Homeರಾಷ್ಟ್ರೀಯಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹರಿಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾಗೆ ನಾಲ್ಕು ವರ್ಷಗಳ...

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹರಿಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರಿಗೆ ದೆಹಲಿ ಕೋರ್ಟ್ ಶುಕ್ರವಾರ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಆದೇಶ ನೀಡಿದ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ಚೌಟಾಲಾ ಅವರಿಗೆ 50 ಲಕ್ಷ ರೂಪಾಯಿ ದಂಡ ವಿಧಿಸಿ, ಅವರ ನಾಲ್ಕು ಆಸ್ತಿಗಳನ್ನು ವಶಪಡಿಸಿಕೊಳ್ಳಲು ಆದೇಶಿಸಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ, ಚೌಟಾಲಾ ಅವರ ವಕೀಲರು ಅವರ ವೈದ್ಯಕೀಯ ಸ್ಥಿತಿಯನ್ನು ಪರಿಗಣಿಸಿ ಸೌಮ್ಯ ಶಿಕ್ಷೆಯನ್ನು ವಿಧಿಸಲು ನ್ಯಾಯಾಲಯವನ್ನು ಕೋರಿದ್ದರು. ಆದರೆ, ಅನಾರೋಗ್ಯ ಮತ್ತು ವಯಸ್ಸಿನ ಆಧಾರದ ಮೇಲೆ ರಿಯಾಯಿತಿ ನೀಡುವಂತೆ ಚೌಟಾಲಾ ಅವರ ವಕೀಲರ ವಾದಗಳನ್ನು ಸಿಬಿಐ ವಿರೋಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೌಟಾಲಾ ಅವರಿಗೆ ಗರಿಷ್ಠ ಶಿಕ್ಷೆ ವಿಧಿಸಲು ಸಿಬಿಐ ಒತ್ತಾಯಿಸಿದ್ದು, ಇದು ಸಮಾಜಕ್ಕೆ ಸಂದೇಶ ರವಾನಿಸಲಿದೆ ಎಂದು ಪ್ರತಿಪಾದಿಸಿದೆ.

ಇದನ್ನೂ ಓದಿ: ಹರಿಯಾಣದ ಖಾಸಗಿ ಉದ್ಯೋಗದಲ್ಲಿ ಸ್ಥಳೀಯರಿಗೆ 75% ಮೀಸಲಾತಿ: ಹೈಕೋರ್ಟ್ ತಡೆ ಹಿಂಪಡೆದ ಸುಪ್ರೀಂಕೋರ್ಟ್

ಈ ಪ್ರಕರಣದಲ್ಲಿ, ಸಾರ್ವಜನಿಕ ವ್ಯಕ್ತಿಗೆ ಕನಿಷ್ಠ ಶಿಕ್ಷೆಯನ್ನು ನೀಡುವುದು ತಪ್ಪು ಸಂದೇಶ ನೀಡಿದಂತಾಗುತ್ತದೆ. ಅವರು ಶುದ್ಧ ಹಸ್ತರಲ್ಲ. ಅವರಿಗೆ ಶಿಕ್ಷೆಯಾದ ಎರಡನೇ ಪ್ರಕರಣ ಇದಾಗಿದೆ ಎಂದು ಸಿಬಿಐ ಹೇಳಿದೆ.

ಪ್ರಕರಣದ ತನಿಖೆ ನಡೆಸುತ್ತಿದ್ದ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ), ಮಾರ್ಚ್ 26, 2010 ರಂದು ಚೌಟಾಲಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು. 1993 ಮತ್ತು 2006 ರ ನಡುವೆ ಏಳು ಬಾರಿ ಶಾಸಕರಾಗಿದ್ದ ಅವರು 6.09 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಗಳಿಸಿದ್ದಾರೆ ಎಂದು ಸಿಬಿಐ ಪ್ರತಿಪಾದಿಸಿದೆ.

ಚೌಟಾಲಾ ಅವರನ್ನು ದೋಷಿ ಎಂದು ತೀರ್ಪು ನೀಡಿದ ನ್ಯಾಯಾಲಯವು, ಆರೋಪಿಯು ಅಕ್ರಮ ಆದಾಯದ ಮೂಲಕ 103%ದಷ್ಟು ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಯನ್ನು ಗಳಿಸಿದ್ದಾರೆ ಎಂದು ಹೇಳಿದೆ. ಭ್ರಷ್ಟಾಚಾರ ತಡೆ (PC) ಕಾಯಿದೆಯ 13(2) ಜೊತೆಗೆ ಹೇಳಿರುವ ಸೆಕ್ಷನ್ 13(1)(e) ಅಡಿಯಲ್ಲಿ ಚೌಟಾಲಾ ತಪ್ಪಿತಸ್ಥರೆಂದು ಕಂಡುಬಂದಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ದೇಶವನ್ನು ‘ಹಿಂದೂ ರಾಷ್ಟ್ರ’ ಮಾಡುವುದಾಗಿ ಪ್ರತಿಜ್ಞೆ ಮಾಡಿದ ಹರಿಯಾಣದ BJP ಶಾಸಕ

JBT ಶಿಕ್ಷಕರ ನೇಮಕಾತಿ ಹಗರಣದಲ್ಲಿ 2013 ರಲ್ಲಿ ಸುಪ್ರೀಂ ಕೋರ್ಟ್ ತಪ್ಪಿತಸ್ಥ ಎಂದು ಘೋಷಿಸಲ್ಪಟ್ಟ ನಂತರ ಭ್ರಷ್ಟಾಚಾರದ ಆರೋಪದ ಮೇಲೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಕ್ರಿಮಿನಲ್ ಪಿತೂರಿಯ ಆರೋಪದ ಮೇಲೆ 10 ವರ್ಷಗಳ ಶಿಕ್ಷೆಯನ್ನು ವಿಧಿಸಿದ ನಂತರ ಚೌಟಾಲಾ ಅವರ ಎರಡನೇ ದೋಷಾರೋಪಣೆ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...