HomeಮುಖಪುಟRSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ.

ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ನೂತನ ಪಠ್ಯ ಪರಿಷ್ಕರಣೆಯಲ್ಲಿಯೂ ಇದೇ ಆಗಿದೆ ಎಂದು ದೇವನೂರು ಆರೋಪಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಜಾತಿಯವರನ್ನು ತುಂಬಿಕೊಂಡಿದ್ದಾರೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅವರು ಬರೆದ ಪತ್ರದ ಪೂರ್ಣ ಪಠ್ಯ ಈ ಕೆಳಗಿನಂತಿದೆ.

ಪಠ್ಯ ಪರಿಷ್ಕರಣೆಯ ವಾದ ವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ ಬರಹಗಳನ್ನು ಇಲ್ಲ ಅಂತ, ಉಂಟು ಅಂತ, ಕೆಲವು ಸಲ ಸೇರಿದ್ದನ್ನು ಕೈ ಬಿಡುವುದು, ಮತ್ತೆ ಸೇರಿಸುವುದು ಇತ್ಯಾದಿ ಗಳಿಗೆ ಗಳಿಗೆಗೂ ಬದಲಾಗುತ್ತಿದೆ. ಇರಲಿ, ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟಪಡಿಸುವುದಕ್ಕಾಗಿ ಈ ಪ್ರಕಟಣೆ ನೀಡುತ್ತಿದ್ದೇನೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ.

ಯಾಕೆಂದರೆ,

(೧) ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ.

(೨) ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ! ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆ ಮನೆ ವಾಸನೆ ಪ್ರಿಯವಾಗುವಂತೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ. ಇದು ಈಗಿನದ್ದಲ್ಲ. ಡಾ. ಮುರಳಿ ಮನೋಹರ ಜೋಷಿಯವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಇದೇ ಆಗಿದೆ.

ಈ ಪಠ್ಯಗಳಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸಾಪ್, ಇ ಮೇಲ್, ಆನ್‌ಲೈನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ.

24ನೇ ಮೇ 2022

(ದೇವನೂರ ಮಹಾದೇವ)


ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Something is better than nothing. But nothing is better than nonsense. ತುಂಬಾ ಒಳ್ಳೆಯ ಕೆಲಸ ಮಾಡಿದ್ದೀರಾ ಗುರುಗಳೇ. 👍

  2. ಈ ದೇಶದಲ್ಲಿ ‘ದಲಿತ’ ಎಂದರೆ ಜಾತ್ಯತೀತ, ‘ಬ್ರಾಹ್ಮಣ’ ಅಂದರೆ ಜಾತಿವಾದಿ. ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...