Homeಮುಖಪುಟತಮಿಳುನಾಡಿಗೆ ಅನ್ಯಾಯ; ಮೋದಿ ಇದ್ದ ವೇದಿಕೆಯಲ್ಲೇ ಸ್ಟಾಲಿನ್‌ ಹೇಳಿಕೆ; ಅಣ್ಣಾಮಲೈಗೆ ಬೇಸರ

ತಮಿಳುನಾಡಿಗೆ ಅನ್ಯಾಯ; ಮೋದಿ ಇದ್ದ ವೇದಿಕೆಯಲ್ಲೇ ಸ್ಟಾಲಿನ್‌ ಹೇಳಿಕೆ; ಅಣ್ಣಾಮಲೈಗೆ ಬೇಸರ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಇದ್ದ ವೇದಿಕೆಯಲ್ಲೇ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ತಮಿಳುನಾಡಿಗೆ ಆಗುತ್ತಿರುವ ಅನ್ಯಾಯಗಳನ್ನು ಪ್ರಸ್ತಾಪಿಸಿದ್ದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬೇಸರಗೊಂಡಿದ್ದಾರೆ.

ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ಚೆನ್ನೈಗೆ ಭೇಟಿ ನೀಡಿದಾಗ ಆಡಳಿತಾರೂಢ ಸರ್ಕಾರ ರಾಜಕೀಯ ನಾಟಕ ನಡೆಸಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಕಿಡಿಕಾರಿದ್ದಾರೆ.

ನಿನ್ನೆ ಸಂಜೆ ಪ್ರಧಾನಿ ಮೋದಿ ವೇದಿಕೆಯಲ್ಲಿದ್ದಾಗ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಾಡಿದ ಭಾಷಣವು ರಾಜಕೀಯ ನಾಟಕದಿಂದ ಕೂಡಿತ್ತು ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಷ್ಟ್ರೀಯ ಆರ್ಥಿಕತೆಗೆ ತಮಿಳುನಾಡು ನೀಡುತ್ತಿರುವ ಕೊಡುಗೆ ಜೊತೆಗೆ ಕೇಂದ್ರ ಸರ್ಕಾರದಿಂದ ಪಡೆದ ಪಾಲಿನ ನಡುವಿನ ಅಸಮಾನತೆಯನ್ನು ಸ್ಟಾಲಿನ್ ಪ್ರಸ್ತಾಪಿಸಿದ್ದರು.

ಜಿಡಿಪಿಯಲ್ಲಿ ರಾಜ್ಯದ ಪಾಲು ಶೇ 9.22 ಮತ್ತು ಕೇಂದ್ರ ಸರ್ಕಾರದ ಒಟ್ಟಾರೆ ತೆರಿಗೆ ಆದಾಯದಲ್ಲಿ ರಾಜ್ಯದ ಪಾಲು ಶೇ 6ರಷ್ಟಿದೆ. ಆದರೆ ಕೇಂದ್ರ ಸರ್ಕಾರದಿಂದ ತಮಿಳುನಾಡು ಪಡೆಯುವ ಆದಾಯ ಕೇವಲ ಶೇ 1.23 ಮಾತ್ರ ಎಂದು ಸ್ಟಾಲಿನ್ ಪ್ರಸ್ತಾಪಿಸಿದರು. ಬಾಕಿ ಉಳಿದಿರುವ ಜಿಎಸ್‌ಟಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: ಸ್ಟಾಲಿನ್‌ ಮುಖ್ಯಮಂತ್ರಿಯಾಗಿ ಒಂದು ವರ್ಷ: ರಾಷ್ಟ್ರ ರಾಜಕಾರಣಕ್ಕೆ ಬೇಕಲ್ಲವೇ ‘ತಮಿಳುನಾಡು ಮಾದರಿ?’

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಣ್ಣಾಮಲೈ, “ರಾಜ್ಯವು ಕೇಂದ್ರ ಸರ್ಕಾರಕ್ಕೆ 25,979 ಕೋಟಿ ರೂಪಾಯಿಗಳನ್ನು ಬಾಕಿ ಉಳಿಸಿಕೊಂಡಿದೆ, ಆದರೆ ಕೇಂದ್ರ ಹಣಕಾಸು ಸಚಿವರಾಗಲಿ ಅಥವಾ ಪ್ರಧಾನಿಯಾಗಲಿ ಈ ಬಗ್ಗೆ ಮಾತನಾಡಲಿಲ್ಲ. ಜಿಎಸ್‌ಟಿ ಬಾಕಿಯನ್ನು ಜಿಎಸ್‌ಟಿ ಕೌನ್ಸಿಲ್ ಇತ್ಯರ್ಥಪಡಿಸಬೇಕು. ನಮ್ಮ ಹಣಕಾಸು ಸಚಿವರು ಅವರನ್ನು ತಡೆಯಲು ನಿರ್ಧರಿಸಿದರೂ ಅದು ಸಾಧ್ಯವಿಲ್ಲ. ತಮಿಳುನಾಡಿಗೆ ಬಾಕಿ ಇರುವ ಜಿಎಸ್‌ಟಿ ಬಾಕಿಯನ್ನು ನಿಲ್ಲಿಸುವಲ್ಲಿ ಹಣಕಾಸು ಸಚಿವರ ಪಾತ್ರವಿಲ್ಲ” ಎಂದಿದ್ದಾರೆ.

ಭಾಷಣದಲ್ಲಿ ಸ್ಟಾಲಿನ್ ಗಮನ ಸೆಳೆದ ಅಂಶಗಳು

“ಹಿಂದಿಗೆ ಸಮಾನವಾಗಿ ತಮಿಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಟಾಲಿನ್‌ ಒತ್ತಾಯಿಸಿದರು.

ರಾಜ್ಯ ವಿಧಾನಸಭೆಯಲ್ಲಿ ನೀಟ್‌ ವಿರುದ್ಧ ಮಸೂದೆಯನ್ನು ಅಂಗೀಕರಿಸಿದ್ದು, ತಮಿಳುನಾಡಿಗೆ ನೀಟ್‌ನಿಂದ ವಿನಾಯಿತಿ ನೀಡಬೇಕು. ಇತರ ರಾಜ್ಯಗಳಿಗೆ ಹೋಲಿಸಿದರೆ ತಮಿಳುನಾಡು ವಿಶಿಷ್ಟವಾಗಿದೆ. ಸಾಮಾಜಿಕ ನ್ಯಾಯ, ಮಹಿಳಾ ಅಭಿವೃದ್ಧಿ ಮತ್ತು ಸಮಾನತೆಗೆ ಆದ್ಯತೆ ನೀಡಿದೆ ಎಂದು ತಿಳಿಸಿದರು.

“ದ್ರಾವಿಡ ಮಾದರಿಯ ಆಡಳಿತವು ಹಣಕಾಸಿನ ಅಸಮತೋಲನವನ್ನು ಬಹುಮಟ್ಟಿಗೆ ಸರಿಪಡಿಸಿದೆ. ರಾಜ್ಯಗಳಿಗೆ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರ ಹೆಚ್ಚಿಸಬೇಕು. ಆಗ ಮಾತ್ರ ಸಹಕಾರಿ ಫೆಡರಲಿಸಂನ ನಿಜವಾದ ಮನೋಭಾವವನ್ನು ಎತ್ತಿಹಿಡಿದಂತಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

14,006 ಕೋಟಿ ರೂಪಾಯಿಗಳ ಜಿಎಸ್‌ಟಿ ಪರಿಹಾರದ ಬಾಕಿಯನ್ನು ಬಿಡುಗಡೆ ಮಾಡಬೇಕು. ಜೂನ್ 2022 ರಿಂದ ಪರಿಹಾರದ ಅವಧಿಯನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿರಿ: ಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

ಕಳೆದ ವರ್ಷ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದ ಡಿಎಂಕೆ, ತಮಿಳಿಗೆ “ಅಧಿಕೃತ ಮತ್ತು ಆಡಳಿತಾತ್ಮಕ” ಭಾಷಾ ಸ್ಥಾನಮಾನವನ್ನು ಬಹಳ ಹಿಂದಿನಿಂದಲೂ ಒತ್ತಾಯಿಸುತ್ತಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರದಲ್ಲಿದ್ದಾಗ ತಮಿಳಿಗೆ “ಶಾಸ್ತ್ರೀಯ ಭಾಷೆ” ಸ್ಥಾನಮಾನ ನೀಡಲಾಗಿತ್ತು.

ಮೋದಿ ಮಾತುಗಳು

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ತಮಿಳು ಭಾಷೆ “ಶಾಶ್ವತ” ಎಂದು ಬಣ್ಣಿಸಿದರು.

ಎನ್‌ಡಿಎ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಭಾರತೀಯ ಭಾಷೆಗಳನ್ನು ಉತ್ತೇಜಿಸಲು ವಿಶೇಷ ಪ್ರಾಮುಖ್ಯತೆಯನ್ನು ನೀಡಿದೆ ಎಂದು ಪ್ರತಿಪಾದಿಸಿದರು.

“ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ತಾಂತ್ರಿಕ ಮತ್ತು ವೈದ್ಯಕೀಯ ಕೋರ್ಸ್‌ಗಳನ್ನು ಸ್ಥಳೀಯ ಭಾಷೆಗಳಲ್ಲಿ ಮಾಡಬಹುದು. ತಮಿಳುನಾಡಿನ ಯುವಕರು ಇದರಿಂದ ಪ್ರಯೋಜನ ಪಡೆಯುತ್ತಾರೆ” ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿಯು ಅಸಮಾನ ಶಿಕ್ಷಣ ವ್ಯವಸ್ಥೆಯನ್ನು ತರಲಿದೆ ಎಂದು ತಮಿಳುನಾಡು ಆತಂಕ ವ್ಯಕ್ತಪಡಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಎಂ ಜಿ ಆರ್ ಕರುಣಾನಿಧಿ ಜಯಲಲಿತ ಇವತ್ತಿನ ಸ್ಟಾಲಿನ್ ಆಗಲೀ ಅವರ nativity ಉಳಿಸಿಕೊಳ್ಳುವತ್ತ ಪ್ರಾಮಾಣಿಕ ಹೆಜ್ಜೆಹಾಕಿದ್ದಾರೆ…ನಮ್ಮ ರಾಜ್ಯದ ಹಣೆ ಬರಹ ನೋಡಿ ಎಲ್ಲಕ್ಕೂ ದೆಹಲಿಯ ಸುಲ್ತಾನರ ಮುಂದೆ ಮಂಡಿಯೂರಬೇಕು….ಅಲ್ಲಿ ಬಂದವರೆಲ್ಲ ಮುಖ್ಯ ? ಮಂತ್ರಿ ಗಳಾದರೆ ..ನಮ್ಮ ರಾಜ್ಯಕ್ಕೆ ಮಾತ್ರ ಯಾವಾಗಲೂ ಅಮುಖ್ಯ ಮಂತ್ರಿಗಳದೇ I mean ದೆಹಲಿಯ ಗುಲಾಮರ ಸಂತತಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....