Homeಅಂಕಣಗಳುಸನ್ಯಾಸಿಗಳೆಂದರೆ ನಿಮಗೇನು ಗೊತ್ತಯ್ಯಾ

ಸನ್ಯಾಸಿಗಳೆಂದರೆ ನಿಮಗೇನು ಗೊತ್ತಯ್ಯಾ

- Advertisement -
- Advertisement -

ಅಧಿಕಾರಕ್ಕೆ ಆಸೆಪಡುವ ವಿಷಯದಲ್ಲಿ ನಮ್ಮ ರಾಜಕಾರಣಿಗಳು ’ನಾನೇನು ಸನ್ಯಾಸಿಯಲ್ಲ’ ಎಂಬ ಜನಪ್ರಿಯ ಮಾತನ್ನು ಸಲೀಸಾಗಿ ಬಳಸಿ ತಮ್ಮ ಅಜ್ಞಾನ ಪ್ರದರ್ಶಿಸುತ್ತಲೇ ಬಂದಿದ್ದಾರಲ್ಲಾ. ಸದರಿ ಮಾತನ್ನು ಮಾಧ್ಯಮದ ಕೆಲ ಮಂದಮತಿಗಳು ಬಿತ್ತರಿಸುತ್ತಿರುವಾಗ ಅವರ ಕಣ್ಣು ತೆರೆಸುವುದು ನಮ್ಮ ಜವಾಬ್ದಾರಿ ಅಲ್ಲವೆ.

ಸನ್ಯಾಸಿಯೆಂದರೆ ಸರ್ವಸಂಗ ಪರಿತ್ಯಾಗಿ, ಸಂಸಾರಕ್ಕೆ ಹೆದರಿದವನು, ಮೈಗಳ್ಳ, ದುಡಿದು ಬದುಕಲಾರದವನು, ಇತರರಿಗೆ ಅನ್ನ ಇಕ್ಕದವನು. ಸಂಸಾರಕ್ಕೆ ಹೆದರಿ ಸನ್ಯಾಸಿಯಾದವನನ್ನು ಪಾಪ ಸಂಸಾರಿಗಳೇ ಸಾಕಬೇಕು. ಹಾಗೆಂದು ಈತ ಲೈಂಗಿಕ ತೃಷೆಯಿಂದ ಮುಕ್ತನಾದವನೆಂದು ಹೇಳಲು ಬರುವುದಿಲ್ಲ. ಅವನ ಖಾಸಗಿ ವಿಷಯ ಅವನಿಗೆ ಗೊತ್ತು. ನಮ್ಮ ಪುರಾಣಗಳಲ್ಲಿ ಋಷಿಮುನಿಗಳಿಗೆ ಪತ್ನಿಯರಿದ್ದರು. ಅವರು ಋಷಿಗಳ ಯಜ್ಞಯಾಗದ ಪರಿಕರಗಳನ್ನ ಒದಗಿಸುತ್ತಾ, ಮುನಿಗಳಿಗೆ ನೀರು ತರುತ್ತ, ಗೆಡ್ಡೆಗೆಣಸು ಬೇಯಿಸಿಕೂಡುತ್ತ ಇದ್ದರು. ಗರ್ಮಿ ಪದಾರ್ಥ ತಿಂದ ಸನ್ಯಾಸಿ ಅರ್ಧರಾತ್ರಿಯಲ್ಲಿ ಹಠಾತ್ತನೆ ಎದ್ದುಬಂದು ಎರಗಿದರೆ ಯಾವ ಆಕ್ಷೇಪವನ್ನೂ ವ್ಯಕ್ತಪಡಿಸದೆ ಅರ್ಪಿಸಿಕೊಂಡು ಸೇವೆ ಮಾಡುತ್ತಿದ್ದರಂತಲ್ಲಾ, ಥೂತ್ತೇರಿ.

*****

ಈ ಪುರಾಣದ ಸನ್ಯಾಸಿಗಳ ಕತೆಯ ಮುಂದುವರಿಕೆ ನೋಡುವುದಾದರೆ: ಪುರಾಣದವರು ಆತ್ಮವಂಚಕರಾಗಿರಲಿಲ್ಲ. ನಯವಂಚಕರೂ ಆಗಿರಲಿಲ್ಲ. ಗಂಟುಗಳ್ಳರಾಗಿರಲಿಲ್ಲ. ತಾವು ಕಟ್ಟಿಕೊಂಡ ಕುಟೀರ ತಮ್ಮ ನಂತರ ನಾಶವಾಗುವಂತೆ ಮಾಡಿ ಸರಳವಾಗಿ ಬದುಕುತ್ತಿದ್ದರು. ಇಂತ ಸನ್ಯಾಸಿಗಳಿಗೆ ಇಂದಿನ ಸನ್ಯಾಸಿಗಳನ್ನ ಹೋಲಿಸುವುದಾದರೆ ಇವರಿಗೆ ಪತ್ನಿಯರಿಲ್ಲ ನಿಜ. ಆದರೆ ಪ್ರೇಯಸಿಯರಿದ್ದಾರೆ. ಆಕಸ್ಮಾತ್ ಮಗುವಾದರೆ ಅದನ್ನ ಫಾರಿನ್ನಿಗೆ ಕಳಿಸುವ ಪ್ರಭಾವಿಗಳು ಇವರು. ಲೈಂಗಿಕ ಹಗರಣದಲ್ಲಿ ಸಿಕ್ಕಿಬಿದ್ದರೆ ಒತ್ತಾಯದ ಸಂಭೋಗವನ್ನ ಒಪ್ಪಿತ ಸಂಭೋಗವೆಂದು ಬದಲಾಯಿಸಿ ತೀರ್ಪು ಪಡೆಯಬಲ್ಲರು. ಇವರು ಹಚ್ಚಿಕೊಳ್ಳುವ ಸೆಂಟುಗಳು ಮತ್ತು ಬರಿಸುವಂತಿರುತ್ತದೆ. ಕೆಲವು ಸನ್ಯಾಸಿಗಳು ಫೇರ್ ಅಂಡ್ ಲವ್ಲಿ ಹಚ್ಚದೆ ಸಭೆಗಳಿಗೆ ಬರುವುದಿಲ್ಲ. ಇನ್ನ ಕೈಯ್ಯ ಉಂಗರಗಳು ಕೊರಳ ಚೈನು ನೋಡಿದರೆ ಹೋರಿಯ ಶೃಂಗಾರ ನೋಡಿದಂತಾಗುತ್ತದೆ. ಇನ್ನ ನಾನೇ ದೇವರೆಂದು ಹೇಳಿಕೊಂಡು ಕಾಯಿಲೆಯಿಂದ ನರಳುತ್ತಿದ್ದ ದೇವಮಾನವನೊಬ್ಬ ತನ್ನ ಖಾಸಗಿ ಕೋಣೆಯಲ್ಲಿ ಚಿನ್ನದ ಕಮೋಡ್ ಹೊಂದಿದ್ದ. ಆದರೇನು ಪಾಯಿಖಾನೆ ವಾಸನೆ ಬದಲಿಸಲಾಗಲಿಲ್ಲವಂತಲ್ಲಾ, ಥೂತ್ತೇರಿ.

*****

’ನಾನು ಸನ್ಯಾಸಿಯಲ್ಲ’ ಎಂದು ಹೇಳುವ ರಾಜಕಾರಣಿಗಳಾಗಲಿ, ಅವರ ಮಾತನ್ನು ಕೊಂಡಾಡುತ್ತ ಪ್ರಕಟಿಸುವ ಕೆಲ ಮಾಧ್ಯಮದ ಮಂದಮತಿಗಳಾಗಲು, ಇನ್ನು ಮುಂದೆ ಆ ಮಾತುಗಳನ್ನು ಬಳಸುವ ಮುನ್ನ ಯೋಚಿಸಬೇಕಾಗುತ್ತದಲ್ಲ. ಸನ್ಯಾಸಿ ಎಂದು ಹೇಳಿಕೊಂಡು ಗದ್ದುಗೆ ಏರಿದವರು ಮಠದ ಸಂವಿಧಾನದಂತೆ ನಿವೃತ್ತಿ ಪಡೆಯದೆ ಹಠದಿಂದ ಮುಂದುವರೆಯುತ್ತಾರೆ. ಮಠದ ಆಸ್ತಿಯನ್ನ ಟ್ರಸ್ಟು ಮಾಡಿ ತಾವೇ ಅಧ್ಯಕ್ಷರಾಗುತ್ತಾರೆ. ಇದನ್ನ ದಕ್ಕಿಸಿಕೊಳ್ಳಲು ಗೂಂಡಾ ಪಡೆ ನಿರ್ಮಿಸುತ್ತಾರೆ. ಇವರ ನಿರ್ವಹಣೆಗೆ ತಾವೇ ತಾತ್ವಿಕವಾಗಿ ವಿರೋಧಿಸಿದ್ದ ಮದ್ಯವನ್ನ ಸರಬರಾಜು ಮಾಡುವಂತೆ ಆಜ್ಞಾಪಿಸುತ್ತಾರೆ. ತಮ್ಮ ಕಾಲಾನಂತರ ಭವ್ಯ ಸಮಾಧಿ ನಿರ್ಮಾಣದ ಬಗ್ಗೆ ಗಂಭೀರವಾಗಿ ಯೋಚಿಸುತ್ತಾರೆ. ಕಂಡುಕೇಳರಿಯದ ಇಂತಹ ಸವಲತ್ತು ನೋಡಿದ ರಾಜಕಾರಣಿಗಳು ಈ ಹಾಳು ರಾಜಕಾರಣಕ್ಕಿಂತ ಸನ್ಯಾಸಿಯಾಗಿದ್ದರೆ ಬದುಕು ಬಂಗಾರವಾಗುತಿತ್ತು ಎಂದು ಯೋಚಿಸಿ, ರಾಜಕಾರಣ ಬಿಟ್ಟು ಸನ್ಯಾಸಿಯಾದ ಉದಾಹರಣೆಯೂ ನಮ್ಮ ಮುಂದಿದೆ. ಇನ್ನ ಮದುವೆಯಾಗಿ ಮಕ್ಕಳು ಪಡೆದು ಸಂಸಾರ ಸಾಕಲಾರದೆ ರುಷಿಕುಮಾರರಾದ ಉದಾಹರಣೆಯೂ ನಮ್ಮ ಕಣ್ಣ ಮುಂದಿದೆ. ಬದುಕಲು ಚಿಕನ್ ಶಾಪ್ ಕೂಡ ತೆರೆಯಬಲ್ಲೆ ಎಂದು ಕೋಳಿ ಕಟ್ ಮಾಡಿದ ಅಹಿಂಸಾವಾದಿ ಸನ್ಯಾಸಿಯು ಇಲ್ಲೇ ಬದುಕಿದ್ದಾನಂತಲ್ಲಾ, ಥೂತ್ತೇರಿ.

*****

ಈ ಜಾಗತೀಕರಣದ ಬಂಡವಾಳಶಾಹಿ ಹೂಡೆತಕ್ಕೆ ಸಿಕ್ಕಿ ಭಾರತ ಅಲ್ಲೋಲಕಲ್ಲೋಲವಾಗುತ್ತ ಅದರಲ್ಲಿ ಸಂಸಾರಿಗಳು ಸನ್ಯಾಸಿಗಳಾಗುತ್ತ ಹೂರಟಿದ್ದಾರಂತಲ್ಲಾ. ಅದಕ್ಕಿಂತ ಮುಖ್ಯವಾಗಿ ಸ್ಥಾಪಿತ ಮೌಲ್ಯಗಳು ಪತನಗೊಂಡು ಜಾತಿ ಗಡಿರೇಖೆಗಳು ಅಳಿಸಿಹೋಗುತ್ತ ದುಡ್ಡಿದ್ದವರದೊಂದು ಜಾತಿ ಇಲ್ಲದವರದೊಂದು ಜಾತಿಯಾಗಿ ಬೇರ್ಪಡುತ್ತಿರುವಾಗ ಸನ್ಯಾಸಿ ಎಂಬ ಪದ ಸಮೃದ್ಧ ಪದವಾಗಿ ಕಾಣುತ್ತಿದೆಯಲ್ಲಾ. ಈ ಸಮೃದ್ಧತೆಯ ಬದುಕಿನ ಎಲ್ಲ ಐಭೋಗಗಳು ತುಂಬಿಕೊಂಡು ಅದು ಜನಸಾಮಾನ್ಯರಿಗೂ ಅರಿವಾಗಿ ಅವರ ಭಕ್ತಿಭಾವಗಳು ಮೊದಲಿಗಿಂತಲೂ ಇಮ್ಮಡಿಗೂಂಡಿವೆಯಂತಲ್ಲಾ. ಇದು ನಮ್ಮ ಪುರೋಹಿತಶಾಹಿಗಳಿಗೆ ಬಹು ಸಂತೋಷಕರ ಸಂಗತಿಯಾಗಿ ತಮ್ಮ ಅಜೆಂಡಾಗಳನ್ನೆಲ್ಲಾ ನಮ್ಮ ಬಹು ಸಂಸ್ಕೃತಿಯೊಳಕ್ಕೆ ತುರುಕುತ್ತ, ಮುಖ್ಯವಾಗಿ ಮಕ್ಕಳ ಮನಸ್ಸಿನ ಮೇಲೆ ಲಗ್ಗೆಯಿಟ್ಟಿದ್ದಾರಂತಲ್ಲಾ. ಈ ಪೈಕಿ ಗರ್ಭಗುಡಿಯಲ್ಲಿ ಕಸಹೊಡೆದು ಕ್ಲೀನ್ ಮಾಡಿ ಗಂಧದಕಡ್ಡಿ ಜೋಡಿಸಿ ಕರ್ಪೂರ ಹಚ್ಚಿ, ಹೂಗಳನ್ನ ವಿಂಗಡಿಸಿ ಕಟ್ಟಿ ಪ್ರಧಾನ ಅರ್ಚಕರು ಬರುವವರೆಗೆ ಕಾಯುತ್ತಿದ್ದಂತವನೊಬ್ಬ ಮಕ್ಕಳ ಶಿಕ್ಷಣ ಸಂಸ್ಥೆಯಲ್ಲಿ ಮಂಚೂಣಿಯಲ್ಲಿದ್ದಾನಂತಲ್ಲಾ, ಥೂತ್ತೇರಿ.

******

ನಮ್ಮ ಶಿಕ್ಷಣ ಸಂಸ್ಥೆಯೊಳಕ್ಕೆ ವಿಪ್ರೋತ್ತಮರು ಸೇರಿಕೂಂಡು ಮಾಡುತ್ತಿರುವ ಅನಾಹುತಕ್ಕೆ ಇಡೀ ಕರ್ನಾಟಕವೇ ಕೋಲಾಹಲಗೊಂಡಿರುವಾಗ ನಮ್ಮ ಮುಖ್ಯಮಂತ್ರಿ ಶಿಕ್ಷಣ ಇಲಾಖೆಯ ಪರಂಪರೆಯನ್ನ ಗ್ರಹಿಸಬೇಕಿತ್ತಲ್ಲಾ. ಅಲ್ಲಿ ಶಿಕ್ಷಣ ಸಚಿವರಾಗಿದ್ದ ಶಂಕರೇಗೌಡರ ಹೆಸರು ಚಿರಸ್ಥಾಯಿಯಾಗಿದೆ. ಗೋವಿಂದೇಗೌಡರ ಹೆಸರು ಅಜರಾಮರವಾಗಿದೆ. ಇನ್ನು ಕಳೆದ ಸರಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಕಿಮ್ಮನೆ ರತ್ನಾಕರ್ ಪ್ರಾಮಾಣಿಕತೆಯಲ್ಲಿ ಗೋವಿಂದೇಗೌಡರನ್ನ ಸರಿಗಟ್ಟಿದ್ದಲ್ಲದೆ, ಅವರ ಬಳಿಹೋದ ಶಿಕ್ಷಕರಿಗೆ ಅವರ ಸಬ್ಜೆಕ್ಟ್‌ನ ಬಗ್ಗೆ ಪ್ರಶ್ನೆ ಕೇಳಿ ತಬ್ಬಿಬ್ಬುಗೇಳಿಸುತ್ತಿದ್ದು ಈಗ ಇತಿಹಾಸ. ಆದರೆ ಈಗಿನ ಶಿಕ್ಷಣ ಸಚಿವರ ತಲೆ ತುಂಬಾ ಪುರೋಹಿತಶಾಹಿ ಪ್ರಶ್ನೆಗಳೇ ತುಂಬಿಕೊಂಡು ಅವನ್ನೆಲ್ಲಾ ಜಾರಿಮಾಡಲು ಹೊರಟಿದ್ದಾರಲ್ಲಾ. ಇದಕ್ಕೆಲ್ಲಾ ಅಂತವರಿಗೆ ಶಿಕ್ಷಣ ಖಾತೆ ಕೂಟ್ಟ ಮುಖ್ಯಮಂತ್ರಿಗಳೆ ಹೊಣೆಗಾರರಾಗಬೇಕಾಗುತ್ತದೆ. ಆದರೇನು ಅವರ ಎಡ ಮಂಡಿ ನೋವಿನ ಮುಂದೆ ಇನ್ಯಾವ ಸಮಸ್ಯೆಗಳೂ ಇಲ್ಲ. ಅದಕ್ಕಿಂತ ಮುಖ್ಯವಾಗಿ ತಿಪಟೂರು ಶಾಲಾಮೈದಾನದಲ್ಲಿ ಅವುಡುಗಚ್ಚಿ ಲಾಠಿ ಬೀಸುತ್ತಿದ್ದ ಆಸಾಮಿಗೆ ಶಿಕ್ಷಣ ಖಾತೆ ಕೂಟ್ಟವರು ಮುಖ್ಯಮಂತ್ರಿಗಳಲ್ಲ. ಕೇಶವಕೃಪದಿಂದ ಬಂದ ಪಟ್ಟಿಯನ್ನು ಜಾರಿಮಾಡಿದರಂತಲ್ಲಾ, ಥೂತ್ತೇರಿ…


ಇದನ್ನೂ ಓದಿ: ದಶಕದ ನಂತರ ಗೆದ್ದ ಅಗ್ರಹಾರದ ಜಟ್ಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...