Homeಕರ್ನಾಟಕರೋಹಿತ್‌‌ ಚಕ್ರತೀರ್ಥ ಮರು ಪರಿಷ್ಕರಣಾ ಸಮಿತಿಯನ್ನು ಕೂಡಲೆ ರದ್ದುಗೊಳಿಸಿ- ‘ಜಾಗೃತ ನಾಗರಿಕರು, ಕರ್ನಾಟಕ’

ರೋಹಿತ್‌‌ ಚಕ್ರತೀರ್ಥ ಮರು ಪರಿಷ್ಕರಣಾ ಸಮಿತಿಯನ್ನು ಕೂಡಲೆ ರದ್ದುಗೊಳಿಸಿ- ‘ಜಾಗೃತ ನಾಗರಿಕರು, ಕರ್ನಾಟಕ’

- Advertisement -
- Advertisement -

ರೋಹಿತ್‌‌ ಚಕ್ರತೀರ್ಥ ಅಧ್ಯಕ್ಷತೆಯ ಮರು ಪರಿಷ್ಕರಣಾ ಸಮಿತಿಯನ್ನು ಈ ಕೂಡಲೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಮತ್ತು ಹಿಂದಿನ ಪಠ್ಯಕ್ರಮಗಳನ್ನು ಮುಂದುವರೆಸಬೇಕು ಎಂದು ‘ಜಾಗೃತ ನಾಗರಿಕರು, ಕರ್ನಾಟಕ’ ಬುಧವಾರ ನಿರ್ಣಯಗಳನ್ನು ಅಂಗೀಕರಿಸಿದೆ. ಬೆಂಗಳೂರಿನ ಗಾಂಧೀ‌ ಭವನದಲ್ಲಿ
ಆಯೋಜಿಸಲಾಗಿದ್ದ ಈ ಸಭೆಯಲ್ಲಿ, ಶಿಕ್ಷಣ ತಜ್ಞರು, ಪ್ರಾಧ್ಯಪಕರು, ವಿದ್ಯಾರ್ಥಿ ಸಂಘಗಗಳ ಪ್ರತಿನಿಧಿಗಳು, ಸಾಹಿತಿಗಳು, ಹೋರಾಟಗಾರರು ಹಾಗೂ ಶಾಲಾ ಸಂಘಗಳ ಪ್ರತಿನಿಧಿಗಳು ಸೇರಿದಂತೆ ನಾಡಿನ ಹಲವಾರು ಗಣ್ಯರು ಹಾಜರಿದ್ದರು.

“ಪಠ್ಯ ಪುಸ್ತಕ ರಚನೆ, ಪಠ್ಯ ಪುಸ್ತಕ ಪರಿಷ್ಕರಣೆ, ಪರಿಷ್ಕರಣೆಯ ಪರಿಶೀಲನೆ” ಕುರಿತು ಶಿಕ್ಷಣ ತಜ್ಞರೊಂದಿಗೆ ಸಂವಾದ, ಸಮಾಲೋಚನೆ ನಡೆಯಿತು. ಡಾ.ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಎಚ್.ಎಸ್. ರಾಘವೇಂದ್ರ ರಾವ್, ರಾಜೇಂದ್ರ ಚೆನ್ನಿ, ವಸುಂಧರಾ ಭೂಪತಿ, ಬಿ.ಟಿ. ಲಲಿತಾ ನಾಯಕ್, ಟಿ.ಆರ್. ಚಂದ್ರಶೇಖರ್, ಪ್ರಜ್ವಲ್ ಶಾಸ್ತ್ರಿ, ವಿ.ಪಿ. ನಿರಂಜನಾರಾಧ್ಯ, ಬಂಜಗೆರೆ ಜಯಪ್ರಕಾಶ್, ಮಾವಳ್ಳಿ ಶಂಕರ್, ಇಂದೂಧರ ಹೊನ್ನಾಪುರ, ಬಿ. ರಾಜಶೇಖರಮೂರ್ತಿ, ಬಿ. ಶ್ರೀಪಾದ್ ಭಟ್ ಮತ್ತಿತರರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾಲೋಚನೆ ಸಭೆಯ ನಂತರ ಭಾಗವಹಿಸಿದವರ ಅಭಿಪ್ರಾಯಗಳ ಆಧಾರದಲ್ಲಿ ಹಲವು ನಿರ್ಣಯಗಳನ್ನು ಅಂಗೀಕರಿಸಲಾಗಿದ್ದು, “ರೋಹಿತ ಚಕ್ರತೀರ್ಥ ಅಧ್ಯಕ್ಷತೆಯ ಮರು ಪರಿಷ್ಕರಣಾ ಸಮಿತಿಯನ್ನು ಈ ಕೂಡಲೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜೀನಾಮೆ ಕೊಡಬೇಕು” ಎಂದು ಸಭೆಯು ಅಗ್ರಹಿಸಿದೆ.

ಅಲ್ಲದೆ, ಈ ಹಿಂದಿನ ಪಠ್ಯಕ್ರಮವನ್ನು ಮುಂದುವರಿಸಬೇಕು ಎಂದು ಆಗ್ರಹಿಸಲಾಗಿದ್ದು, ಶಿಕ್ಷಣ ತಜ್ಞರು, ಚಿಂತಕರು, ಶಿಕ್ಷಕರು ಜೊತೆಗೂಡಿ ‘ಮಾದರಿ ಪರ್ಯಾಯ ಪಠ್ಯಕ್ರಮ’ವನ್ನು ರೂಪಿಸಬೇಕು ಎಂದು ಸಭೆಯು ನಿರ್ಣಯಿಸಿದೆ.

ಇದನ್ನೂ ಓದಿ: ನಾಗೇಶ್‌ರವರನ್ನು ನಾಗ್ಪುರದ RSS ದಾರಿ ತಪ್ಪಿಸಿದೆಯೇ? ದೇವನೂರ ಮಹಾದೇವ ಪ್ರಶ್ನೆ

“ವಿದ್ಯಾರ್ಥಿಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಈ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ, ತಾಲೂಕು ಮಟ್ಟದಲ್ಲಿ ಚರ್ಚೆ, ಸಂವಾದ ಹಮ್ಮಿಕೊಳ್ಳಬೇಕು. ಶಿಕ್ಷಣದ ಭಾಗೀದಾರರಾದ ಪೋಷಕರೊಂದಿಗೆ ಸಮಾಲೋಚನೆ ನಡೆಸಬೇಕು. ಅವರಿಗೆ ಈ ವಿವಾದಿತ ಪಠ್ಯಕ್ರಮ ಪರಿಶೀಲನಾ ಸಮಿತಿಯ ಆಯ್ಕೆಗಳ ಅಪಾಯವನ್ನು ಮನವರಿಕೆ ಮಾಡಿಕೊಡಬೇಕು ಎಂದು ಸಭೆಯು ನಿರ್ಣಯ ತೆಗೆದುಕೊಂಡಿದೆ.

ಮಕ್ಕಳಿಗೆ ಸಕಾಲದಲ್ಲಿ ಪಠ್ಯ ಪುಸ್ತಕ ದೊರಕಿಸಿಕೊಡುವ ಬದಲು ವಿವಾದ ಎಬ್ಬಿಸಿ ಪುಸ್ತಕ ಸಿಗದಂತೆ ಸರಕಾರವೇ ಮಾಡಿರುವುದನ್ನು ಸಮಾಲೋಚನಾ ಸಭೆಯು ಖಂಡಿಸಿದ್ದು, “ನೂರಾರು ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲಾರದ ಸರಕಾರ ಪಠ್ಯ ಪುಸ್ತಕಗಳ ಮುದ್ರಣ,ಮರು ಮುದ್ರಣ ದ ಹೆಸರಿನಲ್ಲಿ ಕೋಟಿ ಗಟ್ಟಲೆ ಜನರ ತೆರಿಗೆ ಹಣವನ್ನು ಅಪವ್ಯಯ ಮಾಡುವುದನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Rohit committee must be dismissed with an immediate effect. And new committee should be formed from experts personals including lady, dalit, Obc, minority, and from general.

  2. ರೋಹಿತ್ ಚಕ್ರತೀರ್ಥ ಕಮಿಟಿಯನ್ನು ರದ್ದು ಮಾಡಿ ಮತ್ತು ಶಿಕ್ಷಣ ಸಚಿವರನ್ನು ವಜಾ ಮಾಡಬೇಕು. ಇದು, ಈ ಸರ್ಕಾರ ತಾನೇ ಮಾಡಿಕೊಂಡ ತಪ್ಪಿನ ಚಿಕ್ಕ ಪ್ರಾಯಶ್ಚಿತ್ತ.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...