HomeಮುಖಪುಟRSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ.

ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ನೂತನ ಪಠ್ಯ ಪರಿಷ್ಕರಣೆಯಲ್ಲಿಯೂ ಇದೇ ಆಗಿದೆ ಎಂದು ದೇವನೂರು ಆರೋಪಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಜಾತಿಯವರನ್ನು ತುಂಬಿಕೊಂಡಿದ್ದಾರೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅವರು ಬರೆದ ಪತ್ರದ ಪೂರ್ಣ ಪಠ್ಯ ಈ ಕೆಳಗಿನಂತಿದೆ.

ಪಠ್ಯ ಪರಿಷ್ಕರಣೆಯ ವಾದ ವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ ಬರಹಗಳನ್ನು ಇಲ್ಲ ಅಂತ, ಉಂಟು ಅಂತ, ಕೆಲವು ಸಲ ಸೇರಿದ್ದನ್ನು ಕೈ ಬಿಡುವುದು, ಮತ್ತೆ ಸೇರಿಸುವುದು ಇತ್ಯಾದಿ ಗಳಿಗೆ ಗಳಿಗೆಗೂ ಬದಲಾಗುತ್ತಿದೆ. ಇರಲಿ, ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟಪಡಿಸುವುದಕ್ಕಾಗಿ ಈ ಪ್ರಕಟಣೆ ನೀಡುತ್ತಿದ್ದೇನೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ.

ಯಾಕೆಂದರೆ,

(೧) ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ.

(೨) ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ! ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆ ಮನೆ ವಾಸನೆ ಪ್ರಿಯವಾಗುವಂತೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ. ಇದು ಈಗಿನದ್ದಲ್ಲ. ಡಾ. ಮುರಳಿ ಮನೋಹರ ಜೋಷಿಯವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಇದೇ ಆಗಿದೆ.

ಈ ಪಠ್ಯಗಳಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸಾಪ್, ಇ ಮೇಲ್, ಆನ್‌ಲೈನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ.

24ನೇ ಮೇ 2022

(ದೇವನೂರ ಮಹಾದೇವ)


ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Something is better than nothing. But nothing is better than nonsense. ತುಂಬಾ ಒಳ್ಳೆಯ ಕೆಲಸ ಮಾಡಿದ್ದೀರಾ ಗುರುಗಳೇ. 👍

  2. ಈ ದೇಶದಲ್ಲಿ ‘ದಲಿತ’ ಎಂದರೆ ಜಾತ್ಯತೀತ, ‘ಬ್ರಾಹ್ಮಣ’ ಅಂದರೆ ಜಾತಿವಾದಿ. ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...