Homeರಾಷ್ಟ್ರೀಯಭಾರತದ ಅತಿದೊಡ್ಡ ಪತ್ರಕರ್ತರ ಸಂಘ PCI ಚುನಾವಣೆ; ಎಡಪಂಥೀಯ ವಿಚಾರಧಾರೆಯ ಸದಸ್ಯರ ಪಾಲು

ಭಾರತದ ಅತಿದೊಡ್ಡ ಪತ್ರಕರ್ತರ ಸಂಘ PCI ಚುನಾವಣೆ; ಎಡಪಂಥೀಯ ವಿಚಾರಧಾರೆಯ ಸದಸ್ಯರ ಪಾಲು

ಎಲ್ಲಾ ಸಂಸ್ಥೆಗಳು ಕುಸಿದಿಲ್ಲ ಎಂಬುದನ್ನು ಈ ಗೆಲುವು ತೋರಿಸುತ್ತದೆ ಎಂದು ಚುನಾಯಿತ ಅಧ್ಯಕ್ಷರು ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು ನಿರಂತರ ಕುಸಿತದಲ್ಲಿರುವಾಗ ಮತ್ತು ಮೋದಿ ಸರ್ಕಾರವು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಲು ತೀವ್ರ ಟೀಕೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ, ಭಾರತದ ಅತೀದೊಡ್ಡ ಪತ್ರಕರ್ತರ ಸಂಘವಾದ ಪ್ರೆಸ್ ಕ್ಲಬ್ ಆಫ್ ಇಂಡಿಯಾ (PCI) ದ ಸಮಿತಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 21 ಸ್ಥಾನಗಳನ್ನು ಎಡಪಂಥೀಯ ವಿಚಾರಧಾರೆಯ ಸದಸ್ಯರು ಗೆದ್ದಿದ್ದಾರೆ.

ಫಲಿತಾಂಶದ ಪ್ರಕಾರ, ಹಿರಿಯ ಪತ್ರಕರ್ತ ಉಮಾಕಾಂತ್ ಲಖೇರಾ ನೇತೃತ್ವದ ಎಡಪಂಥೀಯ ವಿಚಾರಧಾರೆಯ ಸಮಿತಿಯು ತೀವ್ರ ಹೋರಾಟದ ನಂತರ ಕಾರ್ಯಕಾರಿ ಸಮಿತಿ ಸದಸ್ಯರನ್ನು ಒಳಗೊಂಡಿರುವ ಎಲ್ಲಾ 21 ಸ್ಥಾನಗಳನ್ನು ಗೆದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಿತಿಯಲ್ಲಿ ಉಪಾಧ್ಯಕ್ಷರಾಗಿ ಮನೋರಂಜನ್ ಭಾರ್ತಿ, ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಕುಮಾರ್, ಜಂಟಿ ಕಾರ್ಯದರ್ಶಿಯಾಗಿ ಸ್ವಾತಿ ಮಾಥುರ್ ಮತ್ತು ಖಜಾಂಚಿ ಸ್ಥಾನಕ್ಕೆ ಚಂದರ್ ಶೇಖರ್ ಲೂತ್ರಾ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಅಧ್ಯಕ್ಷರಾಗಿ ಆಯ್ಕೆಯಾದ ಲಖೇರಾ, ಮಾಧ್ಯಮಗಳ ಮೇಲಿನ ಬಲಪಂಥೀಯ ದಾಳಿಯ ವಿರುದ್ಧ ನಿಂತಿದ್ದಕ್ಕಾಗಿ ಮಾಧ್ಯಮ ಭ್ರಾತೃತ್ವಕ್ಕೆ ಧನ್ಯವಾದ ಹೇಳಿದ್ದಾರೆ.

“ಎಲ್ಲಾ ಸಂಸ್ಥೆಗಳು ಕುಸಿದಿಲ್ಲ ಎಂಬುದನ್ನು ಈ ಗೆಲುವು ತೋರಿಸುತ್ತದೆ. ಮಾಧ್ಯಮ ಸ್ವಾತಂತ್ರ್ಯದ ದಮನ, ಅವರ ಘನತೆ ಮತ್ತು ಸಂಸ್ಥೆಯ ಮೇಲೆ ಸರ್ಕಾರದ ದಾಳಿಯ ವಿರುದ್ಧ ಪತ್ರಕರ್ತರು ಮೌಲ್ಯಗಳಿಗಾಗಿ ಹೋರಾಡಿದರು” ಎಂದು ಅವರು ಹೇಳಿದ್ದಾರೆ.

“ಕಳೆದ 8 ವರ್ಷಗಳಲ್ಲಿ ಅನೇಕ ಪತ್ರಕರ್ತರನ್ನು ಜೈಲಿಗೆ ಹಾಕಲಾಯಿತು, ಸರ್ಕಾರದ ವಿರುದ್ಧ ಬರೆದಿದ್ದಕ್ಕಾಗಿ ಅನೇಕರಿಗೆ ಕಿರುಕುಳ ನೀಡಲಾಯಿತು … ಸರ್ಕಾರವು ಮಾಧ್ಯಮಗಳಿಗೆ ಸಂಸತ್ತು, ಸಚಿವಾಲಯಗಳಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಿ ಪತ್ರಕರ್ತರನ್ನು ವರದಿ ಮಾಡುವುದನ್ನು ತಡೆಯಲು ಪ್ರಯತ್ನಿಸಿದೆ” ಎಂದು ಲಖೇರಾ ಹೇಳಿದ್ದಾರೆ.

“ಪತ್ರಕರ್ತರ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡಲಾಗುತ್ತಿರುವಾಗ ಮೋದಿ ಸರ್ಕಾರವು ಮೌನ ವಹಿಸಿತ್ತು” ಎಂದು ಅವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫೀಚರ್‌ ಫೋಟೊಗ್ರಫಿಗಾಗಿ ಪ್ರತಿಷ್ಠಿತ ‘ಪುಲಿಟ್ಜರ್‌‌-2022’ ಪ್ರಶಸ್ತಿ ಗೆದ್ದ ಭಾರತೀಯ ಪತ್ರಕರ್ತರ ಪರಿಚಯ ಮತ್ತು ಫೊಟೊಗಳು ಹೀಗಿವೆ

ಪ್ರೆಸ್ ಕ್ಲಬ್ ಆಫ್ ಇಂಡಿಯಾ ಚುನಾವಣೆಯಲ್ಲಿ ಬಲಪಂಥೀಯ ಸಮಿತಿಯನ್ನು ಆಯ್ಕೆ ಮಾಡುವಂತೆ ಕೆಲವು ಬಿಜೆಪಿ ನಾಯಕರು ಮತ್ತು ವಕ್ತಾರರು ಕೂಡಾ ಪ್ರಚಾರ ಮಾಡಿದ್ದರು. ಹೀಗಾಗಿ ಈ ಫಲಿತಾಂಶವು ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದವು.

ಸಂಜಯ್ ಬಸಾಕ್ ನೇತೃತ್ವದ ಬಲಪಂಥೀಯ ಸಮಿತಿಯು ಚುನಾವಣೆಯಲ್ಲಿ ಗೆಲ್ಲಿಸುವಂತೆ ಕೆಲವು ಬಿಜೆಪಿ ನಾಯಕರು ಮತ್ತು ವಕ್ತಾರರು ಸಹ ಪ್ರಚಾರ ಮಾಡಿದ್ದರು. ಬಸಕ್ ಸಮಿತಿಯ ಪರವಾಗಿ ಬಿಜೆಪಿ ವಕ್ತಾರರು ಟ್ವೀಟ್ ಮಾಡಿ, ನಂತರ ಅದನ್ನು ಡಿಲಿಟ್‌ ಮಾಡಿದ್ದಾರೆ.

ಗಮನೀಯ ಅಂಶವೆಂದರೆ ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಎಡ ಒಲವಿನ ಸಮಿತಿಯು ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡಿದೆ. 2021 ರಲ್ಲಿ, ಲಖೇರಾ ನೇತೃತ್ವದ ಸಮಿತಿಯು ಭಾರಿ ಅಂತರದಿಂದ ಗೆದ್ದಿತ್ತು. ಉಮಾಕಾಂತ ಲಖೇರಾ ಅಧ್ಯಕ್ಷರಾಗಿ ಆಯ್ಕೆಯಾದರೆ, ಶಾಹಿದ್ ಅಬ್ಬಾಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಕುಮಾರ್ ಮತ್ತು ಜಂಟಿ ಕಾರ್ಯದರ್ಶಿಯಾಗಿ ಚಂದರ್ ಶೇಖರ್ ಲೂತ್ರಾ ಅವರು ಆಯ್ಕೆಯಾಗಿದ್ದರು. ಸುಧಿ ರಂಜನ್ ಸೇನ್ ಅವರು ಖಜಾಂಚಿ ಹುದ್ದೆಯನ್ನು ಗೆದ್ದಿದ್ದರು.

ಇದನ್ನೂ ಓದಿ: ಪತ್ರಿಕೋದ್ಯಮದ ಮೇಲೆ ಪ್ರಭುತ್ವದ ದಾಳಿ: 8 ವರ್ಷಗಳಲ್ಲಿ 18 ಪತ್ರಕರ್ತರ ಹತ್ಯೆ

1957 ರಲ್ಲಿ ದುರ್ಗಾ ದಾಸ್ ಸ್ಥಾಪಿಸಿದ ಪ್ರೆಸ್ ಕ್ಲಬ್ ಆಫ್ ಇಂಡಿಯಾ ಸ್ವಾತಂತ್ರ್ಯೋತ್ತರ ಭಾರತದ ಇತಿಹಾಸದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ. ದೇಶದ ಈ ರೀತಿಯ ಹಳೆಯ ಸಂಸ್ಥೆಗಳಲ್ಲಿ ಒಂದಾದ PCI ಅನ್ನು ವಾರ್ಷಿಕವಾಗಿ ಚುನಾಯಿತ ಕಾರ್ಯನಿರ್ವಾಹಕ ಸಂಸ್ಥೆಯು ನೇತೃತ್ವ ವಹಿಸುತ್ತದೆ. ಇದು ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ-ಜನರಲ್, ಜಂಟಿ ಕಾರ್ಯದರ್ಶಿ ಮತ್ತು ಖಜಾಂಚಿ ಮತ್ತು ವ್ಯವಸ್ಥಾಪಕ ಸಮಿತಿಯ 16 ಸದಸ್ಯರನ್ನು ಒಳಗೊಂಡಿರುತ್ತದೆ.

2021 ರ ಹೊತ್ತಿಗೆ, ಇದು ಸುಮಾರು 4,200 ಸಕ್ರಿಯ ಸದಸ್ಯರು, 900 ಸಹವರ್ತಿ ಸದಸ್ಯರು ಮತ್ತು ಕೆಲವು ಡಜನ್ ಕಾರ್ಪೊರೇಟ್ ಸದಸ್ಯರನ್ನು ಹೊಂದಿದ್ದು, ಇದು ಭಾರತದಲ್ಲಿನ ಅತಿದೊಡ್ಡ ಪತ್ರಕರ್ತರ ಸಂಸ್ಥೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...