Homeಅಂತರಾಷ್ಟ್ರೀಯನೇಪಾಳ: ನಾಲ್ವರು ಭಾರತೀಯರು ಸೇರಿದಂತೆ 22 ಜನರಿದ್ದ ವಿಮಾನ ಪತನ

ನೇಪಾಳ: ನಾಲ್ವರು ಭಾರತೀಯರು ಸೇರಿದಂತೆ 22 ಜನರಿದ್ದ ವಿಮಾನ ಪತನ

- Advertisement -
- Advertisement -

22 ಜನರೊಂದಿಗೆ ನೇಪಾಳದ ಖಾಸಗಿ ವಿಮಾನಯಾನ ಸಂಸ್ಥೆ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನ ಭಾನುವಾರ ಪತನಗೊಂಡಿದೆ. ಪತನಗೊಂಡ ವಿಮಾನವು ನಂತರ ಕೊವಾಂಗ್ ಗ್ರಾಮದಲ್ಲಿ ಪತ್ತೆಯಾಗಿದೆ. ನಾಪತ್ತೆಯಾದ ವಿಮಾನದಲ್ಲಿ ನಾಲ್ವರು ಭಾರತೀಯರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಣ್ಣ ವಿಮಾನವು ಪ್ರವಾಸಿ ಪಟ್ಟಣವಾದ ಪೋಖರಾದಿಂದ ರಾಜಧಾನಿ ಕಠ್ಮಂಡುವಿನಿಂದ ಸುಮಾರು 200 ಕಿಮೀ ದೂರದ ವಾಯುವ್ಯದ ಜೋಮ್ಸೋಮ್‌ಗೆ ಹಾರುತ್ತಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ವಿಮಾನವು ಪೊಖರಾದಿಂದ ಬೆಳಿಗ್ಗೆ 9.55 ಕ್ಕೆ ಹೊರಟಿತು ಮತ್ತು 15 ನಿಮಿಷಗಳ ನಂತರ ನಿಯಂತ್ರಣ ಗೋಪುರದ ಸಂಪರ್ಕವನ್ನು ಕಳೆದುಕೊಂಡಿತು ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಮಾನವನ್ನು ತಾರಾ ಏರ್ ಎಂಬ ಕಂಪೆನಿ ನಿರ್ವಹಿಸುತ್ತದೆ, ಇದು ಮುಖ್ಯವಾಗಿ ಕೆನಡಿಯನ್-ನಿರ್ಮಿತ ಟ್ವಿನ್ ಓಟರ್ ವಿಮಾನಗಳನ್ನು ಹಾರಾಟಗಳನ್ನು ನಡೆಸುತ್ತದೆ. “ಸ್ಥಳೀಯರು ನೀಡಿದ ಮಾಹಿತಿಯ ಪ್ರಕಾರ, ತಾರಾ ಏರ್ ವಿಮಾನವು ಮಾನಪತಿ ಹಿಮಾಲ್‌‌ ಪ್ರದೇಶದ ಲಾಮ್ಚೆ ನದಿಯ ಬಳಿ ಪತನಗೊಂಡಿದೆ. ನೇಪಾಳ ಸೇನೆಯು ನೆಲ ಮತ್ತು ವಾಯು ಮಾರ್ಗದಿಂದ ಪ್ರದೇಶದ ಕಡೆಗೆ ತೆರಳುತ್ತಿದೆ” ಎಂದು ಸೇನಾ ವಕ್ತಾರ ನಾರಾಯಣ ಸಿಲ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ವಿಮಾನದಲ್ಲಿ ಮುಂಬೈ ಮೂಲದ ನಾಲ್ವರು ಭಾರತೀಯ ಪ್ರಜೆಗಳು, ಇಬ್ಬರು ಜರ್ಮನ್ನರು ಮತ್ತು 13 ನೇಪಾಳಿ ಪ್ರಯಾಣಿಕರು ಇದ್ದರು ಎಂದು ಏರ್‌ಲೈನ್ಸ್ ವಕ್ತಾರರು ತಿಳಿಸಿದ್ದಾರೆ. ವಿಮಾನಯಾನ ಸಂಸ್ಥೆಯು ಪ್ರಯಾಣಿಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಾಲ್ಕು ಭಾರತೀಯರನ್ನು ಅಶೋಕ್ ಕುಮಾರ್ ತ್ರಿಪಾಠಿ, ಧನುಷ್ ತ್ರಿಪಾಠಿ, ರಿತಿಕಾ ತ್ರಿಪಾಠಿ ಮತ್ತು ವೈಭವಿ ತ್ರಿಪಾಠಿ ಎಂದು ಗುರುತಿಸಲಾಗಿದೆ.

ವಿಮಾನವು ಪಶ್ಚಿಮ ಪರ್ವತ ಪ್ರದೇಶದ ಜೋಮ್ಸಮ್ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 10:15 ಕ್ಕೆ ಇಳಿಯಬೇಕಿತ್ತು. ನಾಪತ್ತೆಯಾಗಿದ್ದ ವಿಮಾನಗಳ ಹುಡುಕಾಟಕ್ಕಾಗಿ ನೇಪಾಳ ಸರ್ಕಾರವು ಮುಸ್ತಾಂಗ್ ಮತ್ತು ಪೊಖರಾದಿಂದ ಎರಡು ಖಾಸಗಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಿದೆ. ಭೂ ಮಾರ್ಗದ ಮೂಲಕ ಹುಡುಕಾಟ ನಡೆಸಲು ನೇಪಾಳ ಸೇನೆ ಮತ್ತು ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:  ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪ್ರಕರಣ: ಶಂಕಿತ ಭಯೋತ್ಪಾದಕ ಆದಿತ್ಯ ರಾವ್‌ ಅಪರಾಧ ಸಾಬೀತು

2016 ರಲ್ಲಿ, ತಾರಾ ಏರ್ ನಿರ್ವಹಿಸುತ್ತಿದ್ದ ಟ್ವಿನ್ ಓಟರ್ ಟರ್ಬೊಪ್ರಾಪ್ ವಿಮಾನವು ಪಶ್ಚಿಮ ಜಿಲ್ಲೆಯ ಮಯಾಗಡಿಯಲ್ಲಿ ಪತನಗೊಂಡು 23 ಜನರು ಸಾವನ್ನಪ್ಪಿದ್ದರು. ಅಂದು ಮೂವರು ಸಿಬ್ಬಂದಿಯನ್ನು ಹೊರತುಪಡಿಸಿ, ಒಬ್ಬ ಚೈನೀಸ್ ಮತ್ತು ಒಬ್ಬ ಕುವೈತ್ ಪ್ರಜೆ ಸೇರಿದಂತೆ 20 ಪ್ರಯಾಣಿಕರು ವಿಮಾನದಲ್ಲಿದ್ದರು. ವಿಶ್ವದ ಅತಿ ಎತ್ತರದ ಪರ್ವತದ ನೆಲೆಯಾಗಿರುವ ನೇಪಾಳವು ತನ್ನ ದೇಶೀಯ ವಾಯು ಜಾಲದಲ್ಲಿ ಹಲವಾರು ವಿಮಾನ ಅಪಘಾತಗಳ ವ್ಯಾಪಕ ದಾಖಲೆಯನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...