Homeಅಂತರಾಷ್ಟ್ರೀಯನೇಪಾಳ: ನಾಲ್ವರು ಭಾರತೀಯರು ಸೇರಿದಂತೆ 22 ಜನರಿದ್ದ ವಿಮಾನ ಪತನ

ನೇಪಾಳ: ನಾಲ್ವರು ಭಾರತೀಯರು ಸೇರಿದಂತೆ 22 ಜನರಿದ್ದ ವಿಮಾನ ಪತನ

- Advertisement -
- Advertisement -

22 ಜನರೊಂದಿಗೆ ನೇಪಾಳದ ಖಾಸಗಿ ವಿಮಾನಯಾನ ಸಂಸ್ಥೆ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನ ಭಾನುವಾರ ಪತನಗೊಂಡಿದೆ. ಪತನಗೊಂಡ ವಿಮಾನವು ನಂತರ ಕೊವಾಂಗ್ ಗ್ರಾಮದಲ್ಲಿ ಪತ್ತೆಯಾಗಿದೆ. ನಾಪತ್ತೆಯಾದ ವಿಮಾನದಲ್ಲಿ ನಾಲ್ವರು ಭಾರತೀಯರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಣ್ಣ ವಿಮಾನವು ಪ್ರವಾಸಿ ಪಟ್ಟಣವಾದ ಪೋಖರಾದಿಂದ ರಾಜಧಾನಿ ಕಠ್ಮಂಡುವಿನಿಂದ ಸುಮಾರು 200 ಕಿಮೀ ದೂರದ ವಾಯುವ್ಯದ ಜೋಮ್ಸೋಮ್‌ಗೆ ಹಾರುತ್ತಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ವಿಮಾನವು ಪೊಖರಾದಿಂದ ಬೆಳಿಗ್ಗೆ 9.55 ಕ್ಕೆ ಹೊರಟಿತು ಮತ್ತು 15 ನಿಮಿಷಗಳ ನಂತರ ನಿಯಂತ್ರಣ ಗೋಪುರದ ಸಂಪರ್ಕವನ್ನು ಕಳೆದುಕೊಂಡಿತು ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಮಾನವನ್ನು ತಾರಾ ಏರ್ ಎಂಬ ಕಂಪೆನಿ ನಿರ್ವಹಿಸುತ್ತದೆ, ಇದು ಮುಖ್ಯವಾಗಿ ಕೆನಡಿಯನ್-ನಿರ್ಮಿತ ಟ್ವಿನ್ ಓಟರ್ ವಿಮಾನಗಳನ್ನು ಹಾರಾಟಗಳನ್ನು ನಡೆಸುತ್ತದೆ. “ಸ್ಥಳೀಯರು ನೀಡಿದ ಮಾಹಿತಿಯ ಪ್ರಕಾರ, ತಾರಾ ಏರ್ ವಿಮಾನವು ಮಾನಪತಿ ಹಿಮಾಲ್‌‌ ಪ್ರದೇಶದ ಲಾಮ್ಚೆ ನದಿಯ ಬಳಿ ಪತನಗೊಂಡಿದೆ. ನೇಪಾಳ ಸೇನೆಯು ನೆಲ ಮತ್ತು ವಾಯು ಮಾರ್ಗದಿಂದ ಪ್ರದೇಶದ ಕಡೆಗೆ ತೆರಳುತ್ತಿದೆ” ಎಂದು ಸೇನಾ ವಕ್ತಾರ ನಾರಾಯಣ ಸಿಲ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ವಿಮಾನದಲ್ಲಿ ಮುಂಬೈ ಮೂಲದ ನಾಲ್ವರು ಭಾರತೀಯ ಪ್ರಜೆಗಳು, ಇಬ್ಬರು ಜರ್ಮನ್ನರು ಮತ್ತು 13 ನೇಪಾಳಿ ಪ್ರಯಾಣಿಕರು ಇದ್ದರು ಎಂದು ಏರ್‌ಲೈನ್ಸ್ ವಕ್ತಾರರು ತಿಳಿಸಿದ್ದಾರೆ. ವಿಮಾನಯಾನ ಸಂಸ್ಥೆಯು ಪ್ರಯಾಣಿಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಾಲ್ಕು ಭಾರತೀಯರನ್ನು ಅಶೋಕ್ ಕುಮಾರ್ ತ್ರಿಪಾಠಿ, ಧನುಷ್ ತ್ರಿಪಾಠಿ, ರಿತಿಕಾ ತ್ರಿಪಾಠಿ ಮತ್ತು ವೈಭವಿ ತ್ರಿಪಾಠಿ ಎಂದು ಗುರುತಿಸಲಾಗಿದೆ.

ವಿಮಾನವು ಪಶ್ಚಿಮ ಪರ್ವತ ಪ್ರದೇಶದ ಜೋಮ್ಸಮ್ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 10:15 ಕ್ಕೆ ಇಳಿಯಬೇಕಿತ್ತು. ನಾಪತ್ತೆಯಾಗಿದ್ದ ವಿಮಾನಗಳ ಹುಡುಕಾಟಕ್ಕಾಗಿ ನೇಪಾಳ ಸರ್ಕಾರವು ಮುಸ್ತಾಂಗ್ ಮತ್ತು ಪೊಖರಾದಿಂದ ಎರಡು ಖಾಸಗಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಿದೆ. ಭೂ ಮಾರ್ಗದ ಮೂಲಕ ಹುಡುಕಾಟ ನಡೆಸಲು ನೇಪಾಳ ಸೇನೆ ಮತ್ತು ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:  ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪ್ರಕರಣ: ಶಂಕಿತ ಭಯೋತ್ಪಾದಕ ಆದಿತ್ಯ ರಾವ್‌ ಅಪರಾಧ ಸಾಬೀತು

2016 ರಲ್ಲಿ, ತಾರಾ ಏರ್ ನಿರ್ವಹಿಸುತ್ತಿದ್ದ ಟ್ವಿನ್ ಓಟರ್ ಟರ್ಬೊಪ್ರಾಪ್ ವಿಮಾನವು ಪಶ್ಚಿಮ ಜಿಲ್ಲೆಯ ಮಯಾಗಡಿಯಲ್ಲಿ ಪತನಗೊಂಡು 23 ಜನರು ಸಾವನ್ನಪ್ಪಿದ್ದರು. ಅಂದು ಮೂವರು ಸಿಬ್ಬಂದಿಯನ್ನು ಹೊರತುಪಡಿಸಿ, ಒಬ್ಬ ಚೈನೀಸ್ ಮತ್ತು ಒಬ್ಬ ಕುವೈತ್ ಪ್ರಜೆ ಸೇರಿದಂತೆ 20 ಪ್ರಯಾಣಿಕರು ವಿಮಾನದಲ್ಲಿದ್ದರು. ವಿಶ್ವದ ಅತಿ ಎತ್ತರದ ಪರ್ವತದ ನೆಲೆಯಾಗಿರುವ ನೇಪಾಳವು ತನ್ನ ದೇಶೀಯ ವಾಯು ಜಾಲದಲ್ಲಿ ಹಲವಾರು ವಿಮಾನ ಅಪಘಾತಗಳ ವ್ಯಾಪಕ ದಾಖಲೆಯನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...