Homeಕರ್ನಾಟಕಜನಾಕ್ರೋಶದ ಫಲ: ‘ಬನ್ನಂಜೆ’ ಪಾಠದಲ್ಲಿ ತಿದ್ದುಪಡಿ ತಂದ ಸರ್ಕಾರ

ಜನಾಕ್ರೋಶದ ಫಲ: ‘ಬನ್ನಂಜೆ’ ಪಾಠದಲ್ಲಿ ತಿದ್ದುಪಡಿ ತಂದ ಸರ್ಕಾರ

- Advertisement -
- Advertisement -

ಪಠ್ಯ ಪರಿಶೀಲನಾ ಸಮಿತಿ ಮಾಡಿರುವ ಕೇಸರೀಕರಣ ಹಾಗೂ ಹಲವು ಎಡವಟ್ಟುಗಳ ಕುರಿತು ಭಾರೀ ಆಕ್ರೋಶ ಭುಗಿಲೆದ್ದ ಬಳಿಕ ಸರ್ಕಾರ ಸಮರ್ಥನೆಗಿಳಿದಿದ್ದು ತಿಳಿದೇ ಇದೆ. ಜನರ ಪ್ರಮುಖ ಬೇಡಿಕೆಗಳಿಗೆ ಸರ್ಕಾರ ಕಿವಿಗೊಡದಿದ್ದರೂ ತಾನು ಮಾಡಿರುವ ತಪ್ಪುಗಳನ್ನು ಪರಾಮರ್ಶಿಸಿಕೊಂಡಿರುವುದು ಮೇಲುನೋಟಕ್ಕೆ ಕಾಣುತ್ತಿದೆ.

10ನೇ ತರಗತಿಯ ಕನ್ನಡ (ಪ್ರಥಮ) ಭಾಷಾ ಪಠ್ಯದಲ್ಲಿ ಅಳವಡಿಸಲಾಗಿರುವ ಬನ್ನಂಜೆ ಗೋವಿಂದಾಚಾರ್ಯರ ‘ಶುಕನಾಸನ ಉಪದೇಶ’ದ ಪಾಠದಲ್ಲಿ ಕೆಲವು ಬದಲಾವಣೆಗಳನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ತಂದಿದೆ. ಪರಿಷ್ಕೃತ ಪಠ್ಯದ ಪಿಡಿಎಫ್ ಸೋರಿಕೆಯಾದಾಗ ಆ ಪಾಠದಲ್ಲಿನ ಹಲವು ತಪ್ಪುಗಳನ್ನು ಜನರು ಗುರುತಿಸಿದ್ದರು. ಬನ್ನಂಜೆಯವರ ಪಾಠದ ಕುರಿತು ‘ನಾನುಗೌರಿ.ಕಾಂ’ನಲ್ಲಿ ವಿಸ್ತೃತವಾಗಿ ವರದಿಯಾಗಿತ್ತು. ಹಣವನ್ನು ಹೆಣ್ಣಿಗೆ ಹೋಲಿಸಿ ಅತ್ಯಂತ ಕೀಳು ಅಭಿರುಚಿ ಬರುವಂತೆ ಪಾಠವನ್ನು ರೂಪಿಸಲಾಗಿತ್ತು. “ಬನ್ನಂಜೆಯ ಪಾಠದಲ್ಲಿ ಹೆಣ್ಣಿನ ಅಪಮೌಲ್ಯೀಕರಣ” ಮಾಡಲಾಗಿದೆ ಎಂಬುದು ಅರಿವಾದ ಬಳಿಕ ಮರು ರೂಪಿಸಲಾದ ಪಠ್ಯದಲ್ಲಿ ತಿದ್ದುಪಡಿ ತರಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಮೊದಲೇನಿತ್ತು?

“ಈ ಸಿರಿಯೆಂಬ ಹೊಸ ಹೆಣ್ಣನ್ನು ಕಂಡು ಮರುಳಾಗದವರನ್ನು ನಾನು ಕಂಡಿಲ್ಲ. ಎಲ್ಲರೂ ಆಕೆಯತ್ತ ಆಕರ್ಷಿತರಾದವರೆ. ಎಲ್ಲರೂ ಆಕೆಯಿಂದ ಮೋಸಹೋಗುವವರೇ. ಯಾವುದೇ ಒಬ್ಬನನ್ನು ನಿರ್ವಂಚನೆಯಿಂದ ಪ್ರೇಮಿಸುವುದು ಆಕೆಯ ಜಾಯಮಾನಕ್ಕೆ ಸಲ್ಲದು.”

ಮುಂದುವರಿದು, “ಕೆಟ್ಟ ನಡತೆಯ ಇಂಥ ಸಿರಿಯೆಂಬ ಹೆಣ್ಣು ಹೇಗೋ ದೈವಯೋಗದಿಂದ ಕೆಲ ಮಂದಿ ರಾಜರಿಗೆ ಒಲಿಯುತ್ತಾಳೆ. ಅಲ್ಲಿಗೆ ಮುಗಿಯಿತು ಅವರ ಕಥೆ. ಏನು ಸಂಭ್ರಮ, ಏನು ಕೋಲಾಹಲ! ಜಗತ್ತಿನ ಎಲ್ಲ ದೌರ್ಜನ್ಯಗಳಿಗೆ ಅವರು ಆಸರೆ..”

ಸೋರಿಕೆಯಾದ ಪಿಡಿಎಫ್‌ ಪ್ರತಿಯಲ್ಲಿದ್ದ ಸಾಲುಗಳು

ಈ  ಮೇಲಿನ ಸಾಲುಗಳಿಗೆ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿರಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ಜನರು ಎತ್ತಿದ ಆಕ್ಷೇಪಗಳೇನು?

  • “ಹೆಣ್ಣು ಮಾಯೆಯೆಂಬರು ಹೆಣ್ಣು ಮಾಯೆಯಲ್ಲ. ಹೊನ್ನು ಮಾಯೆ ಎಂಬರು ಹೊನ್ನು ಮಾಯೆಯಲ್ಲ. ಮನದ ಮುಂದಣ ಆಸೆಯೇ ಮಾಯೆ ಕಾಣ- ಗುಹೇಶ್ವರ” ಎಂಬ ವಚನ ಪರಂಪರೆಯ ಈ ನಾಡಿನಲ್ಲಿ ಹೆಣ್ಣಿನ ಕುರಿತು ನಕಾರಾತ್ಮಕ ದೃಷ್ಟಿಕೋನವನ್ನು ಬೆಳೆಸಲಾಗುತ್ತಿದೆಯೇ?
  • ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿವರ್ತನೆಯ ಕಡೆಗೆ ಹೋಗುತ್ತಿರುವಾಗ ಹೆಣ್ಣಿನ ಕುರಿತ ಈ ಸಂಚುಚಿತ ದೃಷ್ಟಿಕೋನವನ್ನು ಮಕ್ಕಳಲ್ಲಿ ಬೆಳೆಸುವುದು ಅಪಾಯಕಾರಿ. ಹೆಣ್ಣು ಮಕ್ಕಳು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದಾರೆ. ಸಂಪತ್ತಿನೊಂದಿಗೆ ಹೆಣ್ಣನ್ನು ಹೋಲಿಸಿ, ಆಕೆ ಚಂಚಲೆ ಎಂದು ಬಿಂಬಿಸುವುದು ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತವೆ.
  • ಹೆಣ್ಣು ಕೇವಲವಷ್ಟೇ ಎಂಬ ಭಾವನೆ ಈ ರೀತಿಯ ಸಾಲುಗಳಿಂದ ಎಳೆಯ ಮನಸ್ಸುಗಳಲ್ಲಿ ಹುಟ್ಟುತ್ತದೆ. ಎಸ್‌ಎಸ್‌ಎಲ್‌ಸಿ ಮಕ್ಕಳ ವಯಸ್ಸನ್ನು ಗಮನಿಸಬೇಕು. ದೇಹದಲ್ಲಿ ಹಲವಾರು ಬದಲಾವಣೆಗಳು ಆಗುವ ವಯಸ್ಸದು. ಹಾರ್ಮೋನುಗಳು ಬದಲಾಗುತ್ತಿರುತ್ತವೆ. ಹೆಣ್ಣು ಒಬ್ಬರ ಹತ್ತಿರ ಶಾಶ್ವತವಾಗಿ ನಿಲ್ಲುವುದಿಲ್ಲ, ಆಕೆ ಚಂಚಲೆ ಎಂದು ಈ ವಯಸ್ಸಿನ ಮಕ್ಕಳ ಮುಂದೆ ಬೋಧಿಸಿದರೆ ತನ್ನ ಸಹಪಾಠಿಯನ್ನು ಒಬ್ಬ ಹುಡುಗ ಹೇಗೆ ನೋಡಬಹುದು? ಹಸಿ ಮಣ್ಣಿನಂತಹ ಅವರ ಮನಸ್ಸಿನಲ್ಲಿ ಯಾವ ವಿಗ್ರಹ ರೂಪ ತಾಳಬಹುದು?
  • ಈ ಪಠ್ಯದಲ್ಲಿ ಯಾವ ಸಂದೇಶ ಇದೆ? ಹಣ ಒಂದು ಸಾಧನವಷ್ಟೇ. ಅದು ಗಂಡಿಗೂ ಬೇಕು, ಹೆಣ್ಣಿಗೂ ಬೇಕು. ಹೀಗಿರುವಾಗ ಪುರುಷಪ್ರಧಾನ ವ್ಯವಸ್ಥೆಯ ದೃಷ್ಟಿಯಲ್ಲಿ ನೋಡಿ ಹಣವನ್ನು ವಿಶ್ಲೇಷಿಸಿರುವುದೇ ತಪ್ಪು. ಇಂತಹ ಪಾಠಗಳನ್ನು ಶಿಕ್ಷಕಿಯರು ತಮ್ಮ ಮಕ್ಕಳಿಗೆ ಬೋಧಿಸುವುದಾದರೂ ಹೇಗೆ?

ಈಗ ಆಗಿರುವ ಬದಲಾವಣೆ ಏನು?

“ಈ ಸಿರಿಯನ್ನು ಕಂಡು ಮರುಳಾಗದವರನ್ನು ನಾನು ಕಂಡಿಲ್ಲ. ಎಲ್ಲರೂ ಸಿರಿಗೆ ಆಕರ್ಷಿತರಾದವರೆ. ಎಲ್ಲರೂ ಸಿರಿಯಿಂದ ಮೋಸಹೋಗುವವರೇ. ಯಾವುದೇ ಒಬ್ಬನನ್ನು ನಿರ್ವಂಚನೆಯಿಂದ ಪ್ರೇಮಿಸುವುದು ಸಿರಿಯ ಜಾಯಮಾನಕ್ಕೆ ಸಲ್ಲದು.”

ಕೆಟ್ಟ ನಡತೆಯ ಇಂಥ ಸಿರಿಯು ಹೇಗೋ ದೇವಯೋಗದಿಂದ ಕೆಲ ಮಂದಿ ರಾಜರಿಗೆ ಒಲಿಯುತ್ತದೆ. ಅಲ್ಲಿಗೆ ಮುಗಿಯಿತು ಅವರ ಕತೆ. ಏನು ಸಂಭ್ರಮ, ಏನು ಕೋಲಾಹಲ! ಜಗತ್ತಿನ ಎಲ್ಲ ದೌರ್ಜನ್ಯಗಳಿಗೆ ಅವರು ಆಸರೆ.

– ಹೀಗೆ ಪಠ್ಯವನ್ನು ತಿದ್ದಲಾಗಿದೆ. ಬನ್ನಂಜೆಯವರ ಲಿಂಗಾಧಾರಿತ ದೃಷ್ಟಿಕೋನವನ್ನು ಪಠ್ಯ ಪರಿಶೀಲನಾ ಸಮಿತಿ ಮಾರ್ಪಾಡು ಮಾಡಿರುವುದು ಸ್ಪಷ್ಟವಾಗುತ್ತದೆ.

ಪರಿಷ್ಕೃತ ಪಠ್ಯದಲ್ಲಿ ಬದಲಾದ ಸಾಲುಗಳು

ಇದನ್ನೂ ಓದಿರಿ: ರೋಹಿತ್‌ ಚಕ್ರತೀರ್ಥ ಆಯ್ಕೆಯ ಮಾನದಂಡಗಳೇನು?: ಬಹಿರಂಗ ಪತ್ರ ಬರೆದ ಶಿಕ್ಷಣ ತಜ್ಞರು

ಲೇಖಕರ ಮೂಲ ಪಠ್ಯ ಬದಲಿಸಬಹುದೇ?

“ಇದು ಎಲ್ಲದಕ್ಕಿಂತ ಅನಾಹುತಕಾರಿ ಹೆಜ್ಜೆ. ಲೇಖಕರು ಇರುವಾಗಲಾದರೂ ಅಡ್ಡಿ ಇಲ್ಲ ಎನ್ನಬಹುದೇನೋ? ಆದರೆ ಲೇಖಕರು ಗತಿಸಿದ ನಂತರ ಅವರು ಬರೆದ ಅವರು ಬರೆದ ಒಂದಕ್ಷರವನ್ನು ತಿದ್ದಬಾರದು. ಇಂದು ಗೋವಿಂದಾಚಾರ್ಯರನ್ನು ತಿದ್ದಲು ಹೊರಟ ಮಂದಿಯೇ ತಮಗೆ ಬೇಕಾದ ಹಾಗೆ ನಾಳೆ ಅಂಬೇಡ್ಕರ್, ಕುವೆಂಪು, ಲಂಕೇಶ್, ತಿರುಮಲಾಂಬ ಎಲ್ಲರನ್ನು ತಿದ್ದಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ ಅಹರ್ನಿಶಿ ಪ್ರಕಾಶನದ ಅಕ್ಷತಾ ಹುಂಚದಕಟ್ಟೆ.

“ಈಗಾಗಲೇ ಕುವೆಂಪು ವಿಷಯದಲ್ಲಿ ಅವರು ಏನು ಪ್ರತಿಪಾದಿಸಿದ್ದರೋ ಅದಕ್ಕೆ ವಿರುದ್ದವಾಗಿ ಹಲವು ಅಪದ್ದಗಳನ್ನು ಸೃಷ್ಟಿಸುವ ಪ್ರಯತ್ನಗಳು ಸದಾ ಇಲ್ಲಿ ಚಾಲ್ತಿಯಲ್ಲಿವೆ. ಆದರೆ ಅದಕ್ಕೆ ಅವಕಾಶವೇ ನೀಡದಂತೆ ಅವರ ಬರಹಗಳ ಒಂದೊಂದು ವಾಕ್ಯವು ಇಲ್ಲಿಯ ಜಾತೀಯತೆ, ವರ್ಗ ಸಂಘರ್ಷ, ಮೇಲ್ಜಾತಿಯವರ ಮೇಲರಿಮೆ, ತಳ ಸಮುದಾಯದ ಮೇಲೆ ನಡೆಯುವ ಹಲ್ಲೆ, ಶೋಷಣೆ ,ಎಲ್ಲವನ್ನು ತೆರೆದಿಡುತ್ತವೆ. ನಿಧಾನಕ್ಕೆ ಅದನ್ನೇ ಬದಲಾಯಿಸಿಬಿಟ್ಟರೆ, ಇಲ್ಲಿ ಎಲ್ಲವೂ ಚೆನ್ನಾಗಿತ್ತು, ಚೆನ್ನಾಗಿದೆ ಎಂಬುದನ್ನು ಸಾಬೀತು ಮಾಡಿದಂತಾಗಿಬಿಡುತ್ತದೆ. ಇದಕ್ಕೆ ಅವಕಾಶ ಕೊಡಬಾರದು” ಎಂದು ತಿಳಿಸಿದ್ದಾರೆ.

“ಹೆಡಗೇವಾರ್‌ ಭಗವಾಧ್ವಜ ಎಂದು ಬರೆದಿದ್ದರೆ ಅದನ್ನು ರಾಷ್ಟ್ರಧ್ವಜ ಎಂದು ತಿದ್ದಿ ನಮ್ಮ ಮಕ್ಕಳಿಗೆ ಪಠ್ಯವಾಗಿಸಬೇಕಾಗಿಲ್ಲ. ಬನ್ನಂಜೆಯವರ ಪಠ್ಯದಲ್ಲೂ ಮಹಿಳೆಯರ ಬಗೆಗೆ ಇರುವ ಆಕ್ಷೇಪಾರ್ಯ ವಾಕ್ಯಗಳಿದ್ದರೆ ಅದನ್ನು ತಿದ್ದಿ ಅವರೇ ನಿಜವಾದ ಸ್ತ್ರೀ ಉದ್ದಾರಕರು ಎಂಬಂತೆ ಬಿಂಬಿಸಬೇಕಿಲ್ಲ. ಮಹಿಳೆಯರ ಏಳಿಗೆಗಾಗಿ ಶ್ರಮಿಸಿದ, ನಮ್ಮ ರಾಷ್ಟ್ರಕ್ಕಾಗಿ ಅಲ್ಲಿನ ಜನರ ಏಳಿಗೆಗಾಗಿ ಜೀವವನ್ನೇ ತೇಯ್ದ ಸಾವಿರಾರು ಜನರ ಚರಿತ್ರೆ ದಾಖಲಾಗಿದೆ. ಅದನ್ನು ಮಕ್ಕಳು ಓದುವಂತಾಗಲಿ. ತಿದ್ದಲ್ಪಟ್ಟ ಬರೆಹಗಳನ್ನು ಪಠ್ಯವಾಗಿಸಿ ಓದಿಸಬೇಕಿಲ್ಲ. ಸಮೃದ್ದವಾದ ನಿಜ ಕಾಳಜಿಯ ಬರೆಹಗಳು, ಬರೆಹಗಾರರು, ವ್ಯಕ್ತಿತ್ವಗಳು ಆಗಿಹೋಗಿರುವ/ಇರುವ ನಾಡಿನಲ್ಲಿ ಸಾವಿರಾರು ಪಠ್ಯಗಳನ್ನು ಮಾಡಬಹುದು. ಅದಕ್ಕಾಗಿ ಸೂಕ್ತವಾದ ಶಿಕ್ಷಣ ತಜ್ಞರಿಗೂ ಇಲ್ಲಿ ಖಂಡಿತಾ ಕೊರತೆಯಿಲ್ಲ” ಎಂದು ಹೇಳಿದ್ದಾರೆ.

“ಲೇಖಕರ ಮೂಲ ಬರಹಕ್ಕೆ ಧಕ್ಕೆಯಾಗದಂತೆ ಸಂಕ್ಷಿಪ್ತಗೊಳಿಸಿ, ಪಠ್ಯವಾಗಿ ರೂಪಿಸುವುದು ಮೊದಲಿನಿಂದಲೂ ನಡೆದು ಬಂದಿದೆ. ಆದರೆ, ಇಲ್ಲಿ ಮೂಲ ಲೇಖಕರ ವಿಚಾರಗಳನ್ನೇ ಬದಲಿಸಲು ಹೊರಟಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಬನ್ನಂಜೆ ಪಾಠದ ಸಾರಾಂಶ ಪ್ರಸ್ತುತವೇ?

ಬನ್ನಂಜೆಯವರ ಪಾಠದಲ್ಲಿನ ಲಿಂಗಾಧಾರಿತ ದೃಷ್ಟಿಕೋನವನ್ನು ತಿದ್ದಿದ್ದರೂ ‘ಶುಕನಾಸನ ಉಪದೇಶ’ ಪಾಠದ ಪ್ರಸ್ತುತತೆಯ ಪ್ರಶ್ನೆ ಬದಿಗೆ ಸರಿಯುವುದಿಲ್ಲ. ಹಣದ ಕುರಿತು ನಕಾರಾತ್ಮಕವಾಗಿ ಮಾತನಾಡುವ ಈ ಪಾಠವು ಮಕ್ಕಳಿಗೆ ಕಲಿಸುವುದೇನು ಎಂಬುದೂ ಚರ್ಚೆಯಾಗಬೇಕಿದೆ.

ವಿವಾದ ಉಂಟಾದ ಸಂದರ್ಭದಲ್ಲಿ ಆಧ್ಮಾತ್ಮಿಕ ವಿಚಾರಗಳ ಬರಹಗಾರರು ಹಾಗೂ ಪ್ರಾಧ್ಯಾಪಕರೂ ಆದ ಡಾ.ಟಿ.ಎನ್.ವಾಸುದೇವಮೂರ್ತಿ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಹಣದ ಕುರಿತ ಬನ್ನಂಜೆಯವರ ಬೋಧಪ್ರದ (didactic) ಲೇಖನ ಹೊಸದಾಗಿ ಸೇರ್ಪಡೆಯಾಗಿದೆ. ಆ ಲೇಖನದಲ್ಲಿ ಬನ್ನಂಜೆಯವರು ಹಣ ಕೆಟ್ಟದ್ದು, ವರ್ಜ್ಯ ಎಂದು ಉಪದೇಶಿಸುತ್ತಾರೆ. ತನ್ನ ತಾಯಿ-ತಂದೆಯರನ್ನು ಒಳಗೊಂಡಂತೆ ಲೋಕದಲ್ಲಿ ಪ್ರತಿಯೊಬ್ಬರು ಹಣ ಸಂಪಾದನೆಗಾಗಿ ಶ್ರಮಿಸುತ್ತಿರುವ ವಾಸ್ತವದ ಮಧ್ಯೆ ಬದುಕುತ್ತಿರುವ ಮಗುವನ್ನು ಇಂತಹ ವಾಸ್ತವ ದೂರವಾದ ಲೇಖನಗಳು ಸಂಶಯಾತ್ಮನನ್ನಾಗಿಸುತ್ತವೆ, ಗೊಂದಲಕ್ಕೀಡು ಮಾಡುತ್ತವೆ. ಪಠ್ಯವೆನಿಸಿಕೊಳ್ಳುವ ಒಂದು ‘ಪಠ್ಯ’ವು ವಿದ್ಯಾರ್ಥಿಗೆ ಒಂದು ವಸ್ತು ವಿಷಯವನ್ನು ಅದರ ಸಮಗ್ರ ಸ್ವರೂಪದಲ್ಲಿ ಪರಿಚಯಿಸಿಕೊಡಬೇಕಲ್ಲದೆ ಅದು ಏಕಮುಖಿಯಾದ, ಉಪದೇಶಾತ್ಮಕವಾದ ಪಠ್ಯ ಆಗಬಾರದು. ಬನ್ನಂಜೆ ಉಪದೇಶದಂತೆ ಹಣ ನಿಜಕ್ಕೂ ಕೇಡಿನ ಮೂಲವೇ ಆಗಿದ್ದಲ್ಲಿ ಪುರಂದರದಾಸರು ಲಕ್ಷ್ಮಿಯನ್ನು ‘ಭಾಗ್ಯದ ಲಕ್ಷ್ಮಿ ಬಾರಮ್ಮ’ ಎಂದು ಕರೆಯುತ್ತಿರಲಿಲ್ಲ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಲಜ್ಜೆಗೆಟ್ಟ ಸರ್ಕಾರ, ಪರಿಷ್ಕರಣೆಕಗೊಂಡ ಪುಸ್ತಕವನ್ನೇ ಮುದ್ರಿಸಿ ವಿತರಿಸಲು ಮೇ 27 ರಂದು ಸುತ್ತೋಲೆ ಗಳಿಸಿದೆ!

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...