Homeರಾಷ್ಟ್ರೀಯಮಹಾತ್ಮ ಗಾಂಧಿಯ ಹತ್ಯೆಯನ್ನು ಸಮರ್ಥಿಸಿದ ಹಿಂದೂ ಮಹಾ ಸಭಾ ನಾಯಕ

ಮಹಾತ್ಮ ಗಾಂಧಿಯ ಹತ್ಯೆಯನ್ನು ಸಮರ್ಥಿಸಿದ ಹಿಂದೂ ಮಹಾ ಸಭಾ ನಾಯಕ

- Advertisement -
- Advertisement -

ಮಹಾತ್ಮಾ ಗಾಂಧಿಯನ್ನು ಕೊಂದ ಭಯೋತ್ಪಾದಕ ನಾಥುರಾಮ್ ಗೋಡ್ಸೆಯನ್ನು ನಾವು ಗೌರವಿಸುತ್ತೇವೆ ಎಂದು ಅಖಿಲ ಭಾರತೀಯ ಹಿಂದೂ ಮಹಾಸಭಾದ ರಾಷ್ಟ್ರೀಯ ನಾಯಕ ಮುನ್ನಾ ಕುಮಾರ್ ಶರ್ಮಾ ಕೇರಳದ ತ್ರಿಶೂರ್‌ನಲ್ಲಿ ಗುರುವಾರ ಗಾಂಧಿ ಹತ್ಯೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದೀಗ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ತ್ರಿಶೂರ್‌ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುನ್ನಾಕುಮಾರ್ ಶರ್ಮಾ,“ಗೋಡ್ಸೆ ಆರೆಸ್ಸೆಸ್ ಮತ್ತು ಹಿಂದೂ ಮಹಾಸಭಾದ ಎರಡರ ಸದಸ್ಯರಾಗಿದ್ದರು. ಆದರೆ, ಅವರು ನಮ್ಮ ಸಂಘಟನೆ ಸದಸ್ಯರಲ್ಲ ಎಂದು ಆರೆಸ್ಸೆಸ್‌ ಹೇಳುತ್ತಿದೆ. ನಾವು  ಹಾಗೆ ಹೇಳುವುದಿಲ್ಲ. ಅವರು ಹಿಂದೂ ಮಹಾಸಭಾದ ಸದಸ್ಯರಾಗಿದ್ದರು ಎಂದು ಹೇಳುತ್ತೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗೋಡ್ಸೆಯನ್ನು ನಾವು ಗೌರವಿಸುತ್ತೇವೆ. ಯಾಕೆಂದರೆ ಅವರು ಭಾರತದ ಏಕತೆ ಮತ್ತು ಸಮಗ್ರತೆಗಾಗಿ ಗಾಂಧಿಯನ್ನು ಕೊಂದರು” ಎಂದು ಗಾಂಧಿ ಕೊಲೆಯನ್ನು ಮುನ್ನಾ ಕುಮಾರ್‌ ಶರ್ಮಾ ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ: ಜಿಗ್ನೇಶ್ ಮೇವಾನಿ

“ಗೋಡ್ಸೆ ಗಾಂಧಿ ಕೊಲೆಯನ್ನು ದೇಶವನ್ನು ಉಳಿಸಲು ಬೇಕಾಗಿ ಮಾಡಿದರು. ಗಾಂಧಿ ಮತ್ತು ನೆಹರೂ ಭಾರತವನ್ನು ಭಾರತ-ಪಾಕಿಸ್ತಾನ ಎಂಬ ಎರಡು ಭಾಗಗಳಾಗಿ ವಿಭಜಿಸಿದರು. ಒಂದು ವೇಳೆ ಗಾಂಧಿ ಬದುಕಿ ಉಳಿದಿದ್ದರೆ ದೇಶವೂ ಇನ್ನೂ ಎರಡು ಮೂರು ದೇಶಗಳಾಗಿ ವಿಭಜನೆ ಹೊಂದುತ್ತಿತ್ತು. ಈ ಪರಿಸ್ಥಿತಿಯನ್ನು ಉಳಿಸಲು ಬೇಕಾಗಿ ಅವರು ಗಾಂಧಿಯನ್ನು ಕೊಂದರು” ಎಂದು ಅವರು ತಿಳಿಸಿದ್ದಾರೆ.

ನೀವು ಗಾಂಧಿ ಕೊಲೆಯನ್ನು ಸಮರ್ಥಿಸುತ್ತಿದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ, ‘ಹೌದು ಸಮರ್ಥಿಸುತ್ತೇವೆ’ ಎಂದು ನೇರವಾಗಿ ಮುನ್ನಾ ಕುಮಾರ್‌ ಉತ್ತರಿಸಿದ್ದಾರೆ.

“ಗೋಡ್ಸೆ ಒಬ್ಬ ನಾಯಕನಾಗಿದ್ದು, ಈ ಎಲ್ಲಾ ಕೆಲಸಗಳನ್ನು ಅವರು ದೇಶವನ್ನು ಉಳಿಸಲು ಬೇಕಾಗಿ ಮಾಡಿದರು. ದೇಶದ ಸಮಗ್ರತೆ ಮತ್ತು ಏಕತೆಗಾಗಿ ಗೋಡ್ಸೆ ತನ್ನ ಜೀವವನ್ನು ತ್ಯಾಗ ಮಾಡಿದರು. ಅವರು ಗಾಂಧಿಯನ್ನು ಕೊಲ್ಲಬೇಕಿತ್ತು ಎಂದು ನಾವು ಹೇಳುತ್ತಿಲ್ಲ. ಅದು ನಮ್ಮ ನಿರ್ಧಾರವೂ ಆಗಿರಲಿಲ್ಲ, ಅದು ಗೋಡ್ಸೆಯ ನಿರ್ಧಾರವಾಗಿತ್ತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಮತ್ತು ಗೋಡ್ಸೆ ಬಗ್ಗೆ ಟ್ವೀಟ್‌ ಮಾಡಿದ್ದಕ್ಕಾಗಿ ಗುಜರಾತ್‌ ಶಾಸಕ, ಹೋರಾಟಗಾರ ಜಿಗ್ನೇಶ್‌ ಮೇವಾನಿಯ ಬಂಧನ

ಸಾವರ್ಕರ್‌ ಅವರನ್ನು ಟೀಕಿಸುವವರು ದೇಶದ್ರೋಹಿಗಳಾಗಿದ್ದು, ಅಂತವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದೂ ಅವರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...