Homeಮುಖಪುಟಲೈಂಗಿಕ ಕೆಲಸಕ್ಕೆ 'ವೃತ್ತಿ’ ಮಾನ್ಯತೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಲೈಂಗಿಕ ಕೆಲಸಕ್ಕೆ ‘ವೃತ್ತಿ’ ಮಾನ್ಯತೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

"ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರ ವರ್ತನೆ ಸಾಮಾನ್ಯವಾಗಿ ಕ್ರೂರ ಮತ್ತು ಹಿಂಸಾತ್ಮಕವಾಗಿರುತ್ತದೆ” ಎಂದು ಕೋರ್ಟ್ ಹೇಳಿದೆ.

- Advertisement -
- Advertisement -

ಲೈಂಗಿಕ ಕೆಲಸವನ್ನು “ವೃತ್ತಿ” ಎಂದು ಗುರುತಿಸುವ ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ. ಈ ವೃತ್ತಿಯಲ್ಲಿರುವವರು ಘನತೆಯಿಂದ ಬದುಕುವುದಕ್ಕೆ, ಕಾನೂನಿನಡಿಯಲ್ಲಿ ಸಮಾನ ರಕ್ಷಣೆಗೆ ಅರ್ಹರಾಗಿದ್ದಾರೆ ಎಂದು ತಿಳಿಸಿದೆ.

ವಯಸ್ಕ ಮತ್ತು ಒಪ್ಪಿಗೆಯ ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರು ಮಧ್ಯಪ್ರವೇಶಿಸಬಾರದು ಅಥವಾ ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

“ವೃತ್ತಿಯ ಹೊರತಾಗಿಯೂ, ಈ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಗೌರವಯುತವಾದ ಜೀವನ ನಡೆಸುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಬೇಕಾಗಿಲ್ಲ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲೈಂಗಿಕ ಕೆಲಸಕ್ಕೆ ವೃತ್ತಿ ಮಾನ್ಯತೆ

“ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿದ್ದಾರೆ. ‘ವಯಸ್ಸು’ ಮತ್ತು ‘ಸಮ್ಮತಿಯ’ ಆಧಾರದ ಮೇಲೆ ಕ್ರಿಮಿನಲ್ ಕಾನೂನು ನಿರ್ಧರಿತವಾಗುತ್ತದೆ. ಲೈಂಗಿಕ ಕಾರ್ಯಕರ್ತೆಯರು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ ಇದರಲ್ಲಿ ತೊಡಗಿದ್ದಾರೆಂದು ಸ್ಪಷ್ಟವಾದಾಗ, ಪೊಲೀಸರು ಮಧ್ಯಪ್ರವೇಶಿಸುವಂತಿಲ್ಲ ಅಥವಾ ಯಾವುದೇ ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳುವಂತಿಲ್ಲ” ಎಂದು ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಆದೇಶ ಹೊರಡಿಸಿದೆ.

“ಯಾವುದೇ ವೇಶ್ಯಾಗೃಹದ ಮೇಲೆ ದಾಳಿ ನಡೆದಾಗ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸಬಾರದು, ದಂಡ ವಿಧಿಸಬಾರದು, ಕಿರುಕುಳ ನೀಡಬಾರದು ಅಥವಾ ಬಲಿಪಶು ಮಾಡಬಾರದು. ಏಕೆಂದರೆ ಸ್ವಯಂಪ್ರೇರಿತ ಲೈಂಗಿಕ ಕೆಲಸ ಕಾನೂನುಬಾಹಿರವಲ್ಲ. ಆದರೆ ವೇಶ್ಯಾಗೃಹವನ್ನು ನಡೆಸುವುದು ಕಾನೂನುಬಾಹಿರವಾಗಿದೆ” ಎಂದು ಕೋರ್ಟ್ ಹೇಳಿದೆ.

ಮಹಿಳೆಯೊಬ್ಬಳು ಲೈಂಗಿಕ ಕಾರ್ಯಕರ್ತೆಯಾಗಿದ್ದಾಳೆಂಬ ಕಾರಣಕ್ಕೆ ಆಕೆಯ ಮಗುವನ್ನು ತಾಯಿಯಿಂದ ಬೇರ್ಪಡಿಸಬಾರದು ಎಂದು ನ್ಯಾಯಾಲಯ ಹೇಳಿದೆ. “ಮಾನವನ ಸಭ್ಯತೆ ಮತ್ತು ಘನತೆಯ ಮೂಲಭೂತ ರಕ್ಷಣೆಯು ಲೈಂಗಿಕ ಕಾರ್ಯಕರ್ತರು ಹಾಗೂ ಅವರ ಮಕ್ಕಳಿಗೂ ವಿಸ್ತರಿಸುತ್ತದೆ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇದಲ್ಲದೆ, ಅಪ್ರಾಪ್ತ ವಯಸ್ಕ ಮಗು ವೇಶ್ಯಾಗೃಹದಲ್ಲಿ ಅಥವಾ ಲೈಂಗಿಕ ಕಾರ್ಯಕರ್ತರೊಂದಿಗೆ ವಾಸಿಸುತ್ತಿರುವುದು ಕಂಡುಬಂದರೆ, ಮಗುವನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ಭಾವಿಸಬಾರದು ಎಂದು ಕೋರ್ಟ್ ತಿಳಿಸಿದೆ.

“ಒಂದು ವೇಳೆ ಲೈಂಗಿಕ ಕಾರ್ಯಕರ್ತೆಯು ತನ್ನ ಮಗ/ಮಗಳು ಎಂದು ಹೇಳಿಕೊಂಡರೆ, ಅವರು ಹೇಳುತ್ತಿರುವುದು ನಿಜವೇ ಎಂದು ನಿರ್ಧರಿಸಲು ಪರೀಕ್ಷೆಗಳನ್ನು ಮಾಡಬಹುದು. ನಿಜವಾಗಿದ್ದಲ್ಲಿ ಅಪ್ರಾಪ್ತ ಮಗುವನ್ನು ಬಲವಂತವಾಗಿ ಬೇರ್ಪಡಿಸಬಾರದು” ಎಂದು ನ್ಯಾಯಾಲಯ ಆದೇಶಿಸಿದೆ.

ವೈದ್ಯಕೀಯ-ಕಾನೂನು ಆರೈಕೆ

ವಿಶೇಷವಾಗಿ ಲೈಂಗಿಕ ಸ್ವರೂಪದ ಕ್ರಿಮಿನಲ್ ದೂರು ದಾಖಲಿಸುವ ಲೈಂಗಿಕ ಕಾರ್ಯಕರ್ತೆಯರ ವಿರುದ್ಧ ತಾರತಮ್ಯ ಎಸಗಬಾರದು ಎಂದು ನ್ಯಾಯಾಲಯವು ಪೊಲೀಸರಿಗೆ ಆದೇಶಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಲೈಂಗಿಕ ಕಾರ್ಯಕರ್ತೆಯರಿಗೆ ತಕ್ಷಣದ ವೈದ್ಯಕೀಯ-ಕಾನೂನು ಆರೈಕೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದೆ.

ಇದನ್ನೂ ಓದಿರಿ: ‘ದ್ವೇಷ ಭಾಷಣ’: ಕೇರಳದ ಮಾಜಿ ಶಾಸಕ ಪಿ ಸಿ ಜಾರ್ಜ್‌ಗೆ 14 ದಿನಗಳ ನ್ಯಾಯಾಂಗ…

ಕಾನೂನಿನ ಹೊರತಾಗಿಯೂ, ಟ್ರಾನ್ಸ್‌ಜೆಂಡರ್‌ ಸಮುದಾಯವು ತಾರತಮ್ಯ ಮತ್ತು ನಿಂದನೆಯನ್ನು ಎದುರಿಸುತ್ತಿದೆ ಎಂಬುದನ್ನು ಗಮನಿಸಿರುವ ಸರ್ವೋಚ್ಚ ನ್ಯಾಯಾಲಯ, “ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರ ವರ್ತನೆ ಸಾಮಾನ್ಯವಾಗಿ ಕ್ರೂರ ಮತ್ತು ಹಿಂಸಾತ್ಮಕವಾಗಿರುತ್ತದೆ” ಎಂದಿದೆ.

“ಲೈಂಗಿಕ ಕಾರ್ಯಕರ್ತರ ಗುರುತನ್ನು ಬಹಿರಂಗ ಪಡಿಸಬಾರದು. ಬಂಧನ, ದಾಳಿ ಮತ್ತು ರಕ್ಷಣಾ ಕಾರ್ಯಾಚರಣೆಗಳ ಸಂದರ್ಭದಲ್ಲಿ ಬಲಿಪಶುಗಳ ಅಥವಾ ಆರೋಪಿಗಳ ಗುರುತನ್ನು ಬಹಿರಂಗಪಡಿಸಲು ಕಾರಣವಾಗುವ ಯಾವುದೇ ಫೋಟೋಗಳನ್ನು ಪ್ರಕಟಿಸದಂತೆ ಅಥವಾ ಪ್ರಸಾರ ಮಾಡದಂತೆ ಮಾಧ್ಯಮಗಳು ಹೆಚ್ಚಿನ ಕಾಳಜಿ ವಹಿಸಬೇಕು” ಎಂದು ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಇರುವ ‘ವಾಯೂರಿಸಂ ಕ್ರಿಮಿನಲ್ ಅಪರಾಧ’ವನ್ನು ಕೋರ್ಟ್ ಉಲ್ಲೇಖಿಸಿದೆ.

ಕಾಂಡೋಮ್ ಬಳಕೆಯಂತಹ ಕ್ರಮಗಳನ್ನು ಪೊಲೀಸರು ಲೈಂಗಿಕ ಕಾರ್ಯಕರ್ತರ ‘ಅಪರಾಧ’ದ ಪುರಾವೆಯಾಗಿ ನೋಡುವಂತಿಲ್ಲ. ಕೇಂದ್ರ ಮತ್ತು ರಾಜ್ಯಗಳು ಕಾನೂನುಗಳನ್ನು ಸುಧಾರಿಸಲು ಲೈಂಗಿಕ ಕಾರ್ಯಕರ್ತರು ಅಥವಾ ಅವರ ಪ್ರತಿನಿಧಿಗಳನ್ನು ಒಳಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...