Homeಮುಖಪುಟನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

- Advertisement -
- Advertisement -

ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ, ಶಿಕ್ಷಣ ಸಚಿವರು ಮಾತನಾಡುವ ಬರದಲ್ಲಿ ಹೇಳಿರಬಹುದು. ನಾನು ಐಐಟಿ ಮತ್ತು ಸಿಇಟಿ ಪ್ರವೇಶ ಪರೀಕ್ಷೆಗಳಿಗೆ ತಯಾರು ಮಾಡಿದ್ದೇನೆ. ನಾನು ಐಐಟಿ ಹಾಗೂ ಸಿಇಟಿ ಪ್ರೊಫೆಸರ್ ಎಂಬುದನ್ನು ನಿರಾಕರಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಖಾಸಗಿ ಸುದ್ದಿವಾಹಿನಿ ಟಿವಿ9 ಜೊತೆ ಮಾತನಾಡಿರುವ ಅವರು, “ನಾನು ಕೇವಲ ಅಧ್ಯಕ್ಷ ಸ್ಥಾನದಲ್ಲಿ ಕುಳಿತಿರುತ್ತೇನೆ. ನಮ್ಮ ಕೈ ಕೆಳಗೆ ವಿಷಯ ತಜ್ಞರು ಇರುತ್ತಾರೆ. ಅವರು ನೀಡುವ ಶಿಫಾರಸ್ಸುಗಳನ್ನು ನಾನು ಪರಿಷ್ಕರಣೆ ಮಾಡಿದ್ದೇನೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಕೂಡ ಆಗಿರುವುದರಿಂದ ನನಗೆ ಆ ಅಧಿಕಾರವಿದೆ. ನಾನು ಐದು ವರ್ಷದದಲ್ಲಿ ನಿರಂತರವಾಗಿ ಪಠ್ಯಪುಸ್ತಕಗಳ ಬಗ್ಗೆ ಮಾತನಾಡುತ್ತೇನೆ. ಈ ಪ್ರಕ್ರಿಯೆ ನೋಡಿ ನನ್ನನ್ನು ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರಾಗಿ ಮಾಡಿರಬಹುದು” ಎಂದಿದ್ದಾರೆ.

ಪಠ್ಯ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಲು ರೋಹಿತ್ ಚಕ್ರತೀರ್ಥರಿಗಿರುವ ಅರ್ಹತೆಯೇನು ಎಂಬ ಪ್ರಶ್ನೆಗೆ ಶಿಕ್ಷಣ ಸಚಿವ ನಾಗೇಶ್‌ರವರು “ಶಿಕ್ಷಣ ತಜ್ಞ ಎನ್ನುವುದಕ್ಕೆ ಎಲ್ಲಿಯಾದರೂ ಪ್ರಮಾಣ ಪತ್ರ ಇದೆಯಾ? ರೋಹಿತ್ ಚಕ್ರತೀರ್ಥ ಅವರ ಹಿನ್ನೆಲೆಯನ್ನು ಪ್ರಶ್ನೆ ಮಾಡುತ್ತಿರುವವರು ಅವರ ಹಿನ್ನೆಲೆ ಹೇಳಲಿ ನೋಡೋಣ. ಚಕ್ರತೀರ್ಥ ಈ ಹಿಂದೆ ಐಐಟಿ ಮತ್ತು ಸಿಇಟಿ ಪ್ರೊಫೆಸರ್ ಎಂಬುದನ್ನು ಮರೆಯಬಾರದು” ಎಂದು ರೋಹಿತ್‌ ಚಕ್ರತೀರ್ಥ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು.

ರೋಹಿತ್ ಚಕ್ರತೀರ್ಥರವರ ಅರ್ಹತೆ ಬಗ್ಗೆ ವಿವಾದ ಎದ್ದಿರುವ ಹಿನ್ನೆಲೆಯಲ್ಲಿ ಅವರು ತಮ್ಮ ವಿದ್ಯಾರ್ಹತೆಯ ಕುರಿತು ಟಿಪ್ಪಣಿಯೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ, “ಬೇಸ್, ಟೈಮ್ ಮೊದಲಾದ ಸಂಸ್ಥೆಗಳಲ್ಲಿ ಐಐಟಿ, ಜೆಇಇ, ಎನ್‌ಟಿಎಸ್‌ಸಿ, ಸಿಎಟಿ, ಸಿಇಟಿ ಮತ್ತು ಒಲಂಪಿಯಾಡ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಿದ್ದಾರೆ. ವಿದ್ಯವರ್ಧಕ ಕಾಲೇಜು, ಕೆಎಲ್‌ಇ ಮತ್ತು ಜೈನ್ ಕಾಲೇಜುಗಳಲ್ಲಿ ಗಣಿತ ಬೋಧಿಸಿದ್ದಾರೆ” ಎಂದು ಬರೆಯಲಾಗಿದೆ.

ಅದರ ಪೂರ್ಣ ಪಠ್ಯ ಇಲ್ಲಿದೆ.

ರಾಷ್ಟ್ರಗೀತೆ, ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನ ಮಾಡಿಲ್ಲ

ರಾಷ್ಟ್ರಗೀತೆಗೆ ಅವಮಾನ ಆಗಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಅದು ಹಳೆಯ ವಿವಾದ ಮತ್ತು ಮುಗಿದ ವಿವಾದ. ಅದು ನನ್ನ ಬರಹವಲ್ಲ. ಯಾರೊ ಬರೆದಿದ್ದನ್ನು ಫೇಸ್‌ಬುಕ್‌ಗೆ ಹಾಕಿದ್ದೆ. ನಾನು ಮಾಡಿದ ತಪ್ಪಿಗೆ ಸಮರ್ಥನೆ ಮಾಡಿಕೊಂಡಿಲ್ಲ. ತಪ್ಪಾಗಿರಬಹುದು. ಕುವೆಂಪುರವರಿಗೆ ಅವಮಾನ ಮಾಡುವ ಉದ್ದೇಶ ನನಗಿಲ್ಲ ಎಂದು ರೋಹಿತ್ ಚಕ್ರತೀರ್ಥ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾರೋ ಬರೆದಿದ್ದನ್ನು ಪೇಸ್ಬುಕ್ಕಿಗೆ ಹಾಕಿರುವುದಾಗಿ ತಿಳಿಸಿದ್ದಾರೆ. ಅವರು ಯಾರು ಎಂಬುದು ರೋಹಿತ್ ಚಕ್ರವರ‍್ತಿಗೆ ತಿಳಿದಿರುತ್ತದೆ. ಅದನ್ನು ಬಯಲುಮಾಡಲಿ.

  2. ಅಷ್ಟೊಂದು ಓದುಬರಹ ಬಲ್ಲವರು ಮೊತ್ತಬರು ಹಾಕಿದ ಪೋಸ್ಟ್ ನ್ನು ಓದದೇ ಹಾಕುತ್ತಾರಾ ಅಥವಾ ಅದು ಯಾರೂ ಹಾಕಿದ್ದು ಅಂತ ಗೊತ್ತಿರುತ್ತೆ ಅವರ ವಿವರ ನೀಡಲಿ ಬೇಡ ಅನ್ನುವರಾರು ಚಕ್ರವರ್ತಿಗಳೆ 🙏

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...