Homeಮುಖಪುಟದೇಶದ್ರೋಹಿಗಳ ತಡೆಗಾಗಿ ‘ದ್ರಾವಿಡ ಮಾದರಿ ತರಬೇತಿ ಕೋರ್ಸ್’ ನಡೆಸಲು ಡಿಎಂಕೆ ನಿರ್ಧಾರ

ದೇಶದ್ರೋಹಿಗಳ ತಡೆಗಾಗಿ ‘ದ್ರಾವಿಡ ಮಾದರಿ ತರಬೇತಿ ಕೋರ್ಸ್’ ನಡೆಸಲು ಡಿಎಂಕೆ ನಿರ್ಧಾರ

- Advertisement -
- Advertisement -

ಡಿಎಂಕೆ ಪಕ್ಷದ ವರಿಷ್ಠ, ಮಾಜಿ ಮುಖ್ಯಮಂತ್ರಿ ದಿವಂಗತ ಎಂ.ಕರುಣಾನಿಧಿ ಅವರ ಜನ್ಮದಿನದ ಪೂರ್ವಭಾವಿಯಾಗಿ ಡಿಎಂಕೆ ಕರೆದಿದ್ದ ಜಿಲ್ಲಾ ಕಾರ್ಯದರ್ಶಿಗಳ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

“ದ್ರಾವಿಡ ಮಾದರಿಯ ತರಬೇತಿ ಕೋರ್ಸ್‌”ಗಳನ್ನು ನಡೆಸಲು, ರಾಜ್ಯದಲ್ಲಿ ಕೋಮು ಸೌಹಾರ್ದತೆ ಕದಡಲು ಯತ್ನಿಸುತ್ತಿರುವ ದೇಶ ವಿರೋಧಿ ಮತ್ತು ಅಪಾಯಕಾರಿ ಶಕ್ತಿಗಳನ್ನು ಗುರುತಿಸಲು ಯೋಜಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಐಟಿ ವಿಭಾಗ, ಮಹಿಳಾ ವಿಭಾಗ, ಯುವ ವಿಭಾಗ, ವಿದ್ಯಾರ್ಥಿ ವಿಭಾಗಗಳ ಸಹಾಯದಿಂದ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಈ ತರಬೇತಿ ಶಿಬಿರಗಳನ್ನು ನಡೆಸುವುದಾಗಿ ಡಿಎಂಕೆ ಹೇಳಿದೆ. ಸರಿಯಾಗಿ ಆಯೋಜನೆ ಮಾಡಲು ಜಿಲ್ಲಾ ಘಟಕಗಳಿಗೆ ಸೂಚಿಸಲಾಗಿದೆ.

“ಪೆರಿಯಾರ್, ಅಣ್ಣಾದೊರೈ ಮತ್ತು ಕರುಣಾನಿಧಿಯವರ ಅವರ ಕಠಿಣ ಪರಿಶ್ರಮದಿಂದಾಗಿ ತಮಿಳುನಾಡು ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಮತ್ತು ಕೋಮು ಸೌಹಾರ್ದತೆ ಇದೆ. ಇದನ್ನು ಅರಗಿಸಿಕೊಳ್ಳಲಾಗದ ಶಕ್ತಿಗಳು ಕೋಮು ವಿಷಬೀಜ ಬಿತ್ತಲು ಯತ್ನಿಸುತ್ತಿವೆ. ತಮಿಳುನಾಡನ್ನು ಉಳಿಸುವುದಕ್ಕಾಗಿ ಈ ದೇಶವಿರೋಧಿ ಶಕ್ತಿಗಳನ್ನು, ಅವರಿಗೆ ಸಹಾಯ ಮಾಡುವವರನ್ನು ಗುರುತಿಸಲು ನಿರ್ಧರಿಸಲಾಗಿದೆ” ಎಂದು ಡಿಎಂಕೆ ತಿಳಿಸಿದೆ.

ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, “ಈ ದೇಶವಿರೋಧಿ ಶಕ್ತಿಗಳಿಂದ ರಾಜ್ಯವನ್ನು ಪಾರು ಮಾಡುವ ಪ್ರಯತ್ನದಲ್ಲಿ, ನಾವು ರಾಜ್ಯದಾದ್ಯಂತ ದ್ರಾವಿಡ ಮಾದರಿಯ ತರಬೇತಿ ಶಿಬಿರಗಳನ್ನು ನಡೆಸುವ ಹೊಸ ಹೆಜ್ಜೆ ಇರಿಸುತ್ತಿರುವ ಸೈನಿಕರಾಗಿದ್ದೇವೆ. ಮುಖ್ಯಮಂತ್ರಿಯವರು ತಮ್ಮ ಕೆಲಸ ಮತ್ತು ಚಿಂತನೆಗಳನ್ನು ಮುನ್ನಡೆಸಲು ಅವರೊಂದಿಗೆ ಗುರಾಣಿಯಾಗಿ ನಿಲ್ಲುತ್ತೇವೆ” ಎಂದು ಪಕ್ಷ ನಿರ್ಧರಿಸಿದೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಚೆನ್ನೈಗೆ ಭೇಟಿಯ ಸಂದರ್ಭದಲ್ಲಿ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿದ್ದರು. “ಸಹಕಾರಿ ಒಕ್ಕೂಟದ ನಿಜವಾದ ಸ್ಫೂರ್ತಿ’ಯನ್ನು ಎತ್ತಿ ಹಿಡಿಯುವಂತೆ ಒತ್ತಾಯಿಸಿದ್ದರು. ಕೇಂದ್ರ ಸರ್ಕಾರವು ರಾಜ್ಯಕ್ಕೆ ಹೆಚ್ಚಿನ ಅನುದಾನ ಹಾಗೂ ಯೋಜನೆಗಳನ್ನು ನೀಡಬೇಕು. ತಮಿಳು ಭಾಷೆಗೆ ಹಿಂದಿಯಷ್ಟೇ ಆದ್ಯತೆಯನ್ನು ನೀಡಬೇಕು. ತಮಿಳುನಾಡು ರಾಜ್ಯಕ್ಕೆ ನೀಟ್‌ನಿಂದ ವಿನಾಯಿತಿ ನೀಡಬೇಕು” ಎಂದು ಒತ್ತಾಯಿಸಿದ್ದರು.

ಸ್ಟಾಲಿನ್ ತಮ್ಮ ಭಾಷಣದಲ್ಲಿ, “ತಮಿಳುನಾಡು ರಾಜ್ಯವು ಆರ್ಥಿಕತೆ ಹಾಗೂ ಇದಕ್ಕೆ ಸಂಬಂಧಿತ ಅಂಶಗಳಲ್ಲಿ ಮಾತ್ರವಲ್ಲದೆ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಮಹಿಳಾ ಸಬಲೀಕರಣದಲ್ಲಿಯೂ ಮುಂದಿದೆ” ಎಂದಿದ್ದರು. “ಸಂಕ್ಷಿಪ್ತವಾಗಿ ಹೇಳುವುದಾದರೆ, ತಮಿಳುನಾಡು ಎಲ್ಲರನ್ನೂ ಒಳಗೊಂಡು ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದೆ. ಇದನ್ನೇ ನಾವು ದ್ರಾವಿಡ ಮಾದರಿ ಎಂದು ಕರೆಯುತ್ತೇವೆ” ಎಂದು ಬಣ್ಣಿಸಿದ್ದರು.

ಇದನ್ನೂ ಓದಿರಿ: ತಮಿಳುನಾಡಿಗೆ ಅನ್ಯಾಯ; ಮೋದಿ ಇದ್ದ ವೇದಿಕೆಯಲ್ಲೇ ಸ್ಟಾಲಿನ್‌ ಹೇಳಿಕೆ; ಅಣ್ಣಾಮಲೈಗೆ ಬೇಸರ

ರಾಷ್ಟ್ರೀಯ ಆರ್ಥಿಕತೆಗೆ ತಮಿಳುನಾಡಿನ ಕೊಡುಗೆಯನ್ನು ಎತ್ತಿ ಹಿಡಿದ ಅವರು, “ಭಾರತದ ಜಿಡಿಪಿಯಲ್ಲಿ ರಾಜ್ಯದ ಪಾಲು ಶೇ.9.22 ರಷ್ಟಿದೆ. ಕೇಂದ್ರ ಸರ್ಕಾರದ ಒಟ್ಟಾರೆ ತೆರಿಗೆ ಆದಾಯದಲ್ಲಿ ತಮಿಳುನಾಡಿನ ಪಾಲು ಶೇ. 6ರಷ್ಟಿದೆ. ದೇಶದ ಅಭಿವೃದ್ಧಿ ಮತ್ತು ಆರ್ಥಿಕತೆಯಲ್ಲಿ ತಮಿಳುನಾಡಿನಂತಹ ಅಭಿವೃದ್ಧಿ ಹೊಂದಿದ ರಾಜ್ಯಗಳು ನೀಡಿದ ಕೊಡುಗೆಗೆ ನ್ಯಾಯ ಸಲ್ಲಿಸಲು ಕೇಂದ್ರ ಸರ್ಕಾರವು ಹೆಚ್ಚಿನ ಯೋಜನೆಗಳನ್ನು ರೂಪಿಸಬೇಕು. ಅನುದಾನ ಹಂಚಿಕೆಯನ್ನು ಹೆಚ್ಚಿಸಬೇಕು. ಆಗ ಮಾತ್ರ ಸಹಕಾರಿ ಫೆಡರಲಿಸಂನ ನಿಜವಾದ ಮನೋಭಾವವನ್ನು ಎತ್ತಿಹಿಡಿಯಲಾಗುತ್ತದೆ” ಎಂದಿದ್ದರು.

“15 ಮೇ 2022ರ ವೇಳೆಗೆ ತಮಿಳುನಾಡಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರವು 14,006 ಕೋಟಿ ರೂ. ಆಗಿದೆ. ಇದನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ಅನೇಕ ರಾಜ್ಯಗಳ ಆದಾಯವು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದಿರುವ ಸಮಯದಲ್ಲಿ, ಜಿಎಸ್‌ಟಿ ಪರಿಹಾರದ ಅವಧಿಯನ್ನು ವಿಸ್ತರಿಸಬೇಕು” ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....