Homeಕರ್ನಾಟಕನಾಡಗೀತೆ ತಿರುಚಿದ, ಕುವೆಂಪುರನ್ನು ನಿಂದಿಸಿದವರ ವಿರುದ್ಧ ಕ್ರಮ ಜರುಗಿಸಿ: ನಿರ್ಮಲಾನಂದನಾಥ ಸ್ವಾಮೀಜಿ

ನಾಡಗೀತೆ ತಿರುಚಿದ, ಕುವೆಂಪುರನ್ನು ನಿಂದಿಸಿದವರ ವಿರುದ್ಧ ಕ್ರಮ ಜರುಗಿಸಿ: ನಿರ್ಮಲಾನಂದನಾಥ ಸ್ವಾಮೀಜಿ

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸಲಿದೆ ಎಂದು ನಂಬಿದ್ದೇನೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಗೇಲಿ ಮಾಡಿ, ವಿಕೃತಗೊಳಿಸಿ, ಅವಮಾನ ಮಾಡಿರುವ ರೋಹಿತ್ ಚಕ್ರತೀರ್ಥ ಅವರ ಹಳೆಯ ಪೋಸ್ಟ್‌ ವೈರಲ್ ಆಗಿದೆ. ಲಕ್ಷ್ಮಣ ಆಕಾಶೆ ಕಾರ್ಕಳ ಎಂಬಾತ ಕುವೆಂಪು ಅವರ ಬಗ್ಗೆ ಬರೆದಿರುವ ಬರಹ ಅವಹೇಳನಕಾರಿಯಾಗಿದೆ ಎಂದು ಕನ್ನಡಿಗರು ಸಿಟ್ಟಿಗೆದ್ದಿದ್ದು, ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕ ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಗೆ ರೋಹಿತ್‌ ಚಕ್ರತೀರ್ಥ ಅಧ್ಯಕ್ಷರಾಗಿರುವುದು ವಿವಾದಕ್ಕೆ ಕಾರಣವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕುವೆಂಪು ಅವರು ತಮ್ಮ ಯೌವನದ ಕಾಲದಲ್ಲಿ ಬರೆದ ‘ಜೈ ಭಾರತ ಜನನಿಯ ತನುಜಾತೆ’ ಕವಿತೆಯು ಕಳೆದ ತೊಂಬತ್ತು ವರ್ಷಗಳಿಂದ ಕನ್ನಡಿಗರ ಹೃದಯದಲ್ಲಿ ನೆಲೆನಿಂತು, ದೇಶಭಕ್ತಿ ಮತ್ತು ನಾಡಪ್ರೇಮವನ್ನು ಉದ್ದೀಪಿಸಿದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರವು ‘ಜೈ ಭಾರತ ಜನನಿಯ ತನುಜಾತೆ’ ಗೀತೆಯನ್ನು ನಾಡಗೀತೆಯಾಗಿ ಘೋಷಿಸಿತು. ಅದನ್ನು ನಾಡಗೀತೆಯಾಗಿ ಘೋಷಣೆ ಮಾಡಬೇಕು ಎಂದು ಯಾರೂ ಕೇಳಿರಲಿಲ್ಲ. ಅದು ಸರ್ಕಾರವೇ ತೆಗೆದುಕೊಂಡ ತೀರ್ಮಾನವಾಗಿತ್ತು. ಕನ್ನಡ ಮತ್ತು ಕನ್ನಡಿಗರ ಅಸ್ಮಿತೆಯಾಗಿರುವ ಅಧಿಕೃತ ನಾಡಗೀತೆಯನ್ನು ಹಾಡಿ ಕೋಟಿ ಕೋಟಿ ಕನ್ನಡಿಗರು ಸಂಭ್ರಮಿಸಿದ್ದಾರೆ, ಸಂಭ್ರಮಿಸುತ್ತಿದ್ದಾರೆ. ಆದರೆ ಈಚೆಗೆ ಕೆಲವರು ನಾಡಗೀತೆಯನ್ನು ತಿರುಚಿ ಬರೆದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರ್ಕಾರದ ತೀರ್ಮಾನವನ್ನು ಗೇಲಿ ಮಾಡುತ್ತಿರುವಂತಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.

ನಾಡಗೀತೆಯನ್ನು ತಿರುಚಿರುವುದಷ್ಟೇ ಅಲ್ಲ, ಮಹಾಕವಿಗಳೂ ರಾಷ್ಟ್ರಕವಿಗಳೂ ಆಗಿರುವ ಕುವೆಂಪು ಅವರ ಬಗ್ಗೆ ಅತ್ಯಂತ ಕೀಳುಭಾಷೆಯಲ್ಲಿ ಅವಹೇಳನಕಾರಿ ಲೇಖನಗಳನ್ನು ಬರೆದಿದ್ದಾರೆ. ನಾಡಗೀತೆಯನ್ನು ಅವಮಾನಿಸುವುದೆಂದರೆ ರಾಷ್ಟ್ರಗೀತೆಯನ್ನು ಅವಮಾನಿಸಿದಂತೆ; ಹಾಗೂ ನೆಲದ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಯುಕ್ತ, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸುತ್ತದೆಂದು ಭಾವಿಸುತ್ತೇವೆ. ಹಾಗೂ ಈ ಮೂಲಕ ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎಂಬ ಸಂದೇಶ ರವಾನಿಸುತ್ತದೆ ಎಂಬುದು ನಮ್ಮ ಅಭಿಲಾಷೆಯಾಗಿದೆ ಎಂದಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನ: ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲು

ನಮ್ಮ ನಾಡು ಕಂಡ ಅಪ್ರತಿಮ ಕವಿ, ದಾರ್ಶನಿಕ, ಸರ್ವೋದಯ ತತ್ವ ಪ್ರತಿಪಾದಕರಾದ ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಸಾಹಿತ್ಯದ ಮೇರು ಕವಿಗಳು; ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು. ಅವರ ಸಾಹಿತ್ಯ ಸರ್ವರನ್ನೂ ಒಳಗೊಳ್ಳುವ, ಸರ್ವರಹಿತ ಬಯಸುವ ಕ್ರಾಂತದೃಷ್ಟಿಯನ್ನು ಹೊಂದಿದೆ. ಸಾಮಾಜಿಕ, ಆರ್ಥಿಕ, ಧಾರ್ಮಿಕ ಅಸಮಾನತೆಯನ್ನು ಮತ್ತು ಲಿಂಗಭೇದವನ್ನು ನಿವಾರಿಸಿಕೊಂಡು ಈ ನಾಡು “ಸರ್ವಜನಾಂಗದ ಶಾಂತಿಯ ತೋಟ”ವಾಗಬೇಕು ಎಂಬ ಕನಸು ಕಂಡವರು ಅವರು. ಅವರ ‘ಕಾನೂರು ಹೆಗ್ಗಡತಿ’ ಮತ್ತು ‘ಮಲೆಗಳಲ್ಲಿ ಮದುಮಗಳು’ ಮಹಾಕಾದಂಬರಿಗಳು, ‘ಶೂದ್ರ ತಪಸ್ವಿ’, ‘ಜಲಗಾರ’, ‘ಬೆರಳ್ಗೆ ಕೊರಳ್’ ಮುಂತಾದ ಶ್ರೇಷ್ಠ ನಾಟಕಗಳು, ‘ರಾಮಾಯಣ ದರ್ಶನಂ’ ಮಹಾಕಾವ್ಯ ಹಾಗೂ ಸಾವಿರಾರು ಪದ್ಯಗಳು, ಲೇಖನಗಳ ಮೂಲಕ ಕನ್ನಡ ಸಾಹಿತ್ಯದ ಕ್ಷಿತಿಜವನ್ನು ವಿಸ್ತರಿಸಿದ ಮಹಾಕವಿ ಕುವೆಂಪು ಎಂದು ಸ್ವಾಮೀಜಿ ಬಣ್ಣಿಸಿದ್ದಾರೆ.

ಚಕ್ರತೀರ್ಥ ವಜಾಗೊಳಿಸಲು ಒಕ್ಕಲಿಗರ ಸಂಘ ಆಗ್ರಹ: ನಾಡಗೀತೆಗೆ ಅವಹೇಳನ ಮಾಡಿರುವ ಆರೋಪ ಹೊತ್ತಿರುವ ರೋಹಿತ್‌ ಚಕ್ರತೀರ್ಥನನ್ನು ಈ ಕೂಡಲೇ ಪಠ್ಯ ಪರಿಶೀಲನಾ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಒಕ್ಕಲಿಗರ ಸಂಘ ಆಗ್ರಹಿಸಿದೆ.

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಂಘದ ಅಧ್ಯಕ್ಷ ಸಿ.ಎನ್‌.ಬಾಲಕೃಷ್ಣ ಅವರು, “ಈ ಸಂಬಂಧ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಜೊತೆ ಚರ್ಚಿಸಲಾಗುವುದು. ನಾಡಿನ ಆರೂವರೆ ಕೋಟಿ ಕನ್ನಡಿಗರು ಸ್ವೀಕರಿಸಿರುವ ನಾಡಗೀತೆಯನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರಿಯಲ್ಲ. ಸರ್ಕಾರ ಕ್ರಮ ಜರುಗಿಸುವಲ್ಲಿ ವಿಫಲವಾದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ದೂರು ದಾಖಲು: ರೋಹಿತ್ ಚಕ್ರತೀರ್ಥ ಮತ್ತು ಲಕ್ಷಣ ಆಕಾಶೆ ಕಾರ್ಕಳ ಎಂಬುವವರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಈಗಾಗಲೇ ದೂರು ನೀಡಲಾಗಿದೆ. ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಎ.ಪಿ ರಂಗನಾಥ್, ವಕೀಲರಾದ ಕೆ.ಎನ್ ಜಗದೀಶ್ ಕುಮಾರ್, ಹರಿರಾಮ್ ಮತ್ತು ಸೂರ್ಯ ಮುಕುಂದರಾಜ್‌ರವರು ಇತ್ತೀಚೆಗೆ ಬೆಂಗಳೂರು ಪೊಲೀಸ್ ಆಯುಕ್ತರಾದ ಪ್ರತಾಪ ರೆಡ್ಡಿಯವರಿಗೆ ದೂರು ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿದ್ಧರಾಮಯ್ಯ ಗೆ ಉಗುಳೋದು ಬಿಟ್ಟು
    ಇವರಿಗೆ ಪಾಠ ಮಾಡುತ್ತಾರೆ ಅಂದರೆ
    ವಿಪರ್ಯಾಸ ಹಾಗೂ ಆಶ್ಚರ್ಯ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...