Homeಮುಖಪುಟಲೈಂಗಿಕ ಕೆಲಸಕ್ಕೆ 'ವೃತ್ತಿ’ ಮಾನ್ಯತೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಲೈಂಗಿಕ ಕೆಲಸಕ್ಕೆ ‘ವೃತ್ತಿ’ ಮಾನ್ಯತೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

"ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರ ವರ್ತನೆ ಸಾಮಾನ್ಯವಾಗಿ ಕ್ರೂರ ಮತ್ತು ಹಿಂಸಾತ್ಮಕವಾಗಿರುತ್ತದೆ” ಎಂದು ಕೋರ್ಟ್ ಹೇಳಿದೆ.

- Advertisement -
- Advertisement -

ಲೈಂಗಿಕ ಕೆಲಸವನ್ನು “ವೃತ್ತಿ” ಎಂದು ಗುರುತಿಸುವ ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ. ಈ ವೃತ್ತಿಯಲ್ಲಿರುವವರು ಘನತೆಯಿಂದ ಬದುಕುವುದಕ್ಕೆ, ಕಾನೂನಿನಡಿಯಲ್ಲಿ ಸಮಾನ ರಕ್ಷಣೆಗೆ ಅರ್ಹರಾಗಿದ್ದಾರೆ ಎಂದು ತಿಳಿಸಿದೆ.

ವಯಸ್ಕ ಮತ್ತು ಒಪ್ಪಿಗೆಯ ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರು ಮಧ್ಯಪ್ರವೇಶಿಸಬಾರದು ಅಥವಾ ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

“ವೃತ್ತಿಯ ಹೊರತಾಗಿಯೂ, ಈ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಗೌರವಯುತವಾದ ಜೀವನ ನಡೆಸುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಬೇಕಾಗಿಲ್ಲ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲೈಂಗಿಕ ಕೆಲಸಕ್ಕೆ ವೃತ್ತಿ ಮಾನ್ಯತೆ

“ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿದ್ದಾರೆ. ‘ವಯಸ್ಸು’ ಮತ್ತು ‘ಸಮ್ಮತಿಯ’ ಆಧಾರದ ಮೇಲೆ ಕ್ರಿಮಿನಲ್ ಕಾನೂನು ನಿರ್ಧರಿತವಾಗುತ್ತದೆ. ಲೈಂಗಿಕ ಕಾರ್ಯಕರ್ತೆಯರು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ ಇದರಲ್ಲಿ ತೊಡಗಿದ್ದಾರೆಂದು ಸ್ಪಷ್ಟವಾದಾಗ, ಪೊಲೀಸರು ಮಧ್ಯಪ್ರವೇಶಿಸುವಂತಿಲ್ಲ ಅಥವಾ ಯಾವುದೇ ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳುವಂತಿಲ್ಲ” ಎಂದು ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಆದೇಶ ಹೊರಡಿಸಿದೆ.

“ಯಾವುದೇ ವೇಶ್ಯಾಗೃಹದ ಮೇಲೆ ದಾಳಿ ನಡೆದಾಗ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸಬಾರದು, ದಂಡ ವಿಧಿಸಬಾರದು, ಕಿರುಕುಳ ನೀಡಬಾರದು ಅಥವಾ ಬಲಿಪಶು ಮಾಡಬಾರದು. ಏಕೆಂದರೆ ಸ್ವಯಂಪ್ರೇರಿತ ಲೈಂಗಿಕ ಕೆಲಸ ಕಾನೂನುಬಾಹಿರವಲ್ಲ. ಆದರೆ ವೇಶ್ಯಾಗೃಹವನ್ನು ನಡೆಸುವುದು ಕಾನೂನುಬಾಹಿರವಾಗಿದೆ” ಎಂದು ಕೋರ್ಟ್ ಹೇಳಿದೆ.

ಮಹಿಳೆಯೊಬ್ಬಳು ಲೈಂಗಿಕ ಕಾರ್ಯಕರ್ತೆಯಾಗಿದ್ದಾಳೆಂಬ ಕಾರಣಕ್ಕೆ ಆಕೆಯ ಮಗುವನ್ನು ತಾಯಿಯಿಂದ ಬೇರ್ಪಡಿಸಬಾರದು ಎಂದು ನ್ಯಾಯಾಲಯ ಹೇಳಿದೆ. “ಮಾನವನ ಸಭ್ಯತೆ ಮತ್ತು ಘನತೆಯ ಮೂಲಭೂತ ರಕ್ಷಣೆಯು ಲೈಂಗಿಕ ಕಾರ್ಯಕರ್ತರು ಹಾಗೂ ಅವರ ಮಕ್ಕಳಿಗೂ ವಿಸ್ತರಿಸುತ್ತದೆ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇದಲ್ಲದೆ, ಅಪ್ರಾಪ್ತ ವಯಸ್ಕ ಮಗು ವೇಶ್ಯಾಗೃಹದಲ್ಲಿ ಅಥವಾ ಲೈಂಗಿಕ ಕಾರ್ಯಕರ್ತರೊಂದಿಗೆ ವಾಸಿಸುತ್ತಿರುವುದು ಕಂಡುಬಂದರೆ, ಮಗುವನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ಭಾವಿಸಬಾರದು ಎಂದು ಕೋರ್ಟ್ ತಿಳಿಸಿದೆ.

“ಒಂದು ವೇಳೆ ಲೈಂಗಿಕ ಕಾರ್ಯಕರ್ತೆಯು ತನ್ನ ಮಗ/ಮಗಳು ಎಂದು ಹೇಳಿಕೊಂಡರೆ, ಅವರು ಹೇಳುತ್ತಿರುವುದು ನಿಜವೇ ಎಂದು ನಿರ್ಧರಿಸಲು ಪರೀಕ್ಷೆಗಳನ್ನು ಮಾಡಬಹುದು. ನಿಜವಾಗಿದ್ದಲ್ಲಿ ಅಪ್ರಾಪ್ತ ಮಗುವನ್ನು ಬಲವಂತವಾಗಿ ಬೇರ್ಪಡಿಸಬಾರದು” ಎಂದು ನ್ಯಾಯಾಲಯ ಆದೇಶಿಸಿದೆ.

ವೈದ್ಯಕೀಯ-ಕಾನೂನು ಆರೈಕೆ

ವಿಶೇಷವಾಗಿ ಲೈಂಗಿಕ ಸ್ವರೂಪದ ಕ್ರಿಮಿನಲ್ ದೂರು ದಾಖಲಿಸುವ ಲೈಂಗಿಕ ಕಾರ್ಯಕರ್ತೆಯರ ವಿರುದ್ಧ ತಾರತಮ್ಯ ಎಸಗಬಾರದು ಎಂದು ನ್ಯಾಯಾಲಯವು ಪೊಲೀಸರಿಗೆ ಆದೇಶಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಲೈಂಗಿಕ ಕಾರ್ಯಕರ್ತೆಯರಿಗೆ ತಕ್ಷಣದ ವೈದ್ಯಕೀಯ-ಕಾನೂನು ಆರೈಕೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದೆ.

ಇದನ್ನೂ ಓದಿರಿ: ‘ದ್ವೇಷ ಭಾಷಣ’: ಕೇರಳದ ಮಾಜಿ ಶಾಸಕ ಪಿ ಸಿ ಜಾರ್ಜ್‌ಗೆ 14 ದಿನಗಳ ನ್ಯಾಯಾಂಗ…

ಕಾನೂನಿನ ಹೊರತಾಗಿಯೂ, ಟ್ರಾನ್ಸ್‌ಜೆಂಡರ್‌ ಸಮುದಾಯವು ತಾರತಮ್ಯ ಮತ್ತು ನಿಂದನೆಯನ್ನು ಎದುರಿಸುತ್ತಿದೆ ಎಂಬುದನ್ನು ಗಮನಿಸಿರುವ ಸರ್ವೋಚ್ಚ ನ್ಯಾಯಾಲಯ, “ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರ ವರ್ತನೆ ಸಾಮಾನ್ಯವಾಗಿ ಕ್ರೂರ ಮತ್ತು ಹಿಂಸಾತ್ಮಕವಾಗಿರುತ್ತದೆ” ಎಂದಿದೆ.

“ಲೈಂಗಿಕ ಕಾರ್ಯಕರ್ತರ ಗುರುತನ್ನು ಬಹಿರಂಗ ಪಡಿಸಬಾರದು. ಬಂಧನ, ದಾಳಿ ಮತ್ತು ರಕ್ಷಣಾ ಕಾರ್ಯಾಚರಣೆಗಳ ಸಂದರ್ಭದಲ್ಲಿ ಬಲಿಪಶುಗಳ ಅಥವಾ ಆರೋಪಿಗಳ ಗುರುತನ್ನು ಬಹಿರಂಗಪಡಿಸಲು ಕಾರಣವಾಗುವ ಯಾವುದೇ ಫೋಟೋಗಳನ್ನು ಪ್ರಕಟಿಸದಂತೆ ಅಥವಾ ಪ್ರಸಾರ ಮಾಡದಂತೆ ಮಾಧ್ಯಮಗಳು ಹೆಚ್ಚಿನ ಕಾಳಜಿ ವಹಿಸಬೇಕು” ಎಂದು ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಇರುವ ‘ವಾಯೂರಿಸಂ ಕ್ರಿಮಿನಲ್ ಅಪರಾಧ’ವನ್ನು ಕೋರ್ಟ್ ಉಲ್ಲೇಖಿಸಿದೆ.

ಕಾಂಡೋಮ್ ಬಳಕೆಯಂತಹ ಕ್ರಮಗಳನ್ನು ಪೊಲೀಸರು ಲೈಂಗಿಕ ಕಾರ್ಯಕರ್ತರ ‘ಅಪರಾಧ’ದ ಪುರಾವೆಯಾಗಿ ನೋಡುವಂತಿಲ್ಲ. ಕೇಂದ್ರ ಮತ್ತು ರಾಜ್ಯಗಳು ಕಾನೂನುಗಳನ್ನು ಸುಧಾರಿಸಲು ಲೈಂಗಿಕ ಕಾರ್ಯಕರ್ತರು ಅಥವಾ ಅವರ ಪ್ರತಿನಿಧಿಗಳನ್ನು ಒಳಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...