Homeಕರ್ನಾಟಕಆರೆಸ್ಸೆಸ್‌‌ ದೃಷ್ಟಿಯಲ್ಲಿ ಹಿಂದೂ ಆಗಲು ರೇಪ್ ಮಾಡಬೇಕಾ?: ಸಿದ್ದರಾಮಯ್ಯ ಪ್ರಶ್ನೆ

ಆರೆಸ್ಸೆಸ್‌‌ ದೃಷ್ಟಿಯಲ್ಲಿ ಹಿಂದೂ ಆಗಲು ರೇಪ್ ಮಾಡಬೇಕಾ?: ಸಿದ್ದರಾಮಯ್ಯ ಪ್ರಶ್ನೆ

ಆರೆಸ್ಸೆಸ್ಸನ್ನು ಪ್ರಶ್ನೆ ಮಾಡಿದರೆ BJP ನಾಯಕರು ಎದೆ ಬಡಿದುಕೊಳ್ಳುವುದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ

- Advertisement -
- Advertisement -

ಆರೆಸ್ಸೆಸ್ಸ್ ಅನ್ನು ಪ್ರಶ್ನೆ ಮಾಡಿದರೆ ಬಿಜೆಪಿ ನಾಯಕರು ಎದೆ ಬಡಿದುಕೊಳ್ಳುವುದು ಯಾಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಪ್ರಶ್ನಿಸಿದ್ದು, ಆರೆಸ್ಸೆಸ್‌‌ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಎಂದು ಕೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಅವರು, ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್.ಎಸ್.ಎಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಅವರೇ ಉತ್ತರಿಸಲಿ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಿಂದೂ ಧರ್ಮದ ರಕ್ಷಣೆಗಾಗಿಯೇ ಅವತಾರ ಎತ್ತಿ ಬಂದಂತೆ ಮಾತನಾಡುತ್ತಿರುವ ಆರ್.ಎಸ್.ಎಸ್ ನಾಯಕರು, ಬೆಂಬಲಿಸುತ್ತಿರುವುದು ಮಾತ್ರ ಬಿಜೆಪಿ ಎಂಬ ರಾಜಕೀಯ ಪಕ್ಷವನ್ನು. ಯಾಕೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ?” ಎಂದು ಸಿದ್ದರಾಮಯ್ಯ ಅವರು ಕೇಳಿದ್ದಾರೆ.

ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

“ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೆಂದು ಯಾವ ಆಧಾರದಲ್ಲಿ ಆರ್.ಎಸ್.ಎಸ್ ತೀರ್ಮಾನಿಸಿದೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲು ಹೊಂದಿರಬೇಕಾದ ಅರ್ಹತೆಗಳೇನು? ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು? ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಇದರ ಫಲಾನುಭವಿಗಳು ಹಿಂದುಗಳು ಅಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40% ಕಮಿಷನ್ ಹೊಡೆಯಬೇಕಾ? ಬ್ಲೂ ಫಿಲ್ಮ್ ನೋಡಬೇಕಾ? ಗಣಿ ಲೂಟಿ ಮಾಡಬೇಕಾ? ಚೆಕ್ ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ? ರೇಪ್ ಮಾಡಬೇಕಾ? ಏನು ಮಾಡಬೇಕು? ಹೇಳಿಬಿಡಿ” ಎಂದು ಅವರು ಕೇಳಿದ್ದಾರೆ.

“ಹಸಿದ ಹೊಟ್ಟೆಗೆ ಅನ್ನ, ಎಳೆಯ ಮಕ್ಕಳಿಗೆ ಹಾಲು, ರೈತರ ಬೆಳೆಗೆ ನ್ಯಾಯದ ಬೆಲೆ, ಯುವಜನರಿಗೆ ಉದ್ಯೋಗ, ಅವಕಾಶ ವಂಚಿತರಿಗೆ ಸಮಾನ ಅವಕಾಶ, ಜಾತಿ ತಾರತಮ್ಯದಿಂದ ಅನ್ಯಾಯಕ್ಕೀಡಾದವರಿಗೆ ಸಾಮಾಜಿಕ ನ್ಯಾಯ.. ಹಿಂದೂ ಆಗಲು ಇಷ್ಟು ಅರ್ಹತೆ ಸಾಲದೇ?” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

“ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ತನ್ನ ಸಂಘಟನೆಯ ಪದಾಧಿಕಾರಗಳನ್ನೆಲ್ಲಾ ಯಾಕೆ ಒಂದು ಜಾತಿಗೆ ಮೀಸಲಿಟ್ಟಿದೆ? ಆರ್.ಎಸ್.ಎಸ್ ನ ಪದಾಧಿಕಾರಿಗಳಲ್ಲಿ ಎಷ್ಟು ಮಂದಿ ದಲಿತರು, ಹಿಂದುಳಿದ ಜಾತಿಯವರಿದ್ದಾರೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಧರ್ಮದ ವ್ಯಾಖ್ಯಾನ ಏನು? ಹಿಂದೂ ಆಗಲು ಹಿಂದೂ ತಂದೆ-ತಾಯಿ ಹೊಟ್ಟೆಯಲ್ಲಿ ಹುಟ್ಟಿದರೆ ಸಾಕಾ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷದ ಸದಸ್ಯರಾಗಬೇಕಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಹಿಂದೂಗಳೆಲ್ಲ ಒಂದು ಎಂದು ಕಂಠ ಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ಯಾಕೆ ಹಿಂದೂ ಧರ್ಮದ ಅನಿಷ್ಠಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಢ ನಂಬಿಕೆ, ಕಂದಾಚಾರಗಳ ಬಗ್ಗೆ ಮಾತನಾಡುತ್ತಿಲ್ಲ?
ಹಿಂದೂ ಧರ್ಮದೊಳಗಿನ ಅನಿಷ‍್ಠಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನನ್ನಂತಹವರು ಹಿಂದೂ ವಿರೋಧಿ ಆಗುವುದಾದರೆ? ಇದೇ ಕೆಲಸ ಮಾಡಿರುವ ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರುಗಳನ್ನು ಏನೆಂದು ಕರೆಯುತ್ತೀರಿ?” ಎಂದು ಅವರು ಹೇಳಿದ್ದಾರೆ.

“ಆರ್.ಎಸ್.ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ. ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ? ಭಗವಾ ಧ್ವಜಕ್ಕೋ? ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ನಿಮ್ಮ ನಿಷ್ಠೆ ಗಾಂಧೀಜಿಗೋ? ಗೋಡ್ಸೆಗೋ? ಆರ್.ಎಸ್.ಎಸ್ ನಾಯಕರೇ ಹೇಳಿ” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್‌ ಈ ದೇಶದ್ದಾ? ಅವರೇನು ದ್ರಾವಿಡರಾ? ಚರಿತ್ರೆಯನ್ನು ಕೆದಕಲು ಹೋಗಬಾರದು: ಸಿದ್ದರಾಮಯ್ಯ

“ಈ ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸ ನಿಮಗಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಡಿ, ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ” ಎಂದು ಸವಾಲೆಸೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಮ್ಮ ಕಾಂಗ್ರೆಸ್ ಸರಿ ಇದ್ದಿದ್ದರೆ ಬಿಜೆಪಿ, ಆರ್‌ಎಸ್‌ಎಸ್ ಈ ಮಟ್ಟಕ್ಕೆ ಯಾಕೆ ಬೆಳೆಯುತ್ತಿತ್ತು.
    ಹುಳುಕು ನಿಮ್ಮ ಪಕ್ಷದಲ್ಲೇ ಇದೆ.

  2. Congress,App, all leftists..are bad
    ..so BJP is better than all anti communals,divide nature’s,guts less ,afraid of particular community for vote Bank, RSS is better than all these goonda patriotism.

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....