HomeಮುಖಪುಟRSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ.

ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ನೂತನ ಪಠ್ಯ ಪರಿಷ್ಕರಣೆಯಲ್ಲಿಯೂ ಇದೇ ಆಗಿದೆ ಎಂದು ದೇವನೂರು ಆರೋಪಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಜಾತಿಯವರನ್ನು ತುಂಬಿಕೊಂಡಿದ್ದಾರೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅವರು ಬರೆದ ಪತ್ರದ ಪೂರ್ಣ ಪಠ್ಯ ಈ ಕೆಳಗಿನಂತಿದೆ.

ಪಠ್ಯ ಪರಿಷ್ಕರಣೆಯ ವಾದ ವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ ಬರಹಗಳನ್ನು ಇಲ್ಲ ಅಂತ, ಉಂಟು ಅಂತ, ಕೆಲವು ಸಲ ಸೇರಿದ್ದನ್ನು ಕೈ ಬಿಡುವುದು, ಮತ್ತೆ ಸೇರಿಸುವುದು ಇತ್ಯಾದಿ ಗಳಿಗೆ ಗಳಿಗೆಗೂ ಬದಲಾಗುತ್ತಿದೆ. ಇರಲಿ, ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟಪಡಿಸುವುದಕ್ಕಾಗಿ ಈ ಪ್ರಕಟಣೆ ನೀಡುತ್ತಿದ್ದೇನೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ.

ಯಾಕೆಂದರೆ,

(೧) ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ.

(೨) ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ! ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆ ಮನೆ ವಾಸನೆ ಪ್ರಿಯವಾಗುವಂತೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ. ಇದು ಈಗಿನದ್ದಲ್ಲ. ಡಾ. ಮುರಳಿ ಮನೋಹರ ಜೋಷಿಯವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಇದೇ ಆಗಿದೆ.

ಈ ಪಠ್ಯಗಳಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸಾಪ್, ಇ ಮೇಲ್, ಆನ್‌ಲೈನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ.

24ನೇ ಮೇ 2022

(ದೇವನೂರ ಮಹಾದೇವ)


ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Something is better than nothing. But nothing is better than nonsense. ತುಂಬಾ ಒಳ್ಳೆಯ ಕೆಲಸ ಮಾಡಿದ್ದೀರಾ ಗುರುಗಳೇ. 👍

  2. ಈ ದೇಶದಲ್ಲಿ ‘ದಲಿತ’ ಎಂದರೆ ಜಾತ್ಯತೀತ, ‘ಬ್ರಾಹ್ಮಣ’ ಅಂದರೆ ಜಾತಿವಾದಿ. ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...