Homeಮುಖಪುಟಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

ಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

- Advertisement -
- Advertisement -

ಕಳೆದ ಕೆಲವು ವಾರಗಳಲ್ಲಿ ಉತ್ತರಪ್ರದೇಶದ ಜ್ಞಾನವಾಪಿ ಮಸೀದಿ, ಶ್ರೀರಂಗಪಟ್ಟಣದ ಮಸ್ಜೀದ್-ಈ-ಆಲಾ, ಮಥುರಾದಲ್ಲಿರುವ ಶಾಹೀ ಈದ್ಗಾ ಮಸೀದಿ, ದಿಲ್ಲಿಯ ಕುತುಬ್ ಮಿನಾರ್ – ಇವೆಲ್ಲೆಡೆ ಹಿಂದುತ್ವ ಸಂಘಟನೆಗಳು ಇಲ್ಲದ ವಿವಾದ ಸೃಷ್ಟಿಸಿವೆ. ಈ ಸಂಘಟನೆಗಳ ಮನುವಾದಿ, ಕೋಮುವಾದಿ ನಡೆ ಬಗ್ಗೆ ನಮಗೆಲ್ಲರಿಗೂ
ಗೊತ್ತಿರುವಂಥದ್ದೇ. ಆದರೆ ನಮಗೆ ಆತಂಕವಾಗಿರಬೇಕಾಗಿರುವ ವಿಷಯವೆಂದರೆ ನಮ್ಮ ನ್ಯಾಯಾಲಯಗಳ ಪ್ರತಿಕ್ರಿಯೆ. ಹಿಂದುತ್ವ ಸಂಘಟನೆಗಳು ಮಸೀದಿಗಳ ಮೇಲೆ ನಡೆಸುತ್ತಿರುವ ದಾಳಿಗಳಿಗೆ ನ್ಯಾಯಾಲಯಗಳು ಕೈ ಜೋಡಿಸಿವೆಯೇ ಎಂಬ ಅನುಮಾನ ಮೂಡುತ್ತದೆ. ಈ ಅನುಮಾನವನ್ನು ಈ ಬರೆಹದಲ್ಲಿ ಪರಿಶೀಲಿಸೋಣ. ಮುಖ್ಯವಾಗಿ ಜ್ಞಾನವಾಪಿ ಮಸೀದಿಯ ವಿಷಯದಲ್ಲಿ ನ್ಯಾಯಾಲಯಗಳ ನಡೆಯನ್ನು ಗಮನಿಸೋಣ.

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಯಿತು ಎಂದು ಹಿಂದೂ ಪರ ಸಂಘಟನೆಗಳು ಹೇಳಿಕೊಂಡ ತಕ್ಷಣ, ವಾರಣಾಸಿಯ ನ್ಯಾಯಾಲಯ, ಅದು ಪತ್ತೆಯಾಗಿದೆ ಎಂದು ಪ್ರತಿಪಾದಿಸಿದ ಜಾಗವನ್ನು ಬಂದ್ ಮಾಡಲು ಅದೇಶಿಸಿತು. ನ್ಯಾಯಾಲಯವೇ ನೇಮಿಸಿದ್ದ ’ಕೋರ್ಟ್ ಕಮಿಷಿನರ್’ ವರದಿ ಸಲ್ಲಿಸುವ ತನಕ ಸಹ ಕಾಯಲಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಅಸಾದುದ್ದೀನ್ ಒವೈಸಿಯವರು, “ದಿಸ್ ಇಸ್ ಎ ಟೆಕ್ಸ್ಟ್ ಬುಕ್ ರಿಪೀಟ್ ಆಪ್ ಡಿಸೆಂಬರ್ 1949 ಇನ್ ಬಾಬ್ರಿ ಮಸ್ಜಿದ್” ಎಂದರು.

ಬಾಬ್ರಿ ಮಸೀದಿ ಸುತ್ತ ಸೃಷ್ಟಿಸಿದ ವಿವಾದ ಸ್ವತಂತ್ರ ಭಾರತದ ರಾಜಕೀಯ ಹಾಗು ಸಾಮಾಜಿಕ ಇತಿಹಾಸವನ್ನು ಇನ್ನಿಲ್ಲದಂತೆ ಬದಲಿಸಿತು. ಈ ಪ್ರಕರಣದ ಅಂತಿಮ ತೀರ್ಪು ಹಾಗು ಅದರಲ್ಲಿ ಅಡಗಿದ ಅನ್ಯಾಯದ ಬಗ್ಗೆ ಸಾಕಷ್ಟು ಬರೆದಾಗಿದೆ. ಆದರೆ ಈ ಪ್ರಕರಣ ಈ ಮಟ್ಟಕ್ಕೆ ಬೆಳೆದಿದ್ದು ನ್ಯಾಯಾಲಯಗಳು ತಮ್ಮ ಸಂವಿಧಾನಿಕ ಜವಾಬ್ದಾರಿ ಮರೆತು, ಹಿಂದುತ್ವವಾದಿಗಳಿಗೆ ನೀಡಿದ ನೆರವಿನಿಂದಲೇ.

1949ರಲ್ಲಿ ಅಯೋಧ್ಯೆಯಲ್ಲಿ ನಡೆದಿದ್ದೇನು ಹಾಗು ಅದಕ್ಕೆ ನ್ಯಾಯಾಲಯಗಳು ಹೇಗೆ ಸ್ಪಂದಿಸಿದವು ಎಂಬುದನ್ನು ವಕೀಲರಾದ ಮೊಹಮ್ಮದ್ ಅಫೀಫ್ ಅವರು ವಿವರಿಸಿದ್ದಾರೆ. ಮೊದಲನೆಯದಾಗಿ ಡಿಸೆಂಬರ್ 23, 1949ರ ರಾತ್ರಿ, ಮಸೀದಿಯಲ್ಲಿ ಯಾರೂ ಇಲ್ಲದಿರುವ ಸಮಯದಲ್ಲಿ, ಕೆಲವರು ಮಸೀದಿಯೊಳಗೆ ನುಗ್ಗಿ ಅಲ್ಲಿ ಕಳ್ಳತನದಿಂದ ಹಿಂದೂ ದೇವರ ವಿಗ್ರಹ ಇಟ್ಟರು. ಅಲ್ಲಿಗೆ ನಂತರ ಹೋದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಮಸೀದಿಗೆ ಬೀಗ ಹಾಕಿ, ಆ ಸ್ಥಳವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವಂತೆ ಮಾಡಿದರು. ಆದರೆ, ಕಾನೂನುಬಾಹಿರವಾಗಿ ಅಲ್ಲಿಟ್ಟ ವಿಗ್ರಹಗಳನ್ನು ಮಾತ್ರ ತೆಗೆಸುವುದಿಲ್ಲ. ನಂತರ 1950ರಲ್ಲಿ ಇಬ್ಬರು ಹಿಂದೂ ಅರ್ಜಿದಾರರು ಸಿವಿಲ್ ನ್ಯಾಯಾಲಯದ ಮೊರೆಹೋಗಿ, ಮಸೀದಿ ಇರುವ ಸ್ಥಳ ಅವರದ್ದು ಎಂದು ಅರ್ಜಿ ಹಾಕುತ್ತಾರೆ. ಆ ಪ್ರಕರಣದಲ್ಲಿ ನ್ಯಾಯಾಲಯವು, ಮಧ್ಯಂತರ ಆದೇಶ ನೀಡಿ, ಮಸೀದಿಯಲ್ಲಿಟ್ಟ ವಿಗ್ರಹಗಳನ್ನು ಯಾರೂ ಜರಿಗಿಸಬಾರದೆಂದು ತೀರ್ಪು ನೀಡುತ್ತದೆ. ಈ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರದ ನಿಲುವು, ಆ ಸ್ಥಳವನ್ನು 1949ರಲ್ಲಿ ಮಸೀದಿಯಾಗಿ ಉಪಯೋಗಿಸಲಾಗುತ್ತಿತ್ತು ಎಂಬುದು. ಹಾಗಿದ್ದರೂ ಸಹ ನ್ಯಾಯಾಲಯವು ಮಸೀದಿಯನ್ನು ಬಂದ್ ಮಾಡಿ, ಯಾರಿಗೂ ಪ್ರವೇಶ ನೀಡದಂತೆ ಆದೇಶಿಸುತ್ತದೆ. ನಂತರ ಉತ್ತರ ಪ್ರದೇಶ ಉಚ್ಚ ನ್ಯಾಯಾಲಯವು ಸಿವಿಲ್ ಕೋರ್ಟ್‌ನ ತೀರ್ಪನ್ನು ಎತ್ತಿಹಿಡಿಯುತ್ತದೆ. ಹಾಗಾಗಿ, 1949ರಲ್ಲಿ ಮಸೀದಿಗೆ ನುಗ್ಗಿ ಅಲ್ಲಿ ವಿಗ್ರಹಗಳನ್ನು ಇಟ್ಟ ಕಾನೂನುಬಾಹಿರ ಕಾರ್ಯವನ್ನು ನ್ಯಾಯಾಲಯವೆ ನ್ಯಾಯಸಮ್ಮತಗೊಳಿಸುತ್ತದೆ. ಅದು ಅಲ್ಲಿಗೆ ನಿಲ್ಲುವುದಿಲ್ಲ. ಈ ಸಿವಿಲ್ ಪ್ರಕರಣಗಳು ದಶಕಗಳ ಕಾಲ ನಡೆಯುತಿದ್ದವು. 1989ರಲ್ಲಿ ದಿಢೀರ್ ಎಂದು ಒಂದು ದಿನ, ಈ ಪ್ರಕರಣದ ಭಾಗವೇ ಅಲ್ಲದ ಹಿಂದೂ ವ್ಯಕ್ತಿಯೊಬ್ಬರು, ಸಿವಿಲ್ ನ್ಯಾಯಾಲಯಕ್ಕೆ ಅರ್ಜಿಯೊಂದನ್ನು ಸಲ್ಲಿಸುತ್ತಾರೆ. ಪ್ರಕರಣದಲ್ಲಿ ಪಾರ್ಟಿಯಾಗಿರುವ ಮುಸ್ಲಿಂ ಅರ್ಜಿದಾರರಿಗೆ ತಿಳಿಸದೆ, ಅದರ ಬಗ್ಗೆ ಹಿಯರಿಂಗ್ ಮಾಡಿ, ಮಸೀದಿಯ ಬಾಗಿಲುಗಳನ್ನು ತೆಗೆದು ಅಲ್ಲಿ ಹಿಂದೂಗಳಿಗೆ 1949ರಲ್ಲಿ ಇಟ್ಟ ವಿಗ್ರಹಗಳಿಗೆ ಪೂಜೆ ಮಾಡಲು ಅವಕಾಶ ನೀಡಲಾಗುತ್ತದೆ. ದಿಢೀರೆಂದು ನೂರಾರು ವರ್ಷಗಳಿಂದ ನಡೆದುಕೊಂಡಂತ ಮಸೀದಿ, ನ್ಯಾಯಾಲಯದ ಈ ತೀರ್ಪಿನಿಂದ ದೇವಾಲಯವಾಗಿ ಪರಿವರ್ತನೆಯಾಯಿತು. ಪ್ರಕರಣದ ಭಾಗವೇ ಆಗದಿದ್ದವರಿಗೆ ಪ್ರಕರಣದಲ್ಲಿ ಅರ್ಜಿ ಹಾಕಲು ’ಲೋಕಸ್ ಸ್ಟಾಂಡಿ’ ಇಲ್ಲ (ಎಂದರೆ ಅಧಿಕಾರ ಇಲ್ಲ). ಇಂತಹ ವ್ಯಕ್ತಿಯ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡು, ಪ್ರಕರಣದಲ್ಲಿ ಭಾಗಿಯಾಗಿದ್ದ ಮುಸ್ಲಿಂ ಸಂಘಟನೆಗಳ ವಾದವನ್ನೂ ಕೇಳಿಸಿಕೊಳ್ಳದೆ ನೀಡಿದ ತೀರ್ಪು, ’ಪ್ರಿನ್ಸಿಪಲ್ಸ್ ಆಫ್ ನ್ಯಾಚುರಲ್ ಜಸ್ಟಿಸ್’ಗೆ ವಿರುದ್ಧವಾಗಿದೆ.

ಅಸಾದುದ್ದೀನ್ ಒವೈಸಿ

ಈ ಸಮಯದಲ್ಲಿ ಇದನ್ನು ಏಕೆ ನೆನೆಯಬೇಕೆಂದರೆ ಜ್ಞಾನವಾಪಿ ಮಸೀದಿಯಲ್ಲಿ ಸಹ ಇದೇ ನಡೆಯುತ್ತಿದೆ. ಜ್ಞಾನವಾಪಿ ಮಸೀದಿಯ ಸುತ್ತ ಸೃಷ್ಟಿಸಿರುವ ವಿವಾದದ ಲೀಗಲ್ ಕಾಲಾನುಕ್ರಮ-ಇತಿಹಾಸ ಹೀಗಿದೆ:


ಎಲ್ಲದಕ್ಕಿಂತ ಆತಂಕಕಾರಿ ವಿಷಯವೆಂದರೆ, ಸುಪ್ರೀಂ ಕೋರ್ಟ್‌ನ ಸದರಿ ಪ್ರಕರಣವನ್ನು ಆಲಿಸುತ್ತಿರುವ ಬೆಂಚ್‌ನಲ್ಲಿ ಇರುವ ಜಸ್ಟಿಸ್ ಚಂದ್ರಚೂಡ್ ಬಾಬ್ರಿ ತೀರ್ಪಿನಲ್ಲಿ ಪ್ಲೇಸಸ್ ಆಫ್ ವರ್ಷಿಪ್ ಕಾಯ್ದೆ ಬಹು ಮುಖ್ಯ, ಅದನ್ನು ಉಲ್ಲಂಘಿಸಬಾರದೆಂದು ಹೇಳಿದ್ದರು; ಆದರೆ ಈ ಪ್ರಕರಣದಲ್ಲಿ ಅದರ ಉಲ್ಲಂಘನೆಯಾಗಿರುವುದನ್ನು ಗಣನೆಗೇ ತೆಗೆದುಕೊಳ್ಳದಿರುವುದು ಮತ್ತು ಆ ಉಲ್ಲಂಘನೆಯನ್ನು ಸಮರ್ಥಿಸುವಂತೆ ಮಾತನಾಡಿರುವುದು.

ವಿಚಾರಣೆ ನಡೆಯಬೇಕಾದರೆ, ಮಸೀದಿ ಸಮಿತಿ ಪರ ವಕೀಲರು, ಸಮೀಕ್ಷೆಗೆ ಆದೇಶಿಸಿದ್ದು ಕಾಯ್ದೆಯ ಕಲಂ 3ರ ಉಲ್ಲಂಘನೆ ಎಂದಾಗ, “ದೇಶದಲ್ಲಿ ಅನೇಕ ಧಾರ್ಮಿಕ ಸ್ಥಳಗಳಲ್ಲಿ ಎರಡು ಧರ್ಮಗಳು ಗುರುತು ಇರುತ್ತವೆ, ಹಾಗಾಗಿ ಅದು ಯಾವ ಧರ್ಮಕ್ಕೆ ಸೇರಿದೆ ಎಂದು ಪರಿಶೀಲಿಸುವುದು ಕಾಯ್ದೆಯ ಉಲ್ಲಂಘನೆಯಲ್ಲ” ಎಂದು ಸಮರ್ಥಿಸಿಕೊಳ್ಳುತ್ತಾರೆ!

ಇದು ಅಪಾಯಕಾರಿ ಸಂಗತಿ. ಏಕೆಂದರೆ ಈಗ ಯಾವುದೋ ಒಂದು ಮಸೀದಿಯಲ್ಲಿ ಹಿಂದೂ ವಿಗ್ರಹಗಳು ಇವೆಯೆಂದು ಅನೇಕ ಜನ ನ್ಯಾಯಾಲಯಕ್ಕೆ ಮೊರೆ ಹೋಗಬಹುದು. ಹಾಗಾಗಿ, 1947ರ ಸಮಯದಲ್ಲಿ ಯಾವುದಾದರು ಸ್ಥಳಗಳು ಮಸೀದಿಯಾಗಿದ್ದರೆ ಅದು ಮಸೀದಿಯಾಗಿ ಉಳಿಯಬೇಕು, ದೇವಾಲಯವಾಗಿದ್ದುದು ದೇವಾಲಯವಾಗಿ ಉಳಿಯಬೇಕು, ಆಗಲೆ ದೇಶದಲ್ಲಿ ಶಾಂತಿ ನೆಲೆಸುತ್ತದೆ ಹಾಗು ಸಮಾಜ ಒಗ್ಗಟ್ಟಾಗಿರುತ್ತದೆ ಎಂಬ ಉದ್ದೇಶವನ್ನು ಎತ್ತಿಹಿಡಿಯುವ ಪ್ಲೇಸಸ್ ಆಫ್ ವರ್ಶಿಪ್ ಕಾಯ್ದೆ ಅಪಾಯದಲ್ಲಿದೆ.

ಹೀಗೆ ನ್ಯಾಯಾಲಯಗಳೇ ಹಿಂದುತ್ವವಾದಿ ಸಂಘಟನೆಗಳ ಕೋಮುವಾದಿ ದಾಳಿಗಳಿಗೆ ನೆರವಾಗಿ ನಿಂತಿವೆ. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಅದು ದೇವಾಲಯವಾಗಿತ್ತೇ ಎಂಬ ವಿಚಾರಣೆಗಿಂತಲೂ, ಇಲ್ಲಿ ನ್ಯಾಯಾಲಯಗಳು ಸಂವಿಧಾನ ಬದ್ಧವಾಗಿವೆಯೇ ಎಂಬ ವಿಚಾರಣೆ ನಡೆಯುತ್ತಿದೆ.

ವಿನಯ್ ಕೂರಗಾಯಲ ಶ್ರೀನಿವಾಸ

ವಿನಯ್ ಕೂರಗಾಯಲ ಶ್ರೀನಿವಾಸ
ವಕೀಲರು ಮತ್ತು ಬೀದಿ ವ್ಯಾಪಾರಿಗಳ ಸಂಘದ ಮುಖಂಡರು. ಆಲ್ಟರ್‍ನೇಟಿವ್ ಲಾ ಫೋರಂನಲ್ಲಿ ತೊಡಗಿಸಿಕೊಂಡಿರುವ ವಿನಯ್ ಹಲವು ಹೋರಾಟಗಳಲ್ಲಿ ಭಾಗಿಯಾಗಿರುವುದಲ್ಲದೆ, ಸಂವಿಧಾನದ ಪ್ರಚಾರಕ್ಕಾಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others



ಇದನ್ನೂ ಓದಿ: ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಕ್ರಮ ಮಸೀದಿಗಳ ಬಿಟ್ಟು ಎಲ್ಲಾ ನಗರ ನಕ್ಸಲ್ ಕಮ್ಯೂನಿಸ್ಟ್ ರ ಮನೆಗಳನ್ನು ಕೋರ್ಟ್ ಮುಟ್ಟುಗೋಲು ಹಾಕಿದರೆ ನ್ಯಾಯ ಸಮ್ಮತ ಆಗಬಹುದು ಅನಿಸುತ್ತೆ ಸಮಾಜದಲ್ಲಿ ಏಕೆಂದರೆ ಸಮಾಜದ ದಿಕ್ಕು ತಪ್ಪಿಸುವ ಕೆಲಸ ಇವರಿಂದಲೇ ನಡಿತಿರುವ ಕಾರಣ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...