Homeಕರ್ನಾಟಕನಾನು ಹಾವಿನಪುರದಲ್ಲಿ ತರಬೇತಿ ಪಡೆದಿಲ್ಲ, ವಾಟ್ಸಪ್‌ ಯುನಿವರ್ಸಿಟಿ ವಿದ್ಯಾರ್ಥಿಯೂ ಅಲ್ಲ: ಸಚಿವ ಬಿಸಿ ನಾಗೇಶ್‌ ವಿರುದ್ಧ...

ನಾನು ಹಾವಿನಪುರದಲ್ಲಿ ತರಬೇತಿ ಪಡೆದಿಲ್ಲ, ವಾಟ್ಸಪ್‌ ಯುನಿವರ್ಸಿಟಿ ವಿದ್ಯಾರ್ಥಿಯೂ ಅಲ್ಲ: ಸಚಿವ ಬಿಸಿ ನಾಗೇಶ್‌ ವಿರುದ್ಧ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ವಾಗ್ದಾಳಿ

- Advertisement -
- Advertisement -

ಇತಿಹಾಸದ ಬಗ್ಗೆ ನಂಬಿಕೆಯೂ ಇಲ್ಲದ, ಕನಿಷ್ಠ ಅದರ ತಿಳುವಳಿಕೆಯೂ ಇಲ್ಲದ ಶಿಕ್ಷಣ ಸಚಿವ ನಾಗೇಶ್ ಅವರು ಇತಿಹಾಸದ ಪಾಠ ಹೇಳಲು ಬರುತ್ತಿದ್ದಾರೆ. ಬಿಸಿ ನಾಗೇಶ್ ಅವರೇ ನಾನು ನಿಮ್ಮ ಹಾವಿನಪುರದಲ್ಲಿ ತರಬೇತಿ ಪಡೆದವನೂ ಅಲ್ಲ, ವಾಟ್ಸಪ್ ಫಾರ್ವರ್ಡ್‌ ಯುನಿವರ್ಸಿಟಿಯ ವಿದ್ಯಾರ್ಥಿಯೂ ಅಲ್ಲ ಎಂದು ವಿರೋಧ ಪಕ್ಷದ ನಾಯಕರಾದ ಬಿಕೆ ಹರಿಪ್ರಸಾದ್ ಸೋಮವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ರಾಷ್ಟ್ರೀಯತೆ, ಸ್ವಾತಂತ್ರ್ಯ ಹೋರಾಟ, ರಾಷ್ಟ್ರಪ್ರೇಮ, ರಾಷ್ಟ್ರಧ್ವಜದ ವಿರುದ್ಧ ಇದ್ದವರಿಂದ ಪಾಠ ಹೇಳಿಸಿಕೊಳ್ಳುವ ದಾರಿದ್ರ್ಯ ಬಂದಿಲ್ಲ, ಬರುವುದು ಇಲ್ಲ. ಕೇಸರಿ ಬಿಳಿ ಹಸಿರು ಬಣ್ಣಗಳ ನಡುವೆ ಅಶೋಕ ಚಕ್ರವಿರುವ ರಾಷ್ಟ್ರಧ್ವಜ ಬಗ್ಗೆ ನಿಮ್ಮ ಸಂಘದ ಸಂಸ್ಥಾಪಕ ಹೆಡ್ಗೇವಾರ್ ತಿರಸ್ಕಾರ ಮನೋಭಾವನೆಯ ಜೊತೆಗೆ ಕನಿಷ್ಟ ಗೌರವವೂ ಇರಲಿಲ್ಲ ಎಂಬುದನ್ನ ಸಾಬೀತು ಮಾಡಲು ನಾನು ಸಿದ್ದ” ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರಿಗೆ ಸವಾಲು ಎಸೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“1930ರಲ್ಲಿಯೇ ತ್ರಿವರ್ಣ ಧ್ವಜವನ್ನು ಸ್ವಾತಂತ್ರ್ಯ ಹೋರಾಟದ ಸ್ಪೂರ್ತಿಯಾಗಿ ಎಲ್ಲಾ ವರ್ಗದ, ಧರ್ಮದವರನ್ನು ಪ್ರತಿನಿಧಿಸುವಂತೆ ರಚಿಸಿ, ಇಡೀ ದೇಶವೇ ತ್ರಿವರ್ಣ ಧ್ವಜವನ್ನ ಒಪ್ಪಿ ಅಪ್ಪಿಕೊಂಡಾಗಿತ್ತು. ಆದರೆ 1928ರಿಂದಲೇ ಭಾಗಧ್ವಜವನ್ನು ಆರೆಸ್ಸೆಸ್‌‌ ಅಧಿಕೃತ ನಿಶಾನೆ ಎಂದು ಹೆಡ್ಗೇವಾರ್ ಘೋಷಿಸಿದ್ದರಿಂದ, ತ್ರಿವರ್ಣ ಧ್ವಜವನ್ನ ಸಂಘಪರಿವಾರ ಒಪ್ಪಲೇ ಇಲ್ಲ. ಹೆಚ್ಚಿನ ಮಾಹಿತಿ ಬೇಕಿದ್ದರೆ ಹೆಡ್ಗೇವಾರರ ಸಹಚರನಾಗಿದ್ದ ಎನ್‌ಹೆಚ್ ಪಾಲ್ಕರ್ ಬರೆದ ‘Saffron flag’ ಪುಸ್ತಕದಲ್ಲಿ ದಾಖಲೆಗಳಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

“ಅಷ್ಟೇ ಯಾಕೆ ಸ್ವಾಮಿ, ಸಂಘದ ಸ್ಥಾಪಕ ಮುಖಂಡ ಗೋಳ್ವಾಲ್ಕರ್ ಬರೆದ ‘ಬಂಚ್ ಆಫ್ ಥಾಟ್ಸ್’ ಪುಸ್ತಕದಲ್ಲಿ ರಾಷ್ಟ್ರಧ್ವಜವನ್ನು ತಿರಸ್ಕಾರ ಮಾಡಿದ್ದಾರೆ. ಕಣ್ಣಿನ ಪೊರೆ ಕಳಚಿಟ್ಟು ಓದಿ” ಎಂದು ಕಿಡಿ ಕಾರಿದ್ದಾರೆ.

“1930 ಜನವರಿ 26ರಂದು ಸ್ವಾತಂತ್ರ್ಯ ಹೋರಾಟಗಾರರು ತ್ರಿವರ್ಣ ಧ್ವಜವನ್ನು ದೇಶದೆಲ್ಲೆಡೆ ಹಾರಿಸಲು ತೀರ್ಮಾನಿಸಿದಾಗ, ಈ ಹೆಡ್ಗೆವಾರ್ ‘ನಮ್ಮ ಎಲ್ಲಾ ಶಾಖೆಯ ಕಚೇರಿಗಳಲ್ಲಿ ಭಾಗವಧ್ವಜ ಹಾರಿಸಬೇಕು’ ಎಂದು ಕರೆ ಕೊಟ್ಟಿದ್ದನ್ನು ದೇಶ ಮರೆತಿಲ್ಲ. ಆಗ ಹೆಡ್ಗೇವಾರ್ ಬದುಕಿದ್ದರು” ಎಂದು ಹೇಳಿದ್ದಾರೆ.

“ಬಿಜೆಪಿಯ ಪಿತಾಮಹ ಶ್ಯಾಂ ಪ್ರಸಾದ್ ಮುಖರ್ಜಿ ಸ್ವಾತಂತ್ರ್ಯ ಭಾರತದ ನಂತರ ಪಂಡಿತ್ ಜವಹರಲಾಲ್ ನೆಹರೂ ಸರ್ಕಾರದಲ್ಲಿ ಮಂತ್ರಿಯಾಗಿದ್ದರೂ ಕೂಡ ಅವರ ಅಧಿಕೃತ ನಿವಾಸದ ಮೇಲೆ ಹಾರಿಸುತ್ತಿದ್ದಿದ್ದು ಭಗವದ್ವಜ ಹೊರತು ರಾಷ್ಟ್ರಧ್ವಜ ಅಲ್ಲ” ಎಂದು ಹರಿಪ್ರಸಾದ್‌ ಹೇಳಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

“ಅಷ್ಟಕ್ಕೂ ಆರೆಸ್ಸೆಸ್ಸಿನ ಮುಖವಾಣಿ ಆರ್ಗನೈಸರ್ ಅಲ್ಲಿ ತ್ರಿವರ್ಣ ಇರುವ ಭಾರತದ ಧ್ವಜ ಅಪಶಕುನ ಎಂದು ಬರೆದಿರುವುದು ದಾಖಲೆಯಾಗಿದೆ. ಸ್ವಾತಂತ್ರ್ಯ ಬಂದು 2002ರವರೆಗೆ ರಾಷ್ಟ್ರ ಧ್ವಜವನ್ನ ಶಾಖೆಯ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹಾರಿಸಲೇ ಇಲ್ಲ ಯಾಕೆ ಎಂಬುದನ್ನ ಮೊದಲು ಸ್ಪಷ್ಟಪಡಿಸಿ” ಎಂದು ಅವರು ಹೇಳಿದ್ದಾರೆ.

“ಆರೆಸ್ಸೆಸ್ಸ್‌ ಹಾಗೂ ಬಿಜೆಪಿ ತಮ್ಮ ಹುಟ್ಟಿನಿಂದಲೇ ಸ್ವಾತಂತ್ರ್ಯ ಹೋರಾಟದ ಜೊತೆ ಜೊತೆಗೆ ರಾಷ್ಟ್ರೀಯತೆ, ರಾಷ್ಟ್ರಧ್ವಜದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ ಎಂಬ ನನ್ನ ಹೇಳಿಕೆಗೆ ಈಗಲೂ ನಾನು ಬದ್ಧ. ಚರ್ಚೆಗೂ ಸಿದ್ದ” ಎಂದು ಅವರು ಬಿಜೆಪಿ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನಗೆಟ್ಟ ಮೂರ್ಖ ಚಡ್ಡಿಗಳಿಗೆ ಸಾರ್ವಜನಿಕವಾಗಿ ಬೆತ್ತಲಾಗುವುದು ಒಂದು ಹವ್ಯಾಸವೇ ಆಗಿಬಿಟ್ಟಿದೆ.

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....