Homeರಾಷ್ಟ್ರೀಯಆರ್ಯನ್ ಖಾನ್‌ ಪ್ರಕರಣದಲ್ಲಿ ‘ಕಳಪೆ’ ತನಿಖೆ: ಸಮೀರ್‌‌ ವಾಂಖೆಡೆ ವಿರುದ್ಧ ಕ್ರಮಕ್ಕೆ ಆದೇಶ

ಆರ್ಯನ್ ಖಾನ್‌ ಪ್ರಕರಣದಲ್ಲಿ ‘ಕಳಪೆ’ ತನಿಖೆ: ಸಮೀರ್‌‌ ವಾಂಖೆಡೆ ವಿರುದ್ಧ ಕ್ರಮಕ್ಕೆ ಆದೇಶ

- Advertisement -
- Advertisement -

ಮುಂಬೈ ಡ್ರಗ್ಸ್ ಆನ್ ಕ್ರೂಸ್‌‌ ಪ್ರಕರಣದ ಆರಂಭದಲ್ಲಿ ತನಿಖೆ ನಡೆಸಿದ್ದ ಮಾದಕ ದ್ರವ್ಯ ನಿಗ್ರಹ ಅಧಿಕಾರಿ ಸಮೀರ್ ವಾಂಖೆಡೆ ಅವರು ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ ಬಗ್ಗೆ ಮತ್ತು ಡ್ರಗ್ಸ್ ಪ್ರಕರಣದಲ್ಲಿ ‘ಕಳಪೆ ತನಿಖೆ’ ಆರೋಪದಲ್ಲಿ ಕ್ರಮ ಎದುರಿಸುತ್ತಿದ್ದಾರೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

“ಸಮೀರ್ ವಾಂಖೆಡೆ ಅವರ ವಿರುದ್ಧ ‘ಅಸಮರ್ಪಕ ತನಿಖೆ’ಗಾಗಿ ಕ್ರಮ ಕೈಗೊಳ್ಳುವಂತೆ ಸರ್ಕಾರದಿಂದ ಸಕ್ಷಮ ಪ್ರಾಧಿಕಾರವನ್ನು ಕೇಳಲಾಗಿದೆ. ಅವರ ನಕಲಿ ಜಾತಿ ಪ್ರಮಾಣಪತ್ರಕ್ಕಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರಿ ಉದ್ಯೋಗ ಗಿಟ್ಟಿಸಲು ಸಮೀರ್‌‌ ವಾಂಖೆಡೆ ನಕಲಿ ದಾಖಲೆಗಳನ್ನು ಬಳಸಿದ್ದಾರೆ ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಆರೋಪಿಸಿದ್ದರು. ಇದರ ನಂತರ ಅವರು ಕಳೆದ ನವೆಂಬರ್‌ನಲ್ಲಿ ತಾನು ದಲಿತ ಎಂದು ಸಾಬೀತುಪಡಿಸಲು ತನ್ನ ಮೂಲ ಜಾತಿಯ ದಾಖಲೆಗಳನ್ನು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ನೀಡಿದ್ದರು.

ಇದನ್ನೂ ಓದಿ: ಆರ್ಯನ್ ಖಾನ್‌ರಂತೆ ಕ್ರೂಸ್ ಶಿಪ್ ಪಾರ್ಟಿಗೆ ನನ್ನನ್ನು ಆಹ್ವಾನಿಸಲಾಗಿತ್ತು: ಮಹಾರಾಷ್ಟ್ರ ಸಚಿವ ಅಸ್ಲಾಮ್ ಶೇಖ್

ಸಮೀರ್‌‌ ವಾಂಖೆಡೆ ಅವರು ಎನ್‌ಸಿಬಿ ಮುಂಬೈ ವಲಯದ ಮುಖ್ಯಸ್ಥರಾಗಿದ್ದರು. ಮುಂಬೈ ಕರಾವಳಿಯ ಹಡಗಿನಲ್ಲಿ ಡ್ರಗ್ಸ್‌ ವಿರೋಧಿ ದಾಳಿಯ ನಂತರ ಅವರು ಆರಂಭಿಕ ತನಿಖೆಯನ್ನು ನಿರ್ವಹಿಸಿದ್ದರು. ಈ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು.

ಬಳಿಕ ಆರ್ಯನ್‌ ಖಾನ್‌ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಪ್ರಕರಣದಲ್ಲಿ ಎನ್‌‌ಸಿಬಿ ಸಲ್ಲಿಸಿರುವ 6,000 ಪುಟಗಳ ಚಾರ್ಜ್‌ಶೀಟ್‌ನಲ್ಲಿ 14 ಆರೋಪಿಗಳನ್ನು ಹೆಸರಿಸಿದೆ. ಆದರೆ ಅದರಲ್ಲಿ ಆರ್ಯನ್‌ ಖಾನ್‌ ಹೆಸರನ್ನು ಉಲ್ಲೇಖಿಸಲಾಗಿಲ್ಲ. ಹೀಗಾಗಿ ಡ್ರಗ್ಸ್-ಆನ್-ಕ್ರೂಸ್ ಪ್ರಕರಣದಲ್ಲಿ ಅವರಿಗೆ ಕ್ಲೀನ್ ಚಿಟ್‌ ನೀಡಲಾಗಿದೆ.

“ಈಗ ಆರ್ಯನ್ ಖಾನ್ ಮತ್ತು ಇತರ 5 ಜನರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಎನ್‌ಸಿಬಿ ಸಮೀರ್ ವಾಂಖೆಡೆ ಅವರ ತಂಡ ಮತ್ತು ಖಾಸಗಿ ಸೇನೆಯ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ? ಅಥವಾ ಅಪರಾಧಿಗಳನ್ನು ರಕ್ಷಿಸುತ್ತದೆಯೇ?” ಎಂದು ಸಚಿವ ನವಾಬ್ ಮಲಿಕ್ ಕಚೇರಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು 

ಡ್ರಗ್ಸ್ ದಾಳಿಯ ನಂತರ ಸಮೀರ್‌‌ ವಾಂಖೆಡೆ ನಡೆಸಿದ ತನಿಖೆಯಲ್ಲಿ ಐದು ಅಕ್ರಮಗಳು ನಡೆಸಿದೆ ಎಂದು ಇಂದು ಗೃಹ ಸಚಿವಾಲಯದ ಮೂಲಗಳು ವಿವರಿಸಿವೆ ಎಂದು ಎನ್‌ಡಿಟಿವಿ ಹೇಳಿದೆ.

ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ವಿಡಿಯೋಗ್ರಫಿ ಮಾಡಲಾಗಿಲ್ಲ ಮತ್ತು ಆರ್ಯನ್ ಖಾನ್ ಅವರ ಫೋನ್‌ನ ವಿಷಯಗಳನ್ನು ವಿಶ್ಲೇಷಿಸುವಲ್ಲಿ ಲೋಪವಾಗಿದೆ. ಯಾಕೆಂದರೆ ಅವರ ಫೋನ್‌ ಚಾಟ್‌ಗಳು ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಆರ್ಯನ್‌ ಖಾನ್‌ ಡ್ರಗ್ಸ್ ಸೇವನೆ ಮಾಡಿದ್ದಾರೆ ಎಂದು ಸಾಬೀತುಪಡಿಸಲು ಯಾವುದೇ ವೈದ್ಯಕೀಯ ಪರೀಕ್ಷೆಯನ್ನು ಮಾಡಲಾಗಿಲ್ಲ. ಅಲ್ಲದೆ ಪ್ರಕರಣದಲ್ಲಿ ಒಬ್ಬ ಸಾಕ್ಷಿಯು ಪ್ರತಿಕೂಲವಾಗಿ ತಿರುಗಿ, ಖಾಲಿ ಪೇಪರ್‌ಗಳ ಮೇಲೆ ಸಹಿ ಹಾಕಲಾಗಿತ್ತು ಎಂದು ವಿಶೇಷ ತನಿಖಾ ತಂಡಕ್ಕೆ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಇಬ್ಬರು ಸಾಕ್ಷಿಗಳು NCB ದಾಳಿಯ ಸಮಯ ಸ್ಥಳದಲ್ಲಿ ತಾವು ಇರಲಿಲ್ಲ ಎಂದು ತನಿಖಾ ತಂಡಕ್ಕೆ ಅವರು ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಆರೋಪದಿಂದ ಆರ್ಯನ್ ಖಾನ್‌ ದೋಷಮುಕ್ತ: NCB ನ್ಯಾಯಾಲಯ ಘೋಷಣೆ

ಆರ್ಯನ್ ಖಾನ್ ಡ್ರಗ್ಸ್ ಇಲ್ಲದೆ ಪತ್ತೆಯಾದಾಗಲೂ ಎಲ್ಲಾ ಆರೋಪಿಗಳನ್ನು ಬಂಧಿಸಿ ಪ್ರತಿಯೊಬ್ಬರ ವಿರುದ್ಧ ಒಂದೇ ರೀತಿಯ ಆರೋಪಗಳನ್ನು ಮಾಡಿರುವುದು ಮತ್ತೊಂದು ಗಂಭೀರವಾದ ಲೋಪವಾಗಿದೆ ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...