Homeಮುಖಪುಟಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ಇಂದಿನಿಂದ ಆರಂಭ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ಇಂದಿನಿಂದ ಆರಂಭ

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯ 17 ಆರೋಪಿಗಳ ವಿರುದ್ಧದ ವಿಚಾರಣೆ ಇಂದಿನಿಂದ ಆರಂಭವಾಗಲಿದೆ. ಹತ್ಯೆಯ ಪ್ರಮುಖ ರುವಾರಿ ಅಮೋಲ್ ಕಾಳೆ, ಗುಂಡು ಹಾರಿಸಿದ ಪರಶುರಾಮ್ ವಾಗ್ಮೋರೆ ಮತ್ತು ಬೈಕ್ ಚಲಾಯಿಸಿದ ಆರೋಪ ಹೊತ್ತಿರುವ ಗಣೇಶ್ ಮಿಸ್ಕಿನ್ ಸೇರಿದಂತೆ ಇತರ ಆರೋಪಿಗಳು ವಿಚಾರಣೆ ಎದುರಿಸಲಿದ್ದಾರೆ.

ಸೆಪ್ಟಂಬರ್ 05, 2017ರ ರಾತ್ರಿ ಗೌರಿ ಲಂಕೇಶ್‌ರವರ ಕಚೇರಿ ಕೆಲಸ ಮುಗಿಸಿ ಮನೆಗೆ ತಲುಪಿದಾಗ ದುಷ್ಕರ್ಮಿಗಳು ಅವರ ಮನೆ ಮುಂದು ಗುಂಡು ಹಾರಿಸಿ ಕೊಂದಿದ್ದರು. ಹತ್ಯೆ ನಡೆದು ನಾಲ್ಕೂವರೆ ವರ್ಷದ ನಂತರ ವಿಚಾರಣೆ ಆರಂಭವಾಗುತ್ತಿದೆ.

ಆರೋಪಿಗಳ ಪರವಾಗಿ 60ಕ್ಕೂ ಹೆಚ್ಚು ವಕೀಲರು ವಕಾಲತ್ತು ವಹಿಸಿದ್ದರು. ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯ ಕಾರಣಕ್ಕೆ ಹತ್ಯೆ ಪ್ರಕರಣದ ವಿಚಾರಣೆ ತಡವಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲರು ಹೇಳಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ನೇಮಿಸಿದ್ದ ಎಸ್‌ಐಟಿ ತಂಡವು 17 ಆರೋಪಿಗಳನ್ನು ಬಂಧಿಸಿ ಅವರು ವಿರುದ್ದ 8500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು.

ಧಾರವಾಡದಲ್ಲಿ ಕನ್ನಡ ವಿದ್ವಾಂಸ ಎಂ.ಎಂ.ಕಲಬುರ್ಗಿ, ಕೊಲ್ಲಾಪುರದಲ್ಲಿ ಎಡಪಂಥೀಯ ಚಿಂತಕ ಗೋವಿಂದ್ ಪನ್ಸಾರೆ ಹತ್ಯೆಗೆ ಬಳಸಿದ 7.65 ಎಂಎಂ ಕಂಟ್ರಿಮೇಡ್ ಪಿಸ್ತೂಲ್, ಗೌರಿ ಲಂಕೇಶ ಅವರ ಹತ್ಯೆಗೂ ಬಳಕೆಯಾಗಿದೆ ಎಂದು ಎಸ್‌ಐಟಿ ಪತ್ತೆ ಹಚ್ಚಿತ್ತು.

ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆ ಮಾಡಲು ಬಳಸಿದ ಬಂದೂಕಿಗೂ ಪನ್ಸಾರೆ ಗುಂಡಿನ ದಾಳಿಯಲ್ಲಿ ಬಳಸಿದ ಎರಡನೇ ಬಂದೂಕಿಗೂ ಹೊಂದಾಣಿಕೆಯಾಗಿರುವುದು ಕಂಡುಬಂದಿತ್ತು.

ಗೌರಿ ಲಂಕೇಶ್‌ ಅವರ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ, ಅಮೋಲ್ ಕಾಳೆ ಸಹಚರ ಮೋಹನ್ ನಾಯಕ್‌ ವಿರುದ್ದ ದಾಖಲಾಗಿದ್ದ ‘ಕರ್ನಾಟಕ ಸಂಘಟಿತ ಅಪರಾಧಗಳ ಕಾಯ್ದೆ’ (KCOCA) ಪ್ರಕರಣವನ್ನು ಕರ್ನಾಟಕ ಹೈಕೊರ್ಟ್ ಈ ಹಿಂದೆ ರದ್ದು ಮಾಡಿತ್ತು. ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್‌‌ ಅವರು ಪ್ರಶ್ನಿಸಿದ್ದರು.

“ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ” ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು. ನಂತರ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ಕೋಕಾ ಕಾಯ್ದೆ ಹೇರಿತ್ತು.

ಗೌರಿ ಲಂಕೇಶ್ ಹತ್ಯೆಯ ಆರೋಪಿಗಳ ಪಟ್ಟಿ ಹೀಗಿದೆ; ಅಮೋಲ್ ಕಾಳೆ (37), ಪರಶುರಾಮ್ ವಾಘ್ಮೋರೆ (27), ಗಣೇಶ್ ಮಿಸ್ಕಿನ್ (27), ಅಮಿತ್ ಬಾಡ್ (27), ಅಮಿತ್ ದೆಗ್ವೇಕರ್ (38), ಭರತ್ ಕುರಣೆ (37), ಸುರೇಶ್ ಹೆಚ್ ಎಲ್ (36), ರಾಜೇಶ್ ಬಂಗೇರ (50 ವರ್ಷ), ಸುಧನ್ವ ಗೊಂದಲೇಕರ್ (39), ಶರದ್ ಕಲಾಸ್ಕರ್ (25), ಮೋಹನ್ ನಾಯಕ್ (50), ವಾಸುದೇವ್ ಸೂರ್ಯವಂಶಿ (29), ಸುಜಿತ್ ಕುಮಾರ್ (37), ಮನೋಹರ ಎಡವೆ (29), ಶ್ರೀಕಾಂತ್ ಪಂಗರ್ಕರ್ (40), ಕೆ ಟಿ ನವೀನ್ ಕುಮಾರ್ (37) ಮತ್ತು ರುಶಿಕೇಶ್ ದಿಯೋದಿಕರ್ (44).

ಈ ಎಲ್ಲಾ ಆರೋಪಿಗಳು ‘ಸನಾತನ ಸಂಸ್ಥೆ’ಯ 86 ಪುಟಗಳ ‘ಕ್ಷತ್ರ ಧರ್ಮ ಸಾಧನ’ ಪುಸ್ತಕದಿಂದ ಪ್ರೇರಿತರಾಗಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...