Homeನಿಜವೋ ಸುಳ್ಳೋಇಲ್ಲಿರುವುದು ಬಾಲಕ ಅಬ್ದುಲ್ ಕಲಾಂರೋ? ಅಥವಾ ಬಾಲಕ ಮೋದಿಯೋ? ಗುರುತಿಸಬಲ್ಲಿರಾ?

ಇಲ್ಲಿರುವುದು ಬಾಲಕ ಅಬ್ದುಲ್ ಕಲಾಂರೋ? ಅಥವಾ ಬಾಲಕ ಮೋದಿಯೋ? ಗುರುತಿಸಬಲ್ಲಿರಾ?

- Advertisement -
- Advertisement -

ಇಲ್ಲಿ ತಾಯಿ ಮತ್ತು ಬಾಲಕ ಇರುವ ಫೋಟೊ ನೋಡಿ. ಅದರಲ್ಲಿರುವ ಬಾಲಕ ಮಾಜಿ ರಾಷ್ಟ್ರಪತಿ, ಕ್ಷಿಪಣಿ ವಿಜ್ಞಾನಿ ಅಬ್ದುಲ್ ಕಲಾಂ ಅಂತ ಒಂದು ವಾದ ತೇಲಿ ಬಂತು. ನಂತರ ಇದೇ ಫೋಟೊ ಹಾಕಿದ ಕೆಲವು ಸಾಮಾಜಿಕ ಜಾಲತಾಣಗಳ ಗುಂಪುಗಳು ‘ದೇಶಕ್ಕೆ ಇವತ್ತು ಅಪದ್ಭಾವಂತನಾಗಿ ಬಂದಿದ್ದು ಇದೇ ಬಾಲಕ.. ಇದು ಮೋದಿಯ ಬಾಲ್ಯದ ಫೋಟೋ ಎಂದು ಪ್ರಚಾರ ಮಾಡಿದ್ದವು.

ಈ ಫೋಟೊದಲ್ಲಿರುವುದು ಬಾಲ ಮೋದಿಯೋ ಅಥವಾ ಬಾಲ ಕಲಾಂರೋ ಎನ್ನುವುದಂತೂ ಆರೋಗ್ಯಕರ ಮನಸ್ಸುಗಳಿಗೆ ಗಂಭೀರ ವಿಷಯವಂತೂ ಅಲ್ಲವೇ ಅಲ್ಲ. ನಮ್ಮ ತಂಡಕ್ಕೂ ಅದೇ ಅಭಿಪ್ರಾಯವಿದ್ದರೂ, ಇಂತಹ ಸಣ್ಣ ವಿಷಯಗಳ ಹಿಂದಿನ ಸತ್ಯಾಸತ್ಯತೆ ತಿಳಿಸುವುದು ನಮ್ಮ ಜವಾಬ್ದಾರಿ. ಅದೆಲ್ಲಕ್ಕಿಂತ ಮುಖ್ಯವಾಗಿ ಫೇಕ್ ಸುದ್ದಿಗಳ ಈ ಕಾಲದಲ್ಲಿ ಸಾಮಾನ್ಯ ಕುಟುಂಬವೊಂದರ ಗ್ರೂಪ್ ಫೋಟೊವನ್ನೂ ಹೇಗೆ ದುರುಪಯೋಗ ಮಾಡುತ್ತಿದ್ದಾರೆ ಎಂಬುದನ್ನು ಜನರ ಗಮನಕ್ಕೆ ತರುವುದಷ್ಟೇ ನಮ್ಮ ಉದ್ದೇಶ. ಜನಸಾಮಾನ್ಯರ ಖಾಸಗಿ ಬದುಕಿನ ಫೋಟೊಗಳನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವ ಅಸಹ್ಯ ಚಾಳಿಯನ್ನು ತೋರಿಸಲು ಇದನ್ನು ಪ್ರಕಟಿಸುತ್ತಿದ್ದೇವೆ.

ಇಲ್ಲಿ ಮಹಿಳೆಯಬ್ಬರು ಬಾಲಕನ ಜೊತೆ ಇರುವ ಫೋಟೊ ಗಮನಿಸಿ. ಕಳೆದ ವಾರದಿಂದಲೂ ಕೆಲವು ಸಾಮಾಜಿಕ ಜಾಲತಾಣಗಳ ಗುಂಪುಗಳು ಈ ಫೋಟೊ ಬಳಸಿ, ತಾಯಿ ಹಿರಾಬೆನ್ ಜೊತೆಗೆ ಬಾಲಕ ಮೋದಿ ಎಂದು ಪ್ರಚಾರ ಮಾಡಿದ್ದಾರೆ. ಇದರಿಂದ ದೇಶಕ್ಕೇನೂ ನಷ್ಟವಿಲ್ಲ ಅಂತ ಅನಿಸಬಹುದು. ಆದರೆ ಫೇಸ್‍ಬುಕ್ ಬಳಕೆದಾರರೊಬ್ಬರು ಈ ಫೋಟೊ ಹಾಕಿ, ಅದರ ಮೇಲೆ ಹಿಂದಿಯಲ್ದಿ, ‘ 132 ಕೋಟಿ ಜನರನ್ನು ಶಾಕ್ ಮಾಡಿದ್ದು ಇದೇ ಬಾಲಕ…’ ಎಂಬ ಸಾಲು ಲಗತ್ತಿಸಿ, ‘ಜೈದೇವ್, ತಾಯಿಯೊಂದಿಗೆ ನರೇಂದ್ರ ಮೋದಿಯ ಬಾಲ್ಯದ ಫೋಟೋ’ ಎಂದು ಪೋಸ್ಟ್ ಹಾಕಿದ್ದರು. ಸಾವಿರಾರು ಟ್ವೀಟರ್ ಮತ್ತು ವ್ಯಾಟ್ಸಾಪ್ ಬಳಕೆದಾರರು ಇದೇ ಸಂದೇಶದೊಂದಿಗೆ ಈ ಫೋಟೊವನ್ನು ಶೇರ್ ಮಾಡಿದರು, ಮಾಡುತ್ತಲೇ ಇದ್ದಾರೆ.

ನಿಜಕ್ಕೂ ಇದು ಬಾಲಕ ಮೋದಿ ಮತ್ತು ತಾಯಿಯ ಫೋಟೊವೇ?
ಈ ಕುರಿತು ಅಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ಮಾಡಿದಾಗ, ಫೋಟೊದಲ್ಲಿರುವ ಬಾಲಕ ಮೋದಿ ಅಲ್ಲ ಎಂಬುದು ಖಾತ್ರಿಯಾಗಿತು. ಜೊತೆಗೆ ಇನ್ನಷ್ಟು ವಿಚಿತ್ರ ಸಂಗತಿಗಳು ಹೊರಬಂದವು. ಇದೇ ಫೋಟೊವನ್ನು ಪ್ರಕಟಿಸಿ ಹಲವಾರು ಮಾಧ್ಯಮಗಳು ತಪ್ಪು ಎಸಗಿದ್ದವು. ಮೇ8, 2016ರಲ್ಲಿ ಇಂಡಿಯಾ ಟುಡೇ ಪ್ರಕಟಿಸಿದ ಒಂದು ಬರಹದಲ್ಲಿ ಇದೇ ಫೋಟೊ ಹಾಕಿ, ‘ಐಶಿಯಮ್ಮ ಜೈನಿಲುಬುದ್ದಿನ್, ಕಲಾಂ ತಾಯಿ’ ಎಂದು ಕ್ಯಾಪ್ಸನ್ ನೀಡಲಾಗಿತ್ತು.

ಶೋಧ ಮುಂದುವರೆಸಿದಾಗ, ಮೇಲೆ ಬಳಸಿದ ಆ ಎರಡು ಫೋಟೊಗಳು ಒಂದೇ ಎಂಬುದು ಪಕ್ಕಾ ಆಗಿತು. ಆದರೆ, ಒಂದು ಗ್ರೂಪ್ ಫೋಟೊದಿಂದ ಕತ್ತರಿಸಿ ಈ ಅರೆಬರೆ ಫೋಟೊವನ್ನು ಬಳಸಲಾಗಿತ್ತು.

ಈ ಫೋಟೊದ ಮೂಲ ಯಾವುದು?
2013ರ ಆಗಸ್ಟ್ ನಲ್ಲಿ ಈ ಫೋಟೊವನ್ನು ಬ್ಲಾಗ್ ಒಂದರಲ್ಲಿ ಬಳಸಲಾಗಿತ್ತು. ಜುಲೈ 2018ರಲ್ಲಿ ಕಲಾಂರ ಜಯಂತಿಯಂದು ಜಾಗೃಣ್ ಸಮೂಹ ಎಂಬ ಶೈಕ್ಷಣಿಕ ಸಂಸ್ಥೆಯ ಜಾಗೃಣ್ ಪೋರ್ಟಲ್‍ನಲ್ಲ್ಲಿ ಇದೇ ಫೋಟೊ ಬಳಸಿ, ತಾಯಿಯೊಂದಿಗೆ ಬಾಲಕ ಕಲಾಂ ಎಂದು ಬರೆಯಲಾಗಿತ್ತು.

ಕೊನೆಗೆ ಆಲ್ಟ್ ನ್ಯೂಸ್ ಕಲಾಂರ ಸಮೀಪದ ಸಂಬಂಧಿಕ ಅಜ್ಜನ ಕಡೆಯವರು, ಹಾಗೆಯೇ ಕಲಾಂ ಇಂಟರ್‍ನ್ಯಾಷನಲ್ ಫೌಂಡೇಷನ್ನಿನ ಮ್ಯಾನೇಜಿಂಗ್ ಟ್ರಸ್ಟಿಯೂ ಆಗಿರುವ ಶೇಖ ಸಲೀಮರನ್ನು ಸಂಪರ್ಕಿಸಿದಾಗ, ‘ಇದರಲ್ಲಿರುವುದು ಕಲಾಂ ಅಥವಾ ತಾಯಿ ಅಲ್ಲವೇ ಅಲ್ಲ, ಕಲಾಂ ಆ ವಯಸ್ಸಿನವರು ಆಗಿರುವ ಸಂದರ್ಭದಲ್ಲಿನ ಯಾವ ಫೋಟೊವೂ ಲಭ್ಯ ಇಲ್ಲ. ಆ ಸಂದರ್ಭದಲ್ಲಿ ಕಲಾಂ ತಾವು ಫೋಟೊ ತೆಗಿಸಿಕೊಳ್ಳಲು ಹಿಂಜರಿಯುತ್ತಿದ್ದ ಮುಗ್ಧ ಆಗಿದ್ದರು. ‘ಹೌಸ್ ಆಫ್ ಕಲಾಂ’ನಲ್ಲಿ ಇರುವ ಫೋಟೊಗಳ ಪೈಕಿ ಕಲಾಂರ ಚಿಕ್ಕಂದಿನ ಫೋಟೊ ಎಂದರೆ ಅವರು ಕಾಲೇಜು ಸೇರುವಾಗ ತೆಗೆಸಿದ್ದು’ ಎಂದು ಸತ್ಯದ ಅನಾವರಣ ಮಾಡಿದರು..

ಯುವಕ ಕಲಾಂ ಫೋಟೊ

ಅಂದರೆ ಯಾವುದೋ ಒಂದು ಅಪರಿಚಿತ ಸಾಮಾನ್ಯ ಕುಟುಂಬದ ಗ್ರೂಪ್ ಫೋಟೊ ಈ ತಂತ್ರಜ್ಷಾನ ಕಾಲದಲ್ಲಿ ಹೇಗೆ ದುರುಪಯೋಗವಾಗುತ್ತಿದೆ ಎಂಬುದನ್ನು ತೋರಿಸಲು ಈ ಬರಹವನ್ನು ನಾನುಗೌರಿ.ಕಾಮ್ ಪ್ರಕಟಿಸುತ್ತಿದೆ.

ಇಲ್ಲಿ ಇಂಡಿಯಾಟುಡೇ ಕಣ್ತಪ್ಪನಿಂದ, ಜಾಗೃಣ ಸಂಸ್ಥೆ ಅಜ್ಞಾನದಿಂದ ತಪ್ಪು ಮಾಡಿರಬಹುದು, ಆದರೆ ಇದು ಬಾಲಕ ಮೋದಿ ಎಂದು ಹಬ್ಬಿಸಿರುವುದರ ಜನರನ್ನು ಕ್ಷಮಿಸಲಾಗದು. ‘ಇದೇ ಬಾಲಕ ನೋಡಿ 130 ಕೋಟಿ ಗೆದ್ದಿರುವುದು’ ಎಂದು ಹಾಕುವಾಗ ನಿಜವಾದ ಬಾಲಕ ಮೊದಿಯ ಫೋಟೊ ಹಾಕಿದ್ದರೆ ನಮ್ಮ ಅಭ್ಯಂತರ ಇರಲಿಲ್ಲ.

ಪಾಪ, ಮೋದಿಯವರೆ ಅವರ ಬಾಲ್ಯದ ಕುರಿತು ಕನಫ್ಯೂಸ್ ಮಡುತ್ತ ಬಂದಿದ್ದಾರಲ್ಲ? ಭಕ್ತರೇ ಮೋದಿಯ ಬಾಲ್ಯದ ಫೋಟೊ ಸಿಗಲ್ಲ, ಆದರೆ ಯಾವುದೋ ಮಗುವಿನ, ಕುಟುಂಬದ ಫೋಟೊ ಬಳಸಬೇಡಿ. ಅಷ್ಟಾದರೂ ಸೂಕ್ಷ್ಮ ಕಲಿಯಿರಿ.
(ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...