾ, ಮಾಧ್ಯಮಗಳ ಮೇಲಿನ ಬಲಪಂಥೀಯ ದಾಳಿಯ ವಿರುದ್ಧ ನಿಂತಿದ್ದಕ್ಕಾಗಿ ಮಾಧ್ಯಮ ಭ್ರಾತೃತ್ವಕ್ಕೆ ಧನ್ಯವಾದ ಹೇಳಿದ್ದಾರೆ.

“ಎಲ್ಲಾ ಸಂಸ್ಥೆಗಳು ಕುಸಿದಿಲ್ಲ ಎಂಬುದನ್ನು ಈ ಗೆಲುವು ತೋರಿಸುತ್ತದೆ. ಮಾಧ್ಯಮ ಸ್ವಾತಂತ್ರ್ಯದ ದಮನ, ಅವರ ಘನತೆ ಮತ್ತು ಸಂಸ್ಥೆಯ ಮೇಲೆ ಸರ್ಕಾರದ ದಾಳಿಯ ವಿರುದ್ಧ ಪತ್ರಕರ್ತರು ಮೌಲ್ಯಗಳಿಗಾಗಿ ಹೋರಾಡಿದರು” ಎಂದು ಅವರು ಹೇಳಿದ್ದಾರೆ.

“ಕಳೆದ 8 ವರ್ಷಗಳಲ್ಲಿ ಅನೇಕ ಪತ್ರಕರ್ತರನ್ನು ಜೈಲಿಗೆ ಹಾಕಲಾಯಿತು, ಸರ್ಕಾರದ ವಿರುದ್ಧ ಬರೆದಿದ್ದಕ್ಕಾಗಿ ಅನೇಕರಿಗೆ ಕಿರುಕುಳ ನೀಡಲಾಯಿತು … ಸರ್ಕಾರವು ಮಾಧ್ಯಮಗಳಿಗೆ ಸಂಸತ್ತು, ಸಚಿವಾಲಯಗಳಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಿ ಪತ್ರಕರ್ತರನ್ನು ವರದಿ ಮಾಡುವುದನ್ನು ತಡೆಯಲು ಪ್ರಯತ್ನಿಸಿದೆ” ಎಂದು ಲಖೇರಾ ಹೇಳಿದ್ದಾರೆ.

“ಪತ್ರಕರ್ತರ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡಲಾಗುತ್ತಿರುವಾಗ ಮೋದಿ ಸರ್ಕಾರವು ಮೌನ ವಹಿಸಿತ್ತು” ಎಂದು ಅವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫೀಚರ್‌ ಫೋಟೊಗ್ರಫಿಗಾಗಿ ಪ್ರತಿಷ್ಠಿತ ‘ಪುಲಿಟ್ಜರ್‌‌-2022’ ಪ್ರಶಸ್ತಿ ಗೆದ್ದ ಭಾರತೀಯ ಪತ್ರಕರ್ತರ ಪರಿಚಯ ಮತ್ತು ಫೊಟೊಗಳು ಹೀಗಿವೆ

ಪ್ರೆಸ್ ಕ್ಲಬ್ ಆಫ್ ಇಂಡಿಯಾ ಚುನಾವಣೆಯಲ್ಲಿ ಬಲಪಂಥೀಯ ಸಮಿತಿಯನ್ನು ಆಯ್ಕೆ ಮಾಡುವಂತೆ ಕೆಲವು ಬಿಜೆಪಿ ನಾಯಕರು ಮತ್ತು ವಕ್ತಾರರು ಕೂಡಾ ಪ್ರಚಾರ ಮಾಡಿದ್ದರು. ಹೀಗಾಗಿ ಈ ಫಲಿತಾಂಶವು ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದವು.

ಸಂಜಯ್ ಬಸಾಕ್ ನೇತೃತ್ವದ ಬಲಪಂಥೀಯ ಸಮಿತಿಯು ಚುನಾವಣೆಯಲ್ಲಿ ಗೆಲ್ಲಿಸುವಂತೆ ಕೆಲವು ಬಿಜೆಪಿ ನಾಯಕರು ಮತ್ತು ವಕ್ತಾರರು ಸಹ ಪ್ರಚಾರ ಮಾಡಿದ್ದರು. ಬಸಕ್ ಸಮಿತಿಯ ಪರವಾಗಿ ಬಿಜೆಪಿ ವಕ್ತಾರರು ಟ್ವೀಟ್ ಮಾಡಿ, ನಂತರ ಅದನ್ನು ಡಿಲಿಟ್‌ ಮಾಡಿದ್ದಾರೆ.

ಗಮನೀಯ ಅಂಶವೆಂದರೆ ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಎಡ ಒಲವಿನ ಸಮಿತಿಯು ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡಿದೆ. 2021 ರಲ್ಲಿ, ಲಖೇರಾ ನೇತೃತ್ವದ ಸಮಿತಿಯು ಭಾರಿ ಅಂತರದಿಂದ ಗೆದ್ದಿತ್ತು. ಉಮಾಕಾಂತ ಲಖೇರಾ ಅಧ್ಯಕ್ಷರಾಗಿ ಆಯ್ಕೆಯಾದರೆ, ಶಾಹಿದ್ ಅಬ್ಬಾಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಕುಮಾರ್ ಮತ್ತು ಜಂಟಿ ಕಾರ್ಯದರ್ಶಿಯಾಗಿ ಚಂದರ್ ಶೇಖರ್ ಲೂತ್ರಾ ಅವರು ಆಯ್ಕೆಯಾಗಿದ್ದರು. ಸುಧಿ ರಂಜನ್ ಸೇನ್ ಅವರು ಖಜಾಂಚಿ ಹುದ್ದೆಯನ್ನು ಗೆದ್ದಿದ್ದರು.

ಇದನ್ನೂ ಓದಿ: ಪತ್ರಿಕೋದ್ಯಮದ ಮೇಲೆ ಪ್ರಭುತ್ವದ ದಾಳಿ: 8 ವರ್ಷಗಳಲ್ಲಿ 18 ಪತ್ರಕರ್ತರ ಹತ್ಯೆ

1957 ರಲ್ಲಿ ದುರ್ಗಾ ದಾಸ್ ಸ್ಥಾಪಿಸಿದ ಪ್ರೆಸ್ ಕ್ಲಬ್ ಆಫ್ ಇಂಡಿಯಾ ಸ್ವಾತಂತ್ರ್ಯೋತ್ತರ ಭಾರತದ ಇತಿಹಾಸದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ. ದೇಶದ ಈ ರೀತಿಯ ಹಳೆಯ ಸಂಸ್ಥೆಗಳಲ್ಲಿ ಒಂದಾದ PCI ಅನ್ನು ವಾರ್ಷಿಕವಾಗಿ ಚುನಾಯಿತ ಕಾರ್ಯನಿರ್ವಾಹಕ ಸಂಸ್ಥೆಯು ನೇತೃತ್ವ ವಹಿಸುತ್ತದೆ. ಇದು ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ-ಜನರಲ್, ಜಂಟಿ ಕಾರ್ಯದರ್ಶಿ ಮತ್ತು ಖಜಾಂಚಿ ಮತ್ತು ವ್ಯವಸ್ಥಾಪಕ ಸಮಿತಿಯ 16 ಸದಸ್ಯರನ್ನು ಒಳಗೊಂಡಿರುತ್ತದೆ.

2021 ರ ಹೊತ್ತಿಗೆ, ಇದು ಸುಮಾರು 4,200 ಸಕ್ರಿಯ ಸದಸ್ಯರು, 900 ಸಹವರ್ತಿ ಸದಸ್ಯರು ಮತ್ತು ಕೆಲವು ಡಜನ್ ಕಾರ್ಪೊರೇಟ್ ಸದಸ್ಯರನ್ನು ಹೊಂದಿದ್ದು, ಇದು ಭಾರತದಲ್ಲಿನ ಅತಿದೊಡ್ಡ ಪತ್ರಕರ್ತರ ಸಂಸ್ಥೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...