Homeಮುಖಪುಟನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

- Advertisement -
- Advertisement -

ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ, ಶಿಕ್ಷಣ ಸಚಿವರು ಮಾತನಾಡುವ ಬರದಲ್ಲಿ ಹೇಳಿರಬಹುದು. ನಾನು ಐಐಟಿ ಮತ್ತು ಸಿಇಟಿ ಪ್ರವೇಶ ಪರೀಕ್ಷೆಗಳಿಗೆ ತಯಾರು ಮಾಡಿದ್ದೇನೆ. ನಾನು ಐಐಟಿ ಹಾಗೂ ಸಿಇಟಿ ಪ್ರೊಫೆಸರ್ ಎಂಬುದನ್ನು ನಿರಾಕರಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಖಾಸಗಿ ಸುದ್ದಿವಾಹಿನಿ ಟಿವಿ9 ಜೊತೆ ಮಾತನಾಡಿರುವ ಅವರು, “ನಾನು ಕೇವಲ ಅಧ್ಯಕ್ಷ ಸ್ಥಾನದಲ್ಲಿ ಕುಳಿತಿರುತ್ತೇನೆ. ನಮ್ಮ ಕೈ ಕೆಳಗೆ ವಿಷಯ ತಜ್ಞರು ಇರುತ್ತಾರೆ. ಅವರು ನೀಡುವ ಶಿಫಾರಸ್ಸುಗಳನ್ನು ನಾನು ಪರಿಷ್ಕರಣೆ ಮಾಡಿದ್ದೇನೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಕೂಡ ಆಗಿರುವುದರಿಂದ ನನಗೆ ಆ ಅಧಿಕಾರವಿದೆ. ನಾನು ಐದು ವರ್ಷದದಲ್ಲಿ ನಿರಂತರವಾಗಿ ಪಠ್ಯಪುಸ್ತಕಗಳ ಬಗ್ಗೆ ಮಾತನಾಡುತ್ತೇನೆ. ಈ ಪ್ರಕ್ರಿಯೆ ನೋಡಿ ನನ್ನನ್ನು ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರಾಗಿ ಮಾಡಿರಬಹುದು” ಎಂದಿದ್ದಾರೆ.

ಪಠ್ಯ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಲು ರೋಹಿತ್ ಚಕ್ರತೀರ್ಥರಿಗಿರುವ ಅರ್ಹತೆಯೇನು ಎಂಬ ಪ್ರಶ್ನೆಗೆ ಶಿಕ್ಷಣ ಸಚಿವ ನಾಗೇಶ್‌ರವರು “ಶಿಕ್ಷಣ ತಜ್ಞ ಎನ್ನುವುದಕ್ಕೆ ಎಲ್ಲಿಯಾದರೂ ಪ್ರಮಾಣ ಪತ್ರ ಇದೆಯಾ? ರೋಹಿತ್ ಚಕ್ರತೀರ್ಥ ಅವರ ಹಿನ್ನೆಲೆಯನ್ನು ಪ್ರಶ್ನೆ ಮಾಡುತ್ತಿರುವವರು ಅವರ ಹಿನ್ನೆಲೆ ಹೇಳಲಿ ನೋಡೋಣ. ಚಕ್ರತೀರ್ಥ ಈ ಹಿಂದೆ ಐಐಟಿ ಮತ್ತು ಸಿಇಟಿ ಪ್ರೊಫೆಸರ್ ಎಂಬುದನ್ನು ಮರೆಯಬಾರದು” ಎಂದು ರೋಹಿತ್‌ ಚಕ್ರತೀರ್ಥ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು.

ರೋಹಿತ್ ಚಕ್ರತೀರ್ಥರವರ ಅರ್ಹತೆ ಬಗ್ಗೆ ವಿವಾದ ಎದ್ದಿರುವ ಹಿನ್ನೆಲೆಯಲ್ಲಿ ಅವರು ತಮ್ಮ ವಿದ್ಯಾರ್ಹತೆಯ ಕುರಿತು ಟಿಪ್ಪಣಿಯೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ, “ಬೇಸ್, ಟೈಮ್ ಮೊದಲಾದ ಸಂಸ್ಥೆಗಳಲ್ಲಿ ಐಐಟಿ, ಜೆಇಇ, ಎನ್‌ಟಿಎಸ್‌ಸಿ, ಸಿಎಟಿ, ಸಿಇಟಿ ಮತ್ತು ಒಲಂಪಿಯಾಡ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಿದ್ದಾರೆ. ವಿದ್ಯವರ್ಧಕ ಕಾಲೇಜು, ಕೆಎಲ್‌ಇ ಮತ್ತು ಜೈನ್ ಕಾಲೇಜುಗಳಲ್ಲಿ ಗಣಿತ ಬೋಧಿಸಿದ್ದಾರೆ” ಎಂದು ಬರೆಯಲಾಗಿದೆ.

ಅದರ ಪೂರ್ಣ ಪಠ್ಯ ಇಲ್ಲಿದೆ.

ರಾಷ್ಟ್ರಗೀತೆ, ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನ ಮಾಡಿಲ್ಲ

ರಾಷ್ಟ್ರಗೀತೆಗೆ ಅವಮಾನ ಆಗಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಅದು ಹಳೆಯ ವಿವಾದ ಮತ್ತು ಮುಗಿದ ವಿವಾದ. ಅದು ನನ್ನ ಬರಹವಲ್ಲ. ಯಾರೊ ಬರೆದಿದ್ದನ್ನು ಫೇಸ್‌ಬುಕ್‌ಗೆ ಹಾಕಿದ್ದೆ. ನಾನು ಮಾಡಿದ ತಪ್ಪಿಗೆ ಸಮರ್ಥನೆ ಮಾಡಿಕೊಂಡಿಲ್ಲ. ತಪ್ಪಾಗಿರಬಹುದು. ಕುವೆಂಪುರವರಿಗೆ ಅವಮಾನ ಮಾಡುವ ಉದ್ದೇಶ ನನಗಿಲ್ಲ ಎಂದು ರೋಹಿತ್ ಚಕ್ರತೀರ್ಥ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾರೋ ಬರೆದಿದ್ದನ್ನು ಪೇಸ್ಬುಕ್ಕಿಗೆ ಹಾಕಿರುವುದಾಗಿ ತಿಳಿಸಿದ್ದಾರೆ. ಅವರು ಯಾರು ಎಂಬುದು ರೋಹಿತ್ ಚಕ್ರವರ‍್ತಿಗೆ ತಿಳಿದಿರುತ್ತದೆ. ಅದನ್ನು ಬಯಲುಮಾಡಲಿ.

  2. ಅಷ್ಟೊಂದು ಓದುಬರಹ ಬಲ್ಲವರು ಮೊತ್ತಬರು ಹಾಕಿದ ಪೋಸ್ಟ್ ನ್ನು ಓದದೇ ಹಾಕುತ್ತಾರಾ ಅಥವಾ ಅದು ಯಾರೂ ಹಾಕಿದ್ದು ಅಂತ ಗೊತ್ತಿರುತ್ತೆ ಅವರ ವಿವರ ನೀಡಲಿ ಬೇಡ ಅನ್ನುವರಾರು ಚಕ್ರವರ್ತಿಗಳೆ 🙏

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...