Homeಮುಖಪುಟಪಠ್ಯ ವಿವಾದ: ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ 4 ಸುಳ್ಳುಗಳು

ಪಠ್ಯ ವಿವಾದ: ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ 4 ಸುಳ್ಳುಗಳು

- Advertisement -
- Advertisement -

ಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುನರ್ ಪರಿಷ್ಕರಣೆ ಸಮಿತಿ ಮಾಡಿರುವ ಬದಲಾವಣೆಗಳು ವಿವಾದದ ಬಿರುಗಾಳಿಯೆಬ್ಬಿಸಿವೆ. ಒಂದೇ ಜಾತಿಯ ಸದಸ್ಯರನ್ನೊಳಗೊಂಡ ಸಮಿತಿಯು ಅವರದೇ ಜಾತಿ ಲೇಖಕರ ಪಠ್ಯಗಳನ್ನು ತುಂಬಿದ್ದು, ದಲಿತ – ಶೂದ್ರ ಲೇಖಕರ ಪಠ್ಯಗಳನ್ನು ಕೈಬಿಟ್ಟಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆಗಳು ವ್ಯಕ್ತವಾಗಿವೆ. ಭಗತ್ ಸಿಂಗ್ ಪಠ್ಯ ಕೈಬಿಟ್ಟು ಹೆಡಗೇವಾರ್ ಪಠ್ಯ ಸೇರಿಸಿದ್ದಕ್ಕೆ ತೀವ್ರ ವಿರೋಧ ಕೇಳಿಬಂದಿದೆ. ಈ ಪಠ್ಯ ಪುನರ್ ಪರಿಷ್ಕರಣೆಯನ್ನು ಸಂಪೂರ್ಣವಾಗಿ ಕೈಬಿಡಬೇಕು ಮತ್ತು ಹಳೆಯ ಪಠ್ಯಗಳನ್ನೆ ಮುಂದುವರೆಸಬೇಕೆಂದು ಟ್ವಿಟರ್ ಟ್ರೆಂಡ್ ಸಹ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಮೇ 23ರ ಸೋಮವಾರದಂದು ಸ್ಪಷ್ಟನೆ ನೀಡುವುದಕ್ಕಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಪತ್ರಿಕಾಗೋಷ್ಟಿ ನಡೆಸಿದ್ದರು. ಆದರೆ ಅಲ್ಲಿ ಸ್ಪಷ್ಟನೆ ನೀಡುವುದಕ್ಕೆ ಬದಲು ಹಿಂದಿನ ಸಮಿತಿಯನ್ನು ದೂಷಿಸುವ, ಸುಳ್ಳು ಮತ್ತು ಅರ್ಧ ಸುಳ್ಳುಗಳನ್ನು ಹೇಳಿದ್ದಾರೆ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ಸೇರಿದಂತೆ ಇತರರು ಆರೋಪಿಸಿದ್ದಾರೆ. ಶಿಕ್ಷಣ ಸಚಿವರು ಹೇಳಿದ ನಾಲ್ಕು ಸುಳ್ಳುಗಳು ಇಲ್ಲಿವೆ.

  1. ಕುವೆಂಪು ಪಠ್ಯ ಕೈಬಿಟ್ಟ ಬರಗೂರು ಸಮಿತಿ

ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯ ಸಮಿತಿಯು ಕುವೆಂಪು, ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಬೇಡ್ಕರ್, ಮೈಸೂರು ಮಹಾರಾಜರು, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, ಮದಕರಿ ನಾಯಕ ಮುಂತಾದ ಮಹನೀಯರ ಪಾಠಗಳನ್ನು ಕೈ ಬಿಟ್ಟಿತ್ತು ಎಂಬ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಬರಗೂರು ರಾಮಚಂದ್ರಪ್ಪನವರು “ಶಿಕ್ಷಣ ಸಚಿವರು ಅಪ್ಪಟ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನಾವು ಅವರು ಉಲ್ಲೇಖಿಸಿರುವ ಯಾವ ಪಠ್ಯವನ್ನು ಕೈಬಿಟ್ಟಿಲ್ಲ. ಬದಲಿಗೆ ಮತ್ತಷ್ಟು ಸೇರಿಸಿ ಎಲ್ಲಾ ತರಗತಿ ಮಕ್ಕಳಿಗೂ ಪಾಠ ಇಟ್ಟಿದ್ದೇವೆ” ಎಂದಿದ್ದಾರೆ.

ಕುವೆಂಪು ಅವರ ರಚನೆಗಳು 10 ಮತ್ತು 7ನೇ ತರಗತಿಯ ಕನ್ನಡ ಪಠ್ಯಪುಸ್ತಕಗಳಲ್ಲಿ ಇವೆ. ಖಂಡಿತ ಕೈ ಬಿಟ್ಟಿಲ್ಲ. ಪ್ರೌಢಶಾಲೆ ಹಂತದಲ್ಲಿ ಇದ್ದ ಕುವೆಂಪು ಅವರ “ಭರತ ಭೂಮಿ ನಮ್ಮ ತಾಯಿ” ಎಂಬ ಪದ್ಯವನ್ನು ಚಿಕ್ಕಂದಿನಲ್ಲೇ ದೇಶಪ್ರೇಮದ ಭಾವನೆ ಬೆಳೆಯಲಿ ಎಂಬ ದೃಷ್ಟಿಯಿಂದ 7ನೇ ತರಗತಿಗೆ ಅಳವಡಿಸಲು ನಾವು ಸೂಚಿಸಿದ್ದೆವು ಅಷ್ಟೇ. ಇನ್ನು, 7ನೇ ತರಗತಿಯ 2ನೇ ಭಾಗ ಮತ್ತು 10ನೇ ತರಗತಿಯ 2ನೇ ಭಾಗದ ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ಗಾಂಧಿ ಕುರಿತು ಸಾಕಷ್ಟು ವಿವರಗಳಿವೆ. ಸಮಾಜ ವಿಜ್ಞಾನದ 8ನೇ ತರಗತಿಯ ಭಾಗ-1 ಮತ್ತು 10ನೇ ತರಗತಿಯ ಭಾಗ-2ರಲ್ಲಿ ಡಾ.ಅಂಬೇಡ್ಕರ್‌ ಪಾಠಗಳಿವೆ. 9ನೇ ತರಗತಿಯ ಪಠ್ಯದಲ್ಲಿ ‘ನಮ್ಮ ಸಂವಿಧಾನ’ ಎ೦ಬ ಪಾಠವಿದ್ದು ಅಲ್ಲಿಯೂ ಡಾ.ಅಂಬೇಡ್ಕರ್‌ ಅವರನ್ನು ಕುರಿತ ವಿವರಗಳಿವೆ ಎಂದು ಬರಗೂರು ಹೇಳಿದ್ದಾರೆ.

2. 1930 ರಲ್ಲಿ ತ್ರಿವರ್ಣ ಧ್ವಜ ಇರಲಿಲ್ಲ

ಹೆಡಗೇವಾರ್‌ರವರನ್ನು ಪಠ್ಯದಲ್ಲಿ ಸೇರಿಸಿದ್ದೀರಿ. ಅವರು ಭಾರತದ ತ್ರಿವರ್ಣ ಧ್ವಜಕ್ಕೆ ಬದಲಾಗಿ ಭಗವಾಧ್ವಜ ಬೆಂಬಲಿಸಿದ್ದರು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ನಾಗೇಶ್‌ರವರು, ನಮಗೆ ಸ್ವಾತಂತ್ರ್ಯ ಬಂದಿದ್ದು 1947ರಲ್ಲಿ. ಅಲ್ಲಿಂದ ತ್ರಿವರ್ಣ ಧ್ವಜಕ್ಕೆ ಮಾನ್ಯತೆ ಇದೆ ಹೊರತು 1930ರಲ್ಲಿ ತ್ರಿವರ್ಣ ಧ್ವಜ ಇರಲಿಲ್ಲ ಎಂದು ಹೆಡಗೇವಾರ್‌ರನ್ನು ಸಮರ್ಥಿಸಿಕೊಂಡರು.

ವಾಸ್ತವ ಏನೆಂದರೆ, ಸ್ವಾತಂತ್ರ್ಯ ಚಳವಳಿಯು 1930ರ ಜನವರಿ 26ರಂದು ದೇಶದ ಎಲ್ಲಾ ಕಡೆ ಸಂಪೂರ್ಣ ಸ್ವಾತಂತ್ರ್ಯ ಘೋಷಣೆ ಮಾಡಿ ತ್ರಿವರ್ಣ ಧ್ವಜ ಹಾರಿಸಬೇಕೆಂದು ಕರೆ ನೀಡಿದ್ದಾಗ ಹೆಡಗೇವಾರರು ಸಂಘದಲ್ಲಿ ಕೇವಲ ಭಗವಾ ಧ್ವಜವನ್ನು ಮಾತ್ರ ಹಾರಿಸಬೇಕೆಂದು ಕರೆ ನೀಡುತ್ತಾರೆ. 1931ರಲ್ಲಿ ದಂಡಿ ಸತ್ಯಾಗ್ರಹದ ಕರೆ ಇಡೀ ದೇಶವನ್ನು ಆವರಿಸುತ್ತಿದ್ದಾಗ ಆರೆಸ್ಸೆಸ್ ಸಹ ಒಂದು ನಿಲುವು ತೆಗೆದುಕೊಳ್ಳಲೇಬೇಕಾದ ಸಂದರ್ಭ ಬಂದಾಗ ಆರೆಸ್ಸೆಸ್ಸಿನ ಕಾರ್ಯಕರ್ತರು ವೈಯಕ್ತಿಕ ನೆಲೆಯಲ್ಲಿ ಸತ್ಯಾಗ್ರಹದಲ್ಲಿ ಭಾಗವಹಿಸಬಹುದೇ ವಿನಾ ಆರೆಸ್ಸೆಸ್ ಒಂದು ಸಂಘವಾಗಿ ಸತ್ಯಾಗ್ರಹದಲ್ಲಿ ಭಾಗವಹಿಸುವುದಿಲ್ಲ ಎಂಬ ನಿಲುವು ತೆಗೆದುಕೊಳ್ಳುತ್ತಾರೆ ಎಂದು ಸ್ವಾತಂತ್ರ್ಯ ಚಳವಳಿಯ ಬಗ್ಗೆ ಗಂಭೀರವಾಗಿ ಅಧ್ಯಯನ ಮಾಡಿರುವ ಚಿಂತಕ ಶಿವಸುಂದರ್‌ ಅಭಿಪ್ರಾಯಪಟ್ಟಿದ್ದಾರೆ. ಆದರೆ ನಾಗೇಶ್‌ರವರು ಹೆಡಗೇವಾರ್ ಸಮರ್ಥಿಸುವ ಬರದಲ್ಲಿ ಸುಳ್ಳಿಗೆ ಮೊರೆ ಹೋಗಿದ್ದಾರೆ.

3. ಸಾಹಿತಿಗಳ ಜಾತಿ ಹುಡಕಬಾರದು, ಕಂಟೆಂಟ್ ನೋಡಿ

ಯಾವ ಯಾವ ಸಾಹಿತಿಗಳ ಪಠ್ಯ ಸೇರ್ಪಡೆಯಾಗಿದೆಯೋ ಅವರ ಜಾತಿ ನೋಡಬಾರದು, ಬದಲಿಗೆ ಅವರ ಕಂಟಂಟ್ ನೋಡಿದರೆ ಒಳ್ಳೆಯದು ಕಾಣುತ್ತದೆ ಎಂದು ಸಚಿವ ನಾಗೇಶ್ ಹೇಳಿದರು.

ಪಠ್ಯ ಪುನರ್ ಪರಿಷ್ಕರಣಾ ಸಮಿತಿಯಲ್ಲಿ 7 ಜನ ಸದಸ್ಯರಿದ್ದು ಆ 7 ಜನರೂ ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದಾರೆ. ಎಸ್. ಎಲ್.ಭೈರಪ್ಪ, ಕೆ.ಬಿ.ಹೆಡ್ಗೇವಾರ್, ಗಜಾನನ ಶರ್ಮಾ, ಎನ್.ರಂಗನಾಥ ಶರ್ಮಾ, ಸುಶ್ರುತ ದೊಡ್ಡೇರಿ, ಎಸ್.ವಿ.ಪರಮೇಶ್ವರ ಭಟ್, ಗಣೇಶ್ ಶತಾವಧಾನಿ, ಬನ್ನಂಜೆ ಗೋವಿಂದಾಚಾರ್ಯ, ಶಿವಾನಂದ ಕಳವೆ, ಚಕ್ರವರ್ತಿ ಸೂಲಿಬೆಲೆಯವರ ಪಠ್ಯಗಳನ್ನು ಸೇರಿಸಲಾಗಿದೆ. ಇವರಲ್ಲಿ ಎಲ್ಲರೂ ಬ್ರಾಹ್ಮಣ ಜಾತಿಗೆ ಸೇರಿದ್ದಾರೆ. ಇವರ ಕಂಟೆಂಟ್‌ಗಳು ಹೇಗಿವೆ ಎಂಬುದನ್ನು ನೋಡಿದರೆ ಅದರಲ್ಲಿ ಒಳ್ಳೆಯದು ಕಾಣುವುದಿಲ್ಲ.

“ಈ ಸಿರಿಯೆಂಬ ಹೊಸ ಹೆಣ್ಣನ್ನು ಕಂಡು ಮರುಳಾಗದವರನ್ನು ನಾನು ಕಂಡಿಲ್ಲ. ಎಲ್ಲರೂ ಆಕೆಯತ್ತ ಆಕರ್ಷಿತರಾದವರೆ. ಎಲ್ಲರೂ ಆಕೆಯಿಂದ ಮೋಸಹೋಗುವವರೇ. ಯಾವುದೇ ಒಬ್ಬನನ್ನು ನಿರ್ವಂಚನೆಯಿಂದ ಪ್ರೇಮಿಸುವುದು ಆಕೆಯ ಜಾಯಮಾನಕ್ಕೆ ಸಲ್ಲದು”

ಇದು ಬನ್ನಂಜೆ ಗೋವಿಂದಚಾರ್ಯರ ಶುಕನಾಸನ ಉಪದೇಶ ಪಾಠ ಭಾಗ. ಮಹಿಳೆಯರನ್ನು ಇಷ್ಟು ಕೀಳು ಮಟ್ಟಕ್ಕೆ ಚಿತ್ರಿಸಿರುವ ಪಾಠವನ್ನು ಮಕ್ಕಳು ಓದಿದರೆ ಅವರಲ್ಲಿ ಯಾವ ಭಾವ ಬರಬಹುದು? ಇದನ್ನು ಒಳ್ಳೆಯ ಕಂಟೆಂಟ್‌ ಎನ್ನಲಾಗುತ್ತದೆಯೇ?

ಇನ್ನು ಭಾರತದ ರಸ್ತೆಗಳನ್ನು ಚಿನ್ನದಲ್ಲಿ ಮಾಡಬಹುದು, ಸೌದಿ ಪೆಟ್ರೋಲಿಯಂ ಸಚಿವನಿಗೆ ಮೋದಿ ಫೋನ್ ಮಾಡಿ ಪೆಟ್ರೋಲ್ ರೇಟ್ ಕಡಿಮೆ ಮಾಡುತ್ತಾರೆ. ಬೆಂಗಳೂರಿಂದ ಮಂಗಳೂರಿಗೆ ಬುಲೆಟ್ ಟ್ರೈನ್ ಬರುತ್ತೆ ಎಂದೆಲ್ಲ ಸುಳ್ಳು ಹೇಳಿಕೊಂಡು ತಿರುಗಿದ ಚಕ್ರವರ್ತಿ ಸೂಲಿಬೆಲೆಯವರ ಬಗ್ಗೆ ಮಕ್ಕಳು ಓದಬೇಕೆ? ಅವರು ಒಳ್ಳೆಯ ಕಂಟೆಂಟ್ ಬರೆಯುತ್ತಾರೆಯೇ?

4. ರೋಹಿತ್ ಚಕ್ರತೀರ್ಥ ಐಐಟಿ-ಸಿಇಟಿ ಪ್ರೊಫೆಸರ್ ಆಗಿದ್ದರು

ಪಠ್ಯ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಲು ರೋಹಿತ್ ಚಕ್ರತೀರ್ಥರಿಗಿರುವ ಅರ್ಹತೆಯೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಶಿಕ್ಷಣ ತಜ್ಞ ಎನ್ನುವುದಕ್ಕೆ ಎಲ್ಲಿಯಾದರೂ ಪ್ರಮಾಣ ಪತ್ರ ಇದೆಯಾ? ರೋಹಿತ್ ಚಕ್ರತೀರ್ಥ ಅವರ ಹಿನ್ನೆಲೆಯನ್ನು ಪ್ರಶ್ನೆ ಮಾಡುತ್ತಿರುವವರು ಅವರ ಹಿನ್ನೆಲೆ ಹೇಳಲಿ ನೋಡೋಣ. ಚಕ್ರತೀರ್ಥ ಈ ಹಿಂದೆ ಐಐಟಿ ಮತ್ತು ಸಿಇಟಿ ಪ್ರೊಫೆಸರ್ ಎಂಬುದನ್ನು ಮರೆಯಬಾರದು” ಎಂದು ರೋಹಿತ್‌ ಚಕ್ರತೀರ್ಥ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು.

ಈ ಕುರಿತು ಶೋಧನೆ ನಡೆಸಿದಾಗ ರೋಹಿತ್ ಚಕ್ರತೀರ್ಥರವರು ಯಾವುದೇ ಐಐಟಿಗೆ ಪ್ರೊಫೆಸರ್ ಆಗಿರುವುದು ಕಂಡುಬಂದಿಲ್ಲ. ಐಐಟಿ ಅಂದರೆ ‘ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ’ ಎಂಬುವುದು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ದೇಶದಾದ್ಯಂತ 23 ಐಐಟಿ ಸಂಸ್ಥೆಗಳಿವೆ. ಕರ್ನಾಟಕದ ಧಾರವಾಡದಲ್ಲೂ ಐಐಟಿ ಇದೆ. ಆದರೆ ಈ ಯಾವ ವಿವಿಗಳಲ್ಲಿಯೂ ಪ್ರಾಧ್ಯಾಪಕರಾಗಿ ಅವರು ಹೆಸರು ಇಲ್ಲ.

ಇನ್ನು ಸಿಇಟಿ ಎಂಬ ಯಾವ ವಿಶ್ವವಿದ್ಯಾಲಯವೂ ಇಲ್ಲ. ಅದು ಪಿಯುಸಿ ನಂತರ ನಡೆಯುವ ಪ್ರವೇಶ (CET-Common Entrance Test) ಪರೀಕ್ಷೆಯಾಗಿದೆ. ಅದೊಂದು ಸಂಸ್ಥೆಯಾಗಲಿ, ಹುದ್ದೆಯಾಗಲಿ ಅಲ್ಲ. ಈ ಪರೀಕ್ಷೆ ಬರೆಯಲು ಸಾಮಾನ್ಯವಾಗಿ ಟ್ಯೂಷನ್‌ ಕೇಂದ್ರಗಳಲ್ಲಿ ತರಬೇತಿ ನೀಡಲಾಗುತ್ತದೆ. ಇಂತಹ ಟ್ಯೂಷನ್‌ ಕೇಂದ್ರಗಳಿಗೆ ಮಾನ್ಯತೆಯೂ ಇರುವುದಿಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಅವರ ಬಗ್ಗೆ ಹುಡುಕಿದಾಗಲೂ ಅವರೊಬ್ಬ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿ, ಬರಹಗಾರ ಮತ್ತು ವಿಜ್ಞಾನ ಸಂಬಂಧಿ ವಿಚಾರಗಳ ಲೇಖಕ ಎಂದಷ್ಟೇ ಮಾಹಿತಿ ಇದೆ. ಸ್ವತಃ ರೋಹಿತ್ ಚಕ್ರತೀರ್ಥ ತಮ್ಮ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ತಮ್ಮನ್ನು ಶಿಕ್ಷಕ ಎಂದಷ್ಟೇ ಪರಿಚಯಿಸಿಕೊಂಡಿದ್ದಾರೆ.

ಅವರ ಬಗ್ಗೆ ತಿಳಿದಿದ್ದ ಕೆಲವರ ಬಳಿ ವಿಚಾರಿಸಲಾಗಿ, ಈ ಹಿಂದೆ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ರೋಹಿತ್ ಚಕ್ರತೀರ್ಥ ಗಣಿತ ಪಾಠ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ‘ಟೆಸ್ಲಾ ಎಜುಕೇಷನ್’ ಎಂಬ‌ ಆನ್‌ಲೈನ್‌ ಪಾಠ ಮಾಡುವ ಶಿಕ್ಷಣ ಸಂಸ್ಥೆ ಹೊಂದಿರುವ ರೋಹಿತ್ ಚಕ್ರತೀರ್ಥ ಯೂಟ್ಯೂಬ್‌ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗಣಿತ ಮಾಡುವ ವಿಡಿಯೋ ಸಹ ಲಭ್ಯವಾಗಿದೆ.

ಸಚಿವ ನಾಗೇಶ್‌ ಅವರು ಹೇಳಿದಂತೆ ಯಾರಾದರೂ ಪ್ರೊಫೆಸರ್ ಸ್ಥಾನಕ್ಕೆ ಏರುವ ಪ್ರಕ್ರಿಯೆಯೂ ಅಷ್ಟು ಸುಲಭದ್ದಲ್ಲ. ಮೊದಲು ಅವರು ಶಿಕ್ಷಣ ಸಂಸ್ಥೆಯೊಂದರಲ್ಲಿ ಸಹಾಯಕ ಪ್ರಾಧ್ಯಾಪಕ (Assistant Professor) ಆಗಿ ಕೆಲಸಕ್ಕೆ ನಿಯುಕ್ತಿಯಾಗಬೇಕು. ನಂತರ ಅವರ ಅನುಭವದ ಆಧಾರದ ಮೇಲೆ ಸಹ ಪ್ರಾಧ್ಯಾಪಕ (Associate Professor ) ಆಗಿ ಬಡ್ತಿ ನೀಡಲಾಗುತ್ತದೆ. ಆನಂತರ, ಅವರ ಸೇವಾನುಭವ ಮತ್ತು ಪ್ರಕಟಿತ ಸಂಶೋಧನಾ ಬರಹಗಳ ಆಧಾರದಲ್ಲಿ ಪ್ರೊಫೆಸರ್ ಎಂಬ ಗೌರವವನ್ನು ನೀಡಲಾಗುತ್ತದೆ. ಒಟ್ಟಿನಲ್ಲಿ ರೋಹಿತ್ ಚಕ್ರತೀರ್ಥ ಪ್ರೊಫೆಸರ್ ಅಲ್ಲ ಎಂಬುದು ಮೇಲಿನ ವಿಷಯಗಳಿಂದ ಖಚಿತವಾಗುತ್ತದೆ.

ಇದನ್ನೂ ಓದಿ: ಜಿ.ರಾಮಕೃಷ್ಣ, ಲಂಕೇಶ್‌ರವರ ಜಾತಿ ಗೊತ್ತಿಲ್ಲ: ರೋಹಿತ್ ಚಕ್ರತೀರ್ಥ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಮ್ಮದನ್ನು ನಾವು ಕಲಿಯುವುದು ಬೇಡ,ಪರಕೀಯರ ಬಗ್ಗೆನೇ ಕಲಿಯಿರಿ ಎನ್ನುವುದು ನಿಮ್ಮ ವಾದ ವಲ್ಲವೇ?ನೆಹರು ಗಾಂಧಿ ಜಿನ್ನಾ ಮೋಗಳತಬ್ಬಗ್ಗೆ ಮಾತ್ರ ಒದಬೇಕಲ್ಲವೆ,ಅಬ್ಬಾ ಭಾರತೀಯತೆಯನ್ನು ಹತ್ತಿಕ್ಕಲು ಏಷ್ಟು ಹುನ್ನಾರ, ಪದೆ ಪದೇ ಹೇಳಿದ್ದನ್ನೇ ಪ್ರತಿಯೊಬ್ಬ ಪ್ರಗತಿ ಪರರು ಎಲ್ಲಾ ರೀತಿಯ ಮಾಧ್ಯಮಗಳನ್ನು ಬಳಸಿಕೊಂಡು ಎಲ್ಲಾ ಕೆಲ್ಸ ಬಿಟ್ಟು ಸಾರುತ್ತಿದ್ದಾರೆ ಮೆಚ್ಚಲೇ ಬೇಕು ಇವರ ದೇಶಿಯತೆಯನ್ನು,

  2. ನಮ್ಮದನ್ನು ನಾವು ಕಲಿಯುವುದು ಬೇಡ,ಪರಕೀಯರ ಬಗ್ಗೆನೇ ಕಲಿಯಿರಿ ಎನ್ನುವುದು ನಿಮ್ಮ ವಾದ ವಲ್ಲವೇ?ನೆಹರು ಗಾಂಧಿ ಜಿನ್ನಾ ಮೋಘಲರ ಬಗ್ಗೆಮಾತ್ರ ಒದಬೇಕಲ್ಲವೆ,ಅಬ್ಬಾ ಭಾರತೀಯತೆಯನ್ನು ಹತ್ತಿಕ್ಕಲು ಏಷ್ಟು ಹುನ್ನಾರ, ಪದೆ ಪದೇ ಹೇಳಿದ್ದನ್ನೇ ಪ್ರತಿಯೊಬ್ಬ ಪ್ರಗತಿ ಪರರು ಎಲ್ಲಾ ರೀತಿಯ ಮಾಧ್ಯಮಗಳನ್ನು ಬಳಸಿಕೊಂಡು ಎಲ್ಲಾ ಕೆಲ್ಸ ಬಿಟ್ಟು ಸಾರುತ್ತಿದ್ದಾರೆ ಮೆಚ್ಚಲೇ ಬೇಕು ಇವರ ದೇಶಿಯತೆಯನ್ನು,

  3. ಸ್ವಾತಂತ್ರ್ಯ ಸಿಕ್ಕು 75 ವರ್ಷ ಆದರು ಮತ್ತೆ ಗುಲಾಮರು ತರ ಬದುಕ ಬೇಕು ಅನ್ನುವ ನಿಮ್ಮ ಜನ್ಮಕ್ಕೆ ನಾಚಿಕೆ ಆಗಬೇಕು……ಥೂ ನಿಮ್ಮ ಜನ್ಮಕ್ಕೆ ಬೆಂಕಿ ಹಚ್ಚಾ .

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...