Homeಕರ್ನಾಟಕರಾಮನಗರ- SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ, ಶಿಕ್ಷಕ ಸೇರಿದಂತೆ 11 ಮಂದಿ ಬಂಧನ

ರಾಮನಗರ- SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ, ಶಿಕ್ಷಕ ಸೇರಿದಂತೆ 11 ಮಂದಿ ಬಂಧನ

- Advertisement -
- Advertisement -

ರಾಜ್ಯದಲ್ಲಿ ಕಳೆದ ಮಾರ್ಚ್‌ ಮತ್ತು ಏಪ್ರೀಲ್ ತಿಂಗಳಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪರೀಕ್ಷೆಯ ಫಲಿತಾಂಶಗಳು ಇತ್ತೀಚೆಗಷ್ಟೆ ಹೊರಬಿದ್ದಿವೆ. ಈ ನಡುವೆ ಪ್ರಶ್ನಾ ಪತ್ರಿಕೆಗಳು ಸೋರಿಕೆಯಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧ ರಾಮನಗರ ಜಿಲ್ಲೆಯಲ್ಲಿ ಒಟ್ಟು 11 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದ ಮಾಗಡಿ ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕರು, ಸಿಬ್ಬಂದಿ ಮತ್ತು ಪತ್ರಕರ್ತರು ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಿಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮ ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು. ಇದೀಗ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಬಹಿರಂಗಗೊಂಡಿದೆ ಎಂದು ಈದಿನ.ಕಾಂ ವರದಿ ಮಾಡಿದೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಹತ್ತನೇ ತರಗತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಗುಮಾಸ್ತ ರಂಗೇಗೌಡ ಎಂಬ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರಿಗೆ ವಿಚಾರಣೆ ವೇಳೆ ರಂಗೇಗೌಡ ನೀಡಿದ ಮಾಹಿತಿ ಆಧಾರದಲ್ಲಿ ಹತ್ತು ಮಂದಿಯನ್ನು ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸಿಸಿಟಿವಿ ದೃಶ್ಯಾವಳಿಗನ್ನು ಪೊಲೀಸರ ವಶಕ್ಕೆ ನೀಡುವಂತೆ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ.

ಬಂಧಿತರಲ್ಲಿ ಕೆಂಪೇಗೌಡ ಶಾಲೆಯ ಪ್ರಾಂಶುಪಾಲ ಶ್ರೀನಿವಾಸ್, ಹಿಂದಿ ಶಿಕ್ಷಯ ಶಿಕ್ಷಕ ಕೃಷ್ಣಮೂರ್ತಿ ಸೇರಿದಂತೆ ವಿವಿಧ ಶಾಲೆಗಳ ಅಧ್ಯಾಪಕರು ಹಾಗೂ ಸ್ಥಳೀಯ ಪತ್ರಕರ್ತ ವಿಜಯ್‌ ಕುಮಾರ್‌ ಎಂಬುವವರು ಸೇರಿದ್ದಾರೆ. ಬಂಧಿತರಿಂದ ಪೊಲೀಸರು ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆ, ಬ್ಲಾಕ್‌ಮೇಲ್ ಮಾಡಿದ ಪತ್ರಕರ್ತ ಸೆರೆ

ಕೆಂಪೇಗೌಡ ಶಾಲೆಯ ಹಿಂದಿ ಶಿಕ್ಷಕ ಕೃಷ್ಣಮೂರ್ತಿ, ಮಾಗಡಿಯ ರಂಗನಾಥಸ್ವಾಮಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಮೇಲ್ವಿಚಾರಕರಾಗಿದ್ದರು. ಪರೀಕ್ಷಾ ಆರಂಭಕ್ಕೆ 15 ನಿಮಿಷಗಳಿದ್ದಾಗ ಪ್ರಶ್ನೆಪತ್ರಿಕೆ ಪೋಟೋ ತೆಗೆದು ವಾಟ್ಸಪ್‌ ಗುಂಪಿನಲ್ಲಿ ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಿಜ್ಞಾನ ವಿಷಯ ಪರೀಕ್ಷೆ ನಡೆದ ದಿನ ಗುಮಾಸ್ತ ರಂಗೇಗೌಡ, ಪ್ರಶ್ನೆಪತ್ರಿಕೆಯ ಪೋಟೋವನ್ನು ಶಿಕ್ಷಕ ಕೃಷ್ಣಮೂರ್ತಿಗೆ ಕಳುಹಿಸುವ ಬದಲಾಗಿ ಶಿಕ್ಷಕರ ವಾಟ್ಸಪ್ ಗುಂಪೊಂದಕ್ಕೆ ಹಾಕಿದ್ದಾನೆ. ಆ ನಂತರ ಅಚಾತುರ್ಯವನ್ನು ಅರಿತು ಡಿಲೀಟ್ ಮಾಡಿದ್ದಾನೆ. ಆದರೆ ಅಷ್ಟರಲ್ಲಾಗಲೇ ಶಿಕ್ಷಕರ ಗುಂಪಿನಲ್ಲಿದ್ದ ಲೋಕೇಶ್ ಎಂಬ ಶಿಕ್ಷಕ ಗುಂಪಿನಲ್ಲಿ ಬಂದ ಪ್ರಶ್ನೆಪತ್ರಿಕೆಯನ್ನು ಡೌನ್‌ಲೋಡ್‌ ಮಾಡಿಕೊಂಡು ಗುಮಾಸ್ತ ರಂಗೇಗೌಡನನ್ನು ಹೆದರಿಸಿ ಹತ್ತು ಸಾವಿರ ಪಡೆದಿದ್ದರು. ಈ ವಿಷಯ ತಿಳಿದ ಪತ್ರಕರ್ತ ವಿಜಯ್‌ ಕುಮಾರ್ ಕೂಡ ರಂಗೇಗೌಡನಿಗೆ ಬ್ಲಾಕ್‌ಮೇಲ್ ಮಾಡಿ ಹಣ ಕಿತ್ತಿದ್ದರು ಎಂದು ಈದಿನ.ಕಾಂ ವರದಿ ಹೇಳಿದೆ.

ಇದನ್ನೂ ಓದಿ: ಪಠ್ಯ ವಿವಾದ: ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ 4 ಸುಳ್ಳುಗಳು

ಅಷ್ಟಕ್ಕೆ ಸುಮ್ಮನಾಗದ ಆರೋಪಿಗಳು ಹೆಚ್ಚಿನ ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದಿದ್ದಾಗ ಬೇರೆ ಹೆಸರಿನಲ್ಲಿ ಪೊಲೀಸರಿಗೆ ಪತ್ರ ಬರೆದ ಲೋಕೇಶ್, ಪರೀಕ್ಷಾ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಯತಿಕುಮಾರ್‌ ಪರೀಕ್ಷಾ ಅಕ್ರಮದ ಬಗ್ಗೆ ಮಾಹಿತಿಯಿದ್ದರೂ ನಿರ್ಲಕ್ಷ್ಯವಹಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ವಾಟ್ಸಪ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಬಗ್ಗೆ ಮಾಹಿತಿ ಇದ್ದರೂ ಕ್ರಮಕೈಗೊಂಡಿಲ್ಲ ಎಂದು ದೂರಿದ್ದು, ಅವರ ಬಂಧನವಾಗುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...