Homeಮುಖಪುಟಕೋನಸೀಮಾ ಜಿಲ್ಲೆಗೆ ಅಂಬೇಡ್ಕರ್‌ ಹೆಸರು: ಹಿಂಸಾಚಾರಕ್ಕೆ ವಾಟ್ಸ್‌ಆಪ್‌ ಗ್ರೂಪ್‌ಗಳಲ್ಲಿ ಪ್ರಚೋದನೆ

ಕೋನಸೀಮಾ ಜಿಲ್ಲೆಗೆ ಅಂಬೇಡ್ಕರ್‌ ಹೆಸರು: ಹಿಂಸಾಚಾರಕ್ಕೆ ವಾಟ್ಸ್‌ಆಪ್‌ ಗ್ರೂಪ್‌ಗಳಲ್ಲಿ ಪ್ರಚೋದನೆ

ಆಂಧ್ರಪ್ರದೇಶದ ಸಚಿವ ಪಿಣಿಪೆ ವಿಶ್ವರೂಪು ಹಾಗೂ ಶಾಸಕ ಪಿ.ಸತೀಶ್ ಅವರ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈಗ ಹತ್ತಾರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಅಮಲಾಪುರಂ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದ ಕೆಲವು ದಿನಗಳ ನಂತರ, “ಇದು ಪೂರ್ವ ಯೋಜಿತ ಮತ್ತು ಸಂಘಟಿತ ಕೃತ್ಯ” ಎಂದು ರಾಜ್ಯ ಪೊಲೀಸರು ಪತ್ತೆ ಪತ್ತೆಹಚ್ಚಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.

ಕೋನಸೀಮಾ ಜಿಲ್ಲೆಯನ್ನು ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡುವ ಜಗನ್ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಮೇ 24 ರಂದು ಕೋನಸೀಮಾ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ದೊಡ್ಡ ಗುಂಪು ಜಮಾಯಿಸಿತ್ತು. ಜಿಲ್ಲಾಧಿಕಾರಿ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಾದ ಬಳಿಕ ಸಚಿವ ಪಿಣಿಪೆ ವಿಶ್ವರೂಪು ಹಾಗೂ ಶಾಸಕ ಪಿ.ಸತೀಶ್ ಅವರ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದರು. ಹಿಂಸಾಚಾರದಲ್ಲಿ ಸುಮಾರು 20 ಪೊಲೀಸ್ ಸಿಬ್ಬಂದಿ ಗಾಯಗೊಂಡರು. ಎರಡು ಬಸ್‌ಗಳು ಸೇರಿದಂತೆ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾದವು.

ಸಚಿವರು ಮತ್ತು ಶಾಸಕರ ಮನೆಯ ಸಿಸಿಟಿವಿ ಕ್ಯಾಮೆರಾಗಳು, ಕಿಮ್ಸ್ ಆಸ್ಪತ್ರೆ ಹಾಗೂ ಈ ಗುಂಪು ಸಂಚರಿಸುವ ಮಾರ್ಗದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ವಶಕ್ಕೆ ಪಡೆದು ಸಾಕ್ಷ್ಯ ಸಂಗ್ರಹಿಸಿದ್ದಾರೆ ಎಂದು ‘ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

PC: TheNewsMinute

ಹಿಂಸಾಚಾರ ನಡೆದಾಗ ಅಲ್ಲಿದ್ದ ಸಿಬ್ಬಂದಿಯನ್ನು ಹಿಂಸಾಚಾರದಲ್ಲಿ ಭಾಗವಹಿಸಿದವರನ್ನು ಗುರುತಿಸಲು ಕರೆಸಲಾಯಿತು. ಜಿಲ್ಲೆಯ ಪ್ರಬಲ ಜಾತಿಗಳಾದ ಕಾಪುಗಳು, ಸೆಟ್ಟಿ ಬಲಿಜರು ಹಾಗೂ ನಾಗವಂಶದ ಕೆಲವು ಸದಸ್ಯರು ಘಟನೆಯಲ್ಲಿ ಭಾಗವಹಿಸಿದ್ದರು ಎಂದು ಹಿಂದಿನ ತನಿಖಾ ಅಧಿಕಾರಿ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

PC: TheNewsMinute

ಹಿಂಸಾಚಾರಕ್ಕೂ ಮುನ್ನ 20ಕ್ಕೂ ಹೆಚ್ಚು ವಾಟ್ಸಾಪ್ ಗುಂಪುಗಳು ಸಕ್ರಿಯವಾಗಿದ್ದವು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಹಿಂಸಾಚಾರವನ್ನು ಹೇಗೆ ಆಯೋಜಿಸಬೇಕು ಎಂಬುದರ ಕುರಿತು ನಿರ್ದಿಷ್ಟ ಸೂಚನೆಗಳೊಂದಿಗೆ ಪ್ರಚೋದನಕಾರಿ ಸಂದೇಶಗಳನ್ನು ಗುಂಪುಗಳಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

ಜಿಲ್ಲೆಯ ಹೆಸರು ಕೋನಸೀಮಾ ಎಂದಷ್ಟೇ ಇರಬೇಕೆಂದು ಬಯಸುವ “ಸ್ನೇಹಿತರನ್ನು” ಒಂದುಗೂಡಿಸುವ ಉದ್ದೇಶದಿಂದ ಈ ಗುಂಪುಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಜಿಲ್ಲೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಸೇರಿಸುವ ಸರ್ಕಾರದ ನಿರ್ಧಾರದಿಂದ ಗುಂಪಿನಲ್ಲಿರುವವರು ಅಸಮಾಧಾನಗೊಂಡಿದ್ದಾರೆ. ಹೊಸದಾಗಿ ರೂಪುಗೊಂಡ ಜಿಲ್ಲೆಗೆ ಏಪ್ರಿಲ್ 4 ರಂದು ಕೋನಸೀಮ ಎಂದು ಹೆಸರಿಸಲಾಗಿದ್ದರೆ, ಡಾ.ಬಿ.ಆರ್.ಅಂಬೇಡ್ಕರ್ ಹೆಸರನ್ನು ಜೊತೆಗೆ ಸೇರಿಸುವ ನಿರ್ಧಾರವನ್ನು ಮೇ 18ರಂದು ಸರ್ಕಾರ ಘೋಷಿಸಿತು.

ಗ್ರೂಪ್‌ ಅಡ್ಮಿನ್‌ಗಳ ಪತ್ತೆ

“ಹಿಂಸಾಚಾರದಲ್ಲಿ ಭಾಗವಹಿಸಿದ 19 ಜನರನ್ನು ಬಂಧಿಸಲಾಗಿದೆ” ಎಂದು ಏಲೂರು ವ್ಯಾಪ್ತಿಯ ಡಿಐಜಿ ಪಾಲ ರಾಜು ‘ನ್ಯೂಸ್‌ ಮಿನಿಟ್‌’ಗೆ ತಿಳಿಸಿದ್ದಾರೆ.

“ನಾವು ಮೇ 25ರಂದು 46 ಜನರನ್ನು ಬಂಧಿಸಿದ್ದೇವೆ. ಹಿಂಸಾಚಾರದಲ್ಲಿ ಅವರ ಪಾತ್ರವನ್ನು ಸಾಬೀತುಪಡಿಸಲು ನಮಗೆ ಸಾಕಷ್ಟು ಪುರಾವೆಗಳು ದೊರೆತಿವೆ. ನಾವು ಅವರ ಫೋನ್‌ಗಳನ್ನು ಪರಿಶೀಲಿಸಿದ್ದು, ವಿವಿಧ ಗ್ರೂಪ್‌ಗಳಲ್ಲಿನ ಹಲವಾರು ಸಂದೇಶಗಳನ್ನು ಡಿಲೀಟ್ ಮಾಡಲಾಗಿದೆ. ಘಟನೆಯ ನಂತರ ಅನೇಕರು ಗ್ರೂಪ್‌ಗಳಿಂದ ಲೆಫ್ಟ್‌ ಆಗಿದ್ದಾರೆ. ಡಿಲೀಟ್ ಮಾಡಲಾದ ಎಲ್ಲಾ ಸಂದೇಶಗಳನ್ನು ಮತ್ತು ಗುಂಪುಗಳಿಂದ ನಿರ್ಗಮಿಸಿದವರ ವಿವರಗಳನ್ನು ನಾವು ತಂತ್ರಜ್ಞಾನಗಳನ್ನು ಬಳಸಿಕೊಂಡು ಪತ್ತೆಹಚ್ಚಿದ್ದೇವೆ. ನಾವು ಗ್ರೂಪ್ ಅಡ್ಮಿನ್‌ಗಳನ್ನು ಗುರುತಿಸಿದ್ದೇವೆ. ಅವರು ಕೂಡ ಶೀಘ್ರದಲ್ಲೇ ಕಾನೂನಿನ ಕ್ರಮಗಳನ್ನು ಎದುರಿಸಲಿದ್ದಾರೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಜಾತಿಯ ವಿಷಯವಾಗಿ ಈ ಗುಂಪುಗಳನ್ನು ರಚಿಸಲಾಗಿತ್ತೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ತನಿಖಾಧಿಕಾರಿ, “ಜಾತಿ ವಿಚಾರವಾಗಿ ಒಗ್ಗೂಡಿರುವ ಕುರಿತು ನಾವಿನ್ನು ವಿಶ್ಲೇಷಣೆ ಮಾಡಿಲ್ಲ. ಈ ವಾಟ್ಸಾಪ್ ಗುಂಪುಗಳು ಮುಖ್ಯವಾಗಿ ಜಿಲ್ಲೆಗೆ ಕೋನಸೀಮಾ ಎಂದು ಹೆಸರಿಸಬೇಕೆಂದು ಬಯಸುವ ಸ್ನೇಹಿತರನ್ನು ಒಳಗೊಂಡಿವೆ. ವಾಟ್ಸಾಪ್ ಗ್ರೂಪ್‌ಗಳ ಹೆಸರು ಗಮನಿಸಿದರೆ ಇದು ಬಹಿರಂಗವಾಗುತ್ತದೆ. ಹೆಚ್ಚಿನವರನ್ನು ಬಂಧಿಸಿದ ಬಳಿಕ, ನಾವು ವಿವಿಧ ಆಯಾಮಗಳನ್ನು ಗುರುತಿಸಲು ಪ್ರಯತ್ನಿಸುತ್ತೇವೆ. ಜಾತಿ ಒಗ್ಗೂಡುವಿಕೆ ಮತ್ತು ರಾಜಕೀಯ ಸಂಬಂಧಗಳನ್ನೂ ವಿಚಾರಣೆ ನಡೆಸುತ್ತೇವೆ” ಎಂದಿದ್ದಾರೆ.

ಮೂಲ: ದಿ ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...