Homeಕರ್ನಾಟಕರಾಮಕೃಷ್ಣ ಹೆಗಡೆ ಜೊತೆಗಿನ ಸಂಬಂಧ ಕುರಿತ ಮಾತಿಗೆ ಕತ್ತರಿ: ಕನ್ನಡ & ಸಂಸ್ಕೃತಿ ಇಲಾಖೆ ನಡೆಗೆ...

ರಾಮಕೃಷ್ಣ ಹೆಗಡೆ ಜೊತೆಗಿನ ಸಂಬಂಧ ಕುರಿತ ಮಾತಿಗೆ ಕತ್ತರಿ: ಕನ್ನಡ & ಸಂಸ್ಕೃತಿ ಇಲಾಖೆ ನಡೆಗೆ ಪ್ರತಿಭಾ ಬೇಸರ

- Advertisement -
- Advertisement -

ಕನ್ನಡ ಸಂಸ್ಕೃತಿ ಇಲಾಖೆಯು ಇತ್ತೀಚೆಗೆ ನಡೆಸಿದ ಸಂವಾದ ಸರಣಿಯಲ್ಲಿ ಮಾತನಾಡಿದ್ದ ಖ್ಯಾತ ಶಾಸ್ತ್ರೀಯ ನೃತ್ಯಗಾರ್ತಿ ಪ್ರತಿಭಾ ಪ್ರಹ್ಲಾದ್ ಅವರ ಕೆಲವು ಮಾತುಗಳಿಗೆ ಕತ್ತರಿ ಪ್ರಯೋಗ ಮಾಡಿ, ಬಳಿಕ ಇಲಾಖೆಯು ಯೂಟ್ಯೂಬ್‌ನಲ್ಲಿ ವಿಡಿಯೊ ಅಪ್‌ಲೋಡ್ ಮಾಡಿದ್ದು, ಪ್ರತಿಭಾ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧ ಮತ್ತು ಒಂಟಿ ತಾಯಿಯಾಗಿ ತಾವು ಕಂಡ ಅನುಭವಗಳನ್ನು ಅವರು ಹಂಚಿಕೊಂಡಿದ್ದನ್ನು ತೆಗೆದು ಹಾಕಲಾಗಿದೆ. ಎಡಿಟ್ ಮಾಡಿದ ವಿಡಿಯೊ ಪ್ರತಿಯನ್ನೇ ಪ್ರತಿಭಾ ಅವರಿಗೂ ನೀಡಲಾಗಿದೆ ಎಂದು ವರದಿಯಾಗಿದೆ.

“ಸರ್ಕಾರ ಬಯಸಿದರೆ ನಾನು ಮಾತನಾಡಿರುವುದನ್ನು ಸೆನ್ಸಾರ್ ಮಾಡಲಿ, ಆದರೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ನನ್ನ ಭಾಷಣದ ಸಂಪೂರ್ಣ ಧ್ವನಿಮುದ್ರಣ ಪಡೆಯಲು ನಾನು ಅರ್ಹಳಾಗಿದ್ದೇನೆ” ಎಂದಿದ್ದಾರೆ.

ಕನ್ನಡ ಸಂಸ್ಕೃತಿ ಇಲಾಖೆಯು ಆಯೋಜಿಸುತ್ತಿರುವ ‘ಮನೆಯಂಗಳದಲ್ಲಿ ಮಾತುಕಥೆ’ ಎಂಬ ಸಂವಾದ ಸರಣಿಯಲ್ಲಿ ಪ್ರತಿಭಾ ಅವರು ಇತ್ತೀಚೆಗೆ ಮಾತನಾಡಿದ್ದರು. ಈ ಸರಣಿಯಲ್ಲಿ ಸಾಧಕ ಕನ್ನಡಿಗರ ಜೀವನ ಕಥೆಗಳನ್ನು ದಾಖಲಿಸಲಾಗುತ್ತಿದೆ. ಪದ್ಮಶ್ರೀ ಪುರಸ್ಕೃತೆ ಪ್ರತಿಭಾ ಅವರನ್ನು ಮೇ 21ರಂದು ಹಿರಿಯ ಪತ್ರಕರ್ತ ರಾಮಕೃಷ್ಣ ಉಪಾಧ್ಯ ಅವರು ಸಂದರ್ಶಿಸಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಪ್ರತಿಭಾ ಅವರು ತಮ್ಮ ನೃತ್ಯ ಬದುಕು, ಕಲಾ ನಿರ್ವಹಣೆ, ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧ ಮತ್ತು ಅವಳಿ ಮಕ್ಕಳಿಗೆ ಒಂಟಿ ತಾಯಿಯಾಗಿ ಇರಲು ನಿರ್ಧರಿಸಿದ್ದು ಸೇರಿದಂತೆ ಹಲವಾರು ಸಂಗತಿಗಳನ್ನು ಹಂಚಿಕೊಂಡಿದ್ದರು.

“ವೈಯಕ್ತಿಕವಾಗಿ, ಮಕ್ಕಳನ್ನು ಹೊಂದಲು ಮದುವೆಯ ಅವಶ್ಯಕತೆಯಿದೆ ಎಂದು ನಾನು ನಂಬುವುದಿಲ್ಲ. ಕುಟುಂಬದ ಹೊರತಾಗಿ ಸಂತೋಷ ಮತ್ತು ದುಃಖಗಳನ್ನು ಹಂಚಿಕೊಳ್ಳಲು ಸಂಗಾತಿಯೂ ಮುಖ್ಯ…. ಆದರೆ, ಇದನ್ನು ಲೆಕ್ಕಿಸದೆ, ಸಮಾಜವು ಪ್ರಗತಿ ಹೊಂದಬೇಕು. ವಿವಿಧ ಮಾದರಿಗಳ ಬಗ್ಗೆ ಯೋಚಿಸಬೇಕು. ಅಂತಹ ಒಂದು ಮಾದರಿಯಲ್ಲಿ ನನ್ನ ಅವಳಿ ಮಕ್ಕಳು ಬೆಳೆದರು. ನಾನು ಒಂಟಿ ತಾಯಿಯಾಗಲು ನಿರ್ಧರಿಸಿದೆ. ಅದಕ್ಕಾಗಿ ನಾನು ಎಂದಿಗೂ ವಿಷಾದಿಸಲಿಲ್ಲ” ಎಂದು ಪ್ರತಿಭಾ ಹೇಳಿರುವುದಾಗಿ ಡೆಕ್ಕನ್‌ ಹೆರಾಲ್ಡ್ ವರದಿ ಮಾಡಿದೆ.

“ರಾಮಕೃಷ್ಣ ಹೆಗಡೆಯವರು ಅನಾರೋಗ್ಯಕ್ಕೆ ತುತ್ತಾದಾಗ ಅವರೊಂದಿಗಿನ ಸಂಬಂಧವು ಹದಗೆಟ್ಟಿತು. ರಾಮಕೃಷ್ಣ ಹೆಗಡೆಯವರಿಂದ ಪ್ರತಿಭಾ ಅವರನ್ನು ದೂರವಿರಿಸಲು ಹೆಗಡೆಯವರ ಕುಟುಂಬ ಪ್ರಯತ್ನಿಸಿತು. ಹೆಗಡೆಯವರ ಅಂತಿಮ ದಿನಗಳಲ್ಲಿ ಪ್ರತಿಭಾ ಮತ್ತು ಅವರ ಮಕ್ಕಳು ಹೆಗಡೆಯವನ್ನು ಭೇಟಿಯಾಗದಂತೆ ಹೇಗೆ ತಡಲಾಯಿತು ಎಂಬುದರ ಕುರಿತೂ ಸಂದರ್ಶನದಲ್ಲಿ ಮಾತನಾಡಿದ್ದರು” ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಪ್ರತಿಭಾ ಅವರನ್ನು ಸಂದರ್ಶಿಸಿದ ರಾಮಕೃಷ್ಣ ಉಪಾಧ್ಯ ಅವರು ‘ದಿ ಹಿಂದೂ’ಗೆ ಪ್ರತಿಕ್ರಿಯೆ ನೀಡಿದ್ದು, “ಆರಂಭದಲ್ಲಿ ಪೂರ್ಣ ಸಂದರ್ಶನವನ್ನು ಮೇ 22 ರಂದು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಆದರೆ ನಂತರದಲ್ಲಿ ಎಡಿಟ್ ಮಾಡಿ ಪ್ರಕಟಿಸಲಾಯಿತು. ಕನ್ನಡ ಸಂಸ್ಕೃತಿ ಇಲಾಖೆಯಿಂದ ಸಂದರ್ಶನದ ಪ್ರತಿಯನ್ನು ತರಿಸಿಕೊಳ್ಳಲಿದ್ದೇನೆ” ಎಂದಿದ್ದಾರೆ.

ತನಗಿಂತ 35 ವರ್ಷ ದೊಡ್ಡವರಾಗಿದ್ದ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧದ ಬಗ್ಗೆ ಈ ಹಿಂದೆ ಕೆಲವು ಸಂದರ್ಭಗಳಲ್ಲಿ ಪ್ರತಿಭಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತನ್ನ ಭಾಷಣವನ್ನು ಸೆನ್ಸಾರ್ ಮಾಡಲಾಗಿದೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿರುವ ಅವರು, “ನನ್ನ ಜೀವನದ ಆಯ್ಕೆಗಳು ಮತ್ತು ಸವಾಲುಗಳ ಬಗ್ಗೆ ನಾನು ಹೇಳಿದ್ದಕ್ಕೆ ಸಂಸ್ಕೃತಿ ಇಲಾಖೆಯು ಆಕ್ಷೇಪಣೆಯನ್ನು ತೋರಿರುವುದು ವಿಚಿತ್ರವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...