Homeಮುಖಪುಟಮನೆಗೋಗಿ ಅಡುಗೆ ಮಾಡು: ಸುಪ್ರಿಯಾ ಸುಳೆ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ - ತೀವ್ರ...

ಮನೆಗೋಗಿ ಅಡುಗೆ ಮಾಡು: ಸುಪ್ರಿಯಾ ಸುಳೆ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ – ತೀವ್ರ ಟೀಕೆ

- Advertisement -
- Advertisement -

ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ವಿರುದ್ದ, ‘ರಾಜಕೀಯ ಅರ್ಥವಾಗದಿದ್ದರೆ, ಮನೆಗೋಗಿ ಅಡುಗೆ ಮಾಡು’ ಎಂಬ ಅವಹೇಳನಕಾರಿ, ಮಹಿಳಾ ವಿರೋಧಿ ಹೇಳಿಕೆ ನೀಡಿದ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ್ ವಿರುದ್ಧ ಭಾರೀ ಟೀಕೆ ಕೇಳಿಬಂದಿದೆ.

“ನೀವೇಕೆ ರಾಜಕೀಯದಲ್ಲಿದ್ದೀರಿ? ಮನೆಗೆ ಹೋಗಿ ಅಡುಗೆ ಮಾಡಿ. ದೆಹಲಿಗಾದರೂ ಹೋಗಿ ಅಥವಾ ಸ್ಮಶಾನಕ್ಕೆ ಹೋಗಿ, ಆದರೆ ನಮಗೆ ಒಬಿಸಿ ಕೋಟಾ ಕೊಡಿಸಿ. ಲೋಕಸಭಾ ಸದಸ್ಯರಾಗಿದ್ದರೂ ಒಬ್ಬ ಸಿಎಂ ಅಪಾಯಿಂಟ್ಮೆಂಟ್ ಪಡೆಯುವುದು ಹೇಗೆಂದು ನಿಮಗೆ ತಿಳಿದಿಲ್ಲ” ಎಂದು ಬಿಜೆಪಿ ಅಧ್ಯಕ್ಷ ನಾಲಿಗೆ ಹರಿಯಬಿಟ್ಟಿದ್ದಾರೆ.

ಈ ಮೊದಲು ಸುಪ್ರಿಯಾ ಸುಳೆರವರು, “ಬಿಜೆಪಿ ಆಡಳಿತದ ಮಧ್ಯಪ್ರದೇಶ ಸರ್ಕಾರವು ಸ್ಥಳೀಯ ಚುನಾವಣೆಯಲ್ಲಿ ಒಬಿಸಿ ಮೀಸಲಾತಿಗೆ ಸುಪ್ರೀಂ ಕೋರ್ಟ್ ಅನುಮತಿ ಪಡೆದುಕೊಂಡಿದ್ದು ಹೇಗೆ? ಈ ಕುರಿತು ನವದೆಹಲಿಯಲ್ಲಿ ಮಧ್ಯಪ್ರದೇಶದ ಸಿಎಂರವರನ್ನು ಸಂಪರ್ಕಿಸಿದೆವು, ಆದರೆ ಅವರು ಸಿಗಲಿಲ್ಲ” ಎಂದು ಪಕ್ಷದ ಸಭೆಯಲ್ಲಿ ಮಾತನಾಡಿದ್ದರು.

ಮಧ್ಯಪ್ರದೇಶದ ಮುಖ್ಯಮಂತ್ರಿ ದೆಹಲಿಗೆ ಬಂದರು ಮತ್ತು ಕೆಲವರನ್ನು ಭೇಟಿಯಾದರು. ಅದಾದ ಎರಡೇ ದಿನದಲ್ಲಿ ಅವರು ಸ್ಥಳೀಯ ಚುನಾವಣೆಗೆ ಒಬಿಸಿ ಮೀಸಲಾತಿ ಪಡೆದುಕೊಂಡರು. ಇದು ಹೇಗೆಂದು ನನಗೆ ತಿಳಿಯಲಿಲ್ಲ ಎಂದು ಸುಪ್ರಿಯಾ ಸುಳೆ ಹೇಳಿದ್ದರು.

ಸುಪ್ರಿಯಾ ಸುಳೆ ವಿರುದ್ಧ ಅವಹೇಳನಕಾರಿ, ಮಹಿಳಾ ವಿರೋಧಿ ಹೇಳಿಕೆ ನೀಡಿರುವ ಬಿಜೆಪಿ ಮುಖ್ಯಸ್ಥನ ವಿರುದ್ಧ ಎನ್‌ಸಿಪಿ ಮುಗಿಬಿದ್ದಿದೆ. ಮೊದಲು ನೀವು ಚಪಾಟಿ ಲಟ್ಟಿಸುವುದನ್ನು ಕಲಿಯಿರಿ ಮತ್ತು ನಿಮ್ಮ ಪತ್ನಿಗೆ ಅಡುಗೆ ಮಾಡಲು ಸಹಾಯ ಮಾಡಿ ಎಂದು ತಿರುಗೇಟು ನೀಡಿದೆ.

“ಅವರು ಹಾಗೆ ಮಾತನಾಡಬಾರದಿತ್ತು. ನನ್ನ ಸಹೋದರಿಯ ವಿರುದ್ಧ ಆ ರೀತಿ ಕೆಟ್ಟದಾಗಿ ಮಾತನಾಡುವ ಹಕ್ಕು ಅವರಿಗಿಲ್ಲ” ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.

ಬಿಜೆಪಿಯು ಸ್ತ್ರೀದ್ವೇಷಿ ಪಕ್ಷ ಎಂದು ಸುಪ್ರಿಯಾ ಸುಳೆ ಪತಿ ಸದಾನಂದ್ ಸುಳೆ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಗೃಹಿಣಿ, ತಾಯಿ ಮತ್ತು ಯಶಸ್ವಿ ರಾಜಕಾರಣಿಯಾಗಿರುವ, ಭಾರತದ ಇತರ ಅನೇಕ ಕಠಿಣ ಪರಿಶ್ರಮಿ ಮತ್ತು ಪ್ರತಿಭಾವಂತ ಮಹಿಳೆಯರಲ್ಲಿ ಒಬ್ಬರಾಗಿರುವ ನನ್ನ ಹೆಂಡತಿಯ ಬಗ್ಗೆ ನನಗೆ ಹೆಮ್ಮೆ ಇದೆ… ಆದರೆ ಬಿಜೆಪಿಯು ಸ್ತ್ರೀದ್ವೇಷಿ ಪಕ್ಷವಾಗಿದ್ದು, ಯಾವಾಗಲೂ ಮಹಿಳೆಯನ್ನು ಹೀಯಾಳಿಸುತ್ತದೆ. ಇದು ಎಲ್ಲಾ ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶ್ರದ್ಧಾಂಜಲಿ; ದೊರೆಸ್ವಾಮಿ ಎಂಬ ಅತಿ ಸಾಮಾನ್ಯ ಮಹಾನ್ ವ್ಯಕ್ತಿ

ಭಾರತದಲ್ಲಿ ಸರಿ ಸುಮಾರು 50% ನಷ್ಟು ಮಹಿಳೆಯರಿದ್ದಾರೆ. ಅವರು ಎಲ್ಲಾ ಕ್ಷೇತ್ರಗಳಲ್ಲಿಯೂ ಉತ್ತಮ ಸಾಧನೆ ಮಾಡಿದ್ದಾರೆ. ಸಂಸಾರದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಅದರೆ ಮೇಲಿನ ಬಿಜೆಪಿ ಮುಖಂಡನ ಹೇಳಿಕೆ ಮಹಿಳೆಯರನ್ನು ಸಾಮರ್ಥ್ಯವಿಲ್ಲದವರು ಎಂಬ ಪುರಷಾಧಿಪತ್ಯದ ಮನಸ್ಥಿತಿಯಿಂದ ಕೂಡಿದೆ ಎಂಬ ಟೀಕೆಗಳು ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...