Homeಮುಖಪುಟಲೈಂಗಿಕ ಕೆಲಸಕ್ಕೆ 'ವೃತ್ತಿ’ ಮಾನ್ಯತೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಲೈಂಗಿಕ ಕೆಲಸಕ್ಕೆ ‘ವೃತ್ತಿ’ ಮಾನ್ಯತೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

"ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರ ವರ್ತನೆ ಸಾಮಾನ್ಯವಾಗಿ ಕ್ರೂರ ಮತ್ತು ಹಿಂಸಾತ್ಮಕವಾಗಿರುತ್ತದೆ” ಎಂದು ಕೋರ್ಟ್ ಹೇಳಿದೆ.

- Advertisement -
- Advertisement -

ಲೈಂಗಿಕ ಕೆಲಸವನ್ನು “ವೃತ್ತಿ” ಎಂದು ಗುರುತಿಸುವ ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ. ಈ ವೃತ್ತಿಯಲ್ಲಿರುವವರು ಘನತೆಯಿಂದ ಬದುಕುವುದಕ್ಕೆ, ಕಾನೂನಿನಡಿಯಲ್ಲಿ ಸಮಾನ ರಕ್ಷಣೆಗೆ ಅರ್ಹರಾಗಿದ್ದಾರೆ ಎಂದು ತಿಳಿಸಿದೆ.

ವಯಸ್ಕ ಮತ್ತು ಒಪ್ಪಿಗೆಯ ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರು ಮಧ್ಯಪ್ರವೇಶಿಸಬಾರದು ಅಥವಾ ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

“ವೃತ್ತಿಯ ಹೊರತಾಗಿಯೂ, ಈ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಗೌರವಯುತವಾದ ಜೀವನ ನಡೆಸುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಬೇಕಾಗಿಲ್ಲ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲೈಂಗಿಕ ಕೆಲಸಕ್ಕೆ ವೃತ್ತಿ ಮಾನ್ಯತೆ

“ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿದ್ದಾರೆ. ‘ವಯಸ್ಸು’ ಮತ್ತು ‘ಸಮ್ಮತಿಯ’ ಆಧಾರದ ಮೇಲೆ ಕ್ರಿಮಿನಲ್ ಕಾನೂನು ನಿರ್ಧರಿತವಾಗುತ್ತದೆ. ಲೈಂಗಿಕ ಕಾರ್ಯಕರ್ತೆಯರು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ ಇದರಲ್ಲಿ ತೊಡಗಿದ್ದಾರೆಂದು ಸ್ಪಷ್ಟವಾದಾಗ, ಪೊಲೀಸರು ಮಧ್ಯಪ್ರವೇಶಿಸುವಂತಿಲ್ಲ ಅಥವಾ ಯಾವುದೇ ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳುವಂತಿಲ್ಲ” ಎಂದು ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಆದೇಶ ಹೊರಡಿಸಿದೆ.

“ಯಾವುದೇ ವೇಶ್ಯಾಗೃಹದ ಮೇಲೆ ದಾಳಿ ನಡೆದಾಗ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸಬಾರದು, ದಂಡ ವಿಧಿಸಬಾರದು, ಕಿರುಕುಳ ನೀಡಬಾರದು ಅಥವಾ ಬಲಿಪಶು ಮಾಡಬಾರದು. ಏಕೆಂದರೆ ಸ್ವಯಂಪ್ರೇರಿತ ಲೈಂಗಿಕ ಕೆಲಸ ಕಾನೂನುಬಾಹಿರವಲ್ಲ. ಆದರೆ ವೇಶ್ಯಾಗೃಹವನ್ನು ನಡೆಸುವುದು ಕಾನೂನುಬಾಹಿರವಾಗಿದೆ” ಎಂದು ಕೋರ್ಟ್ ಹೇಳಿದೆ.

ಮಹಿಳೆಯೊಬ್ಬಳು ಲೈಂಗಿಕ ಕಾರ್ಯಕರ್ತೆಯಾಗಿದ್ದಾಳೆಂಬ ಕಾರಣಕ್ಕೆ ಆಕೆಯ ಮಗುವನ್ನು ತಾಯಿಯಿಂದ ಬೇರ್ಪಡಿಸಬಾರದು ಎಂದು ನ್ಯಾಯಾಲಯ ಹೇಳಿದೆ. “ಮಾನವನ ಸಭ್ಯತೆ ಮತ್ತು ಘನತೆಯ ಮೂಲಭೂತ ರಕ್ಷಣೆಯು ಲೈಂಗಿಕ ಕಾರ್ಯಕರ್ತರು ಹಾಗೂ ಅವರ ಮಕ್ಕಳಿಗೂ ವಿಸ್ತರಿಸುತ್ತದೆ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇದಲ್ಲದೆ, ಅಪ್ರಾಪ್ತ ವಯಸ್ಕ ಮಗು ವೇಶ್ಯಾಗೃಹದಲ್ಲಿ ಅಥವಾ ಲೈಂಗಿಕ ಕಾರ್ಯಕರ್ತರೊಂದಿಗೆ ವಾಸಿಸುತ್ತಿರುವುದು ಕಂಡುಬಂದರೆ, ಮಗುವನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ಭಾವಿಸಬಾರದು ಎಂದು ಕೋರ್ಟ್ ತಿಳಿಸಿದೆ.

“ಒಂದು ವೇಳೆ ಲೈಂಗಿಕ ಕಾರ್ಯಕರ್ತೆಯು ತನ್ನ ಮಗ/ಮಗಳು ಎಂದು ಹೇಳಿಕೊಂಡರೆ, ಅವರು ಹೇಳುತ್ತಿರುವುದು ನಿಜವೇ ಎಂದು ನಿರ್ಧರಿಸಲು ಪರೀಕ್ಷೆಗಳನ್ನು ಮಾಡಬಹುದು. ನಿಜವಾಗಿದ್ದಲ್ಲಿ ಅಪ್ರಾಪ್ತ ಮಗುವನ್ನು ಬಲವಂತವಾಗಿ ಬೇರ್ಪಡಿಸಬಾರದು” ಎಂದು ನ್ಯಾಯಾಲಯ ಆದೇಶಿಸಿದೆ.

ವೈದ್ಯಕೀಯ-ಕಾನೂನು ಆರೈಕೆ

ವಿಶೇಷವಾಗಿ ಲೈಂಗಿಕ ಸ್ವರೂಪದ ಕ್ರಿಮಿನಲ್ ದೂರು ದಾಖಲಿಸುವ ಲೈಂಗಿಕ ಕಾರ್ಯಕರ್ತೆಯರ ವಿರುದ್ಧ ತಾರತಮ್ಯ ಎಸಗಬಾರದು ಎಂದು ನ್ಯಾಯಾಲಯವು ಪೊಲೀಸರಿಗೆ ಆದೇಶಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಲೈಂಗಿಕ ಕಾರ್ಯಕರ್ತೆಯರಿಗೆ ತಕ್ಷಣದ ವೈದ್ಯಕೀಯ-ಕಾನೂನು ಆರೈಕೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದೆ.

ಇದನ್ನೂ ಓದಿರಿ: ‘ದ್ವೇಷ ಭಾಷಣ’: ಕೇರಳದ ಮಾಜಿ ಶಾಸಕ ಪಿ ಸಿ ಜಾರ್ಜ್‌ಗೆ 14 ದಿನಗಳ ನ್ಯಾಯಾಂಗ…

ಕಾನೂನಿನ ಹೊರತಾಗಿಯೂ, ಟ್ರಾನ್ಸ್‌ಜೆಂಡರ್‌ ಸಮುದಾಯವು ತಾರತಮ್ಯ ಮತ್ತು ನಿಂದನೆಯನ್ನು ಎದುರಿಸುತ್ತಿದೆ ಎಂಬುದನ್ನು ಗಮನಿಸಿರುವ ಸರ್ವೋಚ್ಚ ನ್ಯಾಯಾಲಯ, “ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರ ವರ್ತನೆ ಸಾಮಾನ್ಯವಾಗಿ ಕ್ರೂರ ಮತ್ತು ಹಿಂಸಾತ್ಮಕವಾಗಿರುತ್ತದೆ” ಎಂದಿದೆ.

“ಲೈಂಗಿಕ ಕಾರ್ಯಕರ್ತರ ಗುರುತನ್ನು ಬಹಿರಂಗ ಪಡಿಸಬಾರದು. ಬಂಧನ, ದಾಳಿ ಮತ್ತು ರಕ್ಷಣಾ ಕಾರ್ಯಾಚರಣೆಗಳ ಸಂದರ್ಭದಲ್ಲಿ ಬಲಿಪಶುಗಳ ಅಥವಾ ಆರೋಪಿಗಳ ಗುರುತನ್ನು ಬಹಿರಂಗಪಡಿಸಲು ಕಾರಣವಾಗುವ ಯಾವುದೇ ಫೋಟೋಗಳನ್ನು ಪ್ರಕಟಿಸದಂತೆ ಅಥವಾ ಪ್ರಸಾರ ಮಾಡದಂತೆ ಮಾಧ್ಯಮಗಳು ಹೆಚ್ಚಿನ ಕಾಳಜಿ ವಹಿಸಬೇಕು” ಎಂದು ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಇರುವ ‘ವಾಯೂರಿಸಂ ಕ್ರಿಮಿನಲ್ ಅಪರಾಧ’ವನ್ನು ಕೋರ್ಟ್ ಉಲ್ಲೇಖಿಸಿದೆ.

ಕಾಂಡೋಮ್ ಬಳಕೆಯಂತಹ ಕ್ರಮಗಳನ್ನು ಪೊಲೀಸರು ಲೈಂಗಿಕ ಕಾರ್ಯಕರ್ತರ ‘ಅಪರಾಧ’ದ ಪುರಾವೆಯಾಗಿ ನೋಡುವಂತಿಲ್ಲ. ಕೇಂದ್ರ ಮತ್ತು ರಾಜ್ಯಗಳು ಕಾನೂನುಗಳನ್ನು ಸುಧಾರಿಸಲು ಲೈಂಗಿಕ ಕಾರ್ಯಕರ್ತರು ಅಥವಾ ಅವರ ಪ್ರತಿನಿಧಿಗಳನ್ನು ಒಳಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...