Homeಕರ್ನಾಟಕರಾಮಕೃಷ್ಣ ಹೆಗಡೆ ಜೊತೆಗಿನ ಸಂಬಂಧ ಕುರಿತ ಮಾತಿಗೆ ಕತ್ತರಿ: ಕನ್ನಡ & ಸಂಸ್ಕೃತಿ ಇಲಾಖೆ ನಡೆಗೆ...

ರಾಮಕೃಷ್ಣ ಹೆಗಡೆ ಜೊತೆಗಿನ ಸಂಬಂಧ ಕುರಿತ ಮಾತಿಗೆ ಕತ್ತರಿ: ಕನ್ನಡ & ಸಂಸ್ಕೃತಿ ಇಲಾಖೆ ನಡೆಗೆ ಪ್ರತಿಭಾ ಬೇಸರ

- Advertisement -
- Advertisement -

ಕನ್ನಡ ಸಂಸ್ಕೃತಿ ಇಲಾಖೆಯು ಇತ್ತೀಚೆಗೆ ನಡೆಸಿದ ಸಂವಾದ ಸರಣಿಯಲ್ಲಿ ಮಾತನಾಡಿದ್ದ ಖ್ಯಾತ ಶಾಸ್ತ್ರೀಯ ನೃತ್ಯಗಾರ್ತಿ ಪ್ರತಿಭಾ ಪ್ರಹ್ಲಾದ್ ಅವರ ಕೆಲವು ಮಾತುಗಳಿಗೆ ಕತ್ತರಿ ಪ್ರಯೋಗ ಮಾಡಿ, ಬಳಿಕ ಇಲಾಖೆಯು ಯೂಟ್ಯೂಬ್‌ನಲ್ಲಿ ವಿಡಿಯೊ ಅಪ್‌ಲೋಡ್ ಮಾಡಿದ್ದು, ಪ್ರತಿಭಾ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧ ಮತ್ತು ಒಂಟಿ ತಾಯಿಯಾಗಿ ತಾವು ಕಂಡ ಅನುಭವಗಳನ್ನು ಅವರು ಹಂಚಿಕೊಂಡಿದ್ದನ್ನು ತೆಗೆದು ಹಾಕಲಾಗಿದೆ. ಎಡಿಟ್ ಮಾಡಿದ ವಿಡಿಯೊ ಪ್ರತಿಯನ್ನೇ ಪ್ರತಿಭಾ ಅವರಿಗೂ ನೀಡಲಾಗಿದೆ ಎಂದು ವರದಿಯಾಗಿದೆ.

“ಸರ್ಕಾರ ಬಯಸಿದರೆ ನಾನು ಮಾತನಾಡಿರುವುದನ್ನು ಸೆನ್ಸಾರ್ ಮಾಡಲಿ, ಆದರೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ನನ್ನ ಭಾಷಣದ ಸಂಪೂರ್ಣ ಧ್ವನಿಮುದ್ರಣ ಪಡೆಯಲು ನಾನು ಅರ್ಹಳಾಗಿದ್ದೇನೆ” ಎಂದಿದ್ದಾರೆ.

ಕನ್ನಡ ಸಂಸ್ಕೃತಿ ಇಲಾಖೆಯು ಆಯೋಜಿಸುತ್ತಿರುವ ‘ಮನೆಯಂಗಳದಲ್ಲಿ ಮಾತುಕಥೆ’ ಎಂಬ ಸಂವಾದ ಸರಣಿಯಲ್ಲಿ ಪ್ರತಿಭಾ ಅವರು ಇತ್ತೀಚೆಗೆ ಮಾತನಾಡಿದ್ದರು. ಈ ಸರಣಿಯಲ್ಲಿ ಸಾಧಕ ಕನ್ನಡಿಗರ ಜೀವನ ಕಥೆಗಳನ್ನು ದಾಖಲಿಸಲಾಗುತ್ತಿದೆ. ಪದ್ಮಶ್ರೀ ಪುರಸ್ಕೃತೆ ಪ್ರತಿಭಾ ಅವರನ್ನು ಮೇ 21ರಂದು ಹಿರಿಯ ಪತ್ರಕರ್ತ ರಾಮಕೃಷ್ಣ ಉಪಾಧ್ಯ ಅವರು ಸಂದರ್ಶಿಸಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಪ್ರತಿಭಾ ಅವರು ತಮ್ಮ ನೃತ್ಯ ಬದುಕು, ಕಲಾ ನಿರ್ವಹಣೆ, ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧ ಮತ್ತು ಅವಳಿ ಮಕ್ಕಳಿಗೆ ಒಂಟಿ ತಾಯಿಯಾಗಿ ಇರಲು ನಿರ್ಧರಿಸಿದ್ದು ಸೇರಿದಂತೆ ಹಲವಾರು ಸಂಗತಿಗಳನ್ನು ಹಂಚಿಕೊಂಡಿದ್ದರು.

“ವೈಯಕ್ತಿಕವಾಗಿ, ಮಕ್ಕಳನ್ನು ಹೊಂದಲು ಮದುವೆಯ ಅವಶ್ಯಕತೆಯಿದೆ ಎಂದು ನಾನು ನಂಬುವುದಿಲ್ಲ. ಕುಟುಂಬದ ಹೊರತಾಗಿ ಸಂತೋಷ ಮತ್ತು ದುಃಖಗಳನ್ನು ಹಂಚಿಕೊಳ್ಳಲು ಸಂಗಾತಿಯೂ ಮುಖ್ಯ…. ಆದರೆ, ಇದನ್ನು ಲೆಕ್ಕಿಸದೆ, ಸಮಾಜವು ಪ್ರಗತಿ ಹೊಂದಬೇಕು. ವಿವಿಧ ಮಾದರಿಗಳ ಬಗ್ಗೆ ಯೋಚಿಸಬೇಕು. ಅಂತಹ ಒಂದು ಮಾದರಿಯಲ್ಲಿ ನನ್ನ ಅವಳಿ ಮಕ್ಕಳು ಬೆಳೆದರು. ನಾನು ಒಂಟಿ ತಾಯಿಯಾಗಲು ನಿರ್ಧರಿಸಿದೆ. ಅದಕ್ಕಾಗಿ ನಾನು ಎಂದಿಗೂ ವಿಷಾದಿಸಲಿಲ್ಲ” ಎಂದು ಪ್ರತಿಭಾ ಹೇಳಿರುವುದಾಗಿ ಡೆಕ್ಕನ್‌ ಹೆರಾಲ್ಡ್ ವರದಿ ಮಾಡಿದೆ.

“ರಾಮಕೃಷ್ಣ ಹೆಗಡೆಯವರು ಅನಾರೋಗ್ಯಕ್ಕೆ ತುತ್ತಾದಾಗ ಅವರೊಂದಿಗಿನ ಸಂಬಂಧವು ಹದಗೆಟ್ಟಿತು. ರಾಮಕೃಷ್ಣ ಹೆಗಡೆಯವರಿಂದ ಪ್ರತಿಭಾ ಅವರನ್ನು ದೂರವಿರಿಸಲು ಹೆಗಡೆಯವರ ಕುಟುಂಬ ಪ್ರಯತ್ನಿಸಿತು. ಹೆಗಡೆಯವರ ಅಂತಿಮ ದಿನಗಳಲ್ಲಿ ಪ್ರತಿಭಾ ಮತ್ತು ಅವರ ಮಕ್ಕಳು ಹೆಗಡೆಯವನ್ನು ಭೇಟಿಯಾಗದಂತೆ ಹೇಗೆ ತಡಲಾಯಿತು ಎಂಬುದರ ಕುರಿತೂ ಸಂದರ್ಶನದಲ್ಲಿ ಮಾತನಾಡಿದ್ದರು” ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಪ್ರತಿಭಾ ಅವರನ್ನು ಸಂದರ್ಶಿಸಿದ ರಾಮಕೃಷ್ಣ ಉಪಾಧ್ಯ ಅವರು ‘ದಿ ಹಿಂದೂ’ಗೆ ಪ್ರತಿಕ್ರಿಯೆ ನೀಡಿದ್ದು, “ಆರಂಭದಲ್ಲಿ ಪೂರ್ಣ ಸಂದರ್ಶನವನ್ನು ಮೇ 22 ರಂದು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಆದರೆ ನಂತರದಲ್ಲಿ ಎಡಿಟ್ ಮಾಡಿ ಪ್ರಕಟಿಸಲಾಯಿತು. ಕನ್ನಡ ಸಂಸ್ಕೃತಿ ಇಲಾಖೆಯಿಂದ ಸಂದರ್ಶನದ ಪ್ರತಿಯನ್ನು ತರಿಸಿಕೊಳ್ಳಲಿದ್ದೇನೆ” ಎಂದಿದ್ದಾರೆ.

ತನಗಿಂತ 35 ವರ್ಷ ದೊಡ್ಡವರಾಗಿದ್ದ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧದ ಬಗ್ಗೆ ಈ ಹಿಂದೆ ಕೆಲವು ಸಂದರ್ಭಗಳಲ್ಲಿ ಪ್ರತಿಭಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತನ್ನ ಭಾಷಣವನ್ನು ಸೆನ್ಸಾರ್ ಮಾಡಲಾಗಿದೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿರುವ ಅವರು, “ನನ್ನ ಜೀವನದ ಆಯ್ಕೆಗಳು ಮತ್ತು ಸವಾಲುಗಳ ಬಗ್ಗೆ ನಾನು ಹೇಳಿದ್ದಕ್ಕೆ ಸಂಸ್ಕೃತಿ ಇಲಾಖೆಯು ಆಕ್ಷೇಪಣೆಯನ್ನು ತೋರಿರುವುದು ವಿಚಿತ್ರವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...