Homeರಾಜಕೀಯಮಿತ್ರಪಕ್ಷ BJP ವಿರೋಧದ ನಡುವೆಯೂ ‘ಜಾತಿ ಗಣತಿ’ಗೆ ಮುಂದಾದ ಬಿಹಾರ ಸರ್ಕಾರ

ಮಿತ್ರಪಕ್ಷ BJP ವಿರೋಧದ ನಡುವೆಯೂ ‘ಜಾತಿ ಗಣತಿ’ಗೆ ಮುಂದಾದ ಬಿಹಾರ ಸರ್ಕಾರ

- Advertisement -
- Advertisement -

ಪ್ರತಿಪಕ್ಷದ ನಾಯಕ ತೇಜಸ್ವಿ ಯಾದವ್ ಅವರ ಬೇಡಿಕೆಯನ್ನು ಬೆಂಬಲಿಸಿ ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಪಡೆದ ನಂತರ ತಮ್ಮ ಸರ್ಕಾರ ಶೀಘ್ರದಲ್ಲೇ ಜಾತಿ ಗಣತಿ ಕಾರ್ಯವನ್ನು ಪ್ರಾರಂಭಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಹೇಳಿದ್ದಾರೆ. ಮೇ 27 ರಂದು ಜಾತಿ ಗಣತಿ ಕುರಿತು ಸರ್ವಪಕ್ಷಗಳ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆದರೆ ಸರ್ಕಾರದ ಮಿತ್ರಪಕ್ಷವಾದ ಬಿಜೆಪಿ ಈ ಬಗ್ಗೆ ವಿರೋಧವನ್ನು ಸೂಚಿಸಿದೆ.

“ಜಾತಿವಾರು ಜನಗಣತಿ ಕುರಿತು ಎಲ್ಲರ ಅಭಿಪ್ರಾಯ ಪಡೆಯಲು ಸರ್ವಪಕ್ಷ ಸಭೆ ಕರೆಯುತ್ತೇವೆ. ನಂತರ ರಾಜ್ಯ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸಲಾಗುವುದು. 27ರಂದು ಸಭೆ ನಡೆಸುವ ಕುರಿತು ಕೆಲ ಪಕ್ಷಗಳೊಂದಿಗೆ ಮಾತನಾಡಿದ್ದೇವೆ ಆದರೆ ಕೆಲವು ಪಕ್ಷಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ಅಂತಿಮ ತೀರ್ಮಾನದ ನಂತರ, ಪ್ರಸ್ತಾವನೆಯು ಸಂಪುಟಕ್ಕೆ ಹೋಗಲಿದ್ದು, ಅದರ ನಂತರ ನಾವು ಕೆಲಸ ಪ್ರಾರಂಭಿಸುತ್ತೇವೆ” ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಪ್ರತಿ ಪಕ್ಷದೊಂದಿಗೆ ಮಾತುಕತೆ ಆರಂಭಿಸಿದ್ದೇವೆ. ಎಲ್ಲರೂ ಮಂಡಳಿಯಲ್ಲಿಲ್ಲ. ಅವರ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ನಿತೀಶ್ ಕುಮಾರ್ ಹೇಳಿದ್ದರೆ.

ಇದನ್ನೂ ಓದಿ: ಬಿಹಾರ: ಜಾತಿ ಗಣತಿಗೆ ಒಕ್ಕೂಟ ಸರ್ಕಾರ ನಕಾರ; ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು

ಜಾತಿ ಜನಗಣತಿ ಕುರಿತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ದೆಹಲಿಗೆ ಪಾದಯಾತ್ರೆ ಮಾಡುತ್ತೇವೆ ಎಂದು ಎಚ್ಚರಿಸಿದ ನಂತರ ಮುಖ್ಯಮಂತ್ರಿ ಈ ನಿರ್ಧಾರ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಜಾತಿ ಗಣತಿಯ ಮಾರ್ಗಸೂಚಿಯನ್ನು ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದು ಬಿಜೆಪಿಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ತಿಳಿದಿದ್ದರೂ ಅವರು ಈ ನಿರ್ಧಾರವನ್ನು ಮಾಡಿದ್ದಾಗಿ ವರದಿಯಾಗಿದೆ.

ಈ ಸಭೆಯ ನಂತರ ಪಕ್ಷದ ಸಂಸ್ಥಾಪಕ ಲಾಲು ಯಾದವ್ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ಆರ್‌ಜೆಡಿ ಆರೋಪಿಸಿದೆ. ಒಂದು ವೇಳೆ ಅವರು ಆರ್‌ಜೆಡಿಯೊಂದಿಗೆ ಸ್ನೇಹ ಮಾಡಲು ಯೋಜಿಸಿದ್ದರೆ ನಿತೀಶ್ ಕುಮಾರ್ ಅವರಿಗೂ ಇದುವೆ ಗತಿ ಎಂಬ ತೀಕ್ಷ್ಣ ಸಂದೇಶವನ್ನು ರವಾನಿಸಲು ಬಿಜೆಪಿ ಬಯಸಿದ್ದು, ಅದಕ್ಕಾಗಿಯೆ ದಾಳಿಗಳು ಸಮಯಕ್ಕೆ ಸರಿಯಾಗಿ ನಡೆದಿವೆ ಎಂದು ಆರ್‌ಜೆಡಿ ಹೇಳಿಕೊಂಡಿದೆ.

ಜಾತಿ ಗಣತಿ ವಿಚಾರದಲ್ಲಿ ನಿತೀಶ್ ಕುಮಾರ್ ಅವರ ನಿರ್ಧಾರಕ್ಕೆ ಬಿಜೆಪಿ ಒಪ್ಪುತ್ತದೆ ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಉಪಮುಖ್ಯಮಂತ್ರಿ, ಬಿಜೆಪಿ ತಾರಕಿಶೋರ್‌‌ ಪ್ರಸಾದ್ ಸೂಚಿಸಿದ್ದಾರೆ. “ನಾವು ಈ ಬಗ್ಗೆ ಚರ್ಚಿಸಿ, ವಿವಿಧ ಅಂಶಗಳನ್ನು ಪರಿಗಣಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಾತಿಗಣತಿಗೆ ಸರ್ಕಾರಗಳು ಹಿಂಜರಿಯುತ್ತಿರುವುದೇಕೆ? ಕರ್ನಾಟಕದ ವರದಿ ಬಿಡುಗಡೆಯಾಗಿಲ್ಲವೇಕೆ?

ಜಾತಿ ಗಣತಿಯನ್ನು ಬಿಜೆಪಿಯು ತಾತ್ವಿಕವಾಗಿ ವಿರೋಧಿಸುತ್ತಿದೆ. ಜಾತಿ ಆಧಾರಿತ ಜನಗಣತಿ ಎಂಬುದು ವಿಭಜನೆಯ ಕಸರತ್ತು ಎಂದು ಒಕ್ಕೂಟ ಸರ್ಕಾರ ಬಹಳ ಹಿಂದೆಯೇ ಹೇಳುತ್ತಲೇ ಬಂದಿತ್ತು. ಆದರೆ ಬಿಹಾರದ ರಾಜಕೀಯ ಪಕ್ಷಗಳು ಜಾತಿ ಗಣತಿಯು ಸಮಾಜದಲ್ಲಿ ಅತ್ಯಂತ ನಿರ್ಲಕ್ಷಿತರಿಗೆ ಸಹಾಯ ಮಾಡಲು ಉತ್ತಮ ನೀತಿ ರೂಪಿಸಲು ಕಾರಣವಾಗುತ್ತದೆ ಎಂದು ವಾದಿಸುತ್ತಿವೆ.

ಕಳೆದ ವರ್ಷ, ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರನ್ನೊಳಗೊಂಡ ಬಿಹಾರ ರಾಜಕಾರಣಿಗಳ ನಿಯೋಗವು ಜಾತಿ ಗಣತಿಗಾಗಿ ಒತ್ತಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಜಾತಿ-ಆಧಾರಿತ ಎಣಿಕೆಯನ್ನು ಕೊನೆಯ ಬಾರಿಗೆ 1931 ರಲ್ಲಿ ನಡೆಸಲಾಯಿತು. ಈ ವೇಳೆ ಬಿಹಾರವು ಬ್ರಿಟಿಷ್ ಆಳ್ವಿಕೆಯಲ್ಲಿದ್ದು, ಜಾರ್ಖಂಡ್ ಮತ್ತು ಒಡಿಶಾ ರಾಜ್ಯಗಳು ಬಿಹಾರದ ಭಾಗವಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...