Homeಕರ್ನಾಟಕಮುಸ್ಲಿಂ ವಿದ್ಯಾರ್ಥಿಗೆ ಕಿರುಕುಳ: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಿಂದ ಎಬಿವಿಪಿ ಕಾರ್ಯಕರ್ತ ಅಮಾನತು

ಮುಸ್ಲಿಂ ವಿದ್ಯಾರ್ಥಿಗೆ ಕಿರುಕುಳ: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಿಂದ ಎಬಿವಿಪಿ ಕಾರ್ಯಕರ್ತ ಅಮಾನತು

- Advertisement -
- Advertisement -

ಮುಸ್ಲಿಂ ವಿದ್ಯಾರ್ಥಿಯೊಬ್ಬರಿಗೆ ಮೌಖಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಬೆಂಬಲಿತ ಸಂಘಟನೆಯಾದ ಎಬಿವಿಪಿ ಕಾರ್ಯಕರ್ತನನ್ನು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯವು ಅಮಾನತುಗೊಳಿಸಿದೆ ಎಂದು ‘ಮಕ್ತೂಬ್‌ ಮೀಡಿಯಾ’ ಸುದ್ದಿ ಮಾಡಿದೆ.

ಆರೋಪಿಯನ್ನು ರಿಷಿ ತಿವಾರಿ ಎಂದು ಗುರುತಿಸಲಾಗಿದ್ದು, ವಿಶ್ವವಿದ್ಯಾಲಯದಲ್ಲಿ ಎಂಎ ಡೆವಲಪ್‌ಮೆಂಟ್‌ನ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಯಾಗಿದ್ದಾನೆ. ಆರೋಪಿಯ ವಿರುದ್ಧ ಮುಸ್ಲಿಂ ವಿದ್ಯಾರ್ಥಿಯೊಬ್ಬರು ದ್ವೇಷ ಕಾರುವ ಮಾತುಗಳನ್ನು ಆಡಿದ್ದಾಗಿ ದೂರು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಿಷಿ ತಿವಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ತಿವಾರಿ ಬಿಜೆಪಿ ಬೆಂಬಲಿತ ಸಂಘಟನೆಯಾದ ಎಬಿವಿಪಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ‘ಮಕ್ತೂಬ್‌’ ವಿದ್ಯಾರ್ಥಿಗಳ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ಇದನ್ನೂ ಓದಿ: ಮುಸ್ಲಿಂ ಉದ್ಯಮಿ, ಲುಲು ಮುಖ್ಯಸ್ಥ ಯೂಸುಫ್ ಅಲಿ ಹೆಸರಿಸದ ಸಿಎಂ ಬೊಮ್ಮಾಯಿ!; ಸಂಘಪರಿವಾರದ ಭಯವೇ ಎಂದ ನೆಟ್ಟಿಗರು

ಘಟನೆಯು ಮೇ 1 ರಂದು ನಡೆದಿದ್ದು, ಮುಸ್ಲಿಂ ವಿದ್ಯಾರ್ಥಿ ಕೆಜಿಎ ಹಾಸ್ಟೆಲ್ ಬಳಿ ತನ್ನ ಉಪವಾಸ ತೊರೆಯಲು ತೆರಳಿದ್ದಾಗ ರಿಷಿ ತಿವಾರಿ ಅವರನ್ನು ನಿಂದಿಸಲು ಪ್ರಾರಂಭಿಸಿದ್ದನು. ಅಲ್ಲದೆ, ಅವರ ಮೇಲೆ ಆಹಾರವನ್ನು ಎಸೆದು, ಮುಖದ ಮೇಲೆ ಉಗುಳಿದ್ದನು.

ರಿಷಿ ತಿವಾರಿನ್ನು ಅಮಾನತು ಮಾಡಿದರೆ ಸಾಕಾಗುವುದಿಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದು, “ಇದು ದ್ವೇಷಾಪರಾಧವಾಗಿದ್ದು ಅತ್ಯಂತ ಗಂಭೀರ ರೀತಿಯಲ್ಲಿ ಪರಿಗಣಿಸಿ ಆರೋಪಿಯನ್ನು ಶಿಕ್ಷೆಗೆ ಒಳಪಡಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆರೋಪಿಯ ವಿರುದ್ಧ ‘ಗಂಭೀರ ದಂಡನಾತ್ಮಕ ಕ್ರಮ’ ತೆಗೆದುಕೊಳ್ಳಲಾಗಿದೆ ಎಂದು ವಿಶ್ವವಿದ್ಯಾನಿಲಯ ನಮಗೆ ತಿಳಿಸಿದೆ. ಆದರೆ ವಿದ್ಯಾರ್ಥಿ ಸಂಘಟನೆಯಾಗಿ ಇದನ್ನು ನಾವು ಒಪ್ಪುವುದಿಲ್ಲ” ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಎಂದು ಶಂಕಿಸಿ ಹಲ್ಲೆಗೊಳಗಾದ ವ್ಯಕ್ತಿ ಶವವಾಗಿ ಪತ್ತೆ; ಬಿಜೆಪಿಯ ಮಾಜಿ ಕಾರ್ಪೋರೇಟ್‌ ಪತಿ ಆರೋಪಿ

“ಆರೋಪಿಯನ್ನು ವಿಶ್ವವಿದ್ಯಾಲಯದಿಂದ ಹೊರಹಾಕಬೇಕು ಅಥವಾ ಕನಿಷ್ಠ ಒಂದು ವರ್ಷದ ಪೂರ್ಣ ಅಮಾನತು ಮಾಡಬೇಕು” ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ತಿವಾರಿಯ ಕೃತ್ಯವನ್ನು ‘ಇಸ್ಲಾಮೋಫೋಬಿಕ್’ ಎಂದು ವಿದ್ಯಾರ್ಥಿಗಳು ಕರೆದಿದ್ದಾರೆ.

“ನಾವು ವಿಶ್ವವಿದ್ಯಾನಿಲಯಕ್ಕೆ ಸೇರುವ ಮೊದಲು ರ್‍ಯಾಗಿಂಗ್‌ ವಿರೋಧಿ ಅಫಿಡವಿಟ್‌ಗಳಿಗೆ ಸಹಿ ಮಾಡಿರುತ್ತೇವೆ. ಹೀಗಾಗಿ ತಿವಾರಿಯ ಈ ಕೃತ್ಯವನ್ನು ಆ್ಯಂಟಿ ರ್‍ಯಾಗಿಂಗ್‌ ಸೆಲ್ ರ್‍ಯಾಗಿಂಗ್‌ ಎಂದು ಪರಿಗಣಿಸಬೇಕು. ಅದರಂತೆ ಶಿಕ್ಷೆಗೆ ಒಳಪಡಿಸಬೇಕು” ಎಂದು ವಿದ್ಯಾರ್ಥಿಗಳು ಹೇಳಿಕೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...