Homeಮುಖಪುಟಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

ಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

- Advertisement -
- Advertisement -

ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯ ಪುನರ್ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ದಸಂಸ ಒಕ್ಕೂಟ (ದಲಿತ ಸಂಘರ್ಷ ಸಮತಿ/ಸಂಘಟನೆಗಳ ಜಂಟಿ ವೇದಿಕೆ) ವತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಶೂದ್ರ, ಹಿಂದುಳಿದ, ದಲಿತ-ದಮನಿತ, ಆದಿವಾಸಿ ಬುಡಕಟ್ಟು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿರೋಧಿಯಾದ, ಬ್ರಾಹ್ಮಣ್ಯ ತುಂಬಿಕೊಂಡಿರುವ ಪಠ್ಯ ಪರಿಷ್ಕರಣೆ ಮಾಡಿರುವ ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಬೇಕು, ಅಸಮರ್ಥ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ರೋಹಿತ್ ಚಕ್ರತೀರ್ಥ ಸಮಿತಿಯ 7 ಜನ ಸದಸ್ಯರು ಸಹ ಬ್ರಾಹ್ಮಣ ಸಮುದಾಯದವರಾಗಿದ್ದು, ಇತರ ಸಮುದಾಯದ ಒಬ್ಬರೂ ಸದಸ್ಯರಿರುವುದಿಲ್ಲ. ಮಹಿಳೆಯರು ಸಹ ಆ ಸಮಿತಿಯಲ್ಲಿಲ್ಲ. ರೋಹಿತ್ ಚಕ್ರತೀರ್ಥ ಎಂಬ RSS ಕಾರ್ಯಕರ್ತ ಹೊರತು ಶಿಕ್ಷಣ ತಜ್ಞನಲ್ಲ. ಆತನಿಗೆ ಪಠ್ಯ ಪರಿಷ್ಕರಿಸುವ ಯಾವದೇ ಅರ್ಹತೆಯಿಲ್ಲ. ಅದರ ಫಲವಾಗಿಯೇ ಪರಿಷ್ಕರಣೆಗೊಂಡಿರುವ ಪಠ್ಯಗಳು ಬ್ರಾಹ್ಮಣ್ಯದಿಂದ ತುಂಬಿವೆ. ದಲಿತ-ದಮನಿತ-ಮಹಿಳಾ ವಿರೋಧಿಯಾಗಿವೆ. ಹಾಗಾಗಿ ಕೂಡಲೇ ಆ ಸಮಿತಿಯನ್ನು ವಜಾಗೊಳಿಸಿ ಪಠ್ಯ ಪರಿಷ್ಕರಣೆ ನಿಲ್ಲಿಸಬೇಕೆಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಸಂಚಾಲಕರಾದ ಮಾವಳ್ಳಿ ಶಂಕರ್‌ರವರು ಮಾತನಾಡಿ, “ಮಾನವೀಯತೆ, ಶಾಂತಿ, ಪ್ರೀತಿ ಮತ್ತು ಮೈತ್ರಿ ಸಾರಿದ ಗೌತಮ ಬುದ್ದರವರ ಹೊಸ ಧರ್ಮಗಳ ಉದಯ ಪಠ್ಯವನ್ನು ಕೈಬಿಟ್ಟಿದ್ದಾರೆ. ಅಲ್ಲದೆ ಹಿರಿಯ ದಲಿತ ಸಾಹಿತಿ ಅರವಿಂದ ಮಾಲಗತ್ತಿಯವರ ಬುದ್ದರ ಕುರಿತು ಪದ್ಯ ಕೈಬಿಡಲಾಗಿದೆ. ದ್ವಿತೀಯ ಪಿ.ಯು.ಸಿ ಪಠ್ಯ ಸಹ ಕೈಡಲು ಮುಂದಾಗಿದ್ದಾರೆ. ಇದನ್ನು ನಾವು ಒಪ್ಪುವುದಿಲ್ಲ” ಎಂದರು.

“ಹೊಸದಾಗಿ ಸೇರಿಸಲಾದ 10 ಪಠ್ಯಗಳಲ್ಲಿ 09 ಪಠ್ಯಗಳು ಬ್ರಾಹ್ಮಣ ಲೇಖಕರದ್ದು. 06 ಪರಿಶಿಷ್ಟ ಹಾಗೂ ಹಿಂದುಳಿದ ವರ್ಗದ ಲೇಖಕರ ಪಠ್ಯ ಕೈಬಿಡಲಾಗಿದೆ. ನೂತನ ಪಠ್ಯದಲ್ಲಿ ಹೆಣ್ಣು ಮಕ್ಕಳನ್ನು ಕೀಳಾಗಿ ಕಾಣಲಾಗುತ್ತಿದೆ. ಅವರನ್ನು ಹಣಕ್ಕೆ ಹೋಲಿಸಿ, ಚಂಚಲೆ, ಒಬ್ಬರ ಬಳಿ ನಿಲ್ಲುವುದಿಲ್ಲ, ಎಲ್ಲರೂ ಆಕೆಯತ್ತ ಆಕರ್ಷಿತರಾದವರೆ. ಎಲ್ಲರೂ ಆಕೆಯಿಂದ ಮೋಸಹೋಗುವವರೇ. ಯಾವುದೇ ಒಬ್ಬನನ್ನು ನಿರ್ವಂಚನೆಯಿಂದ ಪ್ರೇಮಿಸುವುದು ಆಕೆಯ ಜಾಯಮಾನಕ್ಕೆ ಸಲ್ಲದು ಎಂಬು ಬಿಂಬಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿ.ನಾಗರಾಜುರವರು ಮಾತನಾಡಿ, “ಸ್ವಾಮಿ ವಿವೇಕಾನಂದರ ಪಠ್ಯ ತಿರುಚಲಾಗಿದೆ. ಜಾತೀಯತೆಯ ಅಪಾಯಗಳ ಬಗ್ಗೆ ಅವರು ಬರೆದಿದ್ದ ಪಠ್ಯವನ್ನು ಕೈಬಿಟ್ಟು ಆ ಜಾಗಕ್ಕೆ ಸಂಸ್ಕೃತಿ ವ್ಯಸನ ಹೇರುವ, ಸಂಸ್ಕೃತಿ ಇಲ್ಲದವರು ಕಾಡುಜನರು ಎಂಬ ಸಮಾಜ ವಿರೋಧಿ ಪಠ್ಯ ಸೇರಿಸಲಾಗಿದೆ. ಅಪ್ಪಟ ದೇಶಪ್ರೇಮಿ ಭಗತ್ ಸಿಂಗ್ರವರ ಪಠ್ಯ ಕೈಬಿಟ್ಟಿರುವುದು ಖಂಡನೀಯ” ಎಂದರು.

ಈ ದೇಶದಲ್ಲಿ ಜಾತಿಪದ್ದತಿ, ವರ್ಣಾಶ್ರಮವನ್ನು ಪ್ರೋತ್ಸಾಹಿಸುವ RSS ಸ್ಥಾಪಕ ಕೆ.ಬಿ ಹೆಡಗೇವಾರ್ ಪಠ್ಯ ಸೇರಿಸುವ ಮೂಲಕ ಮಕ್ಕಳಲ್ಲಿ ದ್ವೇಷ ಬಿತ್ತಲಾಗುತ್ತಿದೆ. ಜೀವನಪೂರ್ತಿ ಸುಳ್ಳು ಹೇಳಿಕೊಂಡು ತಿರುಗಿದ ಚಕ್ರವರ್ತಿ ಸೂಲಿಬೆಲೆ ಎಂಬ ಮಹಾನ್ ಸುಳ್ಳುಗಾರನ ಪಠ್ಯ ಸೇರಿಸುವುದರ ಅರ್ಥವೇನು? ಇದನ್ನು ಓದಿದರೆ ನಮ್ಮ ಮಕ್ಕಳ ಮನಸ್ಥಿತಿ ಏನಾಗುವುದು ಎಂದು ಪ್ರಶ್ನಿಸಿದರು.

ಮತ್ತೊಬ್ಬ ದಲಿತ ಹೋರಾಟಗಾರರಾದ ಲಕ್ಷ್ಮೀನಾರಾಯಣ ನಾಗವಾರರವರು ಮಾತನಾಡಿ, “ಕೂಡಲೇ ಈ ಬ್ರಾಹ್ಮಣಿಕೆಯ, ಬ್ರಾಹ್ಮಣರೇ ತುಂಬಿರುವ ಸಮಿತಿಯನ್ನು ವಜಾಗೊಳಿಸಬೇಕು. ಹಿಂದಿನ ಪಠ್ಯವನ್ನೇ ಬೋದಿಸಬೇಕು. ಅನರ್ಹ ರೋಹಿತ್ ಚಕ್ರತೀರ್ಥನನ್ನು ಐಐಟಿ-ಸಿಇಟಿ ಪ್ರೊಫೆಸರ್ ಎಂದು ಸುಳ್ಳು ಹೇಳಿಕೆ ನೀಡಿ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ, ಅಸಮರ್ಥ ಮತ್ತು ಹೊಣೆಗೇಡಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ರಾಜ್ಯದಲ್ಲಿ ಇಂತಹ ಸಂವಿಧಾನ ವಿರೋಧಿ ಕೃತ್ಯಗಳು ನಡೆಯುತ್ತಿದ್ದರೂ ಸಿಎಂ ಬೊಮ್ಮಾಯಿಯವರು ಮೌನ ವಹಿಸಿದ್ದಾರೆ. ಅವರು ಒಂದು ವಾರದೊಳಗೆ ಪಠ್ಯಕ್ರಮ ಪರಿಷ್ಕರಣೆ ಕೈಬಿಟ್ಟು, ಹಿಂದಿನ ಪಠ್ಯ ಬೋಧಿಸಲು ಆದೇಶಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...