Homeಮುಖಪುಟಮನೆಗೋಗಿ ಅಡುಗೆ ಮಾಡು: ಸುಪ್ರಿಯಾ ಸುಳೆ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ - ತೀವ್ರ...

ಮನೆಗೋಗಿ ಅಡುಗೆ ಮಾಡು: ಸುಪ್ರಿಯಾ ಸುಳೆ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ – ತೀವ್ರ ಟೀಕೆ

- Advertisement -
- Advertisement -

ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ವಿರುದ್ದ, ‘ರಾಜಕೀಯ ಅರ್ಥವಾಗದಿದ್ದರೆ, ಮನೆಗೋಗಿ ಅಡುಗೆ ಮಾಡು’ ಎಂಬ ಅವಹೇಳನಕಾರಿ, ಮಹಿಳಾ ವಿರೋಧಿ ಹೇಳಿಕೆ ನೀಡಿದ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ್ ವಿರುದ್ಧ ಭಾರೀ ಟೀಕೆ ಕೇಳಿಬಂದಿದೆ.

“ನೀವೇಕೆ ರಾಜಕೀಯದಲ್ಲಿದ್ದೀರಿ? ಮನೆಗೆ ಹೋಗಿ ಅಡುಗೆ ಮಾಡಿ. ದೆಹಲಿಗಾದರೂ ಹೋಗಿ ಅಥವಾ ಸ್ಮಶಾನಕ್ಕೆ ಹೋಗಿ, ಆದರೆ ನಮಗೆ ಒಬಿಸಿ ಕೋಟಾ ಕೊಡಿಸಿ. ಲೋಕಸಭಾ ಸದಸ್ಯರಾಗಿದ್ದರೂ ಒಬ್ಬ ಸಿಎಂ ಅಪಾಯಿಂಟ್ಮೆಂಟ್ ಪಡೆಯುವುದು ಹೇಗೆಂದು ನಿಮಗೆ ತಿಳಿದಿಲ್ಲ” ಎಂದು ಬಿಜೆಪಿ ಅಧ್ಯಕ್ಷ ನಾಲಿಗೆ ಹರಿಯಬಿಟ್ಟಿದ್ದಾರೆ.

ಈ ಮೊದಲು ಸುಪ್ರಿಯಾ ಸುಳೆರವರು, “ಬಿಜೆಪಿ ಆಡಳಿತದ ಮಧ್ಯಪ್ರದೇಶ ಸರ್ಕಾರವು ಸ್ಥಳೀಯ ಚುನಾವಣೆಯಲ್ಲಿ ಒಬಿಸಿ ಮೀಸಲಾತಿಗೆ ಸುಪ್ರೀಂ ಕೋರ್ಟ್ ಅನುಮತಿ ಪಡೆದುಕೊಂಡಿದ್ದು ಹೇಗೆ? ಈ ಕುರಿತು ನವದೆಹಲಿಯಲ್ಲಿ ಮಧ್ಯಪ್ರದೇಶದ ಸಿಎಂರವರನ್ನು ಸಂಪರ್ಕಿಸಿದೆವು, ಆದರೆ ಅವರು ಸಿಗಲಿಲ್ಲ” ಎಂದು ಪಕ್ಷದ ಸಭೆಯಲ್ಲಿ ಮಾತನಾಡಿದ್ದರು.

ಮಧ್ಯಪ್ರದೇಶದ ಮುಖ್ಯಮಂತ್ರಿ ದೆಹಲಿಗೆ ಬಂದರು ಮತ್ತು ಕೆಲವರನ್ನು ಭೇಟಿಯಾದರು. ಅದಾದ ಎರಡೇ ದಿನದಲ್ಲಿ ಅವರು ಸ್ಥಳೀಯ ಚುನಾವಣೆಗೆ ಒಬಿಸಿ ಮೀಸಲಾತಿ ಪಡೆದುಕೊಂಡರು. ಇದು ಹೇಗೆಂದು ನನಗೆ ತಿಳಿಯಲಿಲ್ಲ ಎಂದು ಸುಪ್ರಿಯಾ ಸುಳೆ ಹೇಳಿದ್ದರು.

ಸುಪ್ರಿಯಾ ಸುಳೆ ವಿರುದ್ಧ ಅವಹೇಳನಕಾರಿ, ಮಹಿಳಾ ವಿರೋಧಿ ಹೇಳಿಕೆ ನೀಡಿರುವ ಬಿಜೆಪಿ ಮುಖ್ಯಸ್ಥನ ವಿರುದ್ಧ ಎನ್‌ಸಿಪಿ ಮುಗಿಬಿದ್ದಿದೆ. ಮೊದಲು ನೀವು ಚಪಾಟಿ ಲಟ್ಟಿಸುವುದನ್ನು ಕಲಿಯಿರಿ ಮತ್ತು ನಿಮ್ಮ ಪತ್ನಿಗೆ ಅಡುಗೆ ಮಾಡಲು ಸಹಾಯ ಮಾಡಿ ಎಂದು ತಿರುಗೇಟು ನೀಡಿದೆ.

“ಅವರು ಹಾಗೆ ಮಾತನಾಡಬಾರದಿತ್ತು. ನನ್ನ ಸಹೋದರಿಯ ವಿರುದ್ಧ ಆ ರೀತಿ ಕೆಟ್ಟದಾಗಿ ಮಾತನಾಡುವ ಹಕ್ಕು ಅವರಿಗಿಲ್ಲ” ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.

ಬಿಜೆಪಿಯು ಸ್ತ್ರೀದ್ವೇಷಿ ಪಕ್ಷ ಎಂದು ಸುಪ್ರಿಯಾ ಸುಳೆ ಪತಿ ಸದಾನಂದ್ ಸುಳೆ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಗೃಹಿಣಿ, ತಾಯಿ ಮತ್ತು ಯಶಸ್ವಿ ರಾಜಕಾರಣಿಯಾಗಿರುವ, ಭಾರತದ ಇತರ ಅನೇಕ ಕಠಿಣ ಪರಿಶ್ರಮಿ ಮತ್ತು ಪ್ರತಿಭಾವಂತ ಮಹಿಳೆಯರಲ್ಲಿ ಒಬ್ಬರಾಗಿರುವ ನನ್ನ ಹೆಂಡತಿಯ ಬಗ್ಗೆ ನನಗೆ ಹೆಮ್ಮೆ ಇದೆ… ಆದರೆ ಬಿಜೆಪಿಯು ಸ್ತ್ರೀದ್ವೇಷಿ ಪಕ್ಷವಾಗಿದ್ದು, ಯಾವಾಗಲೂ ಮಹಿಳೆಯನ್ನು ಹೀಯಾಳಿಸುತ್ತದೆ. ಇದು ಎಲ್ಲಾ ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶ್ರದ್ಧಾಂಜಲಿ; ದೊರೆಸ್ವಾಮಿ ಎಂಬ ಅತಿ ಸಾಮಾನ್ಯ ಮಹಾನ್ ವ್ಯಕ್ತಿ

ಭಾರತದಲ್ಲಿ ಸರಿ ಸುಮಾರು 50% ನಷ್ಟು ಮಹಿಳೆಯರಿದ್ದಾರೆ. ಅವರು ಎಲ್ಲಾ ಕ್ಷೇತ್ರಗಳಲ್ಲಿಯೂ ಉತ್ತಮ ಸಾಧನೆ ಮಾಡಿದ್ದಾರೆ. ಸಂಸಾರದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಅದರೆ ಮೇಲಿನ ಬಿಜೆಪಿ ಮುಖಂಡನ ಹೇಳಿಕೆ ಮಹಿಳೆಯರನ್ನು ಸಾಮರ್ಥ್ಯವಿಲ್ಲದವರು ಎಂಬ ಪುರಷಾಧಿಪತ್ಯದ ಮನಸ್ಥಿತಿಯಿಂದ ಕೂಡಿದೆ ಎಂಬ ಟೀಕೆಗಳು ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...