Homeಮುಖಪುಟದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷಗಳಿಂದಲ್ಲ; ಕೋಮುವಾದಿ ಪಕ್ಷದಿಂದ: ಕುಮಾರಸ್ವಾಮಿ

ದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷಗಳಿಂದಲ್ಲ; ಕೋಮುವಾದಿ ಪಕ್ಷದಿಂದ: ಕುಮಾರಸ್ವಾಮಿ

“ಪಕ್ಷಗಳ ಟೀಕೆಗೆ ಕುಟುಂಬ ನೆಪವಷ್ಟೇ. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ” ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

- Advertisement -
- Advertisement -

ದೇಶಕ್ಕೆ ಅಪಾಯ ಇರುವುದು ʼಕುಟುಂಬವಾದಿ ಪಕ್ಷಗಳಿಂದಲ್ಲ, ಬಿಜೆಪಿಯಂಥ ಕೋಮುವಾದಿ ಪಕ್ಷದಿಂದʼ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

“ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು” ಎಂದು ಪ್ರಧಾನಿ ಮೋದಿ ಹೇಳಿರುವುದನ್ನು ಖಂಡಿಸಿ ಸರಣಿ ಟ್ವೀಟ್‌ ಮಾಡಿರುವ ಅವರು, “ಪ್ರಧಾನಿ ನರೇಂದ್ರ ಮೋದಿಯವರ ಹೊಸ ಉಪದೇಶವಿದು” ಎಂದು ಕುಟುಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಾಸ್ತವ ಗುರುತಿಸಿ, ಬಿಜೆಪಿಯ ಬೆಳವಣಿಗೆಯ ಹಿನ್ನೆಲೆ ಅರಿತು ಅವರು ಭಾಷಣ ಮಾಡಬೇಕಿತ್ತು. ಕೇವಲ ಚುನಾವಣಾ ಪ್ರಚಾರ ಶೈಲಿಯ ಭಾಷಣ ಮಾಡಿದ್ದಾರಷ್ಟೇ. ಭಾವನಾತ್ಮಕವಾಗಿ ಜನರನ್ನು ಜಗಳಕ್ಕಿಳಿಸಿ ಜಾಗ ಹಿಡಿಯುವ ಪರಿಪಾಠ ಪ್ರಜಾಪ್ರಭುತ್ವದ ನಿಜವಾದ ದೊಡ್ಡ ಶತ್ರು. ಸಂವಿಧಾನಕ್ಕೆ ಗಂಡಾಂತರಕಾರಿ. ಮೋದಿ ಅವರಿಗೆ ಈ ವಿಷಯ ಗೊತ್ತಿಲ್ಲವೆಂದು ನಾನು ಭಾವಿಸುವುದಿಲ್ಲ” ಎಂದಿದ್ದಾರೆ.

ಕುಟುಂಬ ಪಕ್ಷಗಳ ಟೀಕೆಗೆ ನೆಪವಷ್ಟೇ. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ. ಕಾಂಗ್ರೆಸ್ ನೆಲಕಚ್ಚಿದ ಮೇಲೆ ಬಿಜೆಪಿಗೆ ಪ್ರತಿರಾಜ್ಯದಲ್ಲಿ ಎದುರಾಗುತ್ತಿರುವ ರಾಜಕೀಯ ವೈರಿಗಳೆಂದರೆ ಪ್ರಾದೇಶಿಕ ಪಕ್ಷಗಳೇ. ಇಂಥ ಬಲಿಷ್ಠ ಪಕ್ಷಗಳನ್ನು ಮುಗಿಸಲು ಬಿಜೆಪಿ ಏನೆಲ್ಲ ಅಡ್ಡದಾರಿ ಹಿಡಿಯಿತು ಎನ್ನುವುದು ಗುಟ್ಟೇನಲ್ಲ ಎಂದು ತಿಳಿಸಿದ್ದಾರೆ.

ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಆಹಾರ, ವ್ಯಾಪಾರ ಇತ್ಯಾದಿಗಳ ಮೂಲಕ ವಿವಿಧತೆಯಲ್ಲಿ ಏಕತೆ ಸಾಧಿಸಿದ್ದ ಭಾರತದ ಭಾವೈಕ್ಯತೆಯ ಬುಡಕ್ಕೆ ಕೊಡಲಿ ಹಾಕಿದವರು ಯಾರು? ಪ್ರಜಾಸತ್ತೆಯ ಅಖಂಡ ರಕ್ಷಕನಾದ ಸಂವಿಧಾನಕ್ಕೇ ಅಪಚಾರವೆಸಗಿ ʼಆಪರೇಷನ್ ಕಮಲʼವೆಂಬ ಅನೈತಿಕ ರಾಜಕಾರಣ ಆರಂಭ ಮಾಡಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಎರಡು ಸಲ ಬಿಜೆಪಿ ಸರಕಾರ ಬಂದಿದ್ದು ಹೇಗೆ? ರಾಜಮಾರ್ಗದಲ್ಲಿ ಬಂತಾ? ಇಲ್ಲ, ಶಾಸಕರನ್ನು ಸಂತೆಯಲ್ಲಿ ರಾಸುಗಳಂತೆ ನಿರ್ಲಜ್ಜವಾಗಿ ಖರೀದಿಸಿದ್ದರಿಂದಲೇ ಬಂದ ʼಅಕ್ರಮ ಸರಕಾರʼವಿದು. ಪ್ರಧಾನಿಯವರು ಇದನ್ನು ನಿರಾಕರಿಸುತ್ತಾರಾ? ಎಂದು ಕೇಳಿದ್ದಾರೆ.

ಮೋದಿ ಅವರು ಈ ನೀತಿಹೀನ ಸರಕಾರಕ್ಕೆ ಅಧಿಕೃತ ಮುದ್ರೆ ಒತ್ತಿದ್ದು ಸುಳ್ಳಾ? ಕೋಟಿ ಕೋಟಿ ಲೂಟಿ ಹೊಡೆದು ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಎಗರಿಸಿಕೊಂಡು ಹೋಗಿದ್ದು ದೇಶಕ್ಕೆ ಒಳ್ಳೆಯದಾ? ಯುವಜನರಿಗೆ ದಾರಿದೀಪವಾ? ಈ ಬಗ್ಗೆ ಮೋದಿ ಅವರ ಮನ್ ಕೀ ಬಾತ್ ಮೌನವಾಗಿದೆ. ಏಕೆ? ಎಂದು ವ್ಯಂಗ್ಯವಾಡಿದ್ದಾರೆ.

ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ? ಜನಾದೇಶದಂತೆ ರಚನೆಯಾಗಿದ್ದ ಮಧ್ಯಪ್ರದೇಶದ ಸರಕಾರವನ್ನು ಕೆಡವಿದ್ದು ಇವರ ಪಕ್ಷವೇ ಅಲ್ಲವೆ? ಒಂದೆಡೆ, ಸಂಸತ್ತು-ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ! ಇನ್ನೊಂದೆಡೆ, ಆಪರೇಷನ್ ಕಮಲದ ಮೂಲಕ ಸಂವಿಧಾನದ ಶಿರಚ್ಛೇಧ!! ಇದೆಂಥಾ ರಾಜಕಾರಣ? ಇದು ರಾಷ್ಟ್ರೀಯವಾದಿ ಪಕ್ಷದ ಸೋಗಲಾಡಿತನ ಎಂದು ಹರಿಹಾಯ್ದಿದ್ದಾರೆ.

ಇದನ್ನೂ ಓದಿರಿ: ಗಂಡ, ಮೈದುನ, ಮಾವ, ಗಂಡನ ಸ್ನೇಹಿತನಿಂದ ಎರಡು ವರ್ಷ ಕಾಲ ಅತ್ಯಾಚಾರ; ವಿವಾದಿತ ಹಿಂದೂ ಮಹಾಪಂಚಾಯತ್‌ ಸಂಘಟಕನ ಪತ್ನಿ ಆರೋಪ

“ಮುಖ್ಯಮಂತ್ರಿ ಸ್ಥಾನವನ್ನು ಕರ್ನಾಟಕದಲ್ಲಿ ಮಾರಾಟಕ್ಕೆ ಇಟ್ಟಿದ್ದು ಯಾರು? ಕುಟುಂಬ ರಾಜಕಾರಣದ ಪಕ್ಷವೋ? ಬಿಜೆಪಿಯೋ? ರೂ.2,500 ಕೋಟಿ ಕೊಡಿ, ನಿಮ್ಮನ್ನು ಸಿಎಂ ಮಾಡುತ್ತೇವೆ” ಎಂದು ಕೇಳಿದ ಪಾರ್ಟಿ ಬಿಜೆಪಿ. ಇದನ್ನು ಹೇಳಿದ್ದು ನಾವಲ್ಲ, ಸ್ವತಃ ಬಿಜೆಪಿ ಶಾಸಕರೇ! ಆ ಶಾಸಕರ ಮೇಲೆ ಶಿಸ್ತುಕ್ರಮ ಇರಲಿ, ಒಂದು ನೊಟೀಸನ್ನೂ ಕೊಡಲಿಲ್ಲ ಎಂದು ಕುಟುಕಿದ್ದಾರೆ.

ಹೋಗಲಿ.. ಮೋದಿ ಅವರೂ ಸಿಎಂ ಕರ್ಚಿ ಮಾರಾಟದ ಬಗ್ಗೆ ಮಾತನಾಡಲಿಲ್ಲ. ಈ ಘನಘೋರ ಆರೋಪದ ಬಗ್ಗೆಯೂ ಅವರದ್ದು ಮುಂದುವರಿದ ಮೌನ! ಅಲ್ಲಿಗೆ ಶಾಸಕರ ಹೇಳಿಕೆ ಸತ್ಯ ಎಂದಾಯಿತಲ್ಲ. ಪಿಎಸ್‌ʼಐ ಹುದ್ದೆಗಳಂತೆ ಸಿಎಂ ಪದವಿಯನ್ನೂ ಮಾರಿಕೊಳ್ಳುವುದು ದೇಶಕ್ಕೆ ಸೌಭಾಗ್ಯವಾ? ಯುವಕರಿಗೆ ಆದರ್ಶವಾ? ಎಂದು ಪ್ರಶ್ನಿಸಿದ್ದಾರೆ.

ಕುಟುಂಬ ರಾಜಕಾರಣದ ನೆಪವೊಡ್ಡಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರ ಫಲಿಸದು. ಭಾರತವೆಂದರೆ; ಬಿಜೆಪಿಯಷ್ಟೇ ಅಲ್ಲ, 140 ಕೋಟಿಗೂ ಹೆಚ್ಚು ಭಾರತೀಯರು ಸೇರಿದರೆ ಮಾತ್ರ ಭಾರತ. ಪ್ರಧಾನಿಗಳು ಈ ಆಶಯವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಕಿವಿಮಾತು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...