Homeಮುಖಪುಟನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

- Advertisement -
- Advertisement -

ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ, ಶಿಕ್ಷಣ ಸಚಿವರು ಮಾತನಾಡುವ ಬರದಲ್ಲಿ ಹೇಳಿರಬಹುದು. ನಾನು ಐಐಟಿ ಮತ್ತು ಸಿಇಟಿ ಪ್ರವೇಶ ಪರೀಕ್ಷೆಗಳಿಗೆ ತಯಾರು ಮಾಡಿದ್ದೇನೆ. ನಾನು ಐಐಟಿ ಹಾಗೂ ಸಿಇಟಿ ಪ್ರೊಫೆಸರ್ ಎಂಬುದನ್ನು ನಿರಾಕರಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಖಾಸಗಿ ಸುದ್ದಿವಾಹಿನಿ ಟಿವಿ9 ಜೊತೆ ಮಾತನಾಡಿರುವ ಅವರು, “ನಾನು ಕೇವಲ ಅಧ್ಯಕ್ಷ ಸ್ಥಾನದಲ್ಲಿ ಕುಳಿತಿರುತ್ತೇನೆ. ನಮ್ಮ ಕೈ ಕೆಳಗೆ ವಿಷಯ ತಜ್ಞರು ಇರುತ್ತಾರೆ. ಅವರು ನೀಡುವ ಶಿಫಾರಸ್ಸುಗಳನ್ನು ನಾನು ಪರಿಷ್ಕರಣೆ ಮಾಡಿದ್ದೇನೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಕೂಡ ಆಗಿರುವುದರಿಂದ ನನಗೆ ಆ ಅಧಿಕಾರವಿದೆ. ನಾನು ಐದು ವರ್ಷದದಲ್ಲಿ ನಿರಂತರವಾಗಿ ಪಠ್ಯಪುಸ್ತಕಗಳ ಬಗ್ಗೆ ಮಾತನಾಡುತ್ತೇನೆ. ಈ ಪ್ರಕ್ರಿಯೆ ನೋಡಿ ನನ್ನನ್ನು ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರಾಗಿ ಮಾಡಿರಬಹುದು” ಎಂದಿದ್ದಾರೆ.

ಪಠ್ಯ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಲು ರೋಹಿತ್ ಚಕ್ರತೀರ್ಥರಿಗಿರುವ ಅರ್ಹತೆಯೇನು ಎಂಬ ಪ್ರಶ್ನೆಗೆ ಶಿಕ್ಷಣ ಸಚಿವ ನಾಗೇಶ್‌ರವರು “ಶಿಕ್ಷಣ ತಜ್ಞ ಎನ್ನುವುದಕ್ಕೆ ಎಲ್ಲಿಯಾದರೂ ಪ್ರಮಾಣ ಪತ್ರ ಇದೆಯಾ? ರೋಹಿತ್ ಚಕ್ರತೀರ್ಥ ಅವರ ಹಿನ್ನೆಲೆಯನ್ನು ಪ್ರಶ್ನೆ ಮಾಡುತ್ತಿರುವವರು ಅವರ ಹಿನ್ನೆಲೆ ಹೇಳಲಿ ನೋಡೋಣ. ಚಕ್ರತೀರ್ಥ ಈ ಹಿಂದೆ ಐಐಟಿ ಮತ್ತು ಸಿಇಟಿ ಪ್ರೊಫೆಸರ್ ಎಂಬುದನ್ನು ಮರೆಯಬಾರದು” ಎಂದು ರೋಹಿತ್‌ ಚಕ್ರತೀರ್ಥ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು.

ರೋಹಿತ್ ಚಕ್ರತೀರ್ಥರವರ ಅರ್ಹತೆ ಬಗ್ಗೆ ವಿವಾದ ಎದ್ದಿರುವ ಹಿನ್ನೆಲೆಯಲ್ಲಿ ಅವರು ತಮ್ಮ ವಿದ್ಯಾರ್ಹತೆಯ ಕುರಿತು ಟಿಪ್ಪಣಿಯೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ, “ಬೇಸ್, ಟೈಮ್ ಮೊದಲಾದ ಸಂಸ್ಥೆಗಳಲ್ಲಿ ಐಐಟಿ, ಜೆಇಇ, ಎನ್‌ಟಿಎಸ್‌ಸಿ, ಸಿಎಟಿ, ಸಿಇಟಿ ಮತ್ತು ಒಲಂಪಿಯಾಡ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಿದ್ದಾರೆ. ವಿದ್ಯವರ್ಧಕ ಕಾಲೇಜು, ಕೆಎಲ್‌ಇ ಮತ್ತು ಜೈನ್ ಕಾಲೇಜುಗಳಲ್ಲಿ ಗಣಿತ ಬೋಧಿಸಿದ್ದಾರೆ” ಎಂದು ಬರೆಯಲಾಗಿದೆ.

ಅದರ ಪೂರ್ಣ ಪಠ್ಯ ಇಲ್ಲಿದೆ.

ರಾಷ್ಟ್ರಗೀತೆ, ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನ ಮಾಡಿಲ್ಲ

ರಾಷ್ಟ್ರಗೀತೆಗೆ ಅವಮಾನ ಆಗಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಅದು ಹಳೆಯ ವಿವಾದ ಮತ್ತು ಮುಗಿದ ವಿವಾದ. ಅದು ನನ್ನ ಬರಹವಲ್ಲ. ಯಾರೊ ಬರೆದಿದ್ದನ್ನು ಫೇಸ್‌ಬುಕ್‌ಗೆ ಹಾಕಿದ್ದೆ. ನಾನು ಮಾಡಿದ ತಪ್ಪಿಗೆ ಸಮರ್ಥನೆ ಮಾಡಿಕೊಂಡಿಲ್ಲ. ತಪ್ಪಾಗಿರಬಹುದು. ಕುವೆಂಪುರವರಿಗೆ ಅವಮಾನ ಮಾಡುವ ಉದ್ದೇಶ ನನಗಿಲ್ಲ ಎಂದು ರೋಹಿತ್ ಚಕ್ರತೀರ್ಥ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾರೋ ಬರೆದಿದ್ದನ್ನು ಪೇಸ್ಬುಕ್ಕಿಗೆ ಹಾಕಿರುವುದಾಗಿ ತಿಳಿಸಿದ್ದಾರೆ. ಅವರು ಯಾರು ಎಂಬುದು ರೋಹಿತ್ ಚಕ್ರವರ‍್ತಿಗೆ ತಿಳಿದಿರುತ್ತದೆ. ಅದನ್ನು ಬಯಲುಮಾಡಲಿ.

  2. ಅಷ್ಟೊಂದು ಓದುಬರಹ ಬಲ್ಲವರು ಮೊತ್ತಬರು ಹಾಕಿದ ಪೋಸ್ಟ್ ನ್ನು ಓದದೇ ಹಾಕುತ್ತಾರಾ ಅಥವಾ ಅದು ಯಾರೂ ಹಾಕಿದ್ದು ಅಂತ ಗೊತ್ತಿರುತ್ತೆ ಅವರ ವಿವರ ನೀಡಲಿ ಬೇಡ ಅನ್ನುವರಾರು ಚಕ್ರವರ್ತಿಗಳೆ 🙏

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...