Homeಕರ್ನಾಟಕರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

- Advertisement -
- Advertisement -

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿರುವ ವಿವಾದ ಮತ್ತಷ್ಟು ತಾರಕಕ್ಕೇರಿದೆ. ಸಮಿತಿಗೆ ಬಲಪಂಥೀಯ ಟ್ರೋಲರ್‌‌ ರೋಹಿತ್‌ ಚಕ್ರತೀರ್ಥ ಅವರನ್ನು ಯಾವ ಮಾನದಂಡಗಳ ಅಡಿಯಲ್ಲಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂಬ ಪ್ರಶ್ನೆಗೆ ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ್ದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, “ರೋಹಿತ್‌ ಚಕ್ರತೀರ್ಥ ಹಿನ್ನೆಲೆ ಏನೆಂದು ತಿಳಿಯದೆ ಮಾತನಾಡಬಾರದು, ಅವರೊಬ್ಬ ಐಐಟಿ-ಸಿಇಟಿ ಪ್ರೊಫೆಸರ್” ಎಂದು ಹೇಳಿದ್ದರು.

ಸಚಿವರ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ದೇಶದಲ್ಲಿ ‘ಸಿಇಟಿ ಪ್ರೊಫೆಸರ್’ ಎಂಬ ಹುದ್ದೆ ಇದೆಯಾ?, ವಾಸ್ತವದಲ್ಲಿ ಚಕ್ರತೀರ್ಥ ಪಡೆದ ಶಿಕ್ಷಣ ಏನು? ಪ್ರೊಫೆಸರ್ ಆಗುವ ಪ್ರಕ್ರಿಯೆ ಅಷ್ಟು ಸುಲಭವೇ? ಎಂಬ ಪ್ರಶ್ನೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಲಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೋಹಿತ್ ಚಕ್ರತೀರ್ಥ ಶಾಲಾ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ಹುದ್ದೆಗೆ ನೇಮಕವಾದ ದಿನದಿಂದಲೂ ಅವರ ಶೈಕ್ಷಣಿಕ ಅರ್ಹತೆ, ಅನುಭವ ಮತ್ತು ಹಿನ್ನೆಲೆ ಸಾಕಷ್ಟು ಪ್ರಶ್ನೆಗೆ ಒಳಗಾಗಿತ್ತು. ಸೋಮವಾರ ಶಿಕ್ಷಣ ಸಚಿವರೇ ನಡೆಸಿದ ಪತ್ರಿಕಾಗೋಷ್ಠಿಯಲ್ಲೂ ಇದೇ ಪ್ರಶ್ನೆಗಳು ಪತ್ರಕರ್ತರು ಕೇಳಿದ್ದರು.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಈ ಪ್ರಶ್ನೆಗಳಿಗೆ ಉತ್ತರಿಸಿದ್ದ ಸಚಿವ ಬಿ ಸಿ ನಾಗೇಶ್, “ಶಿಕ್ಷಣ ತಜ್ಞ ಎನ್ನುವುದಕ್ಕೆ ಎಲ್ಲಿಯಾದರೂ ಪ್ರಮಾಣ ಪತ್ರ ಇದೆಯಾ? ರೋಹಿತ್ ಚಕ್ರತೀರ್ಥ ಅವರ ಹಿನ್ನೆಲೆಯನ್ನು ಪ್ರಶ್ನೆ ಮಾಡುತ್ತಿರುವವರು ಅವರ ಹಿನ್ನೆಲೆ ಹೇಳಲಿ ನೋಡೋಣ. ಚಕ್ರತೀರ್ಥ ಈ ಹಿಂದೆ ಐಐಟಿ ಮತ್ತು ಸಿಇಟಿ ಪ್ರೊಫೆಸರ್ ಎಂಬುದನ್ನು ಮರೆಯಬಾರದು” ಎಂದು ರೋಹಿತ್‌ ಚಕ್ರತೀರ್ಥ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು.

ಮುಂದುವರೆದು, “ವಿಷಯ ಗೊತ್ತಿಲ್ಲದೇ ಮಾತನಾಡಿ ಈ ದೇಶದ ವ್ಯವಸ್ಥೆಯನ್ನು ಹಾಳು ಮಾಡಲಾಗುತ್ತಿದೆ. ಪ್ರೊಫೆಸರ್‌ ಎಂಬುದು ಶಿಕ್ಷಣ ತಜ್ಞರೋ ಅಥವಾ ರೈಲು ನೌಕರರೋ? ಚಕ್ರತೀರ್ಥ ಅವರ ಹಿನ್ನೆಲೆ ಗೊತ್ತಿಲ್ಲದೇ ಪ್ರಶ್ನೆ ಮಾಡಬಾರದು” ಎಂದು ಹೇಳಿದ್ದರು.

ಚಕ್ರತೀರ್ಥ ಪ್ರೊಫೆಸರ್ ಎಂಬುದು ನಿಜವೇ?

ರೋಹಿತ್‌ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ನೇಮಕ ಮಾಡುವಾಗ ಶಿಕ್ಷಣ ಇಲಾಖೆ ಅವರ ವಿದ್ಯಾರ್ಹತೆ ಏನು ಎಂಬುದನ್ನು ಸ್ಪಷ್ಟಪಡಿಸಿರಲಿಲ್ಲ. ಅಲ್ಲದೆ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವ ನಾಗೇಶ್ ತಿಳಿಸಿದ ಮಾಹಿತಿಯೂ ಅಸಮರ್ಪಕವಾಗಿದೆ.

ಐಐಟಿ ಅಂದರೆ ‘ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ’ ಎಂಬುವುದು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ದೇಶದಾದ್ಯಂತ 23 ಐಐಟಿ ಸಂಸ್ಥೆಗಳಿವೆ. ಕರ್ನಾಟಕದ ಧಾರವಾಡದಲ್ಲೂ ಐಐಟಿ ಇದೆ.

ಇದನ್ನೂ ಓದಿ: ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಆದರೆ ಸಿಇಟಿ ಎಂದರೆ ಕಾಮನ್ ಎಂಟ್ರನ್ಸ್‌ ಟೆಸ್ಟ್ (CET-Common Entrance Test) ಎಂದರ್ಥ. ಅಂದರೆ ಅದೊಂದು ಪ್ರವೇಶ ಪರೀಕ್ಷೆಯಾಗಿದೆ. ಅದೊಂದು ಸಂಸ್ಥೆಯಾಗಲಿ, ಹುದ್ದೆಯಾಗಲಿ ಅಲ್ಲ. ಈ ಪರೀಕ್ಷೆ ಬರೆಯಲು ಸಾಮಾನ್ಯವಾಗಿ ಟ್ಯೂಷನ್‌ ಕೇಂದ್ರಗಳಲ್ಲಿ ತರಬೇತಿ ನೀಡಲಾಗುತ್ತದೆ. ಇಂತಹ ಟ್ಯೂಷನ್‌ ಕೇಂದ್ರಗಳಿಗೆ ಮಾನ್ಯತೆಯೂ ಇರುವುದಿಲ್ಲ.

ಪರಿಷ್ಕರಣೆ ಸಮಿತಿಗೆ ಆಯ್ಕೆ ಮಾಡಲು ನಿಮ್ಮ ಅರ್ಹತೆಗಳೇನು ಎಂದು ಈ ಹಿಂದೆ ನಾನುಗೌರಿ.ಕಾಂ ಕೇಳಿದ್ದ ಪ್ರಶ್ನೆಗೆ, ರೋಹಿತ್ ಚಕ್ರತೀರ್ಥ ಅವರು, ‘ಅದನ್ನು ಸರ್ಕಾರದ ಜೊತೆಗೆ ಕೇಳಬೇಕು’ ಎಂದು ಉತ್ತರಿಸಿದ್ದರು. ಆದರೆ ಸರ್ಕಾರ ಈಗ, ‘ಚಕ್ರತೀರ್ಥ ಅವರು ಐಐಟಿ-ಸಿಇಟಿ ಪ್ರೊಫೆಸರ್‌’ ಎಂದು ಹೇಳುತ್ತಿದೆ!. ಈ ಬಗ್ಗೆ ಪ್ರತಿಕ್ರಿಯೆಗೆ ನಾನುಗೌರಿ.ಕಾಂ ಚಕ್ರತೀರ್ಥ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದು ಅವರು ಸಂಪರ್ಕಕ್ಕೆ ಲಭ್ಯವಾಗಿಲ್ಲ.

ಈ ಮಧ್ಯೆ, ಚಕ್ರತೀರ್ಥ ಅವರು ಯಾವುದಾದರೂ ವಿಷಯದಲ್ಲಿ ವಿಶೇಷ ಪರಿಣಿತಿ ಹೊಂದಿದವರೇ? ವಿದ್ವಾಂಸರೇ? ಎಂಬ ಪ್ರಶ್ನೆಗಳನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಲಾಗುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅವರ ಬಗ್ಗೆ ಹುಡುಕಿದಾಗಲೂ ಅವರೊಬ್ಬ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿ, ಬರಹಗಾರ ಮತ್ತು ವಿಜ್ಞಾನ ಸಂಬಂಧಿ ವಿಚಾರಗಳ ಲೇಖಕ ಎಂದಷ್ಟೇ ಮಾಹಿತಿ ಇದೆ. ಸ್ವತಃ ರೋಹಿತ್ ಚಕ್ರತೀರ್ಥ ತಮ್ಮ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ತಮ್ಮನ್ನು ಶಿಕ್ಷಕ ಎಂದಷ್ಟೇ ಪರಿಚಯಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

ಅವರ ಬಗ್ಗೆ ತಿಳಿದಿದ್ದ ಕೆಲವರ ಬಳಿ ವಿಚಾರಿಸಲಾಗಿ, ಈ ಹಿಂದೆ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ರೋಹಿತ್ ಚಕ್ರತೀರ್ಥ ಗಣಿತ ಪಾಠ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ‘ಟೆಸ್ಲಾ ಎಜುಕೇಷನ್’ ಎಂಬ‌ ಆನ್‌ಲೈನ್‌ ಪಾಠ ಮಾಡುವ ಶಿಕ್ಷಣ ಸಂಸ್ಥೆ ಹೊಂದಿರುವ ರೋಹಿತ್ ಚಕ್ರತೀರ್ಥ ಯೂಟ್ಯೂಬ್‌ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗಣಿತ ಮಾಡುವ ವಿಡಿಯೋ ಸಹ ಲಭ್ಯವಾಗಿದೆ.

ಗಣಿತ ಪಾಠ ಮಾಡುವವರ ಅಧ್ಯಕ್ಷತೆಯಲ್ಲಿ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯ ಪರಿಷ್ಕರಣೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರು ಎಲ್ಲಾ ವಿಷಯಗಳಲ್ಲಿ ತಜ್ಞರಾಗಿರುವುದಿಲ್ಲ. ಆದರೆ, ಅದಕ್ಕಾಗಿ ಅವರು ವಿಷಯ ತಜ್ಞರ ಸಮಿತಿಯನ್ನು ರಚಿಸುತ್ತಾರೆ. ಹಿಂದಿನ ಬರಗೂರು ರಾಮಚಂದ್ರಪ್ಪನವರ ಸಮಿತಿ ಅದನ್ನೇ ಮಾಡಿತ್ತು.

ಪ್ರೊಫೆಸರ್ ಗೌರವ ಅಷ್ಟು ಸುಲಭದ್ದೆ?

ಸಚಿವ ನಾಗೇಶ್‌ ಅವರು ಹೇಳಿದಂತೆ ಓರ್ವ ಶಿಕ್ಷಕ ಪ್ರೊಫೆಸರ್ ಸ್ಥಾನಕ್ಕೆ ಏರುವ ಪ್ರಕ್ರಿಯೆಯೂ ಅಷ್ಟು ಸುಲಭದ್ದಲ್ಲ. ಮೊದಲು ಆತ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಹಾಯಕ ಪ್ರಾಧ್ಯಾಪಕ (Assistant Professor) ಆಗಿ ಕೆಲಸಕ್ಕೆ ನಿಯುಕ್ತಿಯಾಗಬೇಕು. ನಂತರ ಅವರ ಅನುಭವದ ಆಧಾರದ ಮೇಲೆ ಸಹ ಪ್ರಾಧ್ಯಾಪಕ (Associate Professor ) ಆಗಿ ಬಡ್ತಿ ನೀಡಲಾಗುತ್ತದೆ. ಆನಂತರ, ಅವರ ಸೇವಾನುಭವ ಮತ್ತು ಪ್ರಕಟಿತ ಸಂಶೋಧನಾ ಬರಹಗಳ ಆಧಾರದಲ್ಲಿ ಪ್ರೊಫೆಸರ್ ಎಂಬ ಗೌರವವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘಿಸಿದ ಚಕ್ರತೀರ್ಥ ಸಮಿತಿ; ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆಗೆ ಆಗ್ರಹ

ದೇಶದಲ್ಲಿ 23 ಐಐಟಿ ಸಂಸ್ಥೆಗಳಿವೆ. ಕರ್ನಾಟಕದ ಧಾರವಾಡದಲ್ಲೂ ಇದೆ. ಒಂದು ವೇಳೆ ಸಚಿವ ನಾಗೇಶ್ ಹೇಳಿದಂತೆ ರೋಹಿತ್ ಚಕ್ರತೀರ್ಥ ಐಐಟಿಯಲ್ಲಿ ಪ್ರೊಫೆಸರ್ ಆಗಿದ್ದರೆ, ಅದು ಯಾವ ಐಐಟಿಯಲ್ಲಿ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕಿದೆ. ಅಥವಾ ಸ್ವತಃ ರೋಹಿತ್ ಚಕ್ರತೀರ್ಥ ಅವರೇ ತಮ್ಮ ವಿದ್ಯಾರ್ಹತೆಯನ್ನು ಬಹಿರಂಗಪಡಿಸಬೇಕಿದೆ. ಸಾರ್ವಜನಿಕವಾಗಿ ಶಿಕ್ಷಣ ಖಾತೆಯ ಸಚಿವರು ಸುಳ್ಳು ಹೇಳಿದ್ದರೆ ಅದು ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗುವ ತಪ್ಪಿನಷ್ಟೇ ದೊಡ್ಡ ಪ್ರಮಾದವಾದ್ದರಿಂದ ಸರ್ಕಾರವು ಮುಜುಗರಕ್ಕೆ ಸಿಲುಕುವ ವಾತಾವರಣ ಸೃಷ್ಟಿಯಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಹಹಾ ಸ ಇ ಟಿ ಒಂದು ಪರೀಕ್ಷೆ, ಐಐಟಿ ಒಂದು ಖಾಸಗಿ ಸಂಸ್ಥೆ ಇದರ ಪ್ರೊಫೇಸರ್ ಅಂದರೆ ನಗುವಿನ ಸಂಗತಿ, ಇಂತಹ ಮಾತುಗಳು ಅನಕ್ಷರಸ್ತರು ಅನಕ್ಷತಸ್ತರಿಗೆ ಮಾತ್ರ ಹೇಳಬಹುದು ನಂಬಿಸಲೂ ಬಹುದು, ಆದರೆ ಜ್ನಾನವಂತರಿಗೆ ಹಾಗೂ ಶಿಕ್ಷಣ, ವಿದ್ಯಾವಂತರಿಗೆ ನಗುವಿನ ಸಂಗತಿ,
    ಎಚ್ಚರಿಕೆ: ಇದು ಬುದ್ದಿವಂತರಿಗೆ ಮಾತ್ರ.

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...