Homeಕರ್ನಾಟಕಲೈಂಗಿಕ ಅಲ್ಪಸಂಖ್ಯಾತರ ಅವಹೇಳನ: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರುದ್ಧ ಪ್ರತಿಭಟನೆ

ಲೈಂಗಿಕ ಅಲ್ಪಸಂಖ್ಯಾತರ ಅವಹೇಳನ: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರುದ್ಧ ಪ್ರತಿಭಟನೆ

- Advertisement -
- Advertisement -

ಬಿಜೆಪಿ ಸರ್ಕಾರವನ್ನು ಟೀಕಿಸುವ ಭರದಲ್ಲಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯವನ್ನು ಅವಹೇಳ ಮಾಡಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರುದ್ಧ ಬುಧವಾರ ಬೆಂಗಳೂರಿನ ಸ್ವಾತಂತ್ಯ್ರ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಯಿತು. ಲೈಂಗಿಕ ಅಲ್ಪಸಂಖ್ಯಾತರ ಸಂಘಟನೆ, ದಲಿತ ಮತ್ತು ಮುಸ್ಲಿಂ ಮೈನಾರಿಟಿ ಸೇನೆ, ಸ್ವಾರಾಜ್ಯ ಇಂಡಿಯಾ, ದಿಲ್ ಫರಾಜ್ ಸಮರ ಸಂಸ್ಥೆ ಹಾಗೂ ಸಂವಾದ ಸಂಸ್ಥೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಿಎಂ ಇಬ್ರಾಹಿಂ ಅವರು ರಾಜ್ಯದ ಬಿಜೆಪಿ ಸರ್ಕಾರವನ್ನು ಟೀಕಿಸುತ್ತಾ, ‘‘ಕರ್ನಾಟಕ ಸರ್ಕಾರ ಮಂಗಳಮುಖಿ ಸರ್ಕಾರವಾಗಿದ್ದು, ಗಂಡೂ ಅಲ್ಲ, ಹೆಣ್ಣು ಅಲ್ಲ” ಎಂದು ನಾಲಗೆ ಹರಿಬಿಟ್ಟಿದ್ದರು. ಜೆಡಿಎಸ್‌ ರಾಜ್ಯಾಧ್ಯಕ್ಷ ಈ ಹೇಳಿಕೆಗೆ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮತ್ತು ಮುಸ್ಲಿಂ ಮೈನಾರಿಟಿ ಸೇನೆಯ ರಾಜ್ಯಾಧ್ಯಕ್ಷರು ಎಜೆ ಖಾನ್‌, ‘‘ಸಿಎಂ ಇಬ್ರಾಹಿಂ ಅವರು ದೇವೆಗೌಡರ ಕೃಪೆಯಿಂದ ಕೇಂದ್ರದಲ್ಲಿ ಸಚಿವರಾಗಿದ್ದವರು. ಅವರಿಗೆ ಎಲ್ಲಿ ಅಧಿಕಾರ ಸಿಗಲ್ಲವೋ ಅಲ್ಲಿಂದ ಬಿಟ್ಟು ಬೇರೆ ಕಡೆಗೆ ಹೋಗುತ್ತಾರೆ. ಎರಡು-ಮೂರು ತಿಂಗಳ ಹಿಂದೆ ಅವರ ನಾಟಕವನ್ನು ನಾವು ನೋಡಿದ್ದೇವೆ.

ಇದನ್ನೂ ಓದಿ:ಹಿಜಾಬ್: ಸಮತೋಲನವನ್ನು ಸಾಧಿಸದ, ಸಹಾನುಭೂತಿ ತೋರದ ತೀರ್ಪು 

ಅವರು ಭದ್ರಾವತಿಯಲ್ಲಿ ಠೇವಣಿಯನ್ನು ಕೂಡಾ ಕಳೆದುಕೊಳ್ಳುವಂತಹ ನಾಯಕ. ಬಡ ಮುಸ್ಲಿಮರ ಪರವಾಗಿಯೂ ಮಾತನಾಡದ ಅವರು ಬೇರೆ ಸಮುದಾಯದ ಬಗ್ಗೆ ಮಾತನಾಡಲು ಸಾಧ್ಯವಿದೆಯೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ಹೋರಾಟಗಾರರು ಸಿಎಂ ಇಬ್ರಾಹಿಂ ಅವರ ಪೋನ್‌ಗೆ, ‘ಫೋನ್ ಕಾಲ್‌ ಅಭಿಯಾನ’ವನ್ನು ಮಾಡಿದ್ದು, 200ಕ್ಕೂ ಹೆಚ್ಚು ಫೋನ್ ಕಾಲ್ ದಾಖಲಾಗಿದೆ. ಈ ವೇಳೆ ಹೋರಾಟಗಾರರ ಕರೆಯನ್ನು ಸ್ವೀಕರಿಸಿದ ಸಿಎಂ ಇಬ್ರಾಹಿಂ ಅವರು, “ನನ್ನ ಹೇಳಿಕೆ ತಪ್ಪಾಗಿದ್ದು, ಈ ಬಗ್ಗೆ ಬೇಷರತ್ತಾಗಿ ಕ್ಷಮೆ ಕೇಳಿ ವಿಡಿಯೊ ಬಿಡುತ್ತೇನೆ. ಲೈಂಗಿಕ ಅಲ್ಪಸಂಖ್ಯಾತರು ನನ್ನ ಸೋದರ-ಸೋದರಿಯರಿದ್ದ ಹಾಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಪ್ರತಿಭಟನೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಕಾರ್ಯಕರ್ತರು, ದಲಿತ ಮತ್ತು ಮುಸ್ಲಿಂ ಮೈನಾರಿಟಿ ಸೇನೆಯ ರಾಜ್ಯಾಧ್ಯಕ್ಷರಾದ ಎಜೆ ಖಾನ್, ಸ್ವಾರಾಜ್ಯ ಇಂಡಿಯಾದ ಆರ್. ಕಲೀಮ್ ಉಲ್ಲಾ, ಸಾಮಾಜಿಕ ಹೋರಾಟಗಾರರಾದ ಜಗನ್, ಸೆಲ್ವರಾಜ್, ಖಲೀಲ್‌ ಉಲ್ಲಾ, ದಲಿತ ಹಕ್ಕುಗಳ ಹೋರಾಟಗಾರ ಹೆಬ್ಬಾಳ ವೆಂಕಟೇಶ್, ದಿಲ್ ಫರಾಜ್ ಸಮರ ಸಂಸ್ಥೆಯ ರುಬಿನ್, ಸಂವಾದ ಸಂಸ್ಥೆಯ ಶಿವಗೌರಿ ಸೇರಿದಂತೆ ಹಲವಾರು ಹೋರಾಟಗಾರರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...