Homeನಿಜವೋ ಸುಳ್ಳೋಇಲ್ಲಿರುವುದು ಬಾಲಕ ಅಬ್ದುಲ್ ಕಲಾಂರೋ? ಅಥವಾ ಬಾಲಕ ಮೋದಿಯೋ? ಗುರುತಿಸಬಲ್ಲಿರಾ?

ಇಲ್ಲಿರುವುದು ಬಾಲಕ ಅಬ್ದುಲ್ ಕಲಾಂರೋ? ಅಥವಾ ಬಾಲಕ ಮೋದಿಯೋ? ಗುರುತಿಸಬಲ್ಲಿರಾ?

- Advertisement -
- Advertisement -

ಇಲ್ಲಿ ತಾಯಿ ಮತ್ತು ಬಾಲಕ ಇರುವ ಫೋಟೊ ನೋಡಿ. ಅದರಲ್ಲಿರುವ ಬಾಲಕ ಮಾಜಿ ರಾಷ್ಟ್ರಪತಿ, ಕ್ಷಿಪಣಿ ವಿಜ್ಞಾನಿ ಅಬ್ದುಲ್ ಕಲಾಂ ಅಂತ ಒಂದು ವಾದ ತೇಲಿ ಬಂತು. ನಂತರ ಇದೇ ಫೋಟೊ ಹಾಕಿದ ಕೆಲವು ಸಾಮಾಜಿಕ ಜಾಲತಾಣಗಳ ಗುಂಪುಗಳು ‘ದೇಶಕ್ಕೆ ಇವತ್ತು ಅಪದ್ಭಾವಂತನಾಗಿ ಬಂದಿದ್ದು ಇದೇ ಬಾಲಕ.. ಇದು ಮೋದಿಯ ಬಾಲ್ಯದ ಫೋಟೋ ಎಂದು ಪ್ರಚಾರ ಮಾಡಿದ್ದವು.

ಈ ಫೋಟೊದಲ್ಲಿರುವುದು ಬಾಲ ಮೋದಿಯೋ ಅಥವಾ ಬಾಲ ಕಲಾಂರೋ ಎನ್ನುವುದಂತೂ ಆರೋಗ್ಯಕರ ಮನಸ್ಸುಗಳಿಗೆ ಗಂಭೀರ ವಿಷಯವಂತೂ ಅಲ್ಲವೇ ಅಲ್ಲ. ನಮ್ಮ ತಂಡಕ್ಕೂ ಅದೇ ಅಭಿಪ್ರಾಯವಿದ್ದರೂ, ಇಂತಹ ಸಣ್ಣ ವಿಷಯಗಳ ಹಿಂದಿನ ಸತ್ಯಾಸತ್ಯತೆ ತಿಳಿಸುವುದು ನಮ್ಮ ಜವಾಬ್ದಾರಿ. ಅದೆಲ್ಲಕ್ಕಿಂತ ಮುಖ್ಯವಾಗಿ ಫೇಕ್ ಸುದ್ದಿಗಳ ಈ ಕಾಲದಲ್ಲಿ ಸಾಮಾನ್ಯ ಕುಟುಂಬವೊಂದರ ಗ್ರೂಪ್ ಫೋಟೊವನ್ನೂ ಹೇಗೆ ದುರುಪಯೋಗ ಮಾಡುತ್ತಿದ್ದಾರೆ ಎಂಬುದನ್ನು ಜನರ ಗಮನಕ್ಕೆ ತರುವುದಷ್ಟೇ ನಮ್ಮ ಉದ್ದೇಶ. ಜನಸಾಮಾನ್ಯರ ಖಾಸಗಿ ಬದುಕಿನ ಫೋಟೊಗಳನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವ ಅಸಹ್ಯ ಚಾಳಿಯನ್ನು ತೋರಿಸಲು ಇದನ್ನು ಪ್ರಕಟಿಸುತ್ತಿದ್ದೇವೆ.

ಇಲ್ಲಿ ಮಹಿಳೆಯಬ್ಬರು ಬಾಲಕನ ಜೊತೆ ಇರುವ ಫೋಟೊ ಗಮನಿಸಿ. ಕಳೆದ ವಾರದಿಂದಲೂ ಕೆಲವು ಸಾಮಾಜಿಕ ಜಾಲತಾಣಗಳ ಗುಂಪುಗಳು ಈ ಫೋಟೊ ಬಳಸಿ, ತಾಯಿ ಹಿರಾಬೆನ್ ಜೊತೆಗೆ ಬಾಲಕ ಮೋದಿ ಎಂದು ಪ್ರಚಾರ ಮಾಡಿದ್ದಾರೆ. ಇದರಿಂದ ದೇಶಕ್ಕೇನೂ ನಷ್ಟವಿಲ್ಲ ಅಂತ ಅನಿಸಬಹುದು. ಆದರೆ ಫೇಸ್‍ಬುಕ್ ಬಳಕೆದಾರರೊಬ್ಬರು ಈ ಫೋಟೊ ಹಾಕಿ, ಅದರ ಮೇಲೆ ಹಿಂದಿಯಲ್ದಿ, ‘ 132 ಕೋಟಿ ಜನರನ್ನು ಶಾಕ್ ಮಾಡಿದ್ದು ಇದೇ ಬಾಲಕ…’ ಎಂಬ ಸಾಲು ಲಗತ್ತಿಸಿ, ‘ಜೈದೇವ್, ತಾಯಿಯೊಂದಿಗೆ ನರೇಂದ್ರ ಮೋದಿಯ ಬಾಲ್ಯದ ಫೋಟೋ’ ಎಂದು ಪೋಸ್ಟ್ ಹಾಕಿದ್ದರು. ಸಾವಿರಾರು ಟ್ವೀಟರ್ ಮತ್ತು ವ್ಯಾಟ್ಸಾಪ್ ಬಳಕೆದಾರರು ಇದೇ ಸಂದೇಶದೊಂದಿಗೆ ಈ ಫೋಟೊವನ್ನು ಶೇರ್ ಮಾಡಿದರು, ಮಾಡುತ್ತಲೇ ಇದ್ದಾರೆ.

ನಿಜಕ್ಕೂ ಇದು ಬಾಲಕ ಮೋದಿ ಮತ್ತು ತಾಯಿಯ ಫೋಟೊವೇ?
ಈ ಕುರಿತು ಅಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ಮಾಡಿದಾಗ, ಫೋಟೊದಲ್ಲಿರುವ ಬಾಲಕ ಮೋದಿ ಅಲ್ಲ ಎಂಬುದು ಖಾತ್ರಿಯಾಗಿತು. ಜೊತೆಗೆ ಇನ್ನಷ್ಟು ವಿಚಿತ್ರ ಸಂಗತಿಗಳು ಹೊರಬಂದವು. ಇದೇ ಫೋಟೊವನ್ನು ಪ್ರಕಟಿಸಿ ಹಲವಾರು ಮಾಧ್ಯಮಗಳು ತಪ್ಪು ಎಸಗಿದ್ದವು. ಮೇ8, 2016ರಲ್ಲಿ ಇಂಡಿಯಾ ಟುಡೇ ಪ್ರಕಟಿಸಿದ ಒಂದು ಬರಹದಲ್ಲಿ ಇದೇ ಫೋಟೊ ಹಾಕಿ, ‘ಐಶಿಯಮ್ಮ ಜೈನಿಲುಬುದ್ದಿನ್, ಕಲಾಂ ತಾಯಿ’ ಎಂದು ಕ್ಯಾಪ್ಸನ್ ನೀಡಲಾಗಿತ್ತು.

ಶೋಧ ಮುಂದುವರೆಸಿದಾಗ, ಮೇಲೆ ಬಳಸಿದ ಆ ಎರಡು ಫೋಟೊಗಳು ಒಂದೇ ಎಂಬುದು ಪಕ್ಕಾ ಆಗಿತು. ಆದರೆ, ಒಂದು ಗ್ರೂಪ್ ಫೋಟೊದಿಂದ ಕತ್ತರಿಸಿ ಈ ಅರೆಬರೆ ಫೋಟೊವನ್ನು ಬಳಸಲಾಗಿತ್ತು.

ಈ ಫೋಟೊದ ಮೂಲ ಯಾವುದು?
2013ರ ಆಗಸ್ಟ್ ನಲ್ಲಿ ಈ ಫೋಟೊವನ್ನು ಬ್ಲಾಗ್ ಒಂದರಲ್ಲಿ ಬಳಸಲಾಗಿತ್ತು. ಜುಲೈ 2018ರಲ್ಲಿ ಕಲಾಂರ ಜಯಂತಿಯಂದು ಜಾಗೃಣ್ ಸಮೂಹ ಎಂಬ ಶೈಕ್ಷಣಿಕ ಸಂಸ್ಥೆಯ ಜಾಗೃಣ್ ಪೋರ್ಟಲ್‍ನಲ್ಲ್ಲಿ ಇದೇ ಫೋಟೊ ಬಳಸಿ, ತಾಯಿಯೊಂದಿಗೆ ಬಾಲಕ ಕಲಾಂ ಎಂದು ಬರೆಯಲಾಗಿತ್ತು.

ಕೊನೆಗೆ ಆಲ್ಟ್ ನ್ಯೂಸ್ ಕಲಾಂರ ಸಮೀಪದ ಸಂಬಂಧಿಕ ಅಜ್ಜನ ಕಡೆಯವರು, ಹಾಗೆಯೇ ಕಲಾಂ ಇಂಟರ್‍ನ್ಯಾಷನಲ್ ಫೌಂಡೇಷನ್ನಿನ ಮ್ಯಾನೇಜಿಂಗ್ ಟ್ರಸ್ಟಿಯೂ ಆಗಿರುವ ಶೇಖ ಸಲೀಮರನ್ನು ಸಂಪರ್ಕಿಸಿದಾಗ, ‘ಇದರಲ್ಲಿರುವುದು ಕಲಾಂ ಅಥವಾ ತಾಯಿ ಅಲ್ಲವೇ ಅಲ್ಲ, ಕಲಾಂ ಆ ವಯಸ್ಸಿನವರು ಆಗಿರುವ ಸಂದರ್ಭದಲ್ಲಿನ ಯಾವ ಫೋಟೊವೂ ಲಭ್ಯ ಇಲ್ಲ. ಆ ಸಂದರ್ಭದಲ್ಲಿ ಕಲಾಂ ತಾವು ಫೋಟೊ ತೆಗಿಸಿಕೊಳ್ಳಲು ಹಿಂಜರಿಯುತ್ತಿದ್ದ ಮುಗ್ಧ ಆಗಿದ್ದರು. ‘ಹೌಸ್ ಆಫ್ ಕಲಾಂ’ನಲ್ಲಿ ಇರುವ ಫೋಟೊಗಳ ಪೈಕಿ ಕಲಾಂರ ಚಿಕ್ಕಂದಿನ ಫೋಟೊ ಎಂದರೆ ಅವರು ಕಾಲೇಜು ಸೇರುವಾಗ ತೆಗೆಸಿದ್ದು’ ಎಂದು ಸತ್ಯದ ಅನಾವರಣ ಮಾಡಿದರು..

ಯುವಕ ಕಲಾಂ ಫೋಟೊ

ಅಂದರೆ ಯಾವುದೋ ಒಂದು ಅಪರಿಚಿತ ಸಾಮಾನ್ಯ ಕುಟುಂಬದ ಗ್ರೂಪ್ ಫೋಟೊ ಈ ತಂತ್ರಜ್ಷಾನ ಕಾಲದಲ್ಲಿ ಹೇಗೆ ದುರುಪಯೋಗವಾಗುತ್ತಿದೆ ಎಂಬುದನ್ನು ತೋರಿಸಲು ಈ ಬರಹವನ್ನು ನಾನುಗೌರಿ.ಕಾಮ್ ಪ್ರಕಟಿಸುತ್ತಿದೆ.

ಇಲ್ಲಿ ಇಂಡಿಯಾಟುಡೇ ಕಣ್ತಪ್ಪನಿಂದ, ಜಾಗೃಣ ಸಂಸ್ಥೆ ಅಜ್ಞಾನದಿಂದ ತಪ್ಪು ಮಾಡಿರಬಹುದು, ಆದರೆ ಇದು ಬಾಲಕ ಮೋದಿ ಎಂದು ಹಬ್ಬಿಸಿರುವುದರ ಜನರನ್ನು ಕ್ಷಮಿಸಲಾಗದು. ‘ಇದೇ ಬಾಲಕ ನೋಡಿ 130 ಕೋಟಿ ಗೆದ್ದಿರುವುದು’ ಎಂದು ಹಾಕುವಾಗ ನಿಜವಾದ ಬಾಲಕ ಮೊದಿಯ ಫೋಟೊ ಹಾಕಿದ್ದರೆ ನಮ್ಮ ಅಭ್ಯಂತರ ಇರಲಿಲ್ಲ.

ಪಾಪ, ಮೋದಿಯವರೆ ಅವರ ಬಾಲ್ಯದ ಕುರಿತು ಕನಫ್ಯೂಸ್ ಮಡುತ್ತ ಬಂದಿದ್ದಾರಲ್ಲ? ಭಕ್ತರೇ ಮೋದಿಯ ಬಾಲ್ಯದ ಫೋಟೊ ಸಿಗಲ್ಲ, ಆದರೆ ಯಾವುದೋ ಮಗುವಿನ, ಕುಟುಂಬದ ಫೋಟೊ ಬಳಸಬೇಡಿ. ಅಷ್ಟಾದರೂ ಸೂಕ್ಷ್ಮ ಕಲಿಯಿರಿ.
(ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...