Homeರಾಜಕೀಯಮಿತ್ರಪಕ್ಷ BJP ವಿರೋಧದ ನಡುವೆಯೂ ‘ಜಾತಿ ಗಣತಿ’ಗೆ ಮುಂದಾದ ಬಿಹಾರ ಸರ್ಕಾರ

ಮಿತ್ರಪಕ್ಷ BJP ವಿರೋಧದ ನಡುವೆಯೂ ‘ಜಾತಿ ಗಣತಿ’ಗೆ ಮುಂದಾದ ಬಿಹಾರ ಸರ್ಕಾರ

- Advertisement -
- Advertisement -

ಪ್ರತಿಪಕ್ಷದ ನಾಯಕ ತೇಜಸ್ವಿ ಯಾದವ್ ಅವರ ಬೇಡಿಕೆಯನ್ನು ಬೆಂಬಲಿಸಿ ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಪಡೆದ ನಂತರ ತಮ್ಮ ಸರ್ಕಾರ ಶೀಘ್ರದಲ್ಲೇ ಜಾತಿ ಗಣತಿ ಕಾರ್ಯವನ್ನು ಪ್ರಾರಂಭಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಹೇಳಿದ್ದಾರೆ. ಮೇ 27 ರಂದು ಜಾತಿ ಗಣತಿ ಕುರಿತು ಸರ್ವಪಕ್ಷಗಳ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆದರೆ ಸರ್ಕಾರದ ಮಿತ್ರಪಕ್ಷವಾದ ಬಿಜೆಪಿ ಈ ಬಗ್ಗೆ ವಿರೋಧವನ್ನು ಸೂಚಿಸಿದೆ.

“ಜಾತಿವಾರು ಜನಗಣತಿ ಕುರಿತು ಎಲ್ಲರ ಅಭಿಪ್ರಾಯ ಪಡೆಯಲು ಸರ್ವಪಕ್ಷ ಸಭೆ ಕರೆಯುತ್ತೇವೆ. ನಂತರ ರಾಜ್ಯ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸಲಾಗುವುದು. 27ರಂದು ಸಭೆ ನಡೆಸುವ ಕುರಿತು ಕೆಲ ಪಕ್ಷಗಳೊಂದಿಗೆ ಮಾತನಾಡಿದ್ದೇವೆ ಆದರೆ ಕೆಲವು ಪಕ್ಷಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ಅಂತಿಮ ತೀರ್ಮಾನದ ನಂತರ, ಪ್ರಸ್ತಾವನೆಯು ಸಂಪುಟಕ್ಕೆ ಹೋಗಲಿದ್ದು, ಅದರ ನಂತರ ನಾವು ಕೆಲಸ ಪ್ರಾರಂಭಿಸುತ್ತೇವೆ” ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಪ್ರತಿ ಪಕ್ಷದೊಂದಿಗೆ ಮಾತುಕತೆ ಆರಂಭಿಸಿದ್ದೇವೆ. ಎಲ್ಲರೂ ಮಂಡಳಿಯಲ್ಲಿಲ್ಲ. ಅವರ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ನಿತೀಶ್ ಕುಮಾರ್ ಹೇಳಿದ್ದರೆ.

ಇದನ್ನೂ ಓದಿ: ಬಿಹಾರ: ಜಾತಿ ಗಣತಿಗೆ ಒಕ್ಕೂಟ ಸರ್ಕಾರ ನಕಾರ; ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು

ಜಾತಿ ಜನಗಣತಿ ಕುರಿತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ದೆಹಲಿಗೆ ಪಾದಯಾತ್ರೆ ಮಾಡುತ್ತೇವೆ ಎಂದು ಎಚ್ಚರಿಸಿದ ನಂತರ ಮುಖ್ಯಮಂತ್ರಿ ಈ ನಿರ್ಧಾರ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಜಾತಿ ಗಣತಿಯ ಮಾರ್ಗಸೂಚಿಯನ್ನು ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದು ಬಿಜೆಪಿಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ತಿಳಿದಿದ್ದರೂ ಅವರು ಈ ನಿರ್ಧಾರವನ್ನು ಮಾಡಿದ್ದಾಗಿ ವರದಿಯಾಗಿದೆ.

ಈ ಸಭೆಯ ನಂತರ ಪಕ್ಷದ ಸಂಸ್ಥಾಪಕ ಲಾಲು ಯಾದವ್ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ಆರ್‌ಜೆಡಿ ಆರೋಪಿಸಿದೆ. ಒಂದು ವೇಳೆ ಅವರು ಆರ್‌ಜೆಡಿಯೊಂದಿಗೆ ಸ್ನೇಹ ಮಾಡಲು ಯೋಜಿಸಿದ್ದರೆ ನಿತೀಶ್ ಕುಮಾರ್ ಅವರಿಗೂ ಇದುವೆ ಗತಿ ಎಂಬ ತೀಕ್ಷ್ಣ ಸಂದೇಶವನ್ನು ರವಾನಿಸಲು ಬಿಜೆಪಿ ಬಯಸಿದ್ದು, ಅದಕ್ಕಾಗಿಯೆ ದಾಳಿಗಳು ಸಮಯಕ್ಕೆ ಸರಿಯಾಗಿ ನಡೆದಿವೆ ಎಂದು ಆರ್‌ಜೆಡಿ ಹೇಳಿಕೊಂಡಿದೆ.

ಜಾತಿ ಗಣತಿ ವಿಚಾರದಲ್ಲಿ ನಿತೀಶ್ ಕುಮಾರ್ ಅವರ ನಿರ್ಧಾರಕ್ಕೆ ಬಿಜೆಪಿ ಒಪ್ಪುತ್ತದೆ ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಉಪಮುಖ್ಯಮಂತ್ರಿ, ಬಿಜೆಪಿ ತಾರಕಿಶೋರ್‌‌ ಪ್ರಸಾದ್ ಸೂಚಿಸಿದ್ದಾರೆ. “ನಾವು ಈ ಬಗ್ಗೆ ಚರ್ಚಿಸಿ, ವಿವಿಧ ಅಂಶಗಳನ್ನು ಪರಿಗಣಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಾತಿಗಣತಿಗೆ ಸರ್ಕಾರಗಳು ಹಿಂಜರಿಯುತ್ತಿರುವುದೇಕೆ? ಕರ್ನಾಟಕದ ವರದಿ ಬಿಡುಗಡೆಯಾಗಿಲ್ಲವೇಕೆ?

ಜಾತಿ ಗಣತಿಯನ್ನು ಬಿಜೆಪಿಯು ತಾತ್ವಿಕವಾಗಿ ವಿರೋಧಿಸುತ್ತಿದೆ. ಜಾತಿ ಆಧಾರಿತ ಜನಗಣತಿ ಎಂಬುದು ವಿಭಜನೆಯ ಕಸರತ್ತು ಎಂದು ಒಕ್ಕೂಟ ಸರ್ಕಾರ ಬಹಳ ಹಿಂದೆಯೇ ಹೇಳುತ್ತಲೇ ಬಂದಿತ್ತು. ಆದರೆ ಬಿಹಾರದ ರಾಜಕೀಯ ಪಕ್ಷಗಳು ಜಾತಿ ಗಣತಿಯು ಸಮಾಜದಲ್ಲಿ ಅತ್ಯಂತ ನಿರ್ಲಕ್ಷಿತರಿಗೆ ಸಹಾಯ ಮಾಡಲು ಉತ್ತಮ ನೀತಿ ರೂಪಿಸಲು ಕಾರಣವಾಗುತ್ತದೆ ಎಂದು ವಾದಿಸುತ್ತಿವೆ.

ಕಳೆದ ವರ್ಷ, ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರನ್ನೊಳಗೊಂಡ ಬಿಹಾರ ರಾಜಕಾರಣಿಗಳ ನಿಯೋಗವು ಜಾತಿ ಗಣತಿಗಾಗಿ ಒತ್ತಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಜಾತಿ-ಆಧಾರಿತ ಎಣಿಕೆಯನ್ನು ಕೊನೆಯ ಬಾರಿಗೆ 1931 ರಲ್ಲಿ ನಡೆಸಲಾಯಿತು. ಈ ವೇಳೆ ಬಿಹಾರವು ಬ್ರಿಟಿಷ್ ಆಳ್ವಿಕೆಯಲ್ಲಿದ್ದು, ಜಾರ್ಖಂಡ್ ಮತ್ತು ಒಡಿಶಾ ರಾಜ್ಯಗಳು ಬಿಹಾರದ ಭಾಗವಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...