Homeಕರ್ನಾಟಕರಾಮನಗರ- SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ, ಶಿಕ್ಷಕ ಸೇರಿದಂತೆ 11 ಮಂದಿ ಬಂಧನ

ರಾಮನಗರ- SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ, ಶಿಕ್ಷಕ ಸೇರಿದಂತೆ 11 ಮಂದಿ ಬಂಧನ

- Advertisement -
- Advertisement -

ರಾಜ್ಯದಲ್ಲಿ ಕಳೆದ ಮಾರ್ಚ್‌ ಮತ್ತು ಏಪ್ರೀಲ್ ತಿಂಗಳಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪರೀಕ್ಷೆಯ ಫಲಿತಾಂಶಗಳು ಇತ್ತೀಚೆಗಷ್ಟೆ ಹೊರಬಿದ್ದಿವೆ. ಈ ನಡುವೆ ಪ್ರಶ್ನಾ ಪತ್ರಿಕೆಗಳು ಸೋರಿಕೆಯಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧ ರಾಮನಗರ ಜಿಲ್ಲೆಯಲ್ಲಿ ಒಟ್ಟು 11 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದ ಮಾಗಡಿ ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕರು, ಸಿಬ್ಬಂದಿ ಮತ್ತು ಪತ್ರಕರ್ತರು ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಿಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮ ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು. ಇದೀಗ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಬಹಿರಂಗಗೊಂಡಿದೆ ಎಂದು ಈದಿನ.ಕಾಂ ವರದಿ ಮಾಡಿದೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಹತ್ತನೇ ತರಗತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಗುಮಾಸ್ತ ರಂಗೇಗೌಡ ಎಂಬ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರಿಗೆ ವಿಚಾರಣೆ ವೇಳೆ ರಂಗೇಗೌಡ ನೀಡಿದ ಮಾಹಿತಿ ಆಧಾರದಲ್ಲಿ ಹತ್ತು ಮಂದಿಯನ್ನು ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸಿಸಿಟಿವಿ ದೃಶ್ಯಾವಳಿಗನ್ನು ಪೊಲೀಸರ ವಶಕ್ಕೆ ನೀಡುವಂತೆ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ.

ಬಂಧಿತರಲ್ಲಿ ಕೆಂಪೇಗೌಡ ಶಾಲೆಯ ಪ್ರಾಂಶುಪಾಲ ಶ್ರೀನಿವಾಸ್, ಹಿಂದಿ ಶಿಕ್ಷಯ ಶಿಕ್ಷಕ ಕೃಷ್ಣಮೂರ್ತಿ ಸೇರಿದಂತೆ ವಿವಿಧ ಶಾಲೆಗಳ ಅಧ್ಯಾಪಕರು ಹಾಗೂ ಸ್ಥಳೀಯ ಪತ್ರಕರ್ತ ವಿಜಯ್‌ ಕುಮಾರ್‌ ಎಂಬುವವರು ಸೇರಿದ್ದಾರೆ. ಬಂಧಿತರಿಂದ ಪೊಲೀಸರು ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆ, ಬ್ಲಾಕ್‌ಮೇಲ್ ಮಾಡಿದ ಪತ್ರಕರ್ತ ಸೆರೆ

ಕೆಂಪೇಗೌಡ ಶಾಲೆಯ ಹಿಂದಿ ಶಿಕ್ಷಕ ಕೃಷ್ಣಮೂರ್ತಿ, ಮಾಗಡಿಯ ರಂಗನಾಥಸ್ವಾಮಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಮೇಲ್ವಿಚಾರಕರಾಗಿದ್ದರು. ಪರೀಕ್ಷಾ ಆರಂಭಕ್ಕೆ 15 ನಿಮಿಷಗಳಿದ್ದಾಗ ಪ್ರಶ್ನೆಪತ್ರಿಕೆ ಪೋಟೋ ತೆಗೆದು ವಾಟ್ಸಪ್‌ ಗುಂಪಿನಲ್ಲಿ ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಿಜ್ಞಾನ ವಿಷಯ ಪರೀಕ್ಷೆ ನಡೆದ ದಿನ ಗುಮಾಸ್ತ ರಂಗೇಗೌಡ, ಪ್ರಶ್ನೆಪತ್ರಿಕೆಯ ಪೋಟೋವನ್ನು ಶಿಕ್ಷಕ ಕೃಷ್ಣಮೂರ್ತಿಗೆ ಕಳುಹಿಸುವ ಬದಲಾಗಿ ಶಿಕ್ಷಕರ ವಾಟ್ಸಪ್ ಗುಂಪೊಂದಕ್ಕೆ ಹಾಕಿದ್ದಾನೆ. ಆ ನಂತರ ಅಚಾತುರ್ಯವನ್ನು ಅರಿತು ಡಿಲೀಟ್ ಮಾಡಿದ್ದಾನೆ. ಆದರೆ ಅಷ್ಟರಲ್ಲಾಗಲೇ ಶಿಕ್ಷಕರ ಗುಂಪಿನಲ್ಲಿದ್ದ ಲೋಕೇಶ್ ಎಂಬ ಶಿಕ್ಷಕ ಗುಂಪಿನಲ್ಲಿ ಬಂದ ಪ್ರಶ್ನೆಪತ್ರಿಕೆಯನ್ನು ಡೌನ್‌ಲೋಡ್‌ ಮಾಡಿಕೊಂಡು ಗುಮಾಸ್ತ ರಂಗೇಗೌಡನನ್ನು ಹೆದರಿಸಿ ಹತ್ತು ಸಾವಿರ ಪಡೆದಿದ್ದರು. ಈ ವಿಷಯ ತಿಳಿದ ಪತ್ರಕರ್ತ ವಿಜಯ್‌ ಕುಮಾರ್ ಕೂಡ ರಂಗೇಗೌಡನಿಗೆ ಬ್ಲಾಕ್‌ಮೇಲ್ ಮಾಡಿ ಹಣ ಕಿತ್ತಿದ್ದರು ಎಂದು ಈದಿನ.ಕಾಂ ವರದಿ ಹೇಳಿದೆ.

ಇದನ್ನೂ ಓದಿ: ಪಠ್ಯ ವಿವಾದ: ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ 4 ಸುಳ್ಳುಗಳು

ಅಷ್ಟಕ್ಕೆ ಸುಮ್ಮನಾಗದ ಆರೋಪಿಗಳು ಹೆಚ್ಚಿನ ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದಿದ್ದಾಗ ಬೇರೆ ಹೆಸರಿನಲ್ಲಿ ಪೊಲೀಸರಿಗೆ ಪತ್ರ ಬರೆದ ಲೋಕೇಶ್, ಪರೀಕ್ಷಾ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಯತಿಕುಮಾರ್‌ ಪರೀಕ್ಷಾ ಅಕ್ರಮದ ಬಗ್ಗೆ ಮಾಹಿತಿಯಿದ್ದರೂ ನಿರ್ಲಕ್ಷ್ಯವಹಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ವಾಟ್ಸಪ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಬಗ್ಗೆ ಮಾಹಿತಿ ಇದ್ದರೂ ಕ್ರಮಕೈಗೊಂಡಿಲ್ಲ ಎಂದು ದೂರಿದ್ದು, ಅವರ ಬಂಧನವಾಗುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....