Homeಕರ್ನಾಟಕಬರಗೂರು, ದೇವನೂರರ ಅವಮಾನ ಮಾಡಿದರೆ ಸಹಿಸಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ

ಬರಗೂರು, ದೇವನೂರರ ಅವಮಾನ ಮಾಡಿದರೆ ಸಹಿಸಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದ ಮತ್ತಷ್ಟು ಭುಗಿಲೆದ್ದಿದ್ದು, ಮಂಗಳವಾರದಂದು ಪತ್ರಿಕಾ ಹೇಳಿಕೆ ನೀಡಿರುವ ನಾಡಿನ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪಠ್ಯದಿಂದ ತನ್ನ ಬರಹಗಳನ್ನು ಕೈಬಿಡುವಂತೆ ಸರ್ಕಾರವನ್ನು ಕೇಳಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಟಿಎ ಅವರು, ದೇವನೂರು ಮಹದೇವ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಕನ್ನಡದ ಹಿರಿಯ ಸಾಹಿತಿಗಳು ಕನ್ನಡದ ಆಸ್ತಿ, ಕನ್ನಡತನದ ಪ್ರತೀಕ, ಕನ್ನಡಿಗರ ಹೆಮ್ಮೆ ಎಂದು ಹೇಳಿದ್ದಾರೆ.

“ಸಾಹಿತಿಗಳಿಗೆ ಅಪಚಾರ, ಅಪಮಾನ ಎಸಗುವ ಯಾವ ಕೆಲಸವನ್ನೂ ಯಾರೂ ಮಾಡಬಾರದು. ಕರ್ನಾಟಕ ರಕ್ಷಣಾ‌ ವೇದಿಕೆ ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು‌ ಬಗೆಹರಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸಿರುವ ನಾರಾಯಣ ಗೌಡ ಅವರು, “ಕರ್ನಾಟಕದ, ಕನ್ನಡದ ಕೀರ್ತಿಶಿಖರಗಳಲ್ಲಿ ಒಬ್ಬರಾದ ಮೇರುಸಾಹಿತಿ ದೇವನೂರು ಮಹಾದೇವ ಅವರು ಹತ್ತನೇ ತರಗತಿಯ ಪಠ್ಯಕ್ಕೆ ನೀಡಿದ್ದ ‘ಎದೆಗೆ ಬಿದ್ದ ಅಕ್ಷರ’ ಲೇಖನ ಹಿಂದಕ್ಕೆ ಪಡೆದಿರುವುದನ್ನು ಕೇಳಿ ಆಘಾತವಾಯಿತು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು‌ ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಸಚಿವ ಬಿಸಿ ನಾಗೇಶ್‌ ತಪ್ಪು ಮಾಹಿತಿ ನೀಡಿದ್ದಾರೆ’: ಪಠ್ಯಪುಸ್ತಕದ ಬಗ್ಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

“ತಮ್ಮ ಪಠ್ಯವನ್ನು ಹಿಂದಕ್ಕೆ ಪಡೆದ ಘಟನೆ ಕರ್ನಾಟಕದ ಇತಿಹಾಸದಲ್ಲಿ ಮೊದಲಬಾರಿ ಘಟಿಸಿದೆ. ಕರ್ನಾಟಕ ಸರ್ಕಾರಕ್ಕೆ ಇದು ಶೋಭೆ ತರುವ ವಿಷಯವಲ್ಲ‌. ಇಂಥ ನಿರ್ಧಾರ ಕೈಗೊಳ್ಳುವ ಹಿನ್ನೆಲೆಯಲ್ಲಿ ದೇವನೂರು ಅವರು ಅನುಭವಿಸಿರುವ ಮಾನಸಿಕ ಯಾತನೆಯನ್ನು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು. ಇದು ನಾಡಿನ ದೃಷ್ಟಿಯಲ್ಲಿ ಒಳ್ಳೆಯ ಬೆಳವಣಿಗೆಯಲ್ಲ” ಎಂದು ಅವರು ಹೇಳಿದ್ದಾರೆ.

“ಪಠ್ಯಪುಸ್ತಕ ಪುನರ್ ಪರಿಶೀಲನೆಗಾಗಿ ಸಮಿತಿ ನೇಮಕ ಮಾಡಿದಾಗಲೇ ಸರ್ಕಾರ ಎಡವಿದೆ. ಸಮಿತಿಗೆ ನೇಮಕ ಮಾಡಲು ಬಲಪಂಥೀಯ ವಿದ್ವಾಂಸರು, ಶಿಕ್ಷಣ ತಜ್ಞರೇ ಬೇಕು ಎಂದಿದ್ದರೆ ಹಲವಾರು ಮಂದಿ ಸಜ್ಜನರು, ಎದೆಯಲ್ಲಿ ನಂಜು ಇಟ್ಟುಕೊಳ್ಳದೆ ಕಾರ್ಯ ನಿರ್ವಹಿಸುವವರು ಲಭ್ಯವಿದ್ದರು. ಆದರೆ ಸರ್ಕಾರ ಇಂಥವರನ್ನು ನೇಮಕ ಮಾಡದೆ ತಪ್ಪೆಸಗಿದೆ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ತಜ್ಞನಲ್ಲದ, ಕನ್ನಡ ಸಾಹಿತಿಗಳ ಕುರಿತು ಅಗೌರವ ಹೊಂದಿರುವ, ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ ಲೇಖನ ಬರೆದ, ನಾಡಗೀತೆಯನ್ನು ಅತ್ಯಂತ‌ ಕೊಳಕಾಗಿ ಪರಿಷ್ಕರಿಸಿ ಬರೆದ, ಕನ್ನಡಿಗರ ಅಸ್ಮಿತೆಯ ಪ್ರತೀಕವಾದ ಕನ್ನಡ ಧ್ವಜವನ್ನು ತನ್ನ ಒಳಚೆಡ್ಡಿಗೆ ಹೋಲಿಸಿದ ವ್ಯಕ್ತಿಯನ್ನು ಪಠ್ಯ ಪುಸ್ತಕ ಸಮಿತಿಗೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದೇ ಮೊದಲ ತಪ್ಪು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಸಾಮಾಜಿಕ ಜಾಲತಾಣಗಳಲ್ಲಿ ಸದಾ ಕನ್ನಡದ್ರೋಹದ ಕೆಲಸವನ್ನೇ ಮಾಡಿಕೊಂಡು ಬಂದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಶೀಲನೆಗೆ ಬಿಟ್ಟರೆ ಏನಾಗಬಹುದು ಎಂಬುದನ್ನು ಇಂದು ನಾವು ನೋಡುತ್ತಿದ್ದೇವೆ. ಕನ್ನಡದ ಸಾರಸ್ವತ ಲೋಕ ಎದ್ದು ನಿಂತು ಪ್ರತಿಭಟಿಸುತ್ತಿದೆ. ಮಕ್ಕಳ ಪಠ್ಯದಲ್ಲಿ ನಂಜು ತುಂಬುವ ಇಂಥವರ ವಿರುದ್ಧ ಶೈಕ್ಷಣಿಕ, ಬುದ್ಧಿಜೀವಿ ವಲಯ ಧ್ವನಿ ಎತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

“ಸರ್ಕಾರ ಕೂಡಲೇ ಪರಿಷ್ಕರಣಾ ಸಮಿತಿಯ ಎಲ್ಲ ಪರಿಷ್ಕರಣೆಯನ್ನೂ ತಿರಸ್ಕರಿಸಬೇಕು. ಈಗಾಗಲೇ ಮುದ್ರಿಸಿರುವ ಹಳೆಯ ಪಠ್ಯಪುಸ್ತಕಗಳನ್ನೇ ಶಾಲೆಗಳಿಗೆ ನೀಡಬೇಕು. ಶಾಲೆಗಳು ಈಗಾಗಲೇ ಆರಂಭವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಕೂಡಲೇ ಹಳೆಯ ಪಠ್ಯ ಪುಸ್ತಕಗಳನ್ನೇ ಒದಗಿಸಬೇಕು. ಇಷ್ಟೆಲ್ಲ ಅವಾಂತರಕ್ಕೆ ಕಾರಣವಾದ ಸಮಿತಿಯನ್ನು ಈ ಕೂಡಲೇ ವಿಸರ್ಜಿಸಬೇಕು” ಎಂದು ನಾರಾಯಣ ಗೌಡ ಅವರು ಒತ್ತಾಯಿಸಿದ್ದಾರೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರರು ಸಾಮಾಜಿಕ, ಸಾಂಸ್ಕೃತಿಕ ವಿಷಯಗಳಲ್ಲಿ ಎಚ್ಚರ‌ ಮತ್ತು ಪ್ರಜ್ಞೆ ಉಳ್ಳವರು. ಅವರು ಯಾವುದೇ ರೀತಿಯ ಬಾಹ್ಯ ಒತ್ತಡಕ್ಕೆ ಒಳಗಾಗದೆ ನಾಯಕತ್ವದ ಗುಣವನ್ನು ಪ್ರದರ್ಶಿಸಬೇಕು. ಕೂಡಲೇ ಮಧ್ಯಪ್ರವೇಶಿಸಿ ವಿವಾದವನ್ನು‌ ಬಗೆಹರಿಸಬೇಕು” ಎಂದು ನಾರಾಯಣ ಗೌಡ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...