Homeರಾಷ್ಟ್ರೀಯರಾಮನವಮಿ ಹಿಂಸಾಚಾರ ಪ್ರಕರಣ: ಖಡ್ಗ ಹಿಡಿದು ಮೆರವಣಿಗೆಗೆ ಬಂದಿದ್ದ ಆರೋಪಿಗೆ ಜಾಮೀನು ನಿರಾಕರಿಸಿದ ಗುಜರಾತ್ ಹೈಕೋರ್ಟ್

ರಾಮನವಮಿ ಹಿಂಸಾಚಾರ ಪ್ರಕರಣ: ಖಡ್ಗ ಹಿಡಿದು ಮೆರವಣಿಗೆಗೆ ಬಂದಿದ್ದ ಆರೋಪಿಗೆ ಜಾಮೀನು ನಿರಾಕರಿಸಿದ ಗುಜರಾತ್ ಹೈಕೋರ್ಟ್

- Advertisement -
- Advertisement -

ಎಪ್ರಿಲ್‌ 10 ರಂದು ಗುಜರಾತಿನ ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದಲ್ಲಿ ರಾಮ ನವಮಿಯಂದು ಭುಗಿಲೆದ್ದ ಹಿಂಸಾಚಾರದ ಆರೋಪಿಯ ಸಾಮಾನ್ಯ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಬುಧವಾರ ನಿರಾಕರಿಸಿದೆ. ಆರೋಪಿಯನ್ನು ಪ್ರಕಾಶ್ ಪಾಂಡ್ಯ(20) ಎಂದು ಗುರುತಿಸಲಾಗಿದ್ದು, ರಾಮನವಮಿಯ ‘ಶೋಭಾ ಯಾತ್ರೆ’ಯಲ್ಲಿ ಭಾಗವಹಿಸಿದ್ದನು.

ಈ ಮೆರವಣಿಗೆಯು ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಸಾಗಿದ್ದಾಗ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದಿತು. ಈ ಘಟನೆ ನಡೆದಾಗ ಪ್ರಕಾಶ್‌ ಪಾಂಡ್ಯ ಕೈಯ್ಯಲ್ಲಿ ತಲವಾರು ಹಿಡಿದ್ದನು ಎಂದು ಸಿಸಿಟಿವಿ ಫೂಟೇಜ್‌ನಲ್ಲಿ ಕಂಡುಬಂದಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೈಕೋರ್ಟ್‌ನಲ್ಲಿ ಆರೋಪಿಯ ವಕೀಲರು ಕೂಡಾ ಇದನ್ನು ಒಪ್ಪಿಕೊಂಡಿದ್ದಾರೆ. ಆದರೆ ವಕೀಲರು ಪ್ರಕಾಶ್‌ ಪಾಂಡ್ಯ ಆಯುಧವನ್ನು ಕೊಂಡೊಯ್ಯುವುದನ್ನು ಕೋರ್ಟ್‌ನಲ್ಲಿ ಸಮರ್ಥಿಸಿದ್ದಾರೆ. ಕೆಲವು ಹಬ್ಬಗಳ ಸಮಯದಲ್ಲಿ ಆಯುಧವನ್ನು ಕೊಂಡೊಯ್ಯುವುದು ಎಲ್ಲರಿಗೂ ತಿಳಿದಿರುವ ಆಚರಣೆಗೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲಧಾರಿಗಳೂ

“ರಾಮ ನವಮಿ ಮತ್ತು ಗುರುನಾನಕ್ ಜಯಂತಿಯಂತಹ ಸಂದರ್ಭಗಳ ಶೋಭಾ ಯಾತ್ರೆಯಲ್ಲಿ ಜನರು ಈ ಆಯುಧಗಳನ್ನು (ತಲವಾರುಗಳನ್ನು) ತಮ್ಮೊಂದಿಗೆ ತೆಗೆದುಕೊಂಡು ಹೋಗುತ್ತಾರೆ” ಎಂದು ಪ್ರಕಾಶ್‌ ಪಾಂಡ್ಯ ಅವರ ವಕೀಲರು ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಜ್ಯದ ಅಧಿಕಾರಿಗಳು ಕಾರ್ಯಕ್ರಮಕ್ಕೆ ಭದ್ರತೆಯನ್ನು ಒದಗಿಸದಿದ್ದರೂ ಪೊಲೀಸರ ಅನುಮತಿಯೊಂದಿಗೆ ಮೆರವಣಿಗೆಯನ್ನು ಮಾಡಲಾಗಿದೆ ಎಂದು ವಕೀಲರು ಹೇಳಿದ್ದಾರೆ.

ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿ ಸಮೀರ್ ದವೆ ಅವರ ಪೀಠವು ಈ ಹಂತದಲ್ಲಿ ಪ್ರಕಾಶ್‌ ಪಾಂಡ್ಯ ಅವರಿಗೆ ಸಾಮಾನ್ಯ ಜಾಮೀನು ನೀಡಲು ನಿರಾಕರಿಸಿತು. ಜೊತೆಗೆ ಪ್ರಕರಣದಲ್ಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ ನಂತರ ನ್ಯಾಯಾಲಯವನ್ನು ಸಂಪರ್ಕಿಸಲು ಸೂಚಿಸಿದೆ.

ಇದನ್ನೂ ಓದಿ: ದೆಹಲಿ ಹನುಮ ಜಯಂತಿ ಘರ್ಷಣೆ: ಎರಡೂ ಸಮುದಾಯಗಳ 23 ಆರೋಪಿಗಳ ಬಂಧನ

ರಾಮ ನವಮಿ ಹಿಂಸಾಚಾರ

ರಾಮನವಮಿಯಂದು ದೇಶಾದ್ಯಂತ ನಡೆದ ಹಲವು ಘಟನೆಗಳಲ್ಲಿ ಹಿಮ್ಮತ್‌ನಗರದ ಕೋಮು ಘರ್ಷಣೆಯೂ ಒಂದಾಗಿದೆ. ಈ ಸಮಯದಲ್ಲಿ ಗುಜರಾತ್‌ನಲ್ಲಿ ಎರಡು ಕೋಮು ಸಂಘರ್ಷ ಘಟನೆಗಳು ನಡೆದಿತ್ತು.

ಪೊಲೀಸರ ಪ್ರಕಾರ, ಕಾರುಗಳು ಮತ್ತು ಮೋಟಾರ್‌ಸೈಕಲ್‌ಗಳ ಮೆರವಣಿಗೆಯು ಹಿಮ್ಮತ್‌ನಗರದ ಛಪಾರಿಯಾ ಪ್ರದೇಶವನ್ನು ತಲುಪಿದ ನಂತರ ಹಿಂಸಾಚಾರವು ಪ್ರಾರಂಭವಾಯಿತು. ಇಲ್ಲಿ ಹೆಚ್ಚಾಗಿ ಅಲ್ಪಸಂಖ್ಯಾತ ಸಮುದಾಯಗಳ ಜನರು ವಾಸಿಸುತ್ತಾರೆ.

ಎರಡೂ ಕಡೆಯಿಂದ ಕಲ್ಲು ತೂರಾಟಗಳು ನಡೆದವು, ಇದನ್ನು ಅನುಸರಿಸಿ ಬೆಂಕಿ ಹಚ್ಚಲಾಗಿದ್ದು, ಪ್ರದೇಶದಲ್ಲಿ ಅಂಗಡಿಗಳು ಮತ್ತು ವಾಹನಗಳನ್ನು ಧ್ವಂಸಗೊಳಿಸಲಾಯಿತು. ಹಿಂಸಾಚಾರವು ಮಧ್ಯಾಹ್ನ 3 ಗಂಟೆಯವರೆಗೂ ಮುಂದುವರೆದಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ 

ಇದರ ನಂತರ, ಸಂಜೆ 4 ಗಂಟೆಗೆ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿ ಕಾರ್ಯಕರ್ತರು ಸ್ಥಳಕ್ಕೆ ಬಂದು ಅಲ್ಲಿಂದ ಮತ್ತೊಂದು ಮೆರವಣಿಗೆಯನ್ನು ಪ್ರಾರಂಭಿಸಿದ್ದರು ಎಂದು ವರದಿಯಾಗಿದೆ. ಇದು ಮತ್ತೊಂದು ಸುತ್ತಿನ ಕಲ್ಲು ತೂರಾಟ ಮತ್ತು ಗಲಭೆಗೆ ನಾಂದಿ ಹಾಡಿತು ಪೊಲೀಸರು ಹೇಳಿದ್ದಾರೆ.

ಎರಡನೇ ಮೆರವಣಿಗೆಗೆ ಭದ್ರತೆಯಿದ್ದರೂ, ಗಲಭೆಯಲ್ಲಿ ತಮ್ಮ 15 ಸದಸ್ಯರು ಗಾಯಗೊಂಡಿದ್ದಾರೆ ಎಂದು ವಿಎಚ್‌ಪಿಯ ಸದಸ್ಯರೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ತಮ್ಮ ನಾಲ್ವರು ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಈ ಘಟನೆಯ ನಂತರ, ಅಹಮದಾಬಾದ್ ಮೂಲದ ಹಕ್ಕುಗಳ ಸಂಘಟನೆಯಾದ ಅಲ್ಪಸಂಖ್ಯಾತ ಸಮನ್ವಯ ಸಮಿತಿಯು, ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಲು ಮತ್ತು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಯಾವುದೇ ವ್ಯಕ್ತಿಗಳನ್ನು ಬಂಧಿಸಲು ಪೊಲೀಸರಿಗೆ ಸ್ಪಷ್ಟವಾಗಿ ಕೇಳಿತ್ತು. ಈ ವೇಳ ಪ್ರಕಾಶ್ ಪಾಂಡ್ಯ ತಲವಾರು ಹಿಡಿದಿರುವುದು ಕಂಡು ಬಂದಿದ್ದು, ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಜನರನ್ನು ಬಂಧಿಸಿದ್ದು, 40 ಆರೋಪಿಗಳನ್ನು ಹೆಸರಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...