Homeಕರ್ನಾಟಕರಾಮನಗರ- SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ, ಶಿಕ್ಷಕ ಸೇರಿದಂತೆ 11 ಮಂದಿ ಬಂಧನ

ರಾಮನಗರ- SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ, ಶಿಕ್ಷಕ ಸೇರಿದಂತೆ 11 ಮಂದಿ ಬಂಧನ

- Advertisement -
- Advertisement -

ರಾಜ್ಯದಲ್ಲಿ ಕಳೆದ ಮಾರ್ಚ್‌ ಮತ್ತು ಏಪ್ರೀಲ್ ತಿಂಗಳಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪರೀಕ್ಷೆಯ ಫಲಿತಾಂಶಗಳು ಇತ್ತೀಚೆಗಷ್ಟೆ ಹೊರಬಿದ್ದಿವೆ. ಈ ನಡುವೆ ಪ್ರಶ್ನಾ ಪತ್ರಿಕೆಗಳು ಸೋರಿಕೆಯಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧ ರಾಮನಗರ ಜಿಲ್ಲೆಯಲ್ಲಿ ಒಟ್ಟು 11 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದ ಮಾಗಡಿ ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕರು, ಸಿಬ್ಬಂದಿ ಮತ್ತು ಪತ್ರಕರ್ತರು ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಿಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮ ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು. ಇದೀಗ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಬಹಿರಂಗಗೊಂಡಿದೆ ಎಂದು ಈದಿನ.ಕಾಂ ವರದಿ ಮಾಡಿದೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಹತ್ತನೇ ತರಗತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಗುಮಾಸ್ತ ರಂಗೇಗೌಡ ಎಂಬ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರಿಗೆ ವಿಚಾರಣೆ ವೇಳೆ ರಂಗೇಗೌಡ ನೀಡಿದ ಮಾಹಿತಿ ಆಧಾರದಲ್ಲಿ ಹತ್ತು ಮಂದಿಯನ್ನು ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸಿಸಿಟಿವಿ ದೃಶ್ಯಾವಳಿಗನ್ನು ಪೊಲೀಸರ ವಶಕ್ಕೆ ನೀಡುವಂತೆ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ.

ಬಂಧಿತರಲ್ಲಿ ಕೆಂಪೇಗೌಡ ಶಾಲೆಯ ಪ್ರಾಂಶುಪಾಲ ಶ್ರೀನಿವಾಸ್, ಹಿಂದಿ ಶಿಕ್ಷಯ ಶಿಕ್ಷಕ ಕೃಷ್ಣಮೂರ್ತಿ ಸೇರಿದಂತೆ ವಿವಿಧ ಶಾಲೆಗಳ ಅಧ್ಯಾಪಕರು ಹಾಗೂ ಸ್ಥಳೀಯ ಪತ್ರಕರ್ತ ವಿಜಯ್‌ ಕುಮಾರ್‌ ಎಂಬುವವರು ಸೇರಿದ್ದಾರೆ. ಬಂಧಿತರಿಂದ ಪೊಲೀಸರು ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆ, ಬ್ಲಾಕ್‌ಮೇಲ್ ಮಾಡಿದ ಪತ್ರಕರ್ತ ಸೆರೆ

ಕೆಂಪೇಗೌಡ ಶಾಲೆಯ ಹಿಂದಿ ಶಿಕ್ಷಕ ಕೃಷ್ಣಮೂರ್ತಿ, ಮಾಗಡಿಯ ರಂಗನಾಥಸ್ವಾಮಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಮೇಲ್ವಿಚಾರಕರಾಗಿದ್ದರು. ಪರೀಕ್ಷಾ ಆರಂಭಕ್ಕೆ 15 ನಿಮಿಷಗಳಿದ್ದಾಗ ಪ್ರಶ್ನೆಪತ್ರಿಕೆ ಪೋಟೋ ತೆಗೆದು ವಾಟ್ಸಪ್‌ ಗುಂಪಿನಲ್ಲಿ ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಿಜ್ಞಾನ ವಿಷಯ ಪರೀಕ್ಷೆ ನಡೆದ ದಿನ ಗುಮಾಸ್ತ ರಂಗೇಗೌಡ, ಪ್ರಶ್ನೆಪತ್ರಿಕೆಯ ಪೋಟೋವನ್ನು ಶಿಕ್ಷಕ ಕೃಷ್ಣಮೂರ್ತಿಗೆ ಕಳುಹಿಸುವ ಬದಲಾಗಿ ಶಿಕ್ಷಕರ ವಾಟ್ಸಪ್ ಗುಂಪೊಂದಕ್ಕೆ ಹಾಕಿದ್ದಾನೆ. ಆ ನಂತರ ಅಚಾತುರ್ಯವನ್ನು ಅರಿತು ಡಿಲೀಟ್ ಮಾಡಿದ್ದಾನೆ. ಆದರೆ ಅಷ್ಟರಲ್ಲಾಗಲೇ ಶಿಕ್ಷಕರ ಗುಂಪಿನಲ್ಲಿದ್ದ ಲೋಕೇಶ್ ಎಂಬ ಶಿಕ್ಷಕ ಗುಂಪಿನಲ್ಲಿ ಬಂದ ಪ್ರಶ್ನೆಪತ್ರಿಕೆಯನ್ನು ಡೌನ್‌ಲೋಡ್‌ ಮಾಡಿಕೊಂಡು ಗುಮಾಸ್ತ ರಂಗೇಗೌಡನನ್ನು ಹೆದರಿಸಿ ಹತ್ತು ಸಾವಿರ ಪಡೆದಿದ್ದರು. ಈ ವಿಷಯ ತಿಳಿದ ಪತ್ರಕರ್ತ ವಿಜಯ್‌ ಕುಮಾರ್ ಕೂಡ ರಂಗೇಗೌಡನಿಗೆ ಬ್ಲಾಕ್‌ಮೇಲ್ ಮಾಡಿ ಹಣ ಕಿತ್ತಿದ್ದರು ಎಂದು ಈದಿನ.ಕಾಂ ವರದಿ ಹೇಳಿದೆ.

ಇದನ್ನೂ ಓದಿ: ಪಠ್ಯ ವಿವಾದ: ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ 4 ಸುಳ್ಳುಗಳು

ಅಷ್ಟಕ್ಕೆ ಸುಮ್ಮನಾಗದ ಆರೋಪಿಗಳು ಹೆಚ್ಚಿನ ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದಿದ್ದಾಗ ಬೇರೆ ಹೆಸರಿನಲ್ಲಿ ಪೊಲೀಸರಿಗೆ ಪತ್ರ ಬರೆದ ಲೋಕೇಶ್, ಪರೀಕ್ಷಾ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಯತಿಕುಮಾರ್‌ ಪರೀಕ್ಷಾ ಅಕ್ರಮದ ಬಗ್ಗೆ ಮಾಹಿತಿಯಿದ್ದರೂ ನಿರ್ಲಕ್ಷ್ಯವಹಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ವಾಟ್ಸಪ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಬಗ್ಗೆ ಮಾಹಿತಿ ಇದ್ದರೂ ಕ್ರಮಕೈಗೊಂಡಿಲ್ಲ ಎಂದು ದೂರಿದ್ದು, ಅವರ ಬಂಧನವಾಗುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...